Homeಮುಖಪುಟರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಶ್ರಮಿಕ್ ವಿಶೇಷ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವುಗಳು ಸಣ್ಣ ಹಾಗೂ ಪ್ರತ್ಯೇಕ ಘಟನೆ, ಇದಕ್ಕಾಗಿ ರೈಲ್ವೇ ಇಲಾಖೆಯನ್ನು ನಿಂದಿಸುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಸೋಮವಾರದಿಂದ ತೀವ್ರ ಉಷ್ಣಾಂಶ ಹಾಗೂ ಹಸಿವೆಯಿಂದ ತಮ್ಮ ರಾಜ್ಯಗಳಿಗೆ ಹೊರಟಿದ್ದ ಒಟ್ಟು ಒಂಬತ್ತು ವಲಸೆ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಮೃತಪಟ್ಟಿದ್ದಾರೆ.

“ಕೆಲವು ದುರದೃಷ್ಟಕರ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆ ಇಲಾಖೆಯನ್ನು ದೂಷಿಸುವುದು ಸರಿಯಲ್ಲ. ವಲಸಿಗರನ್ನು ಅವರ ಊರಿಗೆ ತಲುಪಿಸುವ ಉತ್ತಮ ಕೆಲಸ ಮಾಡುತ್ತಿದೆ. ಕೆಲವು ಸಾವುಗಳು ನಡೆದಿವೆ, ಆದರೆ ಇವು ಪ್ರತ್ಯೇಕ ಘಟನೆಗಳು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿದೆ ಎಂಬುದಕ್ಕೆ ನಮ್ಮಲ್ಲಿ ಉದಾಹರಣೆಗಳಿವೆ. ಕೆಲವು ಸಣ್ಣ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆಗಳನ್ನು ಮುಚ್ಚಿ ಬಿಡಬೇಕು ಎನ್ನುವುದಲ್ಲ” ಸಂಸದರೂ ಆಗಿರುವ ಪಶ್ಚಿಮ ಬಂಗಾಳದ ಮುಖ್ಯಸ್ಥರಾಗಿರುವ ದಿಲೀಪ್ ಘೋಷ್ ಹೇಳಿದ್ದಾರೆ.

ಬಿಹಾರದ ಮುಜಾಫರ್ಪುರ್ ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸುತ್ತಿರುವ ಮಗುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಹಲವಾರು ಜನರು ವ್ಯಾಪಕವಾಗಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ದಿಲೀಪ್ ಘೋಷ್ ಹೇಳಿಕೆಯನ್ನು ಪಶ್ಚಿಮ ಬಂಗಾಳದ ವಿಪಕ್ಷ ಸಿಪಿಐ(ಎಂ) ಹಾಗೂ ಆಡಳಿತ ಪಕ್ಷ ಟಿಸಿಎಂ ಖಂಡಿಸಿ, ವಲಸೆ ಕಾರ್ಮಿಕರ ದುಸ್ಥಿತಿಗೆ ಸೂಕ್ಷ್ಮವಾಗಿ ವರ್ತಿಸುವಂತೆ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪೊಲಿಟ್‌ಬ್ಯುರೊ ಸದಸ್ಯ ಮೊಹಮ್ಮದ್ ಸಲೀಂ ಮಾತನಾಡಿ, “ಬಿಜೆಪಿಯ ಆಡಳಿತದಲ್ಲಿ ಎಲ್ಲವೂ ಒಳ್ಳೆಯದಕ್ಕಾಗಿ ನಡೆಯುತ್ತದೆ ಎಂದು ಹೇಳುವ ಬಿಜೆಪಿಯ ಜಗತ್ತಿನಲ್ಲಿ ಉಳಿಯಲು ಘೋಷ್‌ರಂತಹ ನಾಯಕರು ಬಯಸುತ್ತಾರೆ. ವಲಸೆ ಕಾರ್ಮಿಕರ ಸಮಸ್ಯೆಯೂ ಮೋದಿ ಸರ್ಕಾರಕ್ಕೆ ಮಾನವ ಜೀವಗಳನ್ನು ಉಳಿಸಲು ಸಾಧ್ಯವಿಲ್ಲ ಎಂದು ಸಾಬೀತು ಮಾಡಿದೆ, ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರ ಬಿಕ್ಕಟ್ಟನ್ನು ತಪ್ಪಾಗಿ ನಿರ್ವಹಿಸಿದ ಬಗ್ಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ಸೌಗತಾ ರಾಯ್ “ಈ ಸಮಸ್ಯೆಯು ಕೇಂದ್ರವು ಕೊರೊನಾ ಬಿಕ್ಕಟ್ಟನ್ನು ಮತ್ತು ಲಾಕ್ ಡೌನ್ ಅನ್ನು ತಪ್ಪಾಗಿ ನಿರ್ವಹಿಸಿದ ಪರಿಣಾಮವಾಗಿದೆ. ಎಷ್ಟೋ ಜನರು ಸಾಯುತ್ತಿದ್ದಾರೆ ಆದರೆ ಏನೂ ಆಗಿಲ್ಲ ಎಂಬಂತೆ ಬಿಜೆಪಿ ನಾಯಕರು ಸೊಕ್ಕಿನಿಂದ ವರ್ತಿಸುತ್ತಿದ್ದಾರೆ. ನಮ್ಮತ್ತ ಬೆರಳು ತೋರಿಸುವ ಮೊದಲು ದಿಲೀಪ್ ಘೋಷ್ ಸೂಕ್ಷ್ಮವಾಗಿ ವರ್ತಿಸಬೇಕು ಹಾಗೂ ಮಾತನಾಡಬೇಕು.” ಎಂಧು ಹೇಳಿದ್ದಾರೆ.


ಓದಿ: ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...