Homeಅಂಕಣಗಳುಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

ಜನತೆ ಮೋದಿಯವರ ಸ್ವದೇಶಿ ಘೋಷಣೆಗೆ ಮರುಳಾಗಬಾರದು : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮೋದಿಯವರು ಆತ್ಮ ನಿರ್ಭರತೆ, ಸ್ವದೇಶಿ ಸ್ವಾವಲಂಬನೆ, ಸ್ವಾಭಿಮಾನದ ಮಾತನ್ನು ಆಡಿ ಭಾರತೀಯರನ್ನು ದಿಗ್ಬ್ರಮೆಗೊಳಿಸಿದ್ದಾರೆ. ಎಲ್ಲದಕ್ಕೂ ಪರ ರಾಷ್ಟ್ರಗಳನ್ನು ಅವಲಂಬನೆ ಮಾಡುವುದು ದೇಶದೃಷ್ಟಿಯಿಂದ ಸರಿಯಲ್ಲ, ಆತ್ಮ ನಿರ್ಭರತೆಗೆ ಒತ್ತು ಕೊಡಬೇಕು ಎಂಬುದು ಒಪ್ಪತಕ್ಕ ಮಾತು. ಆದರೆ ಈ ಮಾತನ್ನು ಮೋದಿಯವರು ಹರಿಬಿಟ್ಟಿರುವುದು ಅಭಾವ ವೈರಾಗ್ಯ ಕಾರಣದಿಂದ. ಬಹುರಾಷ್ಟ್ರೀಯ ಕಂಪನಿಗಳು ಆರ್ಥಿಕ ದುರ್ಭರತೆಯ ಕಾರಣದಿಂದ ಈ ಸಂದರ್ಭದಲ್ಲಿ ಬಂಡವಾಳ ತಂದು ಭಾರತದಲ್ಲಿ ಸುರಿಯುವುದಿಲ್ಲ ಎಂಬುದನ್ನು ಅರಿತು ಮೋದಿಯವರು ಆತ್ಮ ನಿರ್ಭರತೆಯ ಮಾತನ್ನು ಆಡಿದ್ದಾರೆ.

ಮೋದಿಯವರ ಆತ್ಮ ನಿರ್ಭರತೆಯ ಮಾತು ಗಾಂಧಿಜಿಯವರ ಸ್ವದೇಶಿ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ ತೋರುತ್ತದೆ. ಅಂಕಣಕಾರ ಹರೀಶ್ ಬಿಜೂರ್ ಅವರು ಹೇಳುವಂತೆ ಆತ್ಮ ನಿರ್ಭರತೆ ಮಾತಿಗೆ ಎರಡು ಆಯಾಮಗಳಿವೆ. ಅವೆಂದರೆ ರಾಷ್ಟ್ರೀಯತೆ ಮತ್ತು ಆರ್ಥಿಕ ಸ್ವಾವಲಂಬನೆ. ಮೋದಿಯವರ ಪ್ರಕಾರ ಆತ್ಮ ನಿರ್ಭರತೆ ಬಹುರಾಷ್ಟ್ರೀಯ ಬ್ರಾಂಡಿನಿಂದ ಕೂಡಿದ ಸ್ವದೇಶಿ. ಇದು ಮೋದಿಯವರಿಗೆ ತಿಳಿಯದೆ ಇರುವ ಸಂಗತಿಯಲ್ಲ. ಈಗಾಗಲೇ ಭಾರತದಲ್ಲಿ ಸ್ಥಾಪನೆಯಾಗಿರುವ ಬಹುರಾಷ್ಟ್ರೀಯ ಉದ್ಯಮಗಳನ್ನು ಗಮನದಲ್ಲಿಟ್ಟುಕೊಂಡೇ ಮೋದಿ ಅವರು ಆತ್ಮನಿರ್ಭರತೆ ಮಾತನ್ನು ಹರಿಯಬಿಟ್ಟಿದ್ದಾರೆ. ಈ ಬ್ರಾಂಡಿನ ಉದ್ಯಮಗಳು ಹತ್ತಾರು ವರ್ಷಗಳಿಂದ ಭಾರತದಲ್ಲಿ ನಡೆಯುತ್ತಿವೆ. ಅವೆಲ್ಲ Made In India ಆದ್ದರಿಂದ ಅವು ಸ್ವದೇಶಿ ಎಂಬುದು ಮೋದಿ ಅವರ ವ್ಯಾಖ್ಯಾನ. ಈ ಯೋಜನೆಯನ್ನು ಪ್ರಕಟಿಸಿದ ಮೋದಿಯವರಿಗೆ ನಮ್ಮ ದೇಶದಲ್ಲಿ ಸ್ಥಾಪಿತವಾಗಿರುವ ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ಸ್ಥಳೀಯವೇ.

ಜನರಿಗಂತೂ ಸ್ವದೇಶಿ-ವಿದೇಶಿ ಪದಾರ್ಥಗಳ ಕಲ್ಪನೆಯೇ ಇಲ್ಲ. ಸ್ವದೇಶಿ ಬಳಸಬೇಕೆಂಬ ಆತ್ಮಾಭಿಮಾನವೂ ಇಲ್ಲ. ಉದಾಹರಣೆಗೆ ನೆಸ್‍ಕೆಫೆ, ಕೋಕಾಕೋಲಾ, ಮ್ಯಾಗಿಶಾವಿಗೆಗಳಾಗಲಿ, ಅಡಿದಾಸ್ ಸಿದ್ದಪಡಿಸಿದ ಬಟ್ಟೆಗಳು, ಲಕ್ಸ್, 501 ಸೋಪುಗಳು ಬಾಟಾ ಷೂ ಮತ್ತು ಚಪ್ಪಲಿ ಮುಂತಾದ ದಿನಬಳಕೆಯ ವಸ್ತುಗಳಾಗಲಿ ವಿದೇಶಿಯೇ ಹೊರತು ಸ್ವದೇಶಿ ಅಲ್ಲ ಎಂಬ ಸಾಮಾನ್ಯ ತಿಳುವಳಿಕೆಯೂ ಜನಸಾಮಾನ್ಯರಲ್ಲಿ ಮಾತ್ರವಲ್ಲ ವಿದ್ಯಾವಂತರಲ್ಲಿ ಕೂಡ ಇದ್ದಂತೆ ತೋರುವುದಿಲ್ಲ.

ಜನರ ಈ ಅಜ್ಞಾನವನ್ನು ಮೋದಿಯವರು ಚೆನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಇವಲ್ಲದೆ ನಾವು ಬೆಳಗಿನಿಂದ ರಾತ್ರಿಯವರೆಗೆ ಬಳಸುವ ಟೂತ್‍ಪೇಸ್ಟ್, ಟೂತ್‍ಬ್ರಷ್, ಬಟ್ಟೆಸೋಪು, ಸ್ನಾನದ ಸೋಪು, ಕುಂಕುಮ, ಕಾಡಿಗೆ, ಸ್ನೋ ಪೌಡರ್, ಲಿಪ್‍ಸ್ಟಿಕ್ ಎಲ್ಲ ಪರದೇಶದ ಕಂಪೆನಿಗಳು ತಯಾರಿಸುವವೇ. ನಮ್ಮ ದೇಶದಲ್ಲಿ ತಯಾರಾಗುವ ಬಹುರಾಷ್ಟ್ರೀಯ ಬ್ರಾಂಡ್‍ಗಳ ಪದಾರ್ಥಗಳು ಪರದೇಶದಿಂದ ಆಮದಾಗುವ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳು ಈಗ ಎಲ್ಲೆಲ್ಲೂ ದೊರೆಯುತ್ತವೆ. ಇವೆಲ್ಲ ಸ್ವದೇಶಿ ಅಲ್ಲ ಪರದೇಶಿ ಎಂಬುದನ್ನು ಜನ ತಿಳಿದುಕೊಂಡಿಲ್ಲ.

ಈಗ ಪರದೇಶದ ಕಂಪನಿಗಳು ಭಾರತಕ್ಕೆ ಬಂದು ತಮ್ಮ ಉದ್ಯಮಗಳನ್ನು ಆರಂಭ ಮಾಡಿರುವುದರಿಂದ ಮೋದಿಯವರಿಗೂ ಅವೆಲ್ಲ ಸ್ವದೇಶಿಯಂದೇ ಗೋಚರವಾಗುತ್ತಿದೆ. ಈಗ ಈ ಪರದೇಶಿ ಕಂಪನಿಗಳೂ ಲೋಕಲ್ಲು ದುಡಿಯುವ ಜನವೂ ಲೋಕಲ್. ಈ ಪದಾರ್ಥ ಬಳಸುವವರೂ ಲೋಕಲ್. ಈ ಬಹುರಾಷ್ಟ್ರೀಯ ಕಂಪನಿಗಳು ಬರುವ ಅಪಾರ ಲಾಭವನ್ನು ಡಿವಿಡೆಂಡ್ ರೂಪದಲ್ಲಿ ತಮ್ಮ ಷೇರುದಾರರಿಗೆ ಉದಾರವಾಗಿ ನೀಡಿ ಉಳಿದ ಪುಡಿಗಾಸು ಲಾಭವನ್ನು ಭಾರತದಲ್ಲೇ ಉಳಿಸಿಕೊಳ್ಳುತ್ತವೆ. ನಗನಾಣ್ಯದ ಇತರ ಉದ್ಯಮಗಳು ಅಂದರೆ ಅವು ದೇಶಿಯರು ಸ್ಥಾಪಿಸಿರುವ ಉದ್ಯಮಗಳು. ಇವು ಇಲ್ಲಿ ಉತ್ಪನ್ನವಾಗುವ ಎಲ್ಲ ಪದಾರ್ಥಗಳು ಭಾರತದಲ್ಲೇ ಮಾರಾಟವಾಗುವುದು.

ದಿನಕಳೆದಂತೆ ಈ ಮೂರು ಬಗೆಯ ಸಂಸ್ಥೆಗಳು ತಮ್ಮ ಕಾರ್ಯ ಚಟುವಟಿಕೆಯನ್ನೂ ವಿಸ್ತರಿಸುತ್ತ ಹೋಗುತ್ತವೆ. ವಿದೇಶಗಳಲ್ಲಿಯೇ ಇದ್ದುಕೊಂಡು ಭಾರತಕ್ಕೆ ಕಳಿಸುವ ವಸ್ತುಗಳನ್ನ ತಯಾರಿಸುವ ಕಂಪನಿಗಳು ಸ್ವದೇಶಿ ಬಗೆಗೆ ಒತ್ತುಕೊಟ್ಟು ಕಣ್ಕುಕ್ಕುವ ಜಾಹಿರಾತುಗಳನ್ನೂ ನೀಡಿ ತಮ್ಮ ಸರಕಿಗೆ ಮಾರುಕಟ್ಟೆ ವಿಸ್ತರಿಸುತ್ತದೆ. ದೇಶಿ ಕಂಪನಿಗಳು ದೇಶಿ ಪದಾರ್ಥಗಳನ್ನೇ ಬಳಸಿ ಎಂದು vocal to local ಘೋಷಣೆಯನ್ನು ಮೊಳಗಿಸುತ್ತದೆ. ಮೋದಿಯವರು ಎಂದಿನಂತೆ ಹೊಸ ಘೋಷಣೆಯೊಂದನ್ನು ಹರಿಯ ಬಿಟ್ಟಿದ್ದಾರೆ. ಇದು ಬರಿಯ ಘೋಷಣೆಯೇ ಹೊರತು ನಿಜವಾದ ಸ್ವದೇಶಿ ಚಳುವಳಿ ಕಟ್ಟುವ ಘೋಷಣೆಯಲ್ಲ.

ಚಳುವಳಿಯನ್ನು ಜನತೆ ಮಾತ್ರ ನಡೆಸಬಲ್ಲರು ಎಂಬುದು ಮೋದಿಯವರಿಗೆ ಗೊತ್ತು. ಜನತೆಯನ್ನು ಬೆಸ್ತು ಬೀಳಿಸಲು ಹೂಡಿರುವ ತಂತ್ರ ಇದು. ಖಂಡಿತವಾಗಿ ಇದು ಮೋದಿಯವರ ಫೋಕಸ್ ಚಳುವಳಿಯಲ್ಲ.

ಜನತೆ ಮೋದಿಯವರ ಘೋಷಣೆಗೆ ಮರುಳಾಗಬಾರದು. ಸ್ವದೇಶಿ ಬಗೆಗೆ ಗಾಂಧಿಜಿಗಿದ್ದ ಆಸೆ ಮೋದಿಯವರಿಗೆ ಖಂಡಿತ ಇಲ್ಲ. ಭಾರತದ ಆರ್ಥಿಕತೆ ಕುಸಿಯುತ್ತಿರುವಾಗ ಜನರ ಮನಸ್ಸನ್ನು ಬೇರೆ ಕಡೆಗೆ ಸೆಳೆಯುವ ಮತ್ತೊಂದು ತಂತ್ರ ಇದು.


ಇದನ್ನು ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...