Homeಮುಖಪುಟಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ...

ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

- Advertisement -
- Advertisement -

ಕಳೆದ 48 ಗಂಟೆಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಹೊರಟಿದ್ದ ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ ಕನಿಷ್ಠ ಒಂಬತ್ತು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಐದು ಜನರು ಉತ್ತರ ಪ್ರದೇಶದವರಾಗಿದ್ದು, ನಾಲ್ವರು ಬಿಹಾರದವರಾಗಿದ್ದಾರೆ. ಇವರಲ್ಲಿ ಹಲವರು ರೋಗಿಗಳಾಗಿದ್ದು ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮರಳುತ್ತಿದ್ದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾವುಗಳ ಬಗ್ಗೆ ರೈಲ್ವೆ ವಕ್ತಾರರು ಪ್ರತಿಕ್ರಿಯಿಸಿದ್ದು”ಶ್ರಮಿಕ್ ವಿಶೇಷ ರೈಲುಗಳಲ್ಲಿ ಕೆಲವು ಸಾವುಗಳು ವರದಿಯಾಗಿವೆ. ಈ ಹೆಚ್ಚಿನ ಸಂದರ್ಭಗಳಲ್ಲಿ, ಮರಣ ಹೊಂದಿದವರು ವೃದ್ಧರು, ಅನಾರೋಗ್ಯ ಪೀಡಿತರು ಮತ್ತು ದೀರ್ಘಕಾಲದ ಕಾಯಿಲೆ ಹೊಂದಿರುವವರು ವೈದ್ಯಕೀಯ ಚಿಕಿತ್ಸೆ ಪಡೆಯಲು ನಗರಗಳಿಗೆ ಹೋಗಿದ್ದರು ಎಂದು ತಿಳಿದುಬಂದಿದೆ… ” ಎಂದಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬುಧವಾರ, ಬಿಹಾರದ ಮುಜಾಫರ್ಪುರ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಮೃತಪಟ್ಟ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವ ಪುಟ್ಟ ಕಂದನ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಜನರು ಸರ್ಕಾರದ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಹಾರದ ಮುಜಾಫರ್ ಪುರದ ರೈಲ್ವೆ ನಿಲ್ದಾಣದಲ್ಲಿ ಈ ಮಗು ತನ್ನ ತಾಯಿಯೊಂದಿಗೆ ಆಟವಾಡುತ್ತಿದೆ. ಆದರೆ ತನ್ನ ತಾಯಿ ಸಾವನಪ್ಪಿದ್ದಾಳೆ ಎಂಬ ಅರಿವು ಅದಕ್ಕಿಲ್ಲ…ಆಕೆ ನಾಲ್ಕು ದಿನಗಳಿಂದ ಹಸಿವು, ಬಾಯಾರಿಕೆ ತಾಳಲಾರದೇ ಮೃತಪಟ್ಟಿದ್ದಾಳೆ. ಆ ಮಕ್ಕಳ ಮುಂದಿನ ಕಥೆಯೇನು?ಈ ಪರಿಸ್ಥಿತಿ ಯಾರಿಗೂ ಬರಬಾರದು..ವಿಡಿಯೋ: ಪತ್ರಕರ್ತ ಕವೀಶ್ ಟ್ವಿಟ್ಟರ್ ನಿಂದ…

Posted by Naanu Gauri on Wednesday, May 27, 2020

ಮೃತ ಮಹಿಳೆಯನ್ನು ಕತಿಹಾರ್ ನಿವಾಸಿ ಅರ್ವೀನಾ ಖಟೂನ್ (26) ಎಂದು ಗುರುತಿಸಲಾಗಿದ್ದು, ಮೇ 23 ರಂದು ಅಹ್ಮದಾಬಾದ್‌ನಿಂದ ತನ್ನ ಇಬ್ಬರು ಮಕ್ಕಳೊಂದಿಗೆ ರೈಲು ಹತ್ತಿದ್ದರು. ರೈಲಿನಲ್ಲಿ ಆಹಾರ ಹಾಗೂ ನೀರಿನ ಕೊರತೆ ಇತ್ತು ಎನ್ನಲಾಗಿದೆ.

ಸೂರತ್-ಪೂರ್ಣಿಯಾ ರೈಲಿನಲ್ಲಿ ಮಲಗಿದ್ದ ಬಿಹಾರದ ಕಟಿಹಾರ್ ಎಂಬಲ್ಲಿನ ಉರೇಶ್ ಖಟೂನ್ ಎಂಬ ಮಹಿಳೆ ನಿದ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಿಹಾರದ ದಾನಾಪುರ್ ಎಂಬಲ್ಲಿ  70 ವರ್ಷದ ಬಸಿಷ್ಠ್ ಮಹತೋ ಎಂಬವರ ಮೃತದೇಹ ಮುಂಬೈ-ದರ್ಭಾಂಗ ಶ್ರಮಿಕ್ ರೈಲಿನಲ್ಲಿ ಪತ್ತೆಯಾಗಿತ್ತು. ಅವರು ಹೃದ್ರೋಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ಬಂದ ರೈಲಿನಲ್ಲಿ ಇಬ್ಬರು ಶವವಾಗಿ ಪತ್ತೆಯಾಗಿದ್ದು, ವಾರಣಾಸಿ ರೈಲ್ವೆ ಪೊಲೀಸ್ ಪ್ರಕಾರ, ಮೃತಪಟ್ಟವರನ್ನು ಜಾನ್‌ಪುರದ ದಸರತ್ ಪ್ರಜಾಪತಿ (30) ಮತ್ತು ಅಜಮ್‌ರ್‌ನ ರಾಮರತನ್ ರಘುನಾಥ್ (55) ಎಂದು ಗುರುತಿಸಲಾಗಿದೆ.

ಇವರಲ್ಲಿ ಪ್ರಜಾಪತಿ ಅಂಗವಿಕಲರಾಗಿದ್ದು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ರಘುನಾಥ್ ಅನೇಕ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ರೈಲ್ವೇ ಪೊಲೀಸರು ಹೇಳಿದ್ದಾರೆ.

ಸೂರತ್‌ನಿಂದ ಬಲ್ಲಿಯಾ ತಲುಪಿದ ರೈಲಿನಲ್ಲಿ ಬಿಹಾರದ ಸರನ್ ಮೂಲದ ಭೂಷಣ್ ಸಿಂಗ್ (58) ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ತಿಳಿಸಿದ್ದಾರೆ.

ಝಾನ್ಸಿ-ಗೋರಖ್‌ಪುರ ರೈಲಿನಲ್ಲಿ ಕಾನ್ಪುರಕ್ಕೆ ತಲುಪಿದಾಗ ಇಬ್ಬರು ಮೃತಪಟ್ಟಿದ್ದು, ಮೃತ ವ್ಯಕ್ತಿಯಲ್ಲಿ ಒಬ್ಬರನ್ನು ರಾಮ್ ಅವಧ್ ಚೌಹಾನ್ (45) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ; ಎರಡನೇ ವ್ಯಕ್ತಿಯ ಗುರುತನ್ನು ಇನ್ನೂ ಪತೆಯಾಗಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಮತ್ತು ಉತ್ತರ ಪ್ರದೇಶದ ಎರಡೂ ರೈಲುಗಳ ಮಾರ್ಗದಲ್ಲಿ ಊಟದ ಸೇವೆಯನ್ನು ಹೊಂದಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಮತ್ತೊಂದು ಪ್ರಕರಣದಲ್ಲಿ, ದೆಹಲಿಯಿಂದ ಮುಜಾಫರ್ಪುರದ 39 ಗಂಟೆಗಳ ಪ್ರಯಾಣದಲ್ಲಿ ನಾಲ್ಕು ವರ್ಷದ ಬಾಲಕ ಮೊಹಮ್ಮದ್ ಇರ್ಷಾದ್ ಬಿಸಿಲು ಹಾಗೂ ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರಗಳು ಇವರೆಲ್ಲಾ ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದು ಹೇಳಿ ಜಾರಿಕೊಂಡಿದೆ. ಆದರೆ ಈ ರೈಲುಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಿರಲಿಲ್ಲ. ಹಸಿವು ಮತ್ತು ಬಾಯಾರಿಕೆಯಿಂದಲೇ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆಂದು ಸಾರ್ವಜನಿಕರು ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಓದಿ:  60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...