Homeಮುಖಪುಟಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ಸಹಾಯ ಮಾಡುವ ಆರೋಗ್ಯ ಕಾರ್ಯಕರ್ತರೊಬ್ಬರು ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆದರೆ 25 ನಿಮಿಷಗಳ ಕಾಲ 44 ಡಿಗ್ರಿ ಸೆಲ್ಸಿಯಸ್ ಶಾಖದ ಬಿಸಿಲಿನಲ್ಲಿ ರಸ್ತೆಯಲ್ಲೇ ಅವರು ಬಿದ್ದದ್ದರೂ ಯಾರು ಸಹಾಯಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.

ತುರ್ತು ಸೇವೆಯಾದ 108 ಆಂಬ್ಯುಲೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕಾರ್ಯಕರ್ತ ಹಿರಾಲಾಲ್ ಪ್ರಜಾಪತಿ, ಟಿಬಿ ಆಸ್ಪತ್ರೆಯಿಂದ ಬುಂಡೇಲ್‌ಖಂಡ್ ವೈದ್ಯಕೀಯ ಕಾಲೇಜಿಗೆ (ಬಿಎಂಸಿ) ಕೊರೊನಾ ವೈರಸ್ ಪಾಸಿಟಿವ್ ಆಗಿರುವ ಜನರನ್ನು ಸಾಗಿಸಿದ ನಂತರ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕುಸಿದು ಬಿದ್ದರು ಎನ್ನಲಾಗಿದೆ.

ಸ್ಥಳೀಯ ವರದಿಗಳ ಪ್ರಕಾರ, ದೇಹದ ಪೂರ್ತಿ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ್ದ ಪ್ರಜಾಪತಿ ಶಾಖದಿಂದ ಕುದಿಯುತ್ತಿದ್ದು, ಬಿಎಂಸಿ ಬಳಿ ಕುಸಿದುಬಿದ್ದರು. ಆದರೆ ಅವರ ಸಹೋದ್ಯೋಗಿಯಾಗಿರುವ ಆಂಬ್ಯುಲೆನ್ಸ್ ಚಾಲಕ ಅವರನ್ನು ಬಿಎಂಸಿಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು ಆದರೆ ಅಧಿಕಾರಿಗಳು ನಿರಾಕರಿಸಿದರಿಂದ ಸುಮಾರು ಅರ್ಧ ಘಂಟೆಯವರೆಗೆ ನೆಲದ ಮೇಲೆ ಬಿದ್ದಿದ್ದರು.

ಅಂತಿಮವಾಗಿ, ಅವರನ್ನು ಇತರ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಪ್ರಸ್ತುತ ಪ್ರಜಾಪತಿ ಚೇತರಿಸಿಕೊಂಡಿದ್ದಾರೆ ಹಾಗೂ ಸ್ಥಿರವಾಗಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಇದುವರೆಗೆ 7,000 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 313 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ರಾಜ್ಯದ ಇಂದೋರ್ ನಗರವು ಕೊರೊನಾ ಭಾದಿತ ನಗರಗಳಲ್ಲೇ ದೇಶದ ಅತ್ಯಂತ ಕೆಟ್ಟ ಪ್ರದೇಶಗಳಲ್ಲಿ ಒಂದಾಗಿದೆ. ಅಲ್ಲಿ 3,000 ಪ್ರಕರಣಗಳು ವರದಿಯಾಗಿದ್ದು; 78 ಹೊಸ ಪ್ರಕರಣಗಳು ಬುಧವಾರ ಪತ್ತೆಯಾಗಿವೆ ಎಂದು ಮುಖ್ಯ ವೈದ್ಯಾಧಿಕಾರಿ ಪ್ರವೀಣ್ ಜಾಡಿಯಾ ತಿಳಿಸಿದ್ದಾರೆ.

ನಿನ್ನೆ ಹೊರಡಿಸಿದ ಆದೇಶದಲ್ಲಿ, ಮನೆ ಸಂಪರ್ಕತಡೆಯನ್ನು ಉಲ್ಲಂಘಿಸುವವರಿಗೆ 2 ಸಾವಿರ ರೂ.ಗಳ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಎರಡನೇ ಬಾರಿಗೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಲ್ಲಿ ಅವರನ್ನು ಸಾಂಸ್ಥಿಕ ಸಂಪರ್ಕತಡೆಗೆ ಹಾಕಲಾಗುತ್ತದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಇದರ ಮಧ್ಯೆ ಮಧ್ಯಪ್ರದೇಶ ಆಡಳಿತವು ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಮಿಡತೆಗಳ ಬೆದರಿಕೆಯನ್ನು ಎದುರಿಸುತ್ತಿದೆ. ಸೆಹೋರ್ ಜಿಲ್ಲೆಯ ಬುಡ್ನಿ ಮತ್ತು ನಸ್ರುಲ್ಲಗಂಜ್ ಪ್ರದೇಶಗಳಲ್ಲಿನ ರೈತರು ಮಿಡತೆಗಳನ್ನು ಓಡಿಸಲು ಕೃಷಿ ಇಲಾಖೆಯ ಸಲಹೆಯಂತೆ ಪಾತ್ರೆಗಳನ್ನು ಹೊಡೆಯುತ್ತಿರುವುದು ಕಂಡುಬಂದಿಂದೆ.

ಕಳೆದ ವಾರ ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಮಿಡತೆಗಳ ದೊಡ್ಡ ಗುಂಪು ಪ್ರವೇಶಿಸಿದೆ. ಇವುಗಳನ್ನು ಶೀಘ್ರದಲ್ಲೇ ನಿಯಂತ್ರಿಸದಿದ್ದರೆ, ಸುಮಾರು 8,000 ಕೋಟಿ ಮೌಲ್ಯದ ಏಕದಳ ಬೆಳೆಗಳನ್ನು ನಾಶಪಡಿಸಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.


ಓದಿ: ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಗೆ ಏಳು ವರ್ಷಗಳ ಜೈಲು ಶಿಕ್ಷೆ: ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...