Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...