Homeಕರ್ನಾಟಕವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು..

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಟೆನಿಸ್ ಪೆವಿಲಿಯನ್‌ ನಿರಾಶ್ರಿತ ಕೇಂದ್ರದ ಮೇಲ್ಛಾವಣಿ ಕುಸಿದು ವಲಸೆ ಕಾರ್ಮಿಕರ ಮೇಲೆ ಅಪ್ಪಳಿಸಿದೆ. ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೇಳಿಕೆಯ ಪ್ರಕಾರ, ಸುಮಾರು 100 ಪುರುಷರು, 40 ಮಹಿಳೆಯರು, 45 ಮಕ್ಕಳು ಮತ್ತು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಇದರಿಂದಾಗಿ ಅಷ್ಟು ವಲಸೆ ಕಾರ್ಮಿಕರು ಮಳೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನೆನೆದಿರುವ ಅಮಾನವೀಯ ಘಟನೆ ವರದಿಯಾಗಿದೆ. ಘಟನೆ ನಡೆದ ಒಂದು ಗಂಟೆಯ ನಂತರ ಬಿಎಂಟಿಸಿ ಬಸ್ಸೊಂದು ಬಂದರೂ ಸಹ ಕಾರ್ಮಿಕರನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರನ್ನು ತಮ್ಮ ಸಾಮಾನು ಸರಂಜಾಮುಗಳನ್ನು ತೆಗೆದುಕೊಂಡು ಬೇರೆ ಸ್ಥಳಕ್ಕೆ ಹೋಗಲು ಸಿದ್ದರಾಗಿದ್ದರು. ಅವರನ್ನು ತ್ರಿಪುರ ವಾಸಿನಿಗೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದರು ಸಹ ಅದೂ ಮುಚ್ಚಲ್ಪಟ್ಟಿದ್ದ ಕಾರಣ ಅವರು ಕಾಯಬೇಕಾಗಿದೆ.

ಮಳೆಯಿಂದಾಗಿ ಸಂಪೂರ್ಣವಾಗಿ ತೇವಗೊಂಡಿದ್ದ ಕಾರ್ಮಿಕರು ಹಲವು ಗಂಟೆಗಳ ಕಾಲ ಬಸ್‌ನಲ್ಲಿಯೇ ಆಶ್ರಯ ಪಡೆದಿದ್ದಾರೆ. ಅಷ್ಟೂ ಜನರು ಒಂದೇ ಬಸ್‌ನಲ್ಲಿದ್ದರಿಂದ ಯಾವುದೇ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಾಗಿಲ್ಲ ಎನ್ನಲಾಗಿದೆ. ಆನಂತರ ಅವರನ್ನು ಸ್ಥಳಾಂತರಿಸಲಾಗಿದೆ.

ಘಟನೆಯನ್ನು ವಿವರಿಸುತ್ತಾ, ಕಾರ್ಮಿಕರೊಬ್ಬರು, “ಭಾರೀ ಮಳೆಗೆ ಮೇಲ್ಛಾವಣಿಯು ಕೆಳಗೆ ಬಿದ್ದಿತು. ಸಣ್ಣ ಮಕ್ಕಳು, ಮಹಿಳೆಯರು – ಬಹಳಷ್ಟು ಜನರು, ಅವರು ಇಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಾವು ಅಧಿಕಾರಿಗಳಿಗೆ ತಿಳಿಸಿದೆವು. ಉತ್ತರ ಪ್ರದೇಶ, ಚತ್ತೀಸ್‌ಘಡ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದ ಜನರು ಇಲ್ಲಿದ್ದಾರೆ. ಇಂದು ಈ ಜನರನ್ನು ತುರ್ತಾಗಿ ಸ್ಥಳಾಂತರಿಸುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಇಲ್ಲಿದಿದ್ದರೆ ಇಲ್ಲಿಂದ ಕಾಲ್ನಡಿಗೆಯಲ್ಲಿ ಹೋಗಬೇಕಾಗುತ್ತದೆ ” ಎಂದು ಅವರು ಹೇಳಿದ್ದಾರೆ.

ಕೊನೆಗೂ ಸಿಕ್ಕ ಸಹಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್‌ ರವಿ ಕುಮಾರ್ ಆಗಮಿಸಿ, ಮೇಲ್ಛಾವಣಿ ಕುಸಿತಕ್ಕೊಳಗಾದವರು ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ್ದಾರೆ.

“ನಾವು ಹೇಗೋ ಬದುಕುಳಿದಿದ್ದೇವೆ. ನಮಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಾಯ ಮಾಡಿದರು. ಆನಂತರ ಮೇಲ್ಛಾವಣಿ ತೆರವುಗೊಳಿಸಲು ಬಹಳಷ್ಟು ಜನರು ಮುಂದೆ ಬಂದರು. ಎಲ್ಲರ ನಗದು ಸೇರಿದಂತೆ ಸಾಮಾನು, ಮೊಬೈಲ್ ಮತ್ತಿತರ ವಸ್ತುಗಳ ಅಡಿಯಲ್ಲಿ ಉಳಿದುಕೊಂಡಿವೆ ಎಂದು ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ನಮ್ಮೂರಿಗೆ ಕಳಿಸಿಕೊಡಿ

ಘಟನೆಯಿಂದ ಭಯಭೀತರಾಗಿರುವ ವಲಸೆ ಕಾರ್ಮಿಕರು ಆದಷ್ಟು ಬೇಗ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಅವಕಾಶಮಾಡಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಿಮ್ಮ ಕೈಮುಗಿದು ಕೇಳಿಕೊಳ್ಳುತ್ತೇವೆ, ಇಲ್ಲಿಂದ ಹೊರಡಲು ವ್ಯವಸ್ಥೆ ಮಾಡಿ ಎಂದು ಅವರ ಅವಲತ್ತುಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಛಾವಣಿ ಕುಸಿದಾಗ ನನ್ನ ಹೆಗಲ ಮೇಲೆ ಮಗುವನ್ನಿಟ್ಟುಕೊಂಡಿದ್ದೆ. ಇದರಿಂದ ನನಗೆ ತೀವ್ರ ಭಯವಾಗಿದೆ. ಇಲ್ಲಿಯೇ ಇದ್ದರೆ ನನ್ನ ಮಗುವನ್ನು ಕಳೆದುಕೊಳ್ಳಬಹುದೆಂಬ ಭಯ ನನ್ನನ್ನು ಕಾಡುತ್ತಿದೆ. ಆ ಮಗು ಕೇವಲ ಹಾಲು ಕುಡಿಯುತ್ತಿದ್ದು, ಅದಕ್ಕೂ ನಮ್ಮ ಬಳಿ ಹಣವಿಲ್ಲದಂತಾಗಿದೆ. ಹಾಗಾಗಿ ಇಲ್ಲಿಂದ ನಮ್ಮ ರಾಜ್ಯಕ್ಕೆ ಹೊರಡಲು ದಯವಿಟ್ಟು ಅವಕಾಶಮಾಡಿಕೊಡಿ ಎಂದು ಬೇಡಿಕೊಂಡಿದ್ದಾರೆ.

ಮತ್ತೊಬ್ಬ ಕಾರ್ಮಿಕನು, ಇಲ್ಲಿಂದ ಹೊರಡಲು ನಮಗೆ ಸರ್ಕಾರ ಸಹಾಯ ಮಾಡದಿದ್ದರೆ ನಡೆದುಕೊಂಡು ಹೋಗುತ್ತೇನೆ ಎಂದಿದ್ದಾರೆ. ಏನಾದರೂ ಆಗಲಿ ನಾವು ಬೆಳಿಗ್ಗೆಯೇ ಹೊರಡುವಂತೆ ವ್ಯವಸ್ಥೆ ಮಾಡಿ. ಇಲ್ಲದಿದ್ದರೆ ನಾವು ಕಾಲ್ನಡಿಗೆಯಲ್ಲಿ ಹೊರಡುತ್ತೇವೆ. ಇಲ್ಲಿ ಏನಾದರೂ ಆದರೆ ಯಾರು ಹೊಣೆ? ನಮ್ಮನ್ನು ನಂಬಿ ನಮ್ಮೀಡಿ ಕುಟುಂಬ ಬದುಕುತ್ತಿದೆ ಎಂದು ತನ್ನ ಆತಂಕ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಲಾಕ್‌ಡೌನ್‌ ಆದಾಗಿನಿಂದ ಆರಂಭವಾದ ವಲಸೆ ಕಾರ್ಮಿಕರ ಸಂಕಷ್ಟುಗಳು ಇನ್ನು ಪರಿಹಾರಗೊಂಡಿಲ್ಲ. ಅತ್ತ ಸುಪ್ರೀಂ ಕೋರ್ಟ್‌ ಕಡೆಗೂ ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಬೇಕು, ಸರ್ಕಾರದ ವೆಚ್ಚದಲ್ಲಿ ಅವರು ತಮ್ಮ ಮನೆ ತಲುಪಲು ವ್ಯವಸ್ಥೆ ಮಾಡಬೇಕೆಂದು ಆದೇಶ ನೀಡಿದೆ. ಆದರೆ ವಲಸೆ ಕಾರ್ಮಿಕರ ಬವಣೆ ಮಾತ್ರ ತಪ್ಪಿಲ್ಲ. ಈಗಲಾದರೂ ಸರ್ಕಾರಗಳು ಈ ವಿಚಾರದಲ್ಲಿ ಅತಿ ವೇಗವಾಗಿ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: ಮೋದಿ 2.1: ದೇಶವನ್ನು ಉಳಿಸಿ, ಬೆಳೆಸುವ ಪ್ಯಾಕೇಜ್ ಹೇಗಿರಬೇಕು? – ಅಮಿತ್‌ ಬಾಸೋಲೆ 


Also read: SC directs States: No Travel Fare for Migrants, Provide Food For Stranded Migrants

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...