Homeಬಹುಜನ ಭಾರತಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

ಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

- Advertisement -
- Advertisement -

ಆತ್ಮನಿರ್ಭರ ಭಾರತದ ಹೃದಯ ಹಿಂಡುವ ಚಿತ್ರಗಳು ನಾಗರಿಕ ಸಮಾಜದ ಮುಖಕ್ಕೆ ರಾಚುತ್ತಿವೆ. ಭಕ್ತಭಾರತದ ಆತ್ಮಸಾಕ್ಷಿ ಕಡೆಯುಸಿರು ಎಳೆದು ವರ್ಷಗಳೇ ಉರುಳಿವೆ. ದಿನಗಟ್ಟಲೆ ಟ್ರೇನಿನಲ್ಲಿ ಅನ್ನ ನೀರಿಲ್ಲದೆ ಪ್ರಯಾಣ ಮಾಡಿ ಸತ್ತ ತನ್ನ ತಾಯಿಯ ಹೊದಿಕೆಯನ್ನು ಹಿಡಿದೆಳೆದು ಎಚ್ಚರಿಸಲು ಅಮಾಯಕ ಹಸುಳೆ ಪ್ರಯತ್ನಿಸುವ ದೃಶ್ಯಾವಳಿ ಭಕ್ತ ಭಾರತದ ಕಲ್ಲು ಮನಸ್ಸನ್ನು ಕರಗಿಸಲಾರದು. ಅರ್ಥಾತ್ ದೇಶ- ಸಮಾಜ ತೀವ್ರ ಅಪಾಯಕರ ಸ್ಥಿತಿಯಲ್ಲಿವೆ. ಮನಸ್ಸಾಕ್ಷಿಗಳಿಗೆ ಲಕ್ವ ಹೊಡೆದಿದೆ. ಹನ್ನೊಂದರ ಪ್ರಾಯದ ಎಳೆಯ ತನ್ನ ಕುರುಡು ತಾಯಿ ಮತ್ತು ಕುಂಟ ತಂದೆಯನ್ನು ತ್ರಿಚಕ್ರ ಸೈಕಲ್‍ನಲ್ಲಿ ಕೂರಿಸಿ ವಾರಣಾಸಿಯಿಂದ ಬಿಹಾರಕ್ಕೆ ಒಯ್ಯುವ ದೃಶ್ಯವಾಗಲಿ, ಹೆದ್ದಾರಿಯಲ್ಲಿ ಹಸಿದ ವ್ಯಕ್ತಿಯೊಬ್ಬ ವಾಹನಗಳ ಚಕ್ರಗಳಡಿ ಸಿಕ್ಕಿ ನಜ್ಜುಗುಜ್ಜಾಗಿದ್ದ ನಾಯಿಯ ಕಳೇಬರದಿಂದ ಮಾಂಸವನ್ನು ಕಿತ್ತು ತಿನ್ನುವ ನೋಟವಾಗಲಿ, ನಡೆ ನಡೆದು ಎಳೆಯ ಮಕ್ಕಳ ಅಂಗಾಲುಗಳು ಬೊಕ್ಕೆಗಳಾಗಿ ಕಂಗೆಟ್ಟು ಕಣ್ಣುಗಳಲ್ಲಿ ನೀರು ತುಂಬಿಕೊಂಡ ನೋವಾಗಲೀ ಭಕ್ತ ಭಾರತದ ಕಣ್ಣಿಗೆ ಕಾಣುವುದೇ ಇಲ್ಲ. ತನ್ನ ವಿಶ್ವರೂಪವನ್ನು ಕಾಣಲು ಶ್ರೀಕೃಷ್ಣನು ಅರ್ಜುನನಿಗೆ ವಿಶೇಷ ದೃಷ್ಟಿಯನ್ನು ಪ್ರಸಾದಿಸಿದಂತೆ ಭಕ್ತ ಭಾರತಕ್ಕೂ ವಿಶೇಷ ಕಣ್ಣುಗಳನ್ನೂ, ಚಲಿಸುವ ಮನಸ್ಸನ್ನೂ ನೀಡಬೇಕಿದೆ. ಆ ಕಾಲ ಬರುವುದೆಂದೋ ಸದ್ಯಕ್ಕೆ ತಿಳಿಯದು.

ಈ ನಡುವೆ ವಿಶೇಷವೊಂದು ಜರುಗಿದೆ. ವಲಸೆ ಕಾರ್ಮಿಕ ಕೋಟಿಯ ಕಷ್ಟ ಪರಂಪರೆಯನ್ನು ಕಡೆಗಣಿಸಿದ್ದ ಸುಪ್ರೀಮ್ ಕೋರ್ಟಿಗೆ ಬಿಸಿ ಮುಟ್ಟಿಸುವ ಪತ್ರವೊಂದನ್ನು ದೇಶದ ಹಿರಿಯ ನ್ಯಾಯವಾದಿಗಳು ಬರೆದಿದ್ದಾರೆ. ಅದನ್ನೊಮ್ಮೆ ಓದಿಕೊಳ್ಳೋಣ.

ಪ್ರಿಯ ನ್ಯಾಯಮೂರ್ತಿಗಳೇ,

ಭಾರತೀಯ ನಾಗರಿಕರಾಗಿ ಮತ್ತು ಹಿರಿಯ ನ್ಯಾಯವಾದಿಗಳಾಗಿ ಅತೀವ ವ್ಯಥೆ ಮತ್ತು ದಿಗಿಲಿನಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇವೆ.

ಈ ದೇಶದ ನಾಗರಿಕರ ಅದರಲ್ಲೂ ವಿಶೇಷವಾಗಿ ಬಡತನದ ರೇಖೆಯ ಮತ್ತು ಅದರ ಕೆಳಗೆ ಕನಿಷ್ಠ ಕೂಲಿ ಪಡೆದು ಹೊಟ್ಟೆ ಹೊರೆಯುವ ಮತ್ತು ಹೀಗೆ ಹೊಟ್ಟೆ ಹೊರೆಯುವುದೂ ಕಷ್ಟಕರವಾಗಿ ಪರಿಣಮಿಸಿರುವ ಅಸಂಖ್ಯಾತ ಜನಸಮೂಹಗಳ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪಾತ್ರ ಅತ್ಯಂತ ಪ್ರಮುಖ.

ಸರ್ಕಾರಿ ಆದೇಶದ ಮೇರೆಗೆ ಕಳೆದ ಮಾರ್ಚ್ 24ರಿಂದ ಇಡೀ ದೇಶ ಮತ್ತು ಅದರ ಆರ್ಥಿಕ ವ್ಯವಸ್ಥೆಗೆ ಬೀಗ ಬಿದ್ದಿರುವ ಇಂದಿನ ಬಿಕ್ಕಟ್ಟಿನ ಸ್ಥಿತಿಯಲ್ಲಿ ಸುಪ್ರೀಂಕೋರ್ಟ್ ಪಾತ್ರ ಮತ್ತು ಕರ್ತವ್ಯ ಅಪಾರ ಪ್ರಾಮುಖ್ಯತೆ ಗಳಿಸಿಕೊಳ್ಳುತ್ತದೆ. ದೇಶದ ಶೇ.75ಕ್ಕೂ ಹೆಚ್ಚು ಶ್ರಮಜೀವಿಗಳು ಅಸಂಘಟಿತ ವಲಯದಲ್ಲಿರುವವರು. ಆರ್ಥಿಕ ಚಟುವಟಿಕೆಯ ಸ್ಥಗಿತವು ಅವರ ಹೊಟ್ಟೆಪಾಡುಗಳ ಮೇಲೆ ತಕ್ಷಣದ ಪರಿಣಾಮ ಬೀರುತ್ತದೆ.

ಕೋಟಿಗಳ ಸಂಖ್ಯೆಗಳಲ್ಲಿರುವ ಈ ಶ್ರಮಿಕ ವರ್ಗ ಮುಖ್ಯವಾಗಿ ವಲಸೆ ಕಾರ್ಮಿಕ ಸ್ವರೂಪದ್ದು. ಮಾರ್ಚ್ 24ರಂದು ಲಾಕ್‍ಡೌನ್ ಘೋಷಿಸಿದಾಗ ಇವರ ಪಡಿಪಾಟಲನ್ನು ಲೆಕ್ಕಕ್ಕೇ ಇಟ್ಟುಕೊಳ್ಳಲಿಲ್ಲ. ಕೇವಲ ನಾಲ್ಕು ತಾಸುಗಳ ಕಾಲಾವಧಿಯಲ್ಲಿ ಲಾಕ್‍ಡೌನ್ ಸಾರಲಾಯಿತು. ಈ ಕೋಟ್ಯಂತರ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳುವ ಅವಕಾಶವನ್ನೇ ನೀಡಲಿಲ್ಲ. ಬೇರೆ ದಾರಿಯೇ ಇಲ್ಲದೆ ಹಸಿವು ಹತಾಶೆಗಳಿಂದ ನಡೆಯತೊಡಗಿದ ಇವರನ್ನು ಸರ್ಕಾರಗಳು ತಡೆಯುವ ಪ್ರಯತ್ನ ಮಾಡಿದವು.

ಕಳೆದ ಮಾರ್ಚ್ ತಿಂಗಳಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ವಿಫಲವಾದ ಕಾರಣ ಲಕ್ಷೋಪಲಕ್ಷ ಕಾರ್ಮಿಕರು ತಮ್ಮ ಸಣ್ಣಪುಟ್ಟ ಇಕ್ಕಟ್ಟಿನ ಖೋಲಿಗಳಲ್ಲೋ, ರಸ್ತೆಬದಿಯ ಕಾಲುದಾರಿಗಳಲ್ಲೋ ಉದ್ಯೋಗವಿಲ್ಲದೆ, ಒಪ್ಪೊತ್ತಿನ ಊಟಕ್ಕೂ ದಾರಿಯಲ್ಲದೆ ದಿನ ದೂಡುವಂತಾಯಿತು. ಆಗ ಕೋವಿಡ್ ಕೇಸುಗಳ ಸಂಖ್ಯೆ ಕೆಲವೇ ನೂರರಷ್ಟಿತ್ತು. ಅವರನ್ನು ಮರಳಲು ಬಿಡದೆ ಕಟ್ಟಿ ಹಾಕಿದ ಈ ಬಲಾತ್ಕಾರವು ಈ ಬಡಪಾಯಿಗಳನ್ನು ಕೋವಿಡ್ ಮಹಾಮಾರಿಯ ಸೋಂಕಿನ ಅಪಾಯಕ್ಕೆ ನೇರವಾಗಿ ನೂಕಿದಂತಾಗಿತ್ತು.

ಸರ್ಕಾರದ ಹೇಳಿಕೆಯು ವಾಸ್ತವ ಸ್ಥಿತಿಗತಿಗಳಿಗೆ ವ್ಯತಿರಿಕ್ತವಾಗಿತ್ತು. ಶೇ.90ರಷ್ಟು ವಲಸೆ ಕೆಲಸಗಾರರಿಗೆ ಸರ್ಕಾರಿ ಪಡಿತರ ಸಿಗಲಿಲ್ಲವೆಂದೂ, ಆಹಾರದ ತೀವ್ರ ಕೊರತೆಗೆ ತುತ್ತಾಗಿದ್ದಾರೆಂದೂ ಹಲವು ವರದಿಗಳು ಹೇಳಿದವು.

ಮಾರ್ಚ್ ತಿಂಗಳಿನಲ್ಲಿ ಸುಪ್ರೀಂಕೋರ್ಟು ಮಧ್ಯಪ್ರವೇಶಿಸಲು ವಿಫಲವಾದ ನಂತರ ಲಕ್ಷೋಪಲಕ್ಷ ಕಾರ್ಮಿಕರ ಮಹಾವಲಸೆ ಮೊದಲಾಯಿತು. ಆ ಹೊತ್ತಿಗೆ ಕೋವಿಡ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿತ್ತು. ಈ ಕಾರ್ಮಿಕರೂ ಸೋಂಕಿಗೆ ತುತ್ತಾದರು. ಈ ಹಂತದಲ್ಲೂ ಇವರ ಸಂಚಾರವನ್ನು ಸರ್ಕಾರ ಪ್ರತಿಬಂಧಿಸಿತ್ತು. ನಡೆದು ಹೋಗುವ ಬಡಪಾಯಿಗಳನ್ನೂ ತಡೆದು ಥಳಿಸಿದವು ಪೊಲೀಸರ ಲಾಠಿಗಳು. ಬೀದಿಗೆ ಬಿದ್ದಿದ್ದವರನ್ನು ಬಗೆ ಬಗೆಯಾಗಿ ಅವಮಾನಿಸಲಾಯಿತು. ತರುವಾಯ ಬಸ್ಸುಗಳು ಮತ್ತು ಟ್ರೇನುಗಳಲ್ಲಿ ಅವರ ಸಂಚಾರಕ್ಕೆ ಅನುಮತಿ ನೀಡಲಾಯಿತು. ವೈದ್ಯಕೀಯ ಪ್ರಮಾಣಪತ್ರ ತರಬೇಕೆಂಬ ಅಸಾಧ್ಯ ಷರತ್ತನ್ನು ಈ ಬಡಪಾಯಿಗಳಿಗೆ ವಿಧಿಸಲಾಯಿತು. ರಸ್ತೆ ಮಾರ್ಗವಾಗಿ ಸಾಗಾಟದ ಏರ್ಪಾಡು ಮಾಡಿದಾಗಲೂ ಅವರವರ ರಾಜ್ಯಗಳ ಸರಹದ್ದುಗಳಲ್ಲೇ ಅವರನ್ನು ಇಳಿಸಲಾಯಿತು. ರಾಜ್ಯ ಸರ್ಕಾರಗಳು ಇವರನ್ನು ಬರಮಾಡಿಕೊಳ್ಳಲು ತಯಾರಿರಲಿಲ್ಲ. ಈ ಬಡಪಾಯಿಗಳ ಹಕ್ಕುಗಳಿಗೆ ಅರ್ಥವೇ ಇಲ್ಲವಾಯಿತು.

ಲಾಕ್‍ಡೌನ್- 2ರಲ್ಲೂ ಈ ಲಕ್ಷ ಲಕ್ಷ ನಿರ್ಗತಿಕರ ಇರವನ್ನೇ ಗುರುತಿಸಲಿಲ್ಲ ಕೇಂದ್ರ ಸರ್ಕಾರ. ಇನ್ನು ಅವರ ಬವಣೆಯನ್ನು ನಿವಾರಿಸುವುದು ದೂರವೇ ಉಳಿಯಿತು.

ವಲಸೆ ಕಾರ್ಮಿಕರ ಕಣ್ಣೀರು ಒರೆಸುವ ಅವಕಾಶವನ್ನು 2020ರ ಮೇ 15ರಂದು ಇನ್ನೊಮ್ಮೆ ಕಳೆದುಕೊಂಡಿತು. ಹೆದ್ದಾರಿಗಳು, ರೈಲುದಾರಿಗಳಲ್ಲಿ ಸಾವಿರಾರು ಕಿ.ಮೀ. ಉದ್ದಕ್ಕೆ ದುಃಖ ಹಸಿವು ವ್ಯಥೆ ವಿಷಾದ ಹಾಗೂ ತಬ್ಬಲಿ ಭಾವಗಳ ನದಿಗಳಂತೆ ಹರಿಯತೊಡಗಿದ್ದರು ವಲಸೆ ಕಾರ್ಮಿಕರು. ಅವರನ್ನು ಗುರುತಿಸಿ ಅನ್ನ- ನೀರು-ನೆರಳು ಹಾಗೂ ಉಚಿತ ಪಯಣವನ್ನು ಏರ್ಪಡಿಸುವಂತೆ ದೇಶದ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕೆಂಬ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು. ಅರ್ಜಿಯ ಗುಣಗಳನ್ನು ಪರಿಗಣಿಸಲೂ ಇಲ್ಲ.

ಸರ್ಕಾರದ ಪರವಾಗಿ ಮಂಡಿಸಲಾಗುವ ಹೇಳಿಕೆಗಳಿಗೆ ನ್ಯಾಯಾಲಯ ನೀಡುತ್ತಿರುವ ಸಾಂಸ್ಥಿಕ ಗೌರವ- ಮಾನ್ಯತೆ-ಮನ್ನಣೆ ಮತ್ತು ಈ ಅಗಾಧ ಮಾನವೀಯ ಬಿಕ್ಕಟ್ಟಿನ ಕುರಿತು ನ್ಯಾಯಾಲಯ ತೋರಿರುವ ನಿರ್ಲಕ್ಷ್ಯವನ್ನು ತಕ್ಷಣವೇ ಸರಿಪಡಿಸಬೇಕು. ಇಲ್ಲದೆ ಹೋದರೆ ಲಕ್ಷೋಪಲಕ್ಷ ಹಸಿದ ನಿರ್ಗತಿಕ ವಲಸಿಗರ ಸಂಬಂಧ ತಾನು ವಹಿಸಬೇಕಿರುವ ಸಾಂವಿಧಾನಿಕ ಪಾತ್ರ ಮತ್ತು ಕರ್ತವ್ಯಗಳಿಂದ ನ್ಯಾಯಾಲಯ ಕೈ ತೊಳೆದುಕೊಂಡಂತೆಯೇ ಸರಿ.

ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಪ್ರಸಕ್ತ ಸನ್ನಿವೇಶದಲ್ಲಿ ಭಾರತೀಯ ಜನತಂತ್ರದ ಉಳಿವು ಮತ್ತು ಕಾನೂನಿನ ಪಾರಮ್ಯವು ಸುಪ್ರೀಂಕೋರ್ಟನ್ನೇ ಅವಲಂಬಿಸಿದೆ. ಪ್ರಭುತ್ವದ ಕ್ರಿಯೆಯ ನಾಗರಿಕರ ಮೂಲಭೂತ ಹಕ್ಕುಗಳನ್ನು ಆಪೋಶನ ತೆಗೆದುಕೊಳ್ಳದಂತೆ ಕಾವಲು ನಿಲ್ಲುವ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಅದು ಸಕ್ರಿಯವಾಗಿ ನಿಭಾಯಿಸಬೇಕಿದೆ.

ಇಂದಿಗೂ ಈ ಹೊತ್ತಿಗೂ ವಲಸೆ ಕಾರ್ಮಿಕರ ಸಂಕಟ ಮುಂದುವರೆದಿದೆ. ಲಕ್ಷಾಂತರ ಜನ ರೇಲ್ವೆ ನಿಲ್ದಾಣಗಳು ಮತ್ತು ರಾಜ್ಯಗಳ ಸರಹದ್ದುಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಇವರಿಗೆ ಅನ್ನ ನೀರು ನೆರಳು ಹಾಗೂ ಪ್ರಯಾಣ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ನಾವು ಸುಪ್ರೀಂಕೋರ್ಟನ್ನು ಆಗ್ರಹಪಡಿಸುತ್ತೇವೆ. ಅನ್ಯಾಯ ಎಲ್ಲಿಯೇ ಜರುಗಿದರೂ ಅದು ನ್ಯಾಯಕ್ಕೆ ಎಲ್ಲೆಡೆಯೂ ಗಂಡಾಂತರವೇ ಎಂಬ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಅವರ ಮಾತನ್ನು ಇಲ್ಲಿ ನೆನಪಿಸಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...