Homeಮುಖಪುಟಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

ಸಿಎಎ ವಿರುದ್ಧದ ಪ್ರತಿಭಟನೆ ಪ್ರಕರಣ: ಎಎಂಯು ವಿವಿಯ ಇಬ್ಬರು ವಿದ್ಯಾರ್ಥಿಗಳ ಬಂಧನ!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಫರ್ಹಾನ್ ಜುಬೇರಿ ಮತ್ತು ರವೀಶ್ ಅಲಿ ಖಾನ್ ಅವರನ್ನು ನಿನ್ನೆ ಬಂಧಿಸಲಾಗಿದೆ. ಆನಂತರ ರವೀಶ್‌ನನ್ನು ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ್ದರೆ, ಫರ್ಹಾನ್ ಅವರನ್ನು ಅಲಿಘರ್‌ನ ಜೈಲಿಗೆ ಕಳುಹಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಭಾರತವು ನಾಲ್ಕನೇ ಹಂತದ ಲಾಕ್‌ಡೌನ್ ಅನ್ನು ಎದುರಿಸುತ್ತಿರುವಾಗ ಹಲವಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಈ ಬಂಧನಗಳು ಸಹ ಜರುಗಿವೆ.

ಫರ್ಹಾನ್ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರೆ, ರವೀಶ್ ಪ್ರಸ್ತುತ ಸಾಮಾಜಿಕ ಅಧ್ಯಯನ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಫರ್ಹಾನ್ ಅವರ ವಿರುದ್ಧ ಸುಮಾರು 10-11 ಆರೋಪಗಳನ್ನು ಪೊಲೀಸರು ಹೊರಿಸಿದ್ದಾರೆ. ಫರ್ಹಾನ್ ಮತ್ತು ರವಿಶ್ ವೈಯಕ್ತಿಕ ಕೆಲಸಗಳಿಗಾಗಿ ಮದ್ರಾಕ್ ಬಳಿ ಕಾರಿನಲ್ಲಿ ಚಲಿಸುತ್ತಿದ್ದಾಗ, ನಾಗರಿಕರ ಬಟ್ಟೆಯಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನಾವು ವೇಗವಾಗಿ ಕಾರು ಚಲಾಯಿಸುತ್ತಿದ್ದೆವು. ಪೊಲೀಸರು ನಮ್ಮ ಕಾರನ್ನು ನಿಲ್ಲಿಸಿ, ಬ್ಯಾರಿಕೇಡ್ ಅನ್ನು ನಮ್ಮ ಕಾರಿನ ಕಡೆಗೆ ಎಸೆದರು, ಅದು ಸೈಡ್ ವ್ಯೂ ಕನ್ನಡಿ ಬಿದ್ದು ನನ್ನ ಕೈಗೆ ಬಡಿಯಿತು. ನನಗೆ ಗಾಯಗಳಾಗಿವೆ ಆದರೆ ಗಂಭೀರವಾಗಿಲ್ಲ” ಎಂದು ರವಿಶ್ ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಫರ್ಹಾನ್ ವಿರುದ್ಧ ಪೊಲೀಸರು ಹಲವು ಆರೋಪಗಳನ್ನು ಹೊರಿಸಿದ್ದಾರೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಗಲ್ಲ. ಆದರೂ ಸಹ ನನ್ನನ್ನು ಸುಮಾರು ಆರು ಗಂಟೆಗಳ ಕಾಲ ಬಂಧಿಸಿದ್ದರು ಎಂದು ರವೀಶ್‌ ತಿಳಿಸಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧಿಸಿದಂತೆ ಈ ಬಂಧನಗಳು ನಡೆಯುತ್ತಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಫರ್ಹಾನ್ ವಿರುದ್ಧ ದೇಶದ್ರೋಹ, ಕೊಲೆ ಯತ್ನದ ಆರೋಪ

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಫರ್ಹಾನ್ ಅವರು ವಿಶ್ವವಿದ್ಯಾಲಯದ ಸಮನ್ವಯ ಸಮಿತಿಯ ಸದಸ್ಯರಗಿದ್ದರು. ಅವರ ವಿರುದ್ಧದ ಆರೋಪಗಳ ಕೆಲವು ಐಪಿಸಿ ವಿಭಾಗಗಳು ಕೆಳಗಿನಂತಿವೆ.

188 – ಸಾರ್ವಜನಿಕ ಕೆಲಸಕ್ಕೆ ಅಡ್ಡಿ ಮತ್ತು ಅಸಹಕಾರ.
147 – ಗಲಭೆ ಪ್ರಯತ್ನ.
307 – ಕೊಲೆ ಯತ್ನ.
353 – ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಅಪರಾಧ.
504 – ಶಾಂತಿ ಉಲ್ಲಂಘಿಸುವ ಪ್ರಚೋದನೆ.
506 – ಕ್ರಿಮಿನಲ್ ಬೆದರಿಕೆ.
336 – ಜೀವಬೆದರಿಕೆ.
124 ಎ – ದೇಶದ್ರೋಹ.
153 ಎ – ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು.

ಕಳೆದ ವಾರವಷ್ಟೇ ಜೆಎನ್‌ಯೂ ವಿಶ್ವವಿದ್ಯಾನಿಲಯ ಪಿಂಜ್ರಾತೋಡ್‌ ಸಂಘಟನೆಯ ಕಾರ್ಯಕರ್ತರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಬಂಧಿಸಲಾಗಿತ್ತು. ನಾಲ್ಕು ದಿನಗಳಿಂದ ಅವರನ್ನು ಕಸ್ಟಡಿಯಲ್ಲಿಡಲಾಗಿದೆ.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...