Homeಮುಖಪುಟವಲಸೆ ಕಾರ್ಮಿಕರಿಗಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಮಾಡಿದ್ದೆನು? ಸುಪ್ರೀಂ ಪ್ರಶ್ನೆ

ವಲಸೆ ಕಾರ್ಮಿಕರಿಗಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಮಾಡಿದ್ದೆನು? ಸುಪ್ರೀಂ ಪ್ರಶ್ನೆ

ಕಳೆದೆರಡು ದಿನಗಳಿಂದ ಶ್ರಮಿಕ್‌ ಟ್ರೈನ್‌ಗಳಲ್ಲಿ ಪ್ರಯಾಣಿಸುತ್ತಿರುವ ಕನಿಷ್ಠ 09 ಮಂದಿ ವಲಸೆ ಕಾರ್ಮಿಕರು ಅನ್ನ ನೀರಿಲ್ಲದೇ ಸಾವನಪ್ಪಿದ್ದಾರೆ. ಬಿಹಾರದ ಮುಝಾಫರ್‌ಪುರದ ರೈಲ್ವೆ ನಿಲ್ದಾಣದಲ್ಲಿ ಸತ್ತಿರುವ ತಾಯಿಯನ್ನು ಮಗುವೊಂದು ಎಬ್ಬಿಸಲು ಪ್ರಯತ್ನಿಸುತ್ತಿರುವ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ. 

- Advertisement -
- Advertisement -

ಪ್ರತಿ ದಿನವೂ ವಲಸೆ ಕಾರ್ಮಿಕರ ಬವಣೆ, ಹಸಿವು, ಸಾವು ನೋವಿನ ವರದಿಗಳು ದಾಖಲಾಗುತ್ತಿದ್ದು ಈ ಕುರಿತು ಸ್ವಯಂ ಪ್ರೇರಿತ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಜನರಿಗೆ ಸಹಾಯ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿದ್ದೇನು ಎಂದು ಪ್ರಶ್ನಿಸಿದೆ.

ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿಂದೆ ಇದೇ ಸುಪ್ರೀಂ ಕೋರ್ಟ್‌ ರೈಲುಹಳಿಗಳಲ್ಲಿ ಮಲಗಿ ಸಾವನಪ್ಪಿದ ಕಾರ್ಮಿಕರ ಬಗ್ಗೆ ಮಾತನಾಡುತ್ತಾ “ಜನರನ್ನು ರೈಲು ಹಳಿಗಳ ಮೇಲೆ ಮಲಗದಂತೆ ತಡೆಯಲಾಗುವುದಿಲ್ಲ. ಜನರು ನಡೆದಯಂತೆ ತಡೆಯಲಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿತ್ತು.

ಈ ಬಗ್ಗೆ ಮದ್ರಾಸ್‌ ಹೈಕೋರ್ಟ್‌, ಆಂಧ್ರ ಪ್ರದೇಶದ ಹೈಕೋರ್ಟ್‌‌ಗಳು ಸುಪ್ರೀಂ ಕೋರ್ಟ್ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದವು. ಆನಂತರವಷ್ಟೇ ಸುಪ್ರೀಂ ಕೋರ್ಟ್‌ ವಲಸೆ ಕಾರ್ಮಿಕರಿಗಾಗುತ್ತಿರುವ ಅನ್ಯಾಯಗಳ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೊಂಡಿತ್ತು.

ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸುಪ್ರೀಂ ಕೋರ್ಟ್ ಈ ಬಗ್ಗೆ ಸಂಪೂರ್ಣವಾಗಿ ತೃಪ್ತಿಪಟ್ಟಿತ್ತು” ಎಂದು ತುಷಾರ್‌ ಮೆಹ್ತಾರವರು ಸರ್ಕಾರದ ಪರವಾಗಿ ವರದಿ ಒಪ್ಪಿಸಿದರು.

ಅಲ್ಲದೆ ಕೇಂದ್ರವು “ನಿರಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು” ಎಂದು ನ್ಯಾಯಾಲಯಕ್ಕೆ ತಿಳಿಸಿದೆ … ಯಾರು ಇಂದು ಪ್ರಶ್ನಿಸುತ್ತಿದ್ದಾರೆ ವಲಸಿಗರಿಗೆ ಅವರ ಕೊಡುಗೆ ಏನು ಎಂಬುದರ ಕುರಿತು ಅಫಿಡವಿಟ್‌ಗಳನ್ನು ಸಲ್ಲಿಸಲಿ ಎಂದು ಕೇಂದ್ರ ತಿಳಿಸಿದೆ.

ಕಳೆದೆರಡು ದಿನಗಳಿಂದ ಶ್ರಮಿಕ್‌ ಟ್ರೈನ್‌ಗಳಲ್ಲಿ ಪ್ರಯಾಣಿಸುತ್ತಿರುವ ಕನಿಷ್ಠ 09 ಮಂದಿ ವಲಸೆ ಕಾರ್ಮಿಕರು ಅನ್ನ ನೀರಿಲ್ಲದೇ ಸಾವನಪ್ಪಿದ್ದಾರೆ. ಬಿಹಾರದ ಮುಝಾಫರ್‌ಪುರದ ರೈಲ್ವೆ ನಿಲ್ದಾಣದಲ್ಲಿ ಸತ್ತಿರುವ ತಾಯಿಯನ್ನು ಮಗುವೊಂದು ಎಬ್ಬಿಸಲು ಪ್ರಯತ್ನಿಸುತ್ತಿರುವ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ.

ಬಿಹಾರದ ಮುಜಾಫರ್ ಪುರದ ರೈಲ್ವೆ ನಿಲ್ದಾಣದಲ್ಲಿ ಈ ಮಗು ತನ್ನ ತಾಯಿಯೊಂದಿಗೆ ಆಟವಾಡುತ್ತಿದೆ. ಆದರೆ ತನ್ನ ತಾಯಿ ಸಾವನಪ್ಪಿದ್ದಾಳೆ ಎಂಬ ಅರಿವು ಅದಕ್ಕಿಲ್ಲ…ಆಕೆ ನಾಲ್ಕು ದಿನಗಳಿಂದ ಹಸಿವು, ಬಾಯಾರಿಕೆ ತಾಳಲಾರದೇ ಮೃತಪಟ್ಟಿದ್ದಾಳೆ. ಆ ಮಕ್ಕಳ ಮುಂದಿನ ಕಥೆಯೇನು?ಈ ಪರಿಸ್ಥಿತಿ ಯಾರಿಗೂ ಬರಬಾರದು..ವಿಡಿಯೋ: ಪತ್ರಕರ್ತ ಕವೀಶ್ ಟ್ವಿಟ್ಟರ್ ನಿಂದ…

Posted by Naanu Gauri on Wednesday, May 27, 2020

“ವಲಸಿಗರಿಗೆ ಮೊದಲ ಸಮಸ್ಯೆ ಸಾರಿಗೆಯಾಗಿದೆ. ನೋಂದಣಿಯಾದ ನಂತರವೂ ಅವರು ವಾರಗಳವರೆಗೆ ಕಾಯುತ್ತಿದ್ದಾರೆ. ಈ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆಯೇ? ಇಲ್ಲದಿದ್ದರೆ ಅವರ ಹಣವನ್ನು ರಾಜ್ಯವು ಹೇಗೆ ಪಾವತಿಸುತ್ತಿದೆ” ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. “ಎಲ್ಲರನ್ನೂ ಒಂದೇ ಸಮಯದಲ್ಲಿ ಸಾಗಿಸಲು ಸಾಧ್ಯವಿಲ್ಲ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಅವರು ಸಾರಿಗೆ ಪಡೆಯುವವರೆಗೆ ಅವರಿಗೆ ಸರ್ಕಾರಗಳು ಆಹಾರ ಮತ್ತು ಆಶ್ರಯವನ್ನು ನೀಡಬೇಕು” ಎಂದು ನ್ಯಾಯಾಲಯ ಹೇಳಿದೆ.

ಆದರೆ ಈಗಿರುವ ಪರಿಸ್ಥಿತಿಯನ್ನು ಅಭೂತಪೂರ್ವವಾಗಿದೆ ಎಂದಿರುವ ಕೇಂದ್ರ ಸರ್ಕಾರ, ಮೇ 1 ರಂದು ವಿಶೇಷ ರೈಲು ಸೇವೆ ಪ್ರಾರಂಭವಾದಾಗಿನಿಂದ ಸುಮಾರು 91 ಲಕ್ಷ ವಲಸಿಗರನ್ನು ತಮ್ಮ ರಾಜ್ಯಗಳಿಗೆ ಸಾಗಿಸಲಾಗಿದೆ ಎಂದು ಹೇಳಿದೆ. ಕೊನೆಯ ದಿನಗಳಲ್ಲಿ, ರೈಲ್ವೆ ಅವರಿಗೆ 84 ಲಕ್ಷ ಊಟವನ್ನು ಒದಗಿಸಿದೆ ಎಂದು ಸರ್ಕಾರ ಹೇಳಿದೆ. ಅಲ್ಲದೇ ಪ್ರತಿಯೊಬ್ಬ ವಲಸೆ ಕಾರ್ಮಿಕನು ತನ್ನೂರು ತಲುಪುವವರೆಗೂ ರೈಲು ಸೇವೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದೆ.

ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡೂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಸಿಕ್ಕಿಕೊಂಡಿರುವ ವಲಸಿಗರಿಗೆ ತಕ್ಷಣ ಪರಿಹಾರ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, ಅವರಿಗೆ ಪರಿಹಾರ ಒದಗಿಸಲು ಕೈಗೊಂಡ ಕ್ರಮಗಳ ಬಗ್ಗೆ ತಮ್ಮ ಅಫಿಡವಿಟ್‌ಗಳನ್ನು ಸಲ್ಲಿಸಬೇಕು ಎಂದು ಹೇಳಿದೆ.

ಈ ಕುರಿತು ಈವರೆಗೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದರಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರ ಮನವಿಗಳು ಸೇರಿವೆ.


ಇದನ್ನೂ ಓದಿ ; ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...