Homeನಿಜವೋ ಸುಳ್ಳೋಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಸಾವರ್ಕರ್‌ ಅವರ ವಿಚಾರ ಕರ್ನಾಟಕದಲ್ಲಿ ಚರ್ಚೆಗೆ ಬರುತ್ತಿದ್ದಂತೆ, ಈಗಾಗಲೇ ಹಲವಾರು ಸಾರಿ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದ ಆರೋಪಕ್ಕೊಳಗಾಗಿರುವ ಪೋಸ್ಟ್‌ ಕಾರ್ಡ್‌ ನವರಿಂದ ಸಾವರ್ಕರ್‌ ಅವರು ದಲಿತರ ಪರ ಕೆಲಸ ಮಾಡಿದ್ದರು ಎಂದು ಪ್ರಕಟವಾಗಿದೆ. ಆ ಕುರಿತು ಫ್ಯಾಕ್ಟ್‌ ಚೆಕ್‌

- Advertisement -
- Advertisement -

ಮೇ 28 ವಿ.ಡಿ.ಸಾವರ್ಕರ್‌ ಜನ್ಮದಿನ. ಅದಕ್ಕೂ ಮೊದಲು ಮೇ 27ರಂದು ಕರ್ನಾಟಕ ಸರ್ಕಾರವು ಬೆಂಗಳೂರಿನ ಯಲಹಂಕದ ಮೇಲ್ಸೇತುವೆ ಸಾವರ್ಕರ್‌ ಹೆಸರಿಡಲು ತೀರ್ಮಾನಿಸಿತು. ಈ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನೇ ಮುಂದೂಡಿತು.

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಗತಿಪರ ಮತ್ತು ಕನ್ನಡಪರ ಸಂಘಟನೆಗಳು ಮೇಲ್ಸೇತುವೆಗೆ ಸಾವರ್ಕರ್‌ ಹೆಸರಿಡುವುದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಪಕ್ಷ, ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಮುಂತಾದವರು ಸಾವರ್ಕರ್‌ ಹೆಸರಿಡುವುದನ್ನು ಸ್ವಾಗತಿಸಿ ವಾದ ಮಂಡಿಸಿದ್ದರು.

ಇಂತಹ ಸಂದರ್ಭದಲ್ಲಿ ಪೋಸ್ಟ್‌ ಕಾರ್ಡ್‌ ಕನ್ನಡ ಎನ್ನುವ ಬಲಪಂಥೀಯ ವಿಚಾರವುಳ್ಳ ಫೇಸ್‌ಬುಕ್‌ ಪುಟದಲ್ಲಿ ಸಾವರ್ಕರ್‌ ದಲಿತಪ್ರೇಮಿ ಎನ್ನುವ ಪೋಸ್ಟ್‌ ಒಂದನ್ನು ಹಾಕಲಾಯಿತು.

Posted by Postcard ಕನ್ನಡ on Wednesday, May 27, 2020

 

“ಅದರಲ್ಲಿ ವೀರ ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರನ್ನು ಒಳಗೊಂಡು ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು. ಆದರು ಕಾಂಗ್ರೆಸ್‌ ಸಾವರ್ಕರ್‌ರನ್ನು ವಿರೋಧಿಸುತ್ತದೆ ಎಂದರೆ, ಕಾಂಗ್ರೆಸ್‌ ದಲಿತರ ಪರವೋ ವಿರುದ್ಧವೋ ನೀವೇ ನಿರ್ಧರಿಸಿ” ಎಂದು ಬರೆಯಲಾಗಿತ್ತು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಫ್ಯಾಕ್ಟ್‌ಚೆಕ್‌ ನಡೆಸಲಾಯಿತು.

ಸಾರ್ವಜನಿಕ ಗಣೇಶೋತ್ಸವ

1905ರಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಪ್ರಾರಂಭ ಮಾಡಿದ್ದು ಬಾಲ ಗಂಗಾಧರ ತಿಲಕರು. ಅದರಲ್ಲಿ ದಲಿತರು ಭಾಗವಹಿಸಬಹುದಾಗಿತ್ತೇ? ಅದೇ ಮಹಾರಾಷ್ಟ್ರದ ನಾಸಿಕ್‌ನ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ 1930ರಲ್ಲಿ ಅಂಬೇಡ್ಕರ್ ಸತ್ಯಾಗ್ರಹ ನಡೆಸಿದಾಗ ಏನಾಯಿತೆಂಬುದು ಗೊತ್ತಿರುವ ವಿಷಯವೇ ಅಲ್ಲವೇ? ಅಂಬೇಡ್ಕರ್‌ ಸೇರಿದಂತೆ ಬಹಳಷ್ಟು ದಲಿತರ ಮೇಲೆ ಸವರ್ಣಿಯರು ದಾಳಿ ಮಾಡಿದ್ದರು. ಹೀಗಿರುವಾಗ ಗಣೇಶೋತ್ಸವಗಳಲ್ಲಿ ದಲಿತರು ಭಾಗವಹಿಸುತ್ತಿದ್ದರೆಂಬುದು ಹಸಿಸುಳ್ಳು….

ಪತಿತಪಾವನ ದೇವಾಲಯ

ಪೋಸ್ಟ್‌ ಕಾರ್ಡ್‌ ಈ ದೇವಾಲಯವನ್ನು ಯಾವ ಊರಿನಲ್ಲಿ, ಯಾವಾಗ ಕಟ್ಟಿಸಿದರು ಎಂಬುದನ್ನು ಉಲ್ಲೇಖಸಿಲ್ಲ.  ಈ ಹಿಂದೂ ದೇವಾಲಯವನ್ನು ಶ್ರೀಮನ್ ಭಗೋಜಿಶೆತ್ ಕೀರ್ ಎಂಬುವವರು 1931ರಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಟ್ಟಿಸಿದರೆಂದು ವಿಕಿಪಿಡೀಯ ಸೇರಿದಂತೆ ಎಲ್ಲಾ ಕಡೆ ಹೇಳಲಾಗುತ್ತದೆ.

ಈ ಕುರಿತು www.patitpavanmandir.org ನಲ್ಲಿ ಒಂದು ಲೇಖನ ಮಾತ್ರ ಲಭ್ಯವಿದೆ. ಅದರಲ್ಲಿ ಅಂಬೇಡ್ಕರ್‌ರವರ ದೇವಸ್ಥಾನ ಪ್ರವೇಶ ಹೋರಾಟಗಳಿಗೆ ಸಾವರ್ಕರ್‌ ಬೆಂಬಲ ನೀಡಿದ್ದರು ಎಂದೆಲ್ಲಾ ಸುಳ್ಳುಗಳನ್ನು ಬರೆಯಲಾಗಿದೆ. ಈ ಮೊದಲೇ ಹೇಳುವಂತೆ ದಲಿತರಿಗಾಗಿಯೇ ದೇವಸ್ಥಾನ ಕಟ್ಟಿಸುವ ಕಾಲವಿದ್ದರೆ ಕಾಳಾರಾಮ್ ದೇವಸ್ಥಾನದ ಪ್ರವೇಶಕ್ಕಾಗಿ ಅಂಬೇಡ್ಕರ್‌ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ್ದು ಏಕೆ?

ದಲಿತರಿಂದಲೇ ನಡೆಯುವ ಹೋಟೆಲ್‌

‌ಅಂಬೇಡ್ಕರ್, ತಿಲಕ್ ಮತ್ತು ಸಾವರ್ಕರ್ – ಈ ಮೂರೂ ಜನರ ಜೀವನ ಚರಿತ್ರೆ ಯನ್ನು ಬರೆದದ್ದು ಧನಂಜಯ್ ಕೀರ್. ಆ ಮೂವರ ಬದುಕಿನ ಮಾಹಿತಿಗಳ ಬಗ್ಗೆ ಕೀರ್ ಬರಹವನ್ನೇ ಮೂಲ ಆಕರವನ್ನಾಗಿ ಎಲ್ಲೆಡೆ ಬಳಸಿಕೊಳ್ಳಲಾಗುತ್ತದೆ. ಅದರಲ್ಲೆಲ್ಲೂ ಸಾವರ್ಕರರು ’ಸಂಪೂರ್ಣವಾಗಿ ದಲಿತರೇ ನಡೆಸುವ ಹೋಟೆಲ್ ಇರಲಿ, ಬ್ರಾಹ್ಮಣರ ಹೋಟೆಲ್ ಪ್ರಾರಂಭಿಸಿದ” ಪ್ರಸಂಗವಿಲ್ಲ… ವಾಸ್ತವವಾಗಿ ಇಂಥಾ ರಚನಾತ್ಮಕ ಕೆಲಸಗಳನ್ನು ಸಂಘಟನಾತ್ಮಕವಾಗಿಯೋ, ವೈಯಕ್ತಿಕವಾಗಿಯೋ ಹಿಂದೂ ಮಹಾ ಸಭಾ ಕೈಗೆತ್ತಿಕೊಂಡು ಸಮಯ ಹಾಳುಮಾಡುವುದನ್ನು ಅವರು ವಿರೋಧಿಸುತ್ತಿದ್ದರು..

ಈ ಕುರಿತು ಸಾವರ್ಕರ್‌‌ರವರ ಬದುಕು ಬರಹಗಳ ಬಗ್ಗೆ ಅಧ್ಯಯನ ಮಾಡಿರುವ ಕನ್ನಡದ ಚಿಂತಕರಾದ ಶಿವಸುಂದರ್‌ರವರು “ಒಂದೂ ಬಲವಾದ ಹಿಂದೂ ಸಮಾಜ ಕಟ್ಟಲೋಸುಗ ದಲಿತರನ್ನು ಒಳಗೊಳ್ಳಬೇಕೆಂದು ಸಾವರ್ಕರ್‌ ಪ್ರತಿಪಾದಿಸುತ್ತಿದ್ದರು…. ಅದಕ್ಕಾಗಿ ಜಾತಿ ವ್ಯವಸ್ಥೆಯನ್ನೂ ಆಗಾಗ ಟೀಕಿಸುತ್ತಿದ್ದರು… ಆದರೆ ಹಿಂದೂ ಮಹಾ ಸಭಾದ ಒಳಗಡೆ ಎಂದಿಗೂ ಒಬ್ಬ ದಲಿತನನ್ನು ಒಳಗೊಳ್ಳಲಿಲ್ಲ. ಒಂದು ಅಂತರ್ಜಾತಿ ಮದುವೆಗೂ ಪ್ರೋತ್ಸಾಹ ಕೊಡಲಿಲ್ಲ” ಎಂದು ಹೇಳುತ್ತಾರೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಅನ್ನು ಟೀಕಿಸುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ದಲಿತರ ಕುರಿತಾಗಿ ಮೂರು ಸುಳ್ಳುಗಳನ್ನು ಹರಡಿದೆ. ಅವು ಯಾವುವು ವಾಸ್ತವವಲ್ಲ ಎಂಬುದು ಈ ಮೇಲಿನ ನಿದರ್ಶನಗಳಿಂದ ಸಾಬೀತಾಗುತ್ತದೆ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ


Also Read :  Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...