Homeಮುಖಪುಟಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ಸಹಾಯ ಮಾಡುವ ಆರೋಗ್ಯ ಕಾರ್ಯಕರ್ತರೊಬ್ಬರು ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆದರೆ 25 ನಿಮಿಷಗಳ ಕಾಲ 44 ಡಿಗ್ರಿ ಸೆಲ್ಸಿಯಸ್ ಶಾಖದ ಬಿಸಿಲಿನಲ್ಲಿ ರಸ್ತೆಯಲ್ಲೇ ಅವರು ಬಿದ್ದದ್ದರೂ ಯಾರು ಸಹಾಯಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.

ತುರ್ತು ಸೇವೆಯಾದ 108 ಆಂಬ್ಯುಲೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕಾರ್ಯಕರ್ತ ಹಿರಾಲಾಲ್ ಪ್ರಜಾಪತಿ, ಟಿಬಿ ಆಸ್ಪತ್ರೆಯಿಂದ ಬುಂಡೇಲ್‌ಖಂಡ್ ವೈದ್ಯಕೀಯ ಕಾಲೇಜಿಗೆ (ಬಿಎಂಸಿ) ಕೊರೊನಾ ವೈರಸ್ ಪಾಸಿಟಿವ್ ಆಗಿರುವ ಜನರನ್ನು ಸಾಗಿಸಿದ ನಂತರ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕುಸಿದು ಬಿದ್ದರು ಎನ್ನಲಾಗಿದೆ.

ಸ್ಥಳೀಯ ವರದಿಗಳ ಪ್ರಕಾರ, ದೇಹದ ಪೂರ್ತಿ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ್ದ ಪ್ರಜಾಪತಿ ಶಾಖದಿಂದ ಕುದಿಯುತ್ತಿದ್ದು, ಬಿಎಂಸಿ ಬಳಿ ಕುಸಿದುಬಿದ್ದರು. ಆದರೆ ಅವರ ಸಹೋದ್ಯೋಗಿಯಾಗಿರುವ ಆಂಬ್ಯುಲೆನ್ಸ್ ಚಾಲಕ ಅವರನ್ನು ಬಿಎಂಸಿಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು ಆದರೆ ಅಧಿಕಾರಿಗಳು ನಿರಾಕರಿಸಿದರಿಂದ ಸುಮಾರು ಅರ್ಧ ಘಂಟೆಯವರೆಗೆ ನೆಲದ ಮೇಲೆ ಬಿದ್ದಿದ್ದರು.

ಅಂತಿಮವಾಗಿ, ಅವರನ್ನು ಇತರ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಪ್ರಸ್ತುತ ಪ್ರಜಾಪತಿ ಚೇತರಿಸಿಕೊಂಡಿದ್ದಾರೆ ಹಾಗೂ ಸ್ಥಿರವಾಗಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಇದುವರೆಗೆ 7,000 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 313 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ರಾಜ್ಯದ ಇಂದೋರ್ ನಗರವು ಕೊರೊನಾ ಭಾದಿತ ನಗರಗಳಲ್ಲೇ ದೇಶದ ಅತ್ಯಂತ ಕೆಟ್ಟ ಪ್ರದೇಶಗಳಲ್ಲಿ ಒಂದಾಗಿದೆ. ಅಲ್ಲಿ 3,000 ಪ್ರಕರಣಗಳು ವರದಿಯಾಗಿದ್ದು; 78 ಹೊಸ ಪ್ರಕರಣಗಳು ಬುಧವಾರ ಪತ್ತೆಯಾಗಿವೆ ಎಂದು ಮುಖ್ಯ ವೈದ್ಯಾಧಿಕಾರಿ ಪ್ರವೀಣ್ ಜಾಡಿಯಾ ತಿಳಿಸಿದ್ದಾರೆ.

ನಿನ್ನೆ ಹೊರಡಿಸಿದ ಆದೇಶದಲ್ಲಿ, ಮನೆ ಸಂಪರ್ಕತಡೆಯನ್ನು ಉಲ್ಲಂಘಿಸುವವರಿಗೆ 2 ಸಾವಿರ ರೂ.ಗಳ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಎರಡನೇ ಬಾರಿಗೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಲ್ಲಿ ಅವರನ್ನು ಸಾಂಸ್ಥಿಕ ಸಂಪರ್ಕತಡೆಗೆ ಹಾಕಲಾಗುತ್ತದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಇದರ ಮಧ್ಯೆ ಮಧ್ಯಪ್ರದೇಶ ಆಡಳಿತವು ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಮಿಡತೆಗಳ ಬೆದರಿಕೆಯನ್ನು ಎದುರಿಸುತ್ತಿದೆ. ಸೆಹೋರ್ ಜಿಲ್ಲೆಯ ಬುಡ್ನಿ ಮತ್ತು ನಸ್ರುಲ್ಲಗಂಜ್ ಪ್ರದೇಶಗಳಲ್ಲಿನ ರೈತರು ಮಿಡತೆಗಳನ್ನು ಓಡಿಸಲು ಕೃಷಿ ಇಲಾಖೆಯ ಸಲಹೆಯಂತೆ ಪಾತ್ರೆಗಳನ್ನು ಹೊಡೆಯುತ್ತಿರುವುದು ಕಂಡುಬಂದಿಂದೆ.

ಕಳೆದ ವಾರ ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಮಿಡತೆಗಳ ದೊಡ್ಡ ಗುಂಪು ಪ್ರವೇಶಿಸಿದೆ. ಇವುಗಳನ್ನು ಶೀಘ್ರದಲ್ಲೇ ನಿಯಂತ್ರಿಸದಿದ್ದರೆ, ಸುಮಾರು 8,000 ಕೋಟಿ ಮೌಲ್ಯದ ಏಕದಳ ಬೆಳೆಗಳನ್ನು ನಾಶಪಡಿಸಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.


ಓದಿ: ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಗೆ ಏಳು ವರ್ಷಗಳ ಜೈಲು ಶಿಕ್ಷೆ: ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...