Homeಮುಖಪುಟಲಾಕ್‌ಡೌನ್‌ನಿಂದ ಕುಟುಂಬ ನಿರ್ವಹಣೆ ಕಷ್ಟ : ಪತ್ರ ಬರೆದಿಟ್ಟು ಯುಪಿ ವ್ಯಕ್ತಿ ಆತ್ಮಹತ್ಯೆ

ಲಾಕ್‌ಡೌನ್‌ನಿಂದ ಕುಟುಂಬ ನಿರ್ವಹಣೆ ಕಷ್ಟ : ಪತ್ರ ಬರೆದಿಟ್ಟು ಯುಪಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಲಾಕ್‌ಡೌನ್‌ ವಿಸ್ತರಣೆಯಿಂದಾಗಿ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಪತ್ರ ಬರೆದಿಟ್ಟು, ಪೂರ್ವ ಉತ್ತರ ಪ್ರದೇಶದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ಭಾನು ಪ್ರಕಾಶ್ ಗುಪ್ತಾ ಎಂಬುವವರ ಮೃತದೇಹವು ಲಖಿಂಪುರ ಖೇರಿ ಜಿಲ್ಲೆಯ ರೈಲು ಹಳಿಗಳಲ್ಲಿ ಪತ್ತೆಯಾಗಿದ್ದು, ಅದೇ ಸ್ಥಳದಲ್ಲಿ ಆತ ಬರೆದಿಟ್ಟಿದ್ದ ಆತ್ಮಹತ್ಯೆ ಪತ್ರ ಸಹ ಪತ್ತೆಯಾಗಿದೆ. ಭಾನು ಪ್ರಕಾಶ್‌ ಗುಪ್ತಾ ಈ ಮೊದಲು ಹತ್ತಿರದ ಶಹಜಹಾನ್ಪುರ ಜಿಲ್ಲೆಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಆತನಿಗೆ ಹೆಂಡತಿ, ನಾಲ್ಕು ಮಕ್ಕಳು ಮತ್ತು ಅನಾರೋಗ್ಯಪೀಡಿತ ತಾಯಿ ಇದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್‌ 24ರ ಲಾಕ್‌ಡೌನ್‌ ಹೇರಲ್ಪಟ್ಟಿದ್ದರಿಂದ ಈ ವ್ಯಕ್ತಿ ನಿರುದ್ಯೋಗಿಯಾಗಿದ್ದು, ಕಳೆದ ಕೆಲವು ದಿನಗಳಲ್ಲಿ ಆತನ ಬಳಿಯಿದ್ದ ನಗದು ಖಾಲಿಯಾಗಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಎದುರಾಗಿತ್ತು ಎಂದು ವರದಿಯಾಗಿದೆ.

ಆತ ಬರೆದ ಆತ್ಮಹತ್ಯೆ ಪತ್ರದಲ್ಲಿ, ತನ್ನ ಮನೆಗೆ ಗೋಧಿ ಮತ್ತು ಅಕ್ಕಿ ಕೊಟ್ಟಿದ್ದಕ್ಕೆ ಸರ್ಕಾರಿ ಪಡಿತರ ಅಂಗಡಿಗೆ ಧನ್ಯವಾದಗಳು. ಆದರೆ ಅದು ಸಾಕಾಗುವುದಿಲ್ಲ, ಸಕ್ಕರೆ, ಉಪ್ಪು ಮತ್ತು ಹಾಲಿನಂತಹ ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ತನ್ನ ಬಳಿ ಹಣವಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ತನ್ನ ವಯಸ್ಸಾದ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಣವಿಲ್ಲದೆ ಅವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ ಮತ್ತು ಜಿಲ್ಲಾಡಳಿತವು ಅವರಿಗೆ ಸಹಾಯ ಮಾಡಲಿಲ್ಲ ಎಂದು ದೂರಿದ್ದಾರೆ.

ಆತಮ ಆತ್ಮಹತ್ಯೆಯ ವಿಷಯ ತಿಳಿದ ನಂತರ ಕುಟುಂಬಕ್ಕೆ ನೆರವು ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಭರವಸೆ ನೀಡಿದೆ.

“ನಾವು ಪ್ರಾಥಮಿಕ ವಿಚಾರಣೆ ನಡೆಸಿದ್ದೇವೆ. ಅವನಿಗೆ ಪಡಿತರ ಚೀಟಿ ಇದೆ ಮತ್ತು ಅವನ ಕೋಟಾದ ಪ್ರಕಾರ ಈ ತಿಂಗಳು ಧಾನ್ಯವನ್ನು ವಿತರಿಸಲಾಗಿದೆ. ಹಾಗಾಗಿ ಅವನಿಗೆ ಧಾನ್ಯದ ಕೊರತೆಯಿಲ್ಲ. ಆತ್ಮಹತ್ಯೆ ಪತ್ರ ಸಿಕ್ಕಿದ್ದು,  ಆತ್ಮಹತ್ಯೆಗೆ ನಿಖರ ಕಾರಣಗಳನ್ನು ನಾವು ತನಿಖೆ ಮಾಡುತ್ತೇವೆ” ಎಂದು ಲಖಿಂಪುರ ಖೇರಿಯ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಯೇ ಸರ್ಕಾರವು ಇಂದು ತಮ್ಮ ಎರಡನೇ ಅವಧಿಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದನ್ನು ಉಲ್ಲೇಖಿಸಿ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಉತ್ತರ ಪ್ರದೇಶದ ಆಡಳಿತ ಪಕ್ಷ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

“ದುರದೃಷ್ಟಕರ ಘಟನೆಯೊಂದರಲ್ಲಿ ಯುಪಿಯ ಭಾನು ಗುಪ್ತಾ ರೈಲಿನ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕೆಲಸ ಹೋಯಿತು. ಅವರು ತಮ್ಮ ತಾಯಿಗೆ ಚಿಕಿತ್ಸೆ ನೀಡಬೇಕಾಗಿತ್ತು. ಅವರಿಗೆ ಸರ್ಕಾರದಿಂದ ಕೇವಲ ಪಡಿತರ ದೊರಕಿತು. ಆದರೆ ಜೀವನ ನಿರ್ವಹಣೆಗೆ ಬೇಕಾದ ಉಳಿದ ವಸ್ತುಗಳು ಸಿಗಲಿಲ್ಲ. ಆದರೆ ಇದರ ಗೊಡವೆ ಇಲ್ಲದೇ ಒಂದು ವರ್ಷ ಆಚರಿಸುತ್ತಿರುವ ನಿಮಗೆ ಈ ಪತ್ರವು ತಲುಪದಿರಬಹುದು. ದಯವಿಟ್ಟು ಇದನ್ನು ಓದಿ” ಎಂದು ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿದ್ದ ಮನೆಯ ಮೇಲ್ಛಾವಣಿ ಕುಸಿತ : ಗಂಟೆಗಟ್ಟಲೇ ಮಳೆಯಲ್ಲಿ ನೆನೆದ ಕಾರ್ಮಿಕರು.. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...