Homeಮುಖಪುಟರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಶ್ರಮಿಕ್ ವಿಶೇಷ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವುಗಳು ಸಣ್ಣ ಹಾಗೂ ಪ್ರತ್ಯೇಕ ಘಟನೆ, ಇದಕ್ಕಾಗಿ ರೈಲ್ವೇ ಇಲಾಖೆಯನ್ನು ನಿಂದಿಸುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಸೋಮವಾರದಿಂದ ತೀವ್ರ ಉಷ್ಣಾಂಶ ಹಾಗೂ ಹಸಿವೆಯಿಂದ ತಮ್ಮ ರಾಜ್ಯಗಳಿಗೆ ಹೊರಟಿದ್ದ ಒಟ್ಟು ಒಂಬತ್ತು ವಲಸೆ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಮೃತಪಟ್ಟಿದ್ದಾರೆ.

“ಕೆಲವು ದುರದೃಷ್ಟಕರ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆ ಇಲಾಖೆಯನ್ನು ದೂಷಿಸುವುದು ಸರಿಯಲ್ಲ. ವಲಸಿಗರನ್ನು ಅವರ ಊರಿಗೆ ತಲುಪಿಸುವ ಉತ್ತಮ ಕೆಲಸ ಮಾಡುತ್ತಿದೆ. ಕೆಲವು ಸಾವುಗಳು ನಡೆದಿವೆ, ಆದರೆ ಇವು ಪ್ರತ್ಯೇಕ ಘಟನೆಗಳು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿದೆ ಎಂಬುದಕ್ಕೆ ನಮ್ಮಲ್ಲಿ ಉದಾಹರಣೆಗಳಿವೆ. ಕೆಲವು ಸಣ್ಣ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆಗಳನ್ನು ಮುಚ್ಚಿ ಬಿಡಬೇಕು ಎನ್ನುವುದಲ್ಲ” ಸಂಸದರೂ ಆಗಿರುವ ಪಶ್ಚಿಮ ಬಂಗಾಳದ ಮುಖ್ಯಸ್ಥರಾಗಿರುವ ದಿಲೀಪ್ ಘೋಷ್ ಹೇಳಿದ್ದಾರೆ.

ಬಿಹಾರದ ಮುಜಾಫರ್ಪುರ್ ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸುತ್ತಿರುವ ಮಗುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಹಲವಾರು ಜನರು ವ್ಯಾಪಕವಾಗಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ದಿಲೀಪ್ ಘೋಷ್ ಹೇಳಿಕೆಯನ್ನು ಪಶ್ಚಿಮ ಬಂಗಾಳದ ವಿಪಕ್ಷ ಸಿಪಿಐ(ಎಂ) ಹಾಗೂ ಆಡಳಿತ ಪಕ್ಷ ಟಿಸಿಎಂ ಖಂಡಿಸಿ, ವಲಸೆ ಕಾರ್ಮಿಕರ ದುಸ್ಥಿತಿಗೆ ಸೂಕ್ಷ್ಮವಾಗಿ ವರ್ತಿಸುವಂತೆ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪೊಲಿಟ್‌ಬ್ಯುರೊ ಸದಸ್ಯ ಮೊಹಮ್ಮದ್ ಸಲೀಂ ಮಾತನಾಡಿ, “ಬಿಜೆಪಿಯ ಆಡಳಿತದಲ್ಲಿ ಎಲ್ಲವೂ ಒಳ್ಳೆಯದಕ್ಕಾಗಿ ನಡೆಯುತ್ತದೆ ಎಂದು ಹೇಳುವ ಬಿಜೆಪಿಯ ಜಗತ್ತಿನಲ್ಲಿ ಉಳಿಯಲು ಘೋಷ್‌ರಂತಹ ನಾಯಕರು ಬಯಸುತ್ತಾರೆ. ವಲಸೆ ಕಾರ್ಮಿಕರ ಸಮಸ್ಯೆಯೂ ಮೋದಿ ಸರ್ಕಾರಕ್ಕೆ ಮಾನವ ಜೀವಗಳನ್ನು ಉಳಿಸಲು ಸಾಧ್ಯವಿಲ್ಲ ಎಂದು ಸಾಬೀತು ಮಾಡಿದೆ, ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರ ಬಿಕ್ಕಟ್ಟನ್ನು ತಪ್ಪಾಗಿ ನಿರ್ವಹಿಸಿದ ಬಗ್ಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ಸೌಗತಾ ರಾಯ್ “ಈ ಸಮಸ್ಯೆಯು ಕೇಂದ್ರವು ಕೊರೊನಾ ಬಿಕ್ಕಟ್ಟನ್ನು ಮತ್ತು ಲಾಕ್ ಡೌನ್ ಅನ್ನು ತಪ್ಪಾಗಿ ನಿರ್ವಹಿಸಿದ ಪರಿಣಾಮವಾಗಿದೆ. ಎಷ್ಟೋ ಜನರು ಸಾಯುತ್ತಿದ್ದಾರೆ ಆದರೆ ಏನೂ ಆಗಿಲ್ಲ ಎಂಬಂತೆ ಬಿಜೆಪಿ ನಾಯಕರು ಸೊಕ್ಕಿನಿಂದ ವರ್ತಿಸುತ್ತಿದ್ದಾರೆ. ನಮ್ಮತ್ತ ಬೆರಳು ತೋರಿಸುವ ಮೊದಲು ದಿಲೀಪ್ ಘೋಷ್ ಸೂಕ್ಷ್ಮವಾಗಿ ವರ್ತಿಸಬೇಕು ಹಾಗೂ ಮಾತನಾಡಬೇಕು.” ಎಂಧು ಹೇಳಿದ್ದಾರೆ.


ಓದಿ: ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...