Homeಮುಖಪುಟತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

- Advertisement -
- Advertisement -

ದಕ್ಷಿಣ ಭಾರತದಲ್ಲಿ ಫ್ಯಾಂಟಸಿ ಸಿನಿಮಾಗಳ ಟ್ರೆಂಡ್ ಆರಂಭಿಸಿದ ನಿರ್ದೇಶಕರು ಬಿ.ವಿಠಲಾಚಾರ್ಯ. ಕನ್ನಡಿಗರಾದ ಅವರು ಯಶಸ್ಸು ಕಂಡದ್ದು ತೆಲುಗು, ತಮಿಳು ಚಿತ್ರರಂಗದಲ್ಲಿ ಎನ್ನುವುದು ಸೋಜಿಗ. ಅವರು ಕಾಲವಾಗಿ ಇಂದಿಗೆ (21) ಇಪ್ಪತ್ತೊಂದು ವರ್ಷ.

***

ರಾಜಮೌಳಿ ನಿರ್ದೇಶನದಲ್ಲಿ ತೆರೆಗೆ ಬಂದ ‘ಬಾಹುಬಲಿ’ ಫ್ಯಾಂಟಸಿ ಸಿನಿಮಾ ಸರಣಿಗಳು ಭಾರತದಾದ್ಯಂತ ಮಾತ್ರವಲ್ಲದೆ ಜಾಗತಿಕ ಮಾರುಕಟ್ಟೆಯಲ್ಲೂ ಸದ್ದುಮಾಡಿದವು. ಅತ್ಯಾಧುನಿಕ ತಂತ್ರಜ್ಞಾನವನ್ನು ಅಚ್ಚುಕಟ್ಟಾಗಿ ಬಳಕೆ ಮಾಡಿಕೊಂಡ ನಿರ್ದೇಶಕ ರಾಜಮೌಳಿ ತೆರೆಯ ಮೇಲೆ ಅದ್ಭುತವನ್ನೇ ಸೃಷ್ಟಿಸಿದ್ದರು. ಆದರೆ 50ರ ದಶಕದಲ್ಲಿ ಆಗಿದ್ದ ಅಲ್ಪ ತಂತ್ರಜ್ಞಾನವನ್ನೇ ಸೂಕ್ತವಾಗಿ ಬಳಸಿಕೊಂಡು ಬೆಳ್ಳೆತೆರೆಯಲ್ಲಿ ಇಂಥ ಅಚ್ಚರಿಗಳನ್ನು ಸೃಷ್ಟಿಸಿ ಯಶಸ್ಸು ಕಂಡವರು ಬಿ.ವಿಠಲಾಚಾರ್ಯ. 1954ರಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ ಜಾನಪದ ಶೈಲಿಯ ಫ್ಯಾಂಟಸಿ ಕನ್ನಡ ಸಿನಿಮಾ “ರಾಜಲಕ್ಷ್ಮಿ’ ಚಿತ್ರೋದ್ಯಮದವರ ಗಮನ ಸೆಳೆದಿತ್ತು. ತಮಿಳು ಮತ್ತು ತೆಲುಗು ಚಿತ್ರೋದ್ಯಮಿಗಳೂ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಇವರು ನಿರ್ಮಿಸಿದ “ಪಾಲಾಳಮೋಹಿನಿ’, “ಮೋಹಿನಿ ಭಸ್ಮಾಸುರ’ ತೆಲುಗು ಫ್ಯಾಂಟಸಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿದ್ದವು. ದಕ್ಷಿಣ ಭಾರತ ಮಾತ್ರವಲ್ಲ ಹಿಂದಿ ಚಿತ್ರರಂಗದವರೂ ಅವರ ಸಿನಿಮಾ ತಂತ್ರಗಳನ್ನು ಹೊಗಳಿದ್ದರು.

ಮೂಲತಃ ಉಡುಪಿಯವರಾದ ವಿಠಲಾಚಾರ್ಯರು ಕೆಲಸದ ನಿಮಿತ್ತ ಚಿಕ್ಕ ವಯಸ್ಸಿನಲ್ಲೇ ಊರು ಬಿಟ್ಟು ಅರಸೀಕೆರೆ ಸೇರಿದರು. ಅವರು ಓದಿದ್ದು ಏಳನೇ ತರಗತಿಯಷ್ಟೆ. ಶಾಲೆ ಬಿಟ್ಟು ಹೋಟೆಲ್ ಸೇರಿದ ಅವರು ಕೆಲವು ವರ್ಷಗಳ ನಂತರ ಮೈಸೂರಿನಲ್ಲಿ ಹೋಟೆಲ್ ಉದ್ಯಮ ಆರಂಭಿಸಿದರು. ಹೋಟೆಲ್ ಉದ್ಯಮಿಯಾದರೂ ಅವರ ಆಸಕ್ತಿ ಇದ್ದುದು ಸಿನಿಮಾರಂಗದೆಡೆ. ಮೊದಲ ಪ್ರಯತ್ನವಾಗಿ ಸಿ.ವಿ.ರಾಜು ನಿರ್ದೇಶನದ “ಶ್ರೀಕೃಷ್ಣಲೀಲಾ” ಸಿನಿಮಾದ ಸಹನಿರ್ಮಾಪಕರಾದರು. ಮುಂದೆ ಡಿ.ಶಂಕರ್‌ಸಿಂಗ್ ಅವರ ಮಹಾತ್ಮಾ ಪಿಕ್ಚರ್ಸ್‍ನೊಂದಿಗೆ ವಿಠಲಾಚಾರ್ಯರು ಗುರುತಿಸಿಕೊಂಡರು. 1952ರಲ್ಲಿ ತಯಾರಾದ ಮಹಾತ್ಮಾ ಪಿಕ್ಚರ್ಸ್‍ನ “ಸೌಭಾಗ್ಯ ಲಕ್ಷ್ಮಿ” ಸಿನಿಮಾ ನಿರ್ದೇಶಿಸುವ ಮೂಲಕ ಸ್ವತಂತ್ರ್ಯ ನಿರ್ಮಾಪಕರಾದರು. ಮರುವರ್ಷ 1953ರಲ್ಲಿ ತಮ್ಮದೇ ವಿಠಲ್ ಪ್ರೊಡಕ್ಷನ್ಸ್ ಆರಂಭಿಸಿದರು. ಈ ಸಂಸ್ಥೆಯಡಿ ವಿಠಲಾಚಾರ್ಯರು “ಕನ್ಯಾದಾನ’ (1954) ನಿರ್ಮಿಸಿ, ನಿರ್ದೇಶಿಸಿದರು. ಫ್ಯಾಂಟಸಿ ಸಿನಮಾ ಮಾಡಬೇಕೆನ್ನುವ ಅವರ ಮಹದಾಸೆ ಕೈಗೂಡಿದ್ದು “ರಾಜಲಕ್ಷ್ಮಿ’ ಚಿತ್ರದ ಮೂಲಕ.

ಇದಾದ ನಂತರ “ಮುತ್ತೈದೆ ಭಾಗ್ಯ” (1956), “ಮನೆ ತುಂಬಿದ ಹೆಣ್ಣು” (1958) ಚಿತ್ರಗಳನ್ನು ಮಾಡಿದರು. “ಮುತ್ತೈದು ಭಾಗ್ಯ” ಚಿತ್ರದಲ್ಲಿ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ನಾಯಕರಾಗಿದ್ದರು ಎನ್ನುವುದು ವಿಶೇಷ. ಅದೇಕೋ ಈ ಸಿನಿಮಾಗಳು ಗೆಲ್ಲಲಿಲ್ಲ. ಇದರಿಂದ ತೆಲುಗು ಸಿನಿಮಾರಂಗದತ್ತ ಮುಖಮಾಡಿದ ವಿಠಲಾಚಾರ್ಯರು ಅಲ್ಲಿ ಫ್ಯಾಂಟಸಿ ಸಿನಿಮಾಗಳ ಮೂಲಕವೇ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಅವರು ನಿರ್ಮಿಸಿ, ನಿರ್ದೇಶಿಸಿದ “ಪೆಣ್‍ಕುಲತ್ತಿನ್”, “ತೇನ್‍ವಿಳಕ್ಕು” ಸಿನಿಮಾಗಳು ದೊಡ್ಡ ಯಶಸ್ಸು ಕಂಡವು. ಕನ್ನಡ, ತೆಲುಗು ಮತ್ತು ತಮಿಳಿನ 80ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ವಿಠಲಾಚಾರ್ಯರು 1996, ಮೇ 28ರಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು.

ಚಿತ್ರನಿರ್ಮಾಣ, ನಿರ್ದೇಶನದ ಜೊತೆ ಹಲವಾರು ತಂತ್ರಜ್ಞರು ಮತ್ತು ಕಲಾವಿದರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಹೆಗ್ಗಳಿಕೆಯೂ ವಿಠಲಾಚಾರ್ಯರಿಗೆ ಸಲ್ಲಬೇಕು. ಆಗ ಸಿನಿಮಾ ಸೇರುವ ಆಸೆಯಿಂದ ಕನ್ನಡ ನಾಡಿನಿಂದ ಮದರಾಸಿಗೆ ಆಗಮಿಸುವವರಿಗೆ ಅವರು ನೆರವಾಗುತ್ತಿದ್ದರು. ಕನ್ನಡ ಚಿತ್ರರಂಗ ಕಂಡ ಮೇರು ನಿರ್ದೇಶಕ ಸಿದ್ದಲಿಂಗಯ್ಯನವರು ಮೊದಲು ತರಬೇತಿ ಪಡೆದದ್ದೇ ವಿಠಲಾಚಾರ್ಯರಲ್ಲಿ. ಹೀಗೆ, ಪರೋಕ್ಷವಾಗಿಯೂ ಅವರು ಕನ್ನಡ ಚಿತ್ರರಂಗದ ಬೆಳವಣಿಗೆಗಳಲ್ಲಿ ಪ್ರೇರಕ ಶಕ್ತಿಯಾಗಿದ್ದರು. ಐವತ್ತು, ಅರವತ್ತರ ದಶಕದಲ್ಲಿ ಅವರು ತಯಾರಿಸಿದ ಫ್ಯಾಂಟಸಿ ಸಿನಿಮಾಗಳು ಮುಂದಿನ ದಿನಗಳಲ್ಲಿ ಅಂತಹ ಸಿನಿಮಾಗಳನ್ನು ನಿರ್ಮಿಸುವವರಿಗೆ ಸ್ಫೂರ್ತಿಯಾದವು. ಇಂದಿಗೂ ದಕ್ಷಿಣ ಭಾರತದ ಫ್ಯಾಂಟಸಿ ಸಿನಿಮಾಗಳ ಬಗ್ಗೆ ಮಾತನಾಡುವಾಗ ವಿಠಲಾಚಾರ್ಯರ (20/01/1920 – 28/05/1999) ಹೆಸರು ಕಡ್ಡಾಯವಾಗಿ ಪ್ರಸ್ತಾಪವಾಗುತ್ತದೆ.


ಇದನ್ನೂ ಓದಿ: ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....