Homeಬಹುಜನ ಭಾರತಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

ಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

- Advertisement -
- Advertisement -

ಆತ್ಮನಿರ್ಭರ ಭಾರತದ ಹೃದಯ ಹಿಂಡುವ ಚಿತ್ರಗಳು ನಾಗರಿಕ ಸಮಾಜದ ಮುಖಕ್ಕೆ ರಾಚುತ್ತಿವೆ. ಭಕ್ತಭಾರತದ ಆತ್ಮಸಾಕ್ಷಿ ಕಡೆಯುಸಿರು ಎಳೆದು ವರ್ಷಗಳೇ ಉರುಳಿವೆ. ದಿನಗಟ್ಟಲೆ ಟ್ರೇನಿನಲ್ಲಿ ಅನ್ನ ನೀರಿಲ್ಲದೆ ಪ್ರಯಾಣ ಮಾಡಿ ಸತ್ತ ತನ್ನ ತಾಯಿಯ ಹೊದಿಕೆಯನ್ನು ಹಿಡಿದೆಳೆದು ಎಚ್ಚರಿಸಲು ಅಮಾಯಕ ಹಸುಳೆ ಪ್ರಯತ್ನಿಸುವ ದೃಶ್ಯಾವಳಿ ಭಕ್ತ ಭಾರತದ ಕಲ್ಲು ಮನಸ್ಸನ್ನು ಕರಗಿಸಲಾರದು. ಅರ್ಥಾತ್ ದೇಶ- ಸಮಾಜ ತೀವ್ರ ಅಪಾಯಕರ ಸ್ಥಿತಿಯಲ್ಲಿವೆ. ಮನಸ್ಸಾಕ್ಷಿಗಳಿಗೆ ಲಕ್ವ ಹೊಡೆದಿದೆ. ಹನ್ನೊಂದರ ಪ್ರಾಯದ ಎಳೆಯ ತನ್ನ ಕುರುಡು ತಾಯಿ ಮತ್ತು ಕುಂಟ ತಂದೆಯನ್ನು ತ್ರಿಚಕ್ರ ಸೈಕಲ್‍ನಲ್ಲಿ ಕೂರಿಸಿ ವಾರಣಾಸಿಯಿಂದ ಬಿಹಾರಕ್ಕೆ ಒಯ್ಯುವ ದೃಶ್ಯವಾಗಲಿ, ಹೆದ್ದಾರಿಯಲ್ಲಿ ಹಸಿದ ವ್ಯಕ್ತಿಯೊಬ್ಬ ವಾಹನಗಳ ಚಕ್ರಗಳಡಿ ಸಿಕ್ಕಿ ನಜ್ಜುಗುಜ್ಜಾಗಿದ್ದ ನಾಯಿಯ ಕಳೇಬರದಿಂದ ಮಾಂಸವನ್ನು ಕಿತ್ತು ತಿನ್ನುವ ನೋಟವಾಗಲಿ, ನಡೆ ನಡೆದು ಎಳೆಯ ಮಕ್ಕಳ ಅಂಗಾಲುಗಳು ಬೊಕ್ಕೆಗಳಾಗಿ ಕಂಗೆಟ್ಟು ಕಣ್ಣುಗಳಲ್ಲಿ ನೀರು ತುಂಬಿಕೊಂಡ ನೋವಾಗಲೀ ಭಕ್ತ ಭಾರತದ ಕಣ್ಣಿಗೆ ಕಾಣುವುದೇ ಇಲ್ಲ. ತನ್ನ ವಿಶ್ವರೂಪವನ್ನು ಕಾಣಲು ಶ್ರೀಕೃಷ್ಣನು ಅರ್ಜುನನಿಗೆ ವಿಶೇಷ ದೃಷ್ಟಿಯನ್ನು ಪ್ರಸಾದಿಸಿದಂತೆ ಭಕ್ತ ಭಾರತಕ್ಕೂ ವಿಶೇಷ ಕಣ್ಣುಗಳನ್ನೂ, ಚಲಿಸುವ ಮನಸ್ಸನ್ನೂ ನೀಡಬೇಕಿದೆ. ಆ ಕಾಲ ಬರುವುದೆಂದೋ ಸದ್ಯಕ್ಕೆ ತಿಳಿಯದು.

ಈ ನಡುವೆ ವಿಶೇಷವೊಂದು ಜರುಗಿದೆ. ವಲಸೆ ಕಾರ್ಮಿಕ ಕೋಟಿಯ ಕಷ್ಟ ಪರಂಪರೆಯನ್ನು ಕಡೆಗಣಿಸಿದ್ದ ಸುಪ್ರೀಮ್ ಕೋರ್ಟಿಗೆ ಬಿಸಿ ಮುಟ್ಟಿಸುವ ಪತ್ರವೊಂದನ್ನು ದೇಶದ ಹಿರಿಯ ನ್ಯಾಯವಾದಿಗಳು ಬರೆದಿದ್ದಾರೆ. ಅದನ್ನೊಮ್ಮೆ ಓದಿಕೊಳ್ಳೋಣ.

ಪ್ರಿಯ ನ್ಯಾಯಮೂರ್ತಿಗಳೇ,

ಭಾರತೀಯ ನಾಗರಿಕರಾಗಿ ಮತ್ತು ಹಿರಿಯ ನ್ಯಾಯವಾದಿಗಳಾಗಿ ಅತೀವ ವ್ಯಥೆ ಮತ್ತು ದಿಗಿಲಿನಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇವೆ.

ಈ ದೇಶದ ನಾಗರಿಕರ ಅದರಲ್ಲೂ ವಿಶೇಷವಾಗಿ ಬಡತನದ ರೇಖೆಯ ಮತ್ತು ಅದರ ಕೆಳಗೆ ಕನಿಷ್ಠ ಕೂಲಿ ಪಡೆದು ಹೊಟ್ಟೆ ಹೊರೆಯುವ ಮತ್ತು ಹೀಗೆ ಹೊಟ್ಟೆ ಹೊರೆಯುವುದೂ ಕಷ್ಟಕರವಾಗಿ ಪರಿಣಮಿಸಿರುವ ಅಸಂಖ್ಯಾತ ಜನಸಮೂಹಗಳ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪಾತ್ರ ಅತ್ಯಂತ ಪ್ರಮುಖ.

ಸರ್ಕಾರಿ ಆದೇಶದ ಮೇರೆಗೆ ಕಳೆದ ಮಾರ್ಚ್ 24ರಿಂದ ಇಡೀ ದೇಶ ಮತ್ತು ಅದರ ಆರ್ಥಿಕ ವ್ಯವಸ್ಥೆಗೆ ಬೀಗ ಬಿದ್ದಿರುವ ಇಂದಿನ ಬಿಕ್ಕಟ್ಟಿನ ಸ್ಥಿತಿಯಲ್ಲಿ ಸುಪ್ರೀಂಕೋರ್ಟ್ ಪಾತ್ರ ಮತ್ತು ಕರ್ತವ್ಯ ಅಪಾರ ಪ್ರಾಮುಖ್ಯತೆ ಗಳಿಸಿಕೊಳ್ಳುತ್ತದೆ. ದೇಶದ ಶೇ.75ಕ್ಕೂ ಹೆಚ್ಚು ಶ್ರಮಜೀವಿಗಳು ಅಸಂಘಟಿತ ವಲಯದಲ್ಲಿರುವವರು. ಆರ್ಥಿಕ ಚಟುವಟಿಕೆಯ ಸ್ಥಗಿತವು ಅವರ ಹೊಟ್ಟೆಪಾಡುಗಳ ಮೇಲೆ ತಕ್ಷಣದ ಪರಿಣಾಮ ಬೀರುತ್ತದೆ.

ಕೋಟಿಗಳ ಸಂಖ್ಯೆಗಳಲ್ಲಿರುವ ಈ ಶ್ರಮಿಕ ವರ್ಗ ಮುಖ್ಯವಾಗಿ ವಲಸೆ ಕಾರ್ಮಿಕ ಸ್ವರೂಪದ್ದು. ಮಾರ್ಚ್ 24ರಂದು ಲಾಕ್‍ಡೌನ್ ಘೋಷಿಸಿದಾಗ ಇವರ ಪಡಿಪಾಟಲನ್ನು ಲೆಕ್ಕಕ್ಕೇ ಇಟ್ಟುಕೊಳ್ಳಲಿಲ್ಲ. ಕೇವಲ ನಾಲ್ಕು ತಾಸುಗಳ ಕಾಲಾವಧಿಯಲ್ಲಿ ಲಾಕ್‍ಡೌನ್ ಸಾರಲಾಯಿತು. ಈ ಕೋಟ್ಯಂತರ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳುವ ಅವಕಾಶವನ್ನೇ ನೀಡಲಿಲ್ಲ. ಬೇರೆ ದಾರಿಯೇ ಇಲ್ಲದೆ ಹಸಿವು ಹತಾಶೆಗಳಿಂದ ನಡೆಯತೊಡಗಿದ ಇವರನ್ನು ಸರ್ಕಾರಗಳು ತಡೆಯುವ ಪ್ರಯತ್ನ ಮಾಡಿದವು.

ಕಳೆದ ಮಾರ್ಚ್ ತಿಂಗಳಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ವಿಫಲವಾದ ಕಾರಣ ಲಕ್ಷೋಪಲಕ್ಷ ಕಾರ್ಮಿಕರು ತಮ್ಮ ಸಣ್ಣಪುಟ್ಟ ಇಕ್ಕಟ್ಟಿನ ಖೋಲಿಗಳಲ್ಲೋ, ರಸ್ತೆಬದಿಯ ಕಾಲುದಾರಿಗಳಲ್ಲೋ ಉದ್ಯೋಗವಿಲ್ಲದೆ, ಒಪ್ಪೊತ್ತಿನ ಊಟಕ್ಕೂ ದಾರಿಯಲ್ಲದೆ ದಿನ ದೂಡುವಂತಾಯಿತು. ಆಗ ಕೋವಿಡ್ ಕೇಸುಗಳ ಸಂಖ್ಯೆ ಕೆಲವೇ ನೂರರಷ್ಟಿತ್ತು. ಅವರನ್ನು ಮರಳಲು ಬಿಡದೆ ಕಟ್ಟಿ ಹಾಕಿದ ಈ ಬಲಾತ್ಕಾರವು ಈ ಬಡಪಾಯಿಗಳನ್ನು ಕೋವಿಡ್ ಮಹಾಮಾರಿಯ ಸೋಂಕಿನ ಅಪಾಯಕ್ಕೆ ನೇರವಾಗಿ ನೂಕಿದಂತಾಗಿತ್ತು.

ಸರ್ಕಾರದ ಹೇಳಿಕೆಯು ವಾಸ್ತವ ಸ್ಥಿತಿಗತಿಗಳಿಗೆ ವ್ಯತಿರಿಕ್ತವಾಗಿತ್ತು. ಶೇ.90ರಷ್ಟು ವಲಸೆ ಕೆಲಸಗಾರರಿಗೆ ಸರ್ಕಾರಿ ಪಡಿತರ ಸಿಗಲಿಲ್ಲವೆಂದೂ, ಆಹಾರದ ತೀವ್ರ ಕೊರತೆಗೆ ತುತ್ತಾಗಿದ್ದಾರೆಂದೂ ಹಲವು ವರದಿಗಳು ಹೇಳಿದವು.

ಮಾರ್ಚ್ ತಿಂಗಳಿನಲ್ಲಿ ಸುಪ್ರೀಂಕೋರ್ಟು ಮಧ್ಯಪ್ರವೇಶಿಸಲು ವಿಫಲವಾದ ನಂತರ ಲಕ್ಷೋಪಲಕ್ಷ ಕಾರ್ಮಿಕರ ಮಹಾವಲಸೆ ಮೊದಲಾಯಿತು. ಆ ಹೊತ್ತಿಗೆ ಕೋವಿಡ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿತ್ತು. ಈ ಕಾರ್ಮಿಕರೂ ಸೋಂಕಿಗೆ ತುತ್ತಾದರು. ಈ ಹಂತದಲ್ಲೂ ಇವರ ಸಂಚಾರವನ್ನು ಸರ್ಕಾರ ಪ್ರತಿಬಂಧಿಸಿತ್ತು. ನಡೆದು ಹೋಗುವ ಬಡಪಾಯಿಗಳನ್ನೂ ತಡೆದು ಥಳಿಸಿದವು ಪೊಲೀಸರ ಲಾಠಿಗಳು. ಬೀದಿಗೆ ಬಿದ್ದಿದ್ದವರನ್ನು ಬಗೆ ಬಗೆಯಾಗಿ ಅವಮಾನಿಸಲಾಯಿತು. ತರುವಾಯ ಬಸ್ಸುಗಳು ಮತ್ತು ಟ್ರೇನುಗಳಲ್ಲಿ ಅವರ ಸಂಚಾರಕ್ಕೆ ಅನುಮತಿ ನೀಡಲಾಯಿತು. ವೈದ್ಯಕೀಯ ಪ್ರಮಾಣಪತ್ರ ತರಬೇಕೆಂಬ ಅಸಾಧ್ಯ ಷರತ್ತನ್ನು ಈ ಬಡಪಾಯಿಗಳಿಗೆ ವಿಧಿಸಲಾಯಿತು. ರಸ್ತೆ ಮಾರ್ಗವಾಗಿ ಸಾಗಾಟದ ಏರ್ಪಾಡು ಮಾಡಿದಾಗಲೂ ಅವರವರ ರಾಜ್ಯಗಳ ಸರಹದ್ದುಗಳಲ್ಲೇ ಅವರನ್ನು ಇಳಿಸಲಾಯಿತು. ರಾಜ್ಯ ಸರ್ಕಾರಗಳು ಇವರನ್ನು ಬರಮಾಡಿಕೊಳ್ಳಲು ತಯಾರಿರಲಿಲ್ಲ. ಈ ಬಡಪಾಯಿಗಳ ಹಕ್ಕುಗಳಿಗೆ ಅರ್ಥವೇ ಇಲ್ಲವಾಯಿತು.

ಲಾಕ್‍ಡೌನ್- 2ರಲ್ಲೂ ಈ ಲಕ್ಷ ಲಕ್ಷ ನಿರ್ಗತಿಕರ ಇರವನ್ನೇ ಗುರುತಿಸಲಿಲ್ಲ ಕೇಂದ್ರ ಸರ್ಕಾರ. ಇನ್ನು ಅವರ ಬವಣೆಯನ್ನು ನಿವಾರಿಸುವುದು ದೂರವೇ ಉಳಿಯಿತು.

ವಲಸೆ ಕಾರ್ಮಿಕರ ಕಣ್ಣೀರು ಒರೆಸುವ ಅವಕಾಶವನ್ನು 2020ರ ಮೇ 15ರಂದು ಇನ್ನೊಮ್ಮೆ ಕಳೆದುಕೊಂಡಿತು. ಹೆದ್ದಾರಿಗಳು, ರೈಲುದಾರಿಗಳಲ್ಲಿ ಸಾವಿರಾರು ಕಿ.ಮೀ. ಉದ್ದಕ್ಕೆ ದುಃಖ ಹಸಿವು ವ್ಯಥೆ ವಿಷಾದ ಹಾಗೂ ತಬ್ಬಲಿ ಭಾವಗಳ ನದಿಗಳಂತೆ ಹರಿಯತೊಡಗಿದ್ದರು ವಲಸೆ ಕಾರ್ಮಿಕರು. ಅವರನ್ನು ಗುರುತಿಸಿ ಅನ್ನ- ನೀರು-ನೆರಳು ಹಾಗೂ ಉಚಿತ ಪಯಣವನ್ನು ಏರ್ಪಡಿಸುವಂತೆ ದೇಶದ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕೆಂಬ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು. ಅರ್ಜಿಯ ಗುಣಗಳನ್ನು ಪರಿಗಣಿಸಲೂ ಇಲ್ಲ.

ಸರ್ಕಾರದ ಪರವಾಗಿ ಮಂಡಿಸಲಾಗುವ ಹೇಳಿಕೆಗಳಿಗೆ ನ್ಯಾಯಾಲಯ ನೀಡುತ್ತಿರುವ ಸಾಂಸ್ಥಿಕ ಗೌರವ- ಮಾನ್ಯತೆ-ಮನ್ನಣೆ ಮತ್ತು ಈ ಅಗಾಧ ಮಾನವೀಯ ಬಿಕ್ಕಟ್ಟಿನ ಕುರಿತು ನ್ಯಾಯಾಲಯ ತೋರಿರುವ ನಿರ್ಲಕ್ಷ್ಯವನ್ನು ತಕ್ಷಣವೇ ಸರಿಪಡಿಸಬೇಕು. ಇಲ್ಲದೆ ಹೋದರೆ ಲಕ್ಷೋಪಲಕ್ಷ ಹಸಿದ ನಿರ್ಗತಿಕ ವಲಸಿಗರ ಸಂಬಂಧ ತಾನು ವಹಿಸಬೇಕಿರುವ ಸಾಂವಿಧಾನಿಕ ಪಾತ್ರ ಮತ್ತು ಕರ್ತವ್ಯಗಳಿಂದ ನ್ಯಾಯಾಲಯ ಕೈ ತೊಳೆದುಕೊಂಡಂತೆಯೇ ಸರಿ.

ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಪ್ರಸಕ್ತ ಸನ್ನಿವೇಶದಲ್ಲಿ ಭಾರತೀಯ ಜನತಂತ್ರದ ಉಳಿವು ಮತ್ತು ಕಾನೂನಿನ ಪಾರಮ್ಯವು ಸುಪ್ರೀಂಕೋರ್ಟನ್ನೇ ಅವಲಂಬಿಸಿದೆ. ಪ್ರಭುತ್ವದ ಕ್ರಿಯೆಯ ನಾಗರಿಕರ ಮೂಲಭೂತ ಹಕ್ಕುಗಳನ್ನು ಆಪೋಶನ ತೆಗೆದುಕೊಳ್ಳದಂತೆ ಕಾವಲು ನಿಲ್ಲುವ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಅದು ಸಕ್ರಿಯವಾಗಿ ನಿಭಾಯಿಸಬೇಕಿದೆ.

ಇಂದಿಗೂ ಈ ಹೊತ್ತಿಗೂ ವಲಸೆ ಕಾರ್ಮಿಕರ ಸಂಕಟ ಮುಂದುವರೆದಿದೆ. ಲಕ್ಷಾಂತರ ಜನ ರೇಲ್ವೆ ನಿಲ್ದಾಣಗಳು ಮತ್ತು ರಾಜ್ಯಗಳ ಸರಹದ್ದುಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಇವರಿಗೆ ಅನ್ನ ನೀರು ನೆರಳು ಹಾಗೂ ಪ್ರಯಾಣ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ನಾವು ಸುಪ್ರೀಂಕೋರ್ಟನ್ನು ಆಗ್ರಹಪಡಿಸುತ್ತೇವೆ. ಅನ್ಯಾಯ ಎಲ್ಲಿಯೇ ಜರುಗಿದರೂ ಅದು ನ್ಯಾಯಕ್ಕೆ ಎಲ್ಲೆಡೆಯೂ ಗಂಡಾಂತರವೇ ಎಂಬ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಅವರ ಮಾತನ್ನು ಇಲ್ಲಿ ನೆನಪಿಸಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...