Homeಮುಖಪುಟಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಮುಂಬೈ ವೈರಸ್ ಬಿಕ್ಕಟ್ಟಿಗೆ ಗುಜರಾತ್‌ನ ನಮಸ್ತೆ ಟ್ರಂಪ್‌ ಕಾರ್ಯಕ್ರಮ ಕಾರಣ: ಸಂಜಯ್ ರಾವತ್

ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು ಎಂದಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ನಮಸ್ತೆ ಟ್ರಂಪ್ ಕಾರ್ಯಕ್ರಮವು ಮುಂಬೈನಲ್ಲಿ ವೈರಸ್‌ ದೊಡ್ಡ ಮಟ್ಟದಲ್ಲಿ ಹರಡಲು ಕಾರಣವಾಗಿದೆ ಎಂದು ಸಂಸದ ಮತ್ತು ಶಿವಸೇನೆ ಮುಖಂಡ ಸಂಜಯ್ ರಾವತ್ ರೋಪಿಸಿದ್ದಾರೆ.

ಯಾವುದೇ ಪೂರ್ವ ಯೋಜನೆ ಇಲ್ಲದೆ ಲಾಕ್‌ಡೌನ್ ಜಾರಿಗೆ ತರಲಾಗಿದೆ ಎಂದು ಕಿಡಿಕಾರಿರುವ ಅವರು, ಘೋಷಿಸಿದ್ದು ಕೇಂದ್ರ ಸರ್ಕಾರ, ಆದರೆ ಈಗ ನಿರ್ಬಂಧಗಳನ್ನು ತೆಗೆದುಹಾಕುವ ಜವಾಬ್ದಾರಿಯನ್ನು ರಾಜ್ಯಗಳಿಗೆ ಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗುಜರಾತ್‌ನಲ್ಲಿ ಕರೋನವೈರಸ್ ಹರಡುವಿಕೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ನಡೆದ ಬೃಹತ್ ಸಾರ್ವಜನಿಕ ಸಭೆಯೇ ಕಾರಣ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಟ್ರಂಪ್ ಅವರೊಂದಿಗೆ ಬಂದ ಕೆಲವು ಪ್ರತಿನಿಧಿಗಳು ದೆಹಲಿ ಮತ್ತು ಮುಂಬೈಗೆ ಭೇಟಿ ನೀಡಿದ್ದು ಇದು ಇಲ್ಲಿಯೂ ಸಹ ಹರಡಲು ಕಾರಣವಾಯಿತು” ಎಂದು ಸಂಜಯ್ ರಾವತ್‌ ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಅಂಕಣದಲ್ಲಿ ಬರೆದಿದ್ದಾರೆ.

ಫೆಬ್ರವರಿ 24 ರಂದು ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಹಮದಾಬಾದ್‌ನಲ್ಲಿ ನಡೆದ ರೋಡ್ ಶೋದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಒಂದು ಸಾವಿರಾರು ಜನರು ಭಾಗವಹಿಸಿದ್ದರು. ನಂತರ, ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ​​(ಜಿಸಿಎ) ನಡೆಸುತ್ತಿರುವ ಮೊಟೆರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದ ಸಭೆಯನ್ನು ಉದ್ದೇಶಿಸಿ ಉಭಯ ನಾಯಕರು ಮಾತನಾಡಿದ್ದರು.

ಮಾರ್ಚ್ 20 ರಂದು ಗುಜರಾತ್ ತನ್ನ ಮೊದಲ ಕರೋನವೈರಸ್ ಪ್ರಕರಣಗಳನ್ನು ವರದಿ ಮಾಡಿತ್ತು. ರಾಜ್‌ಕೋಟ್‌ನ ಪುರುಷ ಮತ್ತು ಸೂರತ್‌ನ ಮಹಿಳೆಯ ಮಾದರಿಗಳು ಈ ರೋಗಕ್ಕೆ ಧನಾತ್ಮಕ ಪರೀಕ್ಷೆ ಮಾಡಿದ್ದವು. ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಕೆಳಗಿಳಿಸಲು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವ ಬಿಜೆಪಿಯ ಯಾವುದೇ ಕ್ರಮವು ಆತ್ಮಹತ್ಯೆಗೆ ಸಮಯ ಎಂದು ಸಂಜಯ್ ರಾವತ್‌ ಹೇಳಿದ್ದಾರೆ.

“ಕೇವಲ ಆರು ತಿಂಗಳ ಹಿಂದೆ ರಾಷ್ಟ್ರಪತಿಗಳ ಆಡಳಿತವನ್ನು ಹೇಗೆ ವಿಧಿಸಲಾಯಿತು ಮತ್ತು ಕೊನೆಗೆ ತೆಗೆದುಹಾಕಬೇಕಾಯಿತು ಎಂಬುದಕ್ಕೆ ರಾಜ್ಯವು ಸಾಕ್ಷಿಯಾಗಿದೆ” ಎಂದು ಅವರು ತಮ್ಮ ಸರ್ಕಾರ ರಚನೆಯ ಸಂದರ್ಭ ಮತ್ತು ಬಿಜೆಪಿಗಾದ ಮುಖಭಂಗವನ್ನು ನೆನಪಿಸಿದ್ದಾರೆ.

ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಕೆಳಗಿಳಿಸಲು ಪ್ರತಿಪಕ್ಷ ಬಿಜೆಪಿ ಪ್ರಯತ್ನಿಸಿದರೂ, ಅದರ ಉಳಿವು ಮೂರೂ ಆಡಳಿತ ಮಿತ್ರಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಸಂಜಯ್‌ ರಾವತ್‌ ಹೇಳಿದ್ದಾರೆ.

“ಕೊರೊನಾವೈರಸ್ ಪ್ರಕರಣಗಳ ನಿರ್ವಹಣೆಯಲ್ಲಿ ವಿಫಲವಾದುದ್ದಕ್ಕೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರುವುದಾದರೆ, ಅದನ್ನು ಬಿಜೆಪಿ ಆಳ್ವಿಕೆ ಸೇರಿದಂತೆ ಕನಿಷ್ಠ 17 ರಾಜ್ಯಗಳಲ್ಲಿ ಜಾರಿ ಮಾಡಬೇಕು. ವೈರಸ್ ವಿರುದ್ಧ ಹೋರಾಡಲು ಯಾವುದೇ ಯೋಜನೆ ಇಲ್ಲದ ಕಾರಣ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸಲು ಕೇಂದ್ರ ಸರ್ಕಾರವೂ ವಿಫಲವಾಗಿದೆ” ಅವರು ಹೇಳಿದ್ದಾರೆ.

ಲಾಕ್‌ಡೌನ್ ಹೇಗೆ ವಿಫಲವಾಗಿದೆ ಎಂಬುದರ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅತ್ಯುತ್ತಮ ವಿಶ್ಲೇಷಣೆ ಮಾಡಿದ್ದಾರೆ ಎಂದು ಸಹ ಅದೇ ಲೇಖನದಲ್ಲಿ ಸಂಜಯ್ ರಾವತ್‌ ಹೇಳಿದ್ದಾರೆ.


ಇದನ್ನೂ ಓದಿ: ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...