Homeಮುಖಪುಟನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ನಾವೇನು ಪ್ರಾಣಿಗಳೆ? : ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಪ್ರತಿಭಟನೆ

ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಸರ್ಕಾರ ಆಸ್ಪತ್ರೆಯ ಎದುರಿಗೆ ಹಲವಾರು ಕೊರೊನಾ ಸೋಂಕಿತರ ಗುಂಪು ಒಟ್ಟುಗೂಡಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪ್ರಯಾಗ್‌ರಾಜ್‌ನ ಕೋಟಾ ಬನಿ ಕ್ಯಾಟಗರಿ ಎಲ್ ಕೋವಿಡ್‌-19 ಆಸ್ಪತ್ರೆಯಲ್ಲಿ ಈ ಘಟನೆ ಜರುಗಿದ್ದು, ನಾವು ಪ್ರಾಣಿಗಳೆ ಎಂದು ಕೊರೊನಾ ಸೋಂಕಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಗುರುವಾರ ಸತತ ಎರಡು ಗಂಟೆಗಳಾದರೂ ಆಸ್ಪತ್ರೆಗೆ ನೀರು ಸರಬರಾಜು ಆಗದ ಕಾರಣ ಸಿಟ್ಟಿಗೆದ್ದ ಸೋಂಕಿತರು ಪ್ರತಿಭಟನೆ ನಡೆಸಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಸೋಂಕಿತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಸೋಂಕಿತರು ನಾವೇನು ಪ್ರಾಣಿಗಳೆ? ನಮಗೆ ಆಹಾರ ನೀರು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್‌ ವಿಡಿಯೋದಲ್ಲಿ ವಿಡಿಯೋ ಮಾಡಿದವರು ಅಲ್ಲಿನ ಸೋಂಕಿತರನ್ನು, ಆಸ್ಪತ್ರೆಯ ಪ್ರವೇಶದ್ವಾರವನ್ನು ಮತ್ತು ನಾಮಫಲಕವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಆತ ನಿಮಗೆ ಸಮರ್ಪಕವಾಗಿ ಆಹಾರ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಎಲ್ಲಾ ಸೋಂಕಿತರು ಇಲ್ಲ, ಇಲ್ಲ ಎಂದು ಉತ್ತರಿಸಿದ್ದಾರೆ. ಅರ್ಧ ಬೇಯಿಸಿದ ಆಹಾರಗಳನ್ನು ನೀಡುತ್ತಿದ್ದಾರೆ ಎಂದು ಹಿರಿಯ ವ್ಯಕ್ತಿಯೊಬ್ಬರು ದೂರಿದ್ದಾರೆ.

ಹಲವಾರು ವ್ಯಕ್ತಿಗಳು ಉತ್ತಮ ಆಹಾರಕ್ಕಾಗಿ ಅಲ್ಲಿನ ಅಧಿಕಾರಿಗಳಿಗೆ ಹಣ ನೀಡಿರುವುದಾಗಿ ತಿಳಿಸಿದ್ದಾರೆ. ಬೇಕಾದರೆ ಹಣ ತೆಗೆದುಕೊಳ್ಳಿ, ಆದರೆ ಇಂತಹ ಅಸಹ್ಯ ಪರಿಸ್ಥಿತಿಯಿಂದ ನಮ್ಮನ್ನು ಬಿಡುಗಡೆಗೊಳಿಸಿ. ನಾವು ನಮ್ಮ ಮನೆಗಳಿಗೆ ಹೋಗುತ್ತೇವೆ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತ ಪ್ರಯಾಗ್‌ರಾಜ್‌ನ ಮುಖ್ಯ ಆರೋಗ್ಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಇಲ್ಲಿ ಯಾವಾಗಲೂ ನೀರು ಇರುತ್ತದೆ. ಇಂದು ಕೇವಲ ಎರಡು ಗಂಟೆಗಳ ಕಾಲ ಶುದ್ದ ನೀರು ಸರಬರಾಜು ಆಗಲು ವಿಳಂಬವಾಗಿದ್ದಕ್ಕೆ ಈ ಘಟನೆ ಜರುಗಿದೆ. ವಿದ್ಯುತ್‌ ಸಮಸ್ಯೆಯಿಂದಾಗಿ ನಾವು ಶುದ್ಧ ನೀರು ಸರಬರಾಜು ಮಾಡುವುದು ತಡವಾಯಿತು. ಕೂಡಲೇ ಮೆಕಾನಿಕ್‌ ಕರೆಸಿ ವಿದ್ಯುತ್‌ ಸಮಸ್ಯೆ ಸರಿಪಡಿಸಿ ನೀರಿನ ವ್ಯವಸ್ಥೆ ಮಾಡಿದೆವು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಸಮರ್ಪಕವಾಗಿ ನಡೆಸಿಕೊಳ್ಳುತ್ತಿಲ್ಲ ಎಂಬುದಕ್ಕೆ ಇದು ಎರಡನೆಯ ಉದಾಹರಣೆಯಾಗಿದೆ. ಈ ಮೊದಲು ಆಗ್ರಾದ ಆಸ್ಪತ್ರೆಯಲ್ಲಿಯೂ ಕೂಡ ಕೊರೊನಾ ಸೋಂಕಿತರ ಬಸ್‌ ಅನ್ನು ಹೊರಗೆ ನಿಲ್ಲಿಸಿ, ದಾಖಲು ಮಾಡಿಕೊಳ್ಳದೇ ಗಂಟೆಗಟ್ಟಲೇ ಗೇಟಿನಿಂದ ಆಚೆ ಕಾಯಿಸಿದ್ದ ಘಟನೆ ಜರುಗಿತ್ತು.


ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು 


ಇನ್ನು ಕಳೆದ ವಾರ ಉತ್ತರ ಪ್ರದೇಶ ಸರ್ಕಾರವು ಕೋವಿಡ್‌ -19 ಐಸೋಲೇಸನ್‌ ಲೆವಲ್‌2 ಮತ್ತು ಲೆವೆಲ್‌ 3 ವಾರ್ಡ್‌‌ಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವಂತೆ ಆದೇಶ ಹೊರಡಿಸಿತ್ತು. ಆದರೆ ತೀವ್ರ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆ ಆದೇಶವನ್ನು ಹಿಂಪಡೆದಿತ್ತು.


ಇದನ್ನೂ ಓದಿ: ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...