Homeಮುಖಪುಟಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

ಕಾರ್ಮಿಕರ ಮೇಲೆ ಹಿಡಿತ : ಕೊರೊನಾ ಹೆಸರಲ್ಲಿ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಯೋಜಿತವಲ್ಲದ ಲಾಕ್‌ಡೌನ್ ಸಾರಿಗೆ, ಆರೋಗ್ಯ, ಉದ್ಯೋಗ, ಹಣಕಾಸು ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗಳಿಗೆ ತೀವ್ರವಾದ ಸಮಸ್ಯೆಗಳನ್ನು ತಂದೊಡ್ಡಿದೆ. ಇದಾಗಿಯೂ ವಲಸೆ ಕಾರ್ಮಿಕರ ಬಿಕ್ಕಟ್ಟು ದೇಶ ಸ್ವಾತಂತ್ರ್ಯ ಗಳಿಸಿದಾಗಿನಿಂದ ಅತ್ಯಂತ ದುಃಖಕರ ಘಟನೆಯಲ್ಲಿ ಒಂದಾಗಿದೆ.

ದೆಹಲಿ ಹಾಗೂ ಯು.ಪಿ.ಯಲ್ಲಿ ವಲಸೆ ಕಾರ್ಮಿಕರ ದೈನಂದಿನ ವರದಿಗಳನ್ನು ನಾವು ನೋಡುತ್ತಿದ್ದೇವೆ. ಬಿಹಾರ್‌ನ ರೈಲ್ವೆ ನಿಲ್ದಾಣವೊಂದರಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರು ಮಗುವಿನ ದೃಶ್ಯವನ್ನು ನೋಡಿದ್ದೇವೆ. ಆಹಾರದ ಕೊರತೆಯಿಂದಾಗಿ ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಾರ್ಮಿಕರು ಸಾಯುತ್ತಿದ್ದಾರೆ. ಇವೆಲ್ಲವೂ ಮೋದಿ ಭರವಸೆ ನೀಡಿದ ‘ಅಚ್ಛೇ ದಿನ’ಗಳ ನಿಜರೂಪವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ.

ಈ ಪರಿಸ್ಥಿತಿಯಿಂದ ಹೊರಬಂದು ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ಹಲವು ರಾಜ್ಯಗಳು ಪ್ರಯತ್ನಿಸುತ್ತಿದ್ದರೆ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳು ಅವರ ವಿರುದ್ಧ ವಿಲಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಮೂಲಕ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ.

ಇತ್ತೀಚೆಗೆ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರ್ಕಾರವು ತನ್ನ ಕಾರ್ಮಿಕ ಕಾನೂನುಗಳಿಗೆ ಹಲವಾರು ತಿದ್ದುಪಡಿಗಳನ್ನು ಗೆಜೆಟ್ ಮಾಡಿ, ಕಾರ್ಖಾನೆಗಳ ಕಾಯ್ದೆಯ ಅಗತ್ಯ ನಿಬಂಧನೆಗಳನ್ನು ಮೊಟಕುಗೊಳಿಸಿ ಕಾರ್ಖಾನೆಗಳ ಮಾಲಿಕರಿಗೆ ನೆರವಾಯಿತು. ಅಂತೆಯೇ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೆಲವು ಮೂಲಭೂತ ನಿಬಂಧನೆಗಳನ್ನು ಹೊರತುಪಡಿಸಿ, ಮೂರು ವರ್ಷಗಳ ಅವಧಿಗೆ, ಉತ್ಪಾದನಾ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ಕಾರ್ಖಾನೆಗಳು ಮತ್ತು ಸಂಸ್ಥೆಗಳನ್ನು ಎಲ್ಲಾ ಕಾರ್ಮಿಕ ಕಾನೂನುಗಳ ಕಾರ್ಯಾಚರಣೆಯಿಂದ ವಿನಾಯಿತಿ ನೀಡಿದೆ.

ಆಶ್ಚರ್ಯಕರ ಸುಗ್ರೀವಾಜ್ಞೆಗಳು ಮತ್ತು ಆದೇಶಗಳ ಸರಣಿಯಲ್ಲಿ, ಉತ್ತರ ಪ್ರದೇಶದ ರಾಜ್ಯದ ಕಾರ್ಮಿಕರನ್ನು ಬೇರೆ ರಾಜ್ಯಗಳು ಸರ್ಕಾರದ ಅನುಮತಿಯೊಂದಿಗೆ ನೇಮಿಸಬೇಕು ಎಂದು ಇತ್ತೀಚೆಗೆ ಅಸಂವಿಧಾನಿಕ ಹೇಳಿಕೆ ನೀಡಿದೆ. ಇದಕ್ಕಾಗಿ ಕಾರ್ಮಿಕರು ಜೀವನೋಪಾಯವನ್ನು ಗಳಿಸಲು ರಾಜ್ಯ ಸರ್ಕಾರದ ಅನುಮತಿಗೆ ಕಾಯಬೇಕಾಗುತ್ತದೆ.

ಮೇಲಿನ ಹೇಳಿಕೆ ಭಾರತ ಸಂವಿದಾನದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತದ ಸಂವಿಧಾನದ ಆರ್ಟಿಕಲ್ 19 (1) (ಡಿ) – ಎಲ್ಲಾ ನಾಗರಿಕರಿಗೆ ಭಾರತದ ಭೂಪ್ರದೇಶದಾದ್ಯಂತ ಮುಕ್ತವಾಗಿ ಚಲಿಸುವ ಹಕ್ಕನ್ನು ಖಾತರಿಪಡಿಸುತ್ತದೆ. ಅಲ್ಲದೆ, ಆರ್ಟಿಕಲ್ 19 (1) (ಇ) ಎಲ್ಲಾ ನಾಗರಿಕರಿಗೆ ಭಾರತದ ಯಾವುದೇ ಭಾಗದಲ್ಲಿ ವಾಸಿಸುವ ಮತ್ತು ನೆಲೆಸುವ ಹಕ್ಕನ್ನು ಖಾತರಿಪಡಿಸುತ್ತದೆ.

ಇದ್ಯಾವುದನ್ನೂ ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರ ಪರಿಗಣಿಸದೇ ಕಾರ್ಮಿಕರು ಬೇರೆ ರಾಜ್ಯಗಳಿಗೆ ಹೋಗ ಬೇಕಾದರೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ, ಜೊತೆಗೆ ರಾಜ್ಯದ ಕಾರ್ಮಿಕ ಕಾನೂನನ್ನು ಅಮಾನತಿನಲ್ಲಿಟ್ಟಿದೆ. ಇವೆಲ್ಲವನ್ನೂ ಜೊತೆಯಲ್ಲಿಟ್ಟುಕೊಂಡೇ ನೋಡಬೇಕಾಗುತ್ತದೆ. ಯಾಕೆಂದರೆ ಎಲ್ಲಾ ಸರಕಾರವೂ ಬಂಡವಾಳಶಾಹಿಗಳ ಪರವಾಗಿಯೇ ಇರುತ್ತದೆ.

ತನ್ನ ಹೇಳಿಕೆಗೆ ಆದಿತ್ಯನಾಥ್ ಕೊಟ್ಟಿರುವ ಸಮರ್ಥನೆಯೇನೆಂದರೆ ಉತ್ತರ ಪ್ರದೇಶದ ಕಾರ್ಮಿಕರನ್ನು ಇತರ ರಾಜ್ಯಗಳು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು. ಆದರೆ ಸ್ವತಃ ತನ್ನ ರಾಜ್ಯದಲ್ಲಿ ಮಾತ್ರ ಕಾರ್ಮಿಕರ ಸಂವಿಧಾನಿಕ ದತ್ತವಾಗಿರುವ ಕಾರ್ಮಿಕರ ಹಕ್ಕನ್ನು ತಡೆಹಿಡಿದಿದ್ದಾರೆ, ಅಂದರೆ ಮುಂದಿನ ಮೂರು ವರ್ಷಗಳಲ್ಲಿ ಅವರು ತಮ್ಮ ರಾಜ್ಯದ ಕಾರ್ಮಿಕರ ಶೋಷಣೆ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ ಎಂದೇ ಅರ್ಥ. ಒಟ್ಟಿನಲ್ಲಿ ನೋಡುವುದಾದರೆ ತಮ್ಮ ರಾಜ್ಯದ ಕಾರ್ಮಿಕರನ್ನು ಒತ್ತೆಯಾಳುಗಳಂತೆ ಮಾಡಿ ತಮ್ಮ ರಾಜ್ಯದಲ್ಲೆ ಉಳಿಸಿ ಜೀತ ಮಾಡಿಸುವ ಹುನ್ನಾರ ಈ ಹೇಳಿಕೆಯಲ್ಲಿದೆ.

ಕೊರೊನಾ ಸೋಂಕಿನ ಹೆಸರಲ್ಲಿ ಅಧೀಕೃತ ಸರ್ವಾಧಿಕಾರಿಗಳು ಸೃಷ್ಟಿಯಾಗುತ್ತಿದ್ದಾರೆ. ನಮ್ಮ ಪೂರ್ವಜರು ತ್ಯಾಗ ಬಲಿದಾನದಿಂದ ಗಳಿಸಿದ ಸ್ವಾತಂತ್ರ್ಯವನ್ನು ನಾವೇ ಆರಿಸಿದ ವ್ಯಕ್ತಿಗಳು ನಮ್ಮಿಂದ ಕಿತ್ತುಕೊಳ್ಳುತ್ತಿದ್ದಾರೆ.

  • ಅಮರೀಶ್‌ ರಂಜನ್‌ ಪಾಂಡೆ ಮತ್ತು ಅಂಬುಜ್‌ ದಿಕ್ಷಿತ್‌ (ಉತ್ತರ ಪ್ರದೇಶ)

ಕೃಪೆ: ನ್ಯಾಷನಲ್‌ ಹೆರಾಲ್ಡ್


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...