Homeಬಹುಜನ ಭಾರತಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

ಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

- Advertisement -
- Advertisement -

ಆತ್ಮನಿರ್ಭರ ಭಾರತದ ಹೃದಯ ಹಿಂಡುವ ಚಿತ್ರಗಳು ನಾಗರಿಕ ಸಮಾಜದ ಮುಖಕ್ಕೆ ರಾಚುತ್ತಿವೆ. ಭಕ್ತಭಾರತದ ಆತ್ಮಸಾಕ್ಷಿ ಕಡೆಯುಸಿರು ಎಳೆದು ವರ್ಷಗಳೇ ಉರುಳಿವೆ. ದಿನಗಟ್ಟಲೆ ಟ್ರೇನಿನಲ್ಲಿ ಅನ್ನ ನೀರಿಲ್ಲದೆ ಪ್ರಯಾಣ ಮಾಡಿ ಸತ್ತ ತನ್ನ ತಾಯಿಯ ಹೊದಿಕೆಯನ್ನು ಹಿಡಿದೆಳೆದು ಎಚ್ಚರಿಸಲು ಅಮಾಯಕ ಹಸುಳೆ ಪ್ರಯತ್ನಿಸುವ ದೃಶ್ಯಾವಳಿ ಭಕ್ತ ಭಾರತದ ಕಲ್ಲು ಮನಸ್ಸನ್ನು ಕರಗಿಸಲಾರದು. ಅರ್ಥಾತ್ ದೇಶ- ಸಮಾಜ ತೀವ್ರ ಅಪಾಯಕರ ಸ್ಥಿತಿಯಲ್ಲಿವೆ. ಮನಸ್ಸಾಕ್ಷಿಗಳಿಗೆ ಲಕ್ವ ಹೊಡೆದಿದೆ. ಹನ್ನೊಂದರ ಪ್ರಾಯದ ಎಳೆಯ ತನ್ನ ಕುರುಡು ತಾಯಿ ಮತ್ತು ಕುಂಟ ತಂದೆಯನ್ನು ತ್ರಿಚಕ್ರ ಸೈಕಲ್‍ನಲ್ಲಿ ಕೂರಿಸಿ ವಾರಣಾಸಿಯಿಂದ ಬಿಹಾರಕ್ಕೆ ಒಯ್ಯುವ ದೃಶ್ಯವಾಗಲಿ, ಹೆದ್ದಾರಿಯಲ್ಲಿ ಹಸಿದ ವ್ಯಕ್ತಿಯೊಬ್ಬ ವಾಹನಗಳ ಚಕ್ರಗಳಡಿ ಸಿಕ್ಕಿ ನಜ್ಜುಗುಜ್ಜಾಗಿದ್ದ ನಾಯಿಯ ಕಳೇಬರದಿಂದ ಮಾಂಸವನ್ನು ಕಿತ್ತು ತಿನ್ನುವ ನೋಟವಾಗಲಿ, ನಡೆ ನಡೆದು ಎಳೆಯ ಮಕ್ಕಳ ಅಂಗಾಲುಗಳು ಬೊಕ್ಕೆಗಳಾಗಿ ಕಂಗೆಟ್ಟು ಕಣ್ಣುಗಳಲ್ಲಿ ನೀರು ತುಂಬಿಕೊಂಡ ನೋವಾಗಲೀ ಭಕ್ತ ಭಾರತದ ಕಣ್ಣಿಗೆ ಕಾಣುವುದೇ ಇಲ್ಲ. ತನ್ನ ವಿಶ್ವರೂಪವನ್ನು ಕಾಣಲು ಶ್ರೀಕೃಷ್ಣನು ಅರ್ಜುನನಿಗೆ ವಿಶೇಷ ದೃಷ್ಟಿಯನ್ನು ಪ್ರಸಾದಿಸಿದಂತೆ ಭಕ್ತ ಭಾರತಕ್ಕೂ ವಿಶೇಷ ಕಣ್ಣುಗಳನ್ನೂ, ಚಲಿಸುವ ಮನಸ್ಸನ್ನೂ ನೀಡಬೇಕಿದೆ. ಆ ಕಾಲ ಬರುವುದೆಂದೋ ಸದ್ಯಕ್ಕೆ ತಿಳಿಯದು.

ಈ ನಡುವೆ ವಿಶೇಷವೊಂದು ಜರುಗಿದೆ. ವಲಸೆ ಕಾರ್ಮಿಕ ಕೋಟಿಯ ಕಷ್ಟ ಪರಂಪರೆಯನ್ನು ಕಡೆಗಣಿಸಿದ್ದ ಸುಪ್ರೀಮ್ ಕೋರ್ಟಿಗೆ ಬಿಸಿ ಮುಟ್ಟಿಸುವ ಪತ್ರವೊಂದನ್ನು ದೇಶದ ಹಿರಿಯ ನ್ಯಾಯವಾದಿಗಳು ಬರೆದಿದ್ದಾರೆ. ಅದನ್ನೊಮ್ಮೆ ಓದಿಕೊಳ್ಳೋಣ.

ಪ್ರಿಯ ನ್ಯಾಯಮೂರ್ತಿಗಳೇ,

ಭಾರತೀಯ ನಾಗರಿಕರಾಗಿ ಮತ್ತು ಹಿರಿಯ ನ್ಯಾಯವಾದಿಗಳಾಗಿ ಅತೀವ ವ್ಯಥೆ ಮತ್ತು ದಿಗಿಲಿನಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇವೆ.

ಈ ದೇಶದ ನಾಗರಿಕರ ಅದರಲ್ಲೂ ವಿಶೇಷವಾಗಿ ಬಡತನದ ರೇಖೆಯ ಮತ್ತು ಅದರ ಕೆಳಗೆ ಕನಿಷ್ಠ ಕೂಲಿ ಪಡೆದು ಹೊಟ್ಟೆ ಹೊರೆಯುವ ಮತ್ತು ಹೀಗೆ ಹೊಟ್ಟೆ ಹೊರೆಯುವುದೂ ಕಷ್ಟಕರವಾಗಿ ಪರಿಣಮಿಸಿರುವ ಅಸಂಖ್ಯಾತ ಜನಸಮೂಹಗಳ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪಾತ್ರ ಅತ್ಯಂತ ಪ್ರಮುಖ.

ಸರ್ಕಾರಿ ಆದೇಶದ ಮೇರೆಗೆ ಕಳೆದ ಮಾರ್ಚ್ 24ರಿಂದ ಇಡೀ ದೇಶ ಮತ್ತು ಅದರ ಆರ್ಥಿಕ ವ್ಯವಸ್ಥೆಗೆ ಬೀಗ ಬಿದ್ದಿರುವ ಇಂದಿನ ಬಿಕ್ಕಟ್ಟಿನ ಸ್ಥಿತಿಯಲ್ಲಿ ಸುಪ್ರೀಂಕೋರ್ಟ್ ಪಾತ್ರ ಮತ್ತು ಕರ್ತವ್ಯ ಅಪಾರ ಪ್ರಾಮುಖ್ಯತೆ ಗಳಿಸಿಕೊಳ್ಳುತ್ತದೆ. ದೇಶದ ಶೇ.75ಕ್ಕೂ ಹೆಚ್ಚು ಶ್ರಮಜೀವಿಗಳು ಅಸಂಘಟಿತ ವಲಯದಲ್ಲಿರುವವರು. ಆರ್ಥಿಕ ಚಟುವಟಿಕೆಯ ಸ್ಥಗಿತವು ಅವರ ಹೊಟ್ಟೆಪಾಡುಗಳ ಮೇಲೆ ತಕ್ಷಣದ ಪರಿಣಾಮ ಬೀರುತ್ತದೆ.

ಕೋಟಿಗಳ ಸಂಖ್ಯೆಗಳಲ್ಲಿರುವ ಈ ಶ್ರಮಿಕ ವರ್ಗ ಮುಖ್ಯವಾಗಿ ವಲಸೆ ಕಾರ್ಮಿಕ ಸ್ವರೂಪದ್ದು. ಮಾರ್ಚ್ 24ರಂದು ಲಾಕ್‍ಡೌನ್ ಘೋಷಿಸಿದಾಗ ಇವರ ಪಡಿಪಾಟಲನ್ನು ಲೆಕ್ಕಕ್ಕೇ ಇಟ್ಟುಕೊಳ್ಳಲಿಲ್ಲ. ಕೇವಲ ನಾಲ್ಕು ತಾಸುಗಳ ಕಾಲಾವಧಿಯಲ್ಲಿ ಲಾಕ್‍ಡೌನ್ ಸಾರಲಾಯಿತು. ಈ ಕೋಟ್ಯಂತರ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳುವ ಅವಕಾಶವನ್ನೇ ನೀಡಲಿಲ್ಲ. ಬೇರೆ ದಾರಿಯೇ ಇಲ್ಲದೆ ಹಸಿವು ಹತಾಶೆಗಳಿಂದ ನಡೆಯತೊಡಗಿದ ಇವರನ್ನು ಸರ್ಕಾರಗಳು ತಡೆಯುವ ಪ್ರಯತ್ನ ಮಾಡಿದವು.

ಕಳೆದ ಮಾರ್ಚ್ ತಿಂಗಳಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ವಿಫಲವಾದ ಕಾರಣ ಲಕ್ಷೋಪಲಕ್ಷ ಕಾರ್ಮಿಕರು ತಮ್ಮ ಸಣ್ಣಪುಟ್ಟ ಇಕ್ಕಟ್ಟಿನ ಖೋಲಿಗಳಲ್ಲೋ, ರಸ್ತೆಬದಿಯ ಕಾಲುದಾರಿಗಳಲ್ಲೋ ಉದ್ಯೋಗವಿಲ್ಲದೆ, ಒಪ್ಪೊತ್ತಿನ ಊಟಕ್ಕೂ ದಾರಿಯಲ್ಲದೆ ದಿನ ದೂಡುವಂತಾಯಿತು. ಆಗ ಕೋವಿಡ್ ಕೇಸುಗಳ ಸಂಖ್ಯೆ ಕೆಲವೇ ನೂರರಷ್ಟಿತ್ತು. ಅವರನ್ನು ಮರಳಲು ಬಿಡದೆ ಕಟ್ಟಿ ಹಾಕಿದ ಈ ಬಲಾತ್ಕಾರವು ಈ ಬಡಪಾಯಿಗಳನ್ನು ಕೋವಿಡ್ ಮಹಾಮಾರಿಯ ಸೋಂಕಿನ ಅಪಾಯಕ್ಕೆ ನೇರವಾಗಿ ನೂಕಿದಂತಾಗಿತ್ತು.

ಸರ್ಕಾರದ ಹೇಳಿಕೆಯು ವಾಸ್ತವ ಸ್ಥಿತಿಗತಿಗಳಿಗೆ ವ್ಯತಿರಿಕ್ತವಾಗಿತ್ತು. ಶೇ.90ರಷ್ಟು ವಲಸೆ ಕೆಲಸಗಾರರಿಗೆ ಸರ್ಕಾರಿ ಪಡಿತರ ಸಿಗಲಿಲ್ಲವೆಂದೂ, ಆಹಾರದ ತೀವ್ರ ಕೊರತೆಗೆ ತುತ್ತಾಗಿದ್ದಾರೆಂದೂ ಹಲವು ವರದಿಗಳು ಹೇಳಿದವು.

ಮಾರ್ಚ್ ತಿಂಗಳಿನಲ್ಲಿ ಸುಪ್ರೀಂಕೋರ್ಟು ಮಧ್ಯಪ್ರವೇಶಿಸಲು ವಿಫಲವಾದ ನಂತರ ಲಕ್ಷೋಪಲಕ್ಷ ಕಾರ್ಮಿಕರ ಮಹಾವಲಸೆ ಮೊದಲಾಯಿತು. ಆ ಹೊತ್ತಿಗೆ ಕೋವಿಡ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿತ್ತು. ಈ ಕಾರ್ಮಿಕರೂ ಸೋಂಕಿಗೆ ತುತ್ತಾದರು. ಈ ಹಂತದಲ್ಲೂ ಇವರ ಸಂಚಾರವನ್ನು ಸರ್ಕಾರ ಪ್ರತಿಬಂಧಿಸಿತ್ತು. ನಡೆದು ಹೋಗುವ ಬಡಪಾಯಿಗಳನ್ನೂ ತಡೆದು ಥಳಿಸಿದವು ಪೊಲೀಸರ ಲಾಠಿಗಳು. ಬೀದಿಗೆ ಬಿದ್ದಿದ್ದವರನ್ನು ಬಗೆ ಬಗೆಯಾಗಿ ಅವಮಾನಿಸಲಾಯಿತು. ತರುವಾಯ ಬಸ್ಸುಗಳು ಮತ್ತು ಟ್ರೇನುಗಳಲ್ಲಿ ಅವರ ಸಂಚಾರಕ್ಕೆ ಅನುಮತಿ ನೀಡಲಾಯಿತು. ವೈದ್ಯಕೀಯ ಪ್ರಮಾಣಪತ್ರ ತರಬೇಕೆಂಬ ಅಸಾಧ್ಯ ಷರತ್ತನ್ನು ಈ ಬಡಪಾಯಿಗಳಿಗೆ ವಿಧಿಸಲಾಯಿತು. ರಸ್ತೆ ಮಾರ್ಗವಾಗಿ ಸಾಗಾಟದ ಏರ್ಪಾಡು ಮಾಡಿದಾಗಲೂ ಅವರವರ ರಾಜ್ಯಗಳ ಸರಹದ್ದುಗಳಲ್ಲೇ ಅವರನ್ನು ಇಳಿಸಲಾಯಿತು. ರಾಜ್ಯ ಸರ್ಕಾರಗಳು ಇವರನ್ನು ಬರಮಾಡಿಕೊಳ್ಳಲು ತಯಾರಿರಲಿಲ್ಲ. ಈ ಬಡಪಾಯಿಗಳ ಹಕ್ಕುಗಳಿಗೆ ಅರ್ಥವೇ ಇಲ್ಲವಾಯಿತು.

ಲಾಕ್‍ಡೌನ್- 2ರಲ್ಲೂ ಈ ಲಕ್ಷ ಲಕ್ಷ ನಿರ್ಗತಿಕರ ಇರವನ್ನೇ ಗುರುತಿಸಲಿಲ್ಲ ಕೇಂದ್ರ ಸರ್ಕಾರ. ಇನ್ನು ಅವರ ಬವಣೆಯನ್ನು ನಿವಾರಿಸುವುದು ದೂರವೇ ಉಳಿಯಿತು.

ವಲಸೆ ಕಾರ್ಮಿಕರ ಕಣ್ಣೀರು ಒರೆಸುವ ಅವಕಾಶವನ್ನು 2020ರ ಮೇ 15ರಂದು ಇನ್ನೊಮ್ಮೆ ಕಳೆದುಕೊಂಡಿತು. ಹೆದ್ದಾರಿಗಳು, ರೈಲುದಾರಿಗಳಲ್ಲಿ ಸಾವಿರಾರು ಕಿ.ಮೀ. ಉದ್ದಕ್ಕೆ ದುಃಖ ಹಸಿವು ವ್ಯಥೆ ವಿಷಾದ ಹಾಗೂ ತಬ್ಬಲಿ ಭಾವಗಳ ನದಿಗಳಂತೆ ಹರಿಯತೊಡಗಿದ್ದರು ವಲಸೆ ಕಾರ್ಮಿಕರು. ಅವರನ್ನು ಗುರುತಿಸಿ ಅನ್ನ- ನೀರು-ನೆರಳು ಹಾಗೂ ಉಚಿತ ಪಯಣವನ್ನು ಏರ್ಪಡಿಸುವಂತೆ ದೇಶದ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕೆಂಬ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು. ಅರ್ಜಿಯ ಗುಣಗಳನ್ನು ಪರಿಗಣಿಸಲೂ ಇಲ್ಲ.

ಸರ್ಕಾರದ ಪರವಾಗಿ ಮಂಡಿಸಲಾಗುವ ಹೇಳಿಕೆಗಳಿಗೆ ನ್ಯಾಯಾಲಯ ನೀಡುತ್ತಿರುವ ಸಾಂಸ್ಥಿಕ ಗೌರವ- ಮಾನ್ಯತೆ-ಮನ್ನಣೆ ಮತ್ತು ಈ ಅಗಾಧ ಮಾನವೀಯ ಬಿಕ್ಕಟ್ಟಿನ ಕುರಿತು ನ್ಯಾಯಾಲಯ ತೋರಿರುವ ನಿರ್ಲಕ್ಷ್ಯವನ್ನು ತಕ್ಷಣವೇ ಸರಿಪಡಿಸಬೇಕು. ಇಲ್ಲದೆ ಹೋದರೆ ಲಕ್ಷೋಪಲಕ್ಷ ಹಸಿದ ನಿರ್ಗತಿಕ ವಲಸಿಗರ ಸಂಬಂಧ ತಾನು ವಹಿಸಬೇಕಿರುವ ಸಾಂವಿಧಾನಿಕ ಪಾತ್ರ ಮತ್ತು ಕರ್ತವ್ಯಗಳಿಂದ ನ್ಯಾಯಾಲಯ ಕೈ ತೊಳೆದುಕೊಂಡಂತೆಯೇ ಸರಿ.

ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಪ್ರಸಕ್ತ ಸನ್ನಿವೇಶದಲ್ಲಿ ಭಾರತೀಯ ಜನತಂತ್ರದ ಉಳಿವು ಮತ್ತು ಕಾನೂನಿನ ಪಾರಮ್ಯವು ಸುಪ್ರೀಂಕೋರ್ಟನ್ನೇ ಅವಲಂಬಿಸಿದೆ. ಪ್ರಭುತ್ವದ ಕ್ರಿಯೆಯ ನಾಗರಿಕರ ಮೂಲಭೂತ ಹಕ್ಕುಗಳನ್ನು ಆಪೋಶನ ತೆಗೆದುಕೊಳ್ಳದಂತೆ ಕಾವಲು ನಿಲ್ಲುವ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಅದು ಸಕ್ರಿಯವಾಗಿ ನಿಭಾಯಿಸಬೇಕಿದೆ.

ಇಂದಿಗೂ ಈ ಹೊತ್ತಿಗೂ ವಲಸೆ ಕಾರ್ಮಿಕರ ಸಂಕಟ ಮುಂದುವರೆದಿದೆ. ಲಕ್ಷಾಂತರ ಜನ ರೇಲ್ವೆ ನಿಲ್ದಾಣಗಳು ಮತ್ತು ರಾಜ್ಯಗಳ ಸರಹದ್ದುಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಇವರಿಗೆ ಅನ್ನ ನೀರು ನೆರಳು ಹಾಗೂ ಪ್ರಯಾಣ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ನಾವು ಸುಪ್ರೀಂಕೋರ್ಟನ್ನು ಆಗ್ರಹಪಡಿಸುತ್ತೇವೆ. ಅನ್ಯಾಯ ಎಲ್ಲಿಯೇ ಜರುಗಿದರೂ ಅದು ನ್ಯಾಯಕ್ಕೆ ಎಲ್ಲೆಡೆಯೂ ಗಂಡಾಂತರವೇ ಎಂಬ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಅವರ ಮಾತನ್ನು ಇಲ್ಲಿ ನೆನಪಿಸಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...