Homeಅಂಕಣಗಳುಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

ಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

- Advertisement -
- Advertisement -

ಈ ಸಂಚಿಕೆಯನ್ನು ನಾವು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲಿ ಯಡಿಯೂರಪ್ಪನವರು ಯಲಹಂಕ ಫ್ಲೈಓವರ್‌ಗೆ ಮರುನಾಮಕರಣ ಮಾಡಲು ಸಿದ್ಧರಾಗುತ್ತಿರುವ ಸುದ್ದಿ ಬಂದಿದೆ. ಅದೇ ಸಮಯದಲ್ಲಿ ದೆಹಲಿಯ ಸಿಂಹಾಸನದಲ್ಲಿ ಕುಳಿತಿರುವವರು ಎರಡನೆ ಸಾರಿ ಪಟ್ಟಾಭಿಷಕ್ತರಾಗಿ ಒಂದು ವರ್ಷ ಕಳೆಯುತ್ತಿದ್ದು, ಒಟ್ಟು ಆರು ವರ್ಷಗಳ ಸಂಭ್ರಮಕ್ಕೆ ಛೇ ಸಾಲ್ ಬೇಮಿಸಾಲ್ ಎಂಬ ಘೋಷಣೆ, ಹ್ಯಾಷ್‍ಟ್ಯಾಗ್‍ಅನ್ನು ಅಂತಿಮಗೊಳಿಸುತ್ತಿದ್ದಾರೆಂದು ಹೇಳಲಾಗಿದೆ.

ಇಲ್ಲೇ ಕರ್ನಾಟಕದಲ್ಲಿ ಜಾರ್ಖಂಡ್‍ನಿಂದ ಇಲ್ಲಿಗೆ ‘ಬಂದಿರುವ’ ಇಬ್ಬರು ವಲಸೆ ಕಾರ್ಮಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ನೆರವು ನೀಡಲು ಹೋದ ಜನಶಕ್ತಿ ಮತ್ತು ಸ್ವಾನ್ ಕಾರ್ಯಕರ್ತರಿಗೆ ಅದು ‘ಅತ್ಯಾಚಾರ, ಮಾನವ ಕಳ್ಳಸಾಗಾಣಿಕೆ, ಅಕ್ರಮ ಬಂಧನ ಹಾಗೂ ಜೀತದ ದುಡಿಮೆ’ಯ ಪ್ರಕರಣವೆಂದು ಗೊತ್ತಾಗಿದೆ. ಆ ಮಹಿಳೆಯರಿಗೆ ಅಕಸ್ಮಾತ್ತಾಗಿ ಪರಿಚಯವಾದ್ದರಿಂದ ನೆರವು ನೀಡಲು ಇಲ್ಲೇ ಉಳಿದುಕೊಂಡ ನಿಕೊಲಸ್ ಮುರ್ಮು ಎಂಬ ಸಂತಾಲಿ ಯುವಕ ಈಗ ತಾನೇ ನಮ್ಮ ಕಚೇರಿಗೆ ಬಂದು ಹೋದರು.

ಆ ನಿಕೊಲಸ್ ಮುರ್ಮುವನ್ನು ನಾನೊಂದು ಪ್ರಶ್ನೆ ಕೇಳಿದೆ, ‘ನಿಮಗೆ ಸಿದ್ದು ಮುರ್ಮು ಗೊತ್ತಾ?’. ಆತ ನೀಡಿದ ಉತ್ತರ ನನಗೆ ಅಚ್ಚರಿ ಮೂಡಿಸಿತು. ‘ಅಂಗ್ರೇಜಿಗಳ ವಿರುದ್ಧ ನಮ್ಮ ಸಂತಾಲರು ನಡೆಸಿದ ಸಂಗ್ರಾಮದ ನಾಯಕನಾತ. ನಮಗೆ ಸ್ವಾತಂತ್ರ್ಯ ಬಂದಿತೆಂದು ಹೇಳುತ್ತಾರೆ. ನಮಗಂತೂ ಬಂದಿಲ್ಲ. ಬಂದಿದ್ದರೆ ಹೀಗೇಕಾಗುತ್ತಿತ್ತು?’ ಪಕ್ಕದಲ್ಲೇ ಕೂತಿದ್ದ ಅತ್ಯಾಚಾರವನ್ನು ಎದುರಿಸಿ ಗಟ್ಟಿಯಾಗಿ ನಿಂತಿರುವ ಮಹಿಳೆಯನ್ನು ತೋರಿಸಿ ಹೇಳಿದರು. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಪೊಲೀಸ್ ಸ್ಟೇಷನ್ನುಗಳನ್ನು ಸುತ್ತುತ್ತಾ ಇದ್ದ ಆಕೆ ತನ್ನನ್ನು ಬಾಧಿಸುತ್ತಿರುವ ಕಿವಿ ನೋವಿಗೆ ಪರಿಹಾರ ಕೇಳಲು ಬಂದಿದ್ದರು.

ಇಂತಹ ನೂರಲ್ಲ, ಸಾವಿರವಲ್ಲ, ಕೋಟಿ ಕಥೆಗಳು ಈ ದೇಶದ ವಲಸೆ ಕಾರ್ಮಿಕರದ್ದಿದೆ ಎಂದು ಕಳೆದ ಒಂದು ತಿಂಗಳಿಂದ ಗೊತ್ತಾಗುತ್ತಿದೆ. ಹಸಿವಿನಿಂದ ರೈಲಿನಲ್ಲೇ ಸತ್ತ ಮಗು, ನಡೆದೂ ನಡೆದೂ ಸತ್ತ ವಯಸ್ಕರು, ಬಹುಶಃ ದಿಕ್ಕೇಡಿಗಳಾಗಿರುವ ವೃದ್ಧರು ಇಂತಹ ಎಷ್ಟೋ ಎಷ್ಟೋ ಕಥೆಗಳು. ಕನಿಷ್ಠ ಸಂವೇದನೆಯಿರುವವರು ಯಾರಾಗಿದ್ದರೂ ಅವರಿಗೆ ನಾವು ಗಾಢ ಸೂತಕದ ಮಧ್ಯೆ ಇದ್ದೇವೆ ಎನಿಸಬೇಕು. ಆದರೆ ಹ್ಯಾಷ್‍ಟ್ಯಾಗ್‍ಗಳನ್ನು ಅಂತಿಮಗೊಳಿಸಿಕೊಂಡು ಸಂಭ್ರಮಿಸಲು ಯತ್ನಿಸುತ್ತಿರುವವರಿಗೆ ಅದು ತಟ್ಟಿದಂತೆ ಕಾಣುತ್ತಿಲ್ಲ.

ಅಂತಹುದೇ ಮನಸ್ಥಿತಿಯ ಭಾಗವಾಗಿ ಕರ್ನಾಟಕದ ಮುಖ್ಯಮಂತ್ರಿಯೂ ಫ್ಲೈಓವರ್ ಮರುನಾಮಕರಣಕ್ಕೆ ಮುಂದಾಗಿದ್ದಾರೆಯೇ? ಅಷ್ಟೇ ಇದ್ದಂತೆ ಕಾಣುತ್ತಿಲ್ಲ. ಸಾವರ್ಕರ್ ಹೆಸರನ್ನು ಇಡುವ ಘೋಷಣೆ ಮಾಡಿದಾಕ್ಷಣ ಅದರ ಬಗ್ಗೆ ಚರ್ಚೆ ಶುರುವಾಗುತ್ತದೆ. ಅಲ್ಲಿಗೆ ಕರ್ನಾಟಕಕ್ಕೆ ಕೇಂದ್ರದಿಂದಾದ ಅನ್ಯಾಯ, ವಲಸೆ ಕಾರ್ಮಿಕರ ಬವಣೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವುದು ಎಲ್ಲವೂ ಪಕ್ಕಕ್ಕೆ ಸರಿಯುತ್ತದೆ. ಇನ್ನು ಮುಂದೆ ಶ್ರಮಿಕರು ಕೆಲಸವಿಲ್ಲದೇ ಮತ್ತಷ್ಟು ಅಗ್ಗವಾಗುವುದು, ವ್ಯಾಪಾರಸ್ಥರು ವ್ಯಾಪಾರ ಕಡಿಮೆಯಾಗಿ ಕಂಗೆಡುವುದು ಇವ್ಯಾವುವೂ ಚರ್ಚೆಯ ವಿಷಯಗಳಾಗದಿರಬೇಕೆಂದರೆ ಇಂತಹ ವಿವಾದಗಳು ಮೇಲಿಂದ ಮೇಲೆ ಏಳುತ್ತಿರಬೇಕು.

ಹೀಗಿರುವಾಗ ಮಾಧ್ಯಮಗಳು ಆಳುವವರನ್ನು ಪ್ರಶ್ನಿಸುವ ಬದಲು, ತುತ್ತೂರಿಗಳಾಗಲಿವೆ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇಂದ್ರ ಸರ್ಕಾರ ಮಾಡಿದ ಸರಿಯನ್ನು, ಸರಿಯೆಂದೂ, ತಪ್ಪನ್ನು ತಪ್ಪೆಂದೂ ಹೇಳುವ ಧೈರ್ಯವಾಗಲೀ, ವೃತ್ತಿ ಬದ್ಧತೆಯಾಗಲೀ ಇಲ್ಲವೇ ಇಲ್ಲ. ಹೀಗಾಗಿ ಪತ್ರಿಕೆಯಲ್ಲಿ ಈ ಸಾರಿ ಒಂದು ವರ್ಷದ ಕೇಂದ್ರ ಸರ್ಕಾರದ ಸಾಧನೆಯನ್ನು ಒರೆಗೆ ಹಚ್ಚಲು ಪ್ರಯತ್ನಿಸಲಾಗಿದೆ.

ಹಲವಾರು ತಜ್ಞರನ್ನು ಈ ಕುರಿತ ಲೇಖನಗಳನ್ನು ಬರೆದುಕೊಡಲು ಕೇಳಿದೆವು. ಕೆಲವರಿಗೆ 5 ವರ್ಷಗಳಲ್ಲಿ ನಡೆದದ್ದಕ್ಕೂ ಈ ಒಂದು ವರ್ಷಕ್ಕೂ ವ್ಯತ್ಯಾಸವಿದೆಯೆನಿಸಿದರೆ, ಇನ್ನು ಕೆಲವರಿಗೆ 5 ವರ್ಷಗಳಲ್ಲಿ ಮಾಡಲು ಯತ್ನಿಸಿ ವಿಫಲವಾದದ್ದಕ್ಕೆಲ್ಲಾ ಈಗ ಒಂದು ರೂಪ ಕೊಡುತ್ತಿದ್ದಾರೆ ಎನಿಸಿದೆ. ಆದರೆ, ಕೊರೊನಾ ಬಿಕ್ಕಟ್ಟನ್ನು ಸರ್ಕಾರವು ಜನವಿರೋಧಿ ನೀತಿಗಳನ್ನು ತರಲು ಬಳಸುತ್ತಿದೆ ಎಂಬ ವಿಚಾರದಲ್ಲಿ ಯಾರಿಗೂ ಅನುಮಾನವಿಲ್ಲ. ಉಳಿದೆಲ್ಲಾ ದೇಶಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಎಂದಿನ ನೀತಿಗಳನ್ನು ಮಾರ್ಪಡಿಸಿಕೊಂಡು ಜನಪರವಾದ ಕೆಲವು ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದರೆ, ಭಾರತವು ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಸಾಗಿದೆ.

ರೈತರು-ಕೃಷಿ ಕ್ಷೇತ್ರ, ಕಾರ್ಮಿಕರು-ಉದ್ದಿಮೆಗಳ ಕ್ಷೇತ, ಪರಿಸರ-ಅರಣ್ಯ ಒಳಗೊಂಡಂತೆ ಎಲ್ಲಾ ಕಡೆ ಒಂದೇ ಹಾಡು. ದೇಶದ ಆಡಳಿತದ ಚುಕ್ಕಾಣಿ ಹಿಡಿದವರಿಗೆ ಇದೊಂದು ರೀತಿಯ ಸಂಭ್ರಮವಿದ್ದಂತೆ ಕಾಣುತ್ತಿದೆ. ಎಲ್ಲವೂ ಸೂತಕದ ಮನೆಯ ಸಂಭ್ರಮವಲ್ಲದೇ ಇನ್ನೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...