Homeಮುಖಪುಟವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

- Advertisement -
- Advertisement -

ಮುಂಬೈನ ವಲಸೆ ಕಾರ್ಮಿಕರಿಗಾಗಿ 99 ವರ್ಷದ ಅಜ್ಜಿಯೊಬ್ಬರು ಆಹಾರ ಪ್ಯಾಕೆಟ್‌ಗಳನ್ನು ಸಿದ್ಧಪಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆ ಅಜ್ಜಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

“ಕೆಲವರು ಹುಟ್ಟುತ್ತಲೇ ಮುದುಕರು, ಕೆಲವು ಸಾಯುವವರೆಗೂ ಯುವಜನರು” ಎಂಬ ಮಾತನ್ನು ಈ ಅಜ್ಜಿ ನಿಜ ಮಾಡಿದ್ದಾರೆ. ಶಕ್ತಿವಂತರು, ಸಿರಿವಂತರು ತಾವಾಯಿತು, ತಮ್ಮ ಪಾಡಾಯಿತು ಎಂದಿರುವಾಗ ಹಸಿದವರಿಗಾಗಿ ಈ 99 ವರ್ಷದ ಅಜ್ಜಿಯ ಶ್ರಮವು ಮಹತ್ವವಾದುದು ಎಂಬುದನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಈ ವಿಡಿಯೋವನ್ನು ಜಹೀದ್ ಎಫ್. ಇಬ್ರಾಹಿಂ ಅವರು ಟ್ವಿಟ್ಟರ್ “ನನ್ನ 99 ವರ್ಷದ ಫುಪ್ಪಿ (ಚಿಕ್ಕಮ್ಮ) ಮುಂಬೈನ ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ಗಳನ್ನು ತಯಾರಿಸುತ್ತಿದ್ದಾಳೆ” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೃದ್ಧ ಮಹಿಳೆ ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ತನ್ನ ಪಾತ್ರವನ್ನು ಹೇಗೆ ಶ್ರದ್ಧೆಯಿಂದ ಮಾಡುತ್ತಿದ್ದಾಳೆ ಎಂದು ವೀಡಿಯೊ ವಿವರಿಸುತ್ತದೆ.

ವೀಡಿಯೊದಲ್ಲಿ ಅಜ್ಜಿಯು ಸಾವಧಾನದಿಂದ ರೊಟ್ಟಿ ಮತ್ತು ಪಲ್ಯವನ್ನು ಅಲ್ಯೂಮಿನಿಯಂ ಪೇಪರ್‌ನಲ್ಲಿ ಕಟ್ಟಿ, ನಂತರ ಅದನ್ನು ಇತರ ಪ್ಯಾಕೆಟ್‌ಗಳೊಂದಿಗೆ ಇಡುವುದನ್ನು ಕಾಣಬಹುದಾಗಿದೆ.

ಮೇ 29ರಂದು ಹಂಚಿಕೊಂಡಿರುವ ಇದುವರೆಗೂ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.  22,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ ಮತ್ತು 3,000 ರಿಟ್ವೀಟ್‌ಗಳನ್ನು ಹೊಂದಿದೆ.

“ಅವರಿಗೆ ಹ್ಯಾಟ್ಸ್ ಆಫ್. ಅವರ ಉತ್ತಮ ಆರೋಗ್ಯ ಮತ್ತು ದೀರ್ಘ ಜೀವನವನ್ನು ಬಯಸುತ್ತೇನೆ” ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ. “ನಿಮ್ಮ ಫಪ್ಪಿ ಪ್ರೀತಿ,” ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ. “ಎಂತಹ ಅದ್ಭುತ ವ್ಯಕ್ತಿ!” ಎಂದು ಮೂರನೇ ವ್ಯಕ್ತಿ ತಿಳಿಸಿದರೆ “ಅತ್ಯಂತ ಸುಂದರ. ಅವಳ ಬಗ್ಗೆ ಪ್ರೀತಿ ಮತ್ತು ಗೌರವ” ಎಂದು ನಾಲ್ಕನೆಯವರು ಟ್ವೀಟ್ ಮಾಡಿದ್ದಾರೆ. “ಕ್ರಿಯೆಯಲ್ಲಿ ಪ್ರೀತಿ. ವಿಶ್ವದ ಪ್ರತಿಯೊಬ್ಬರೂ ಪ್ರೀತಿಯನ್ನು ತೋರಿಸಬೇಕೆಂದು ಹಾರೈಸುತ್ತೇನೆ” ಎಂದು ಐದನೆಯವರು ಟ್ವೀಟ್ ಮಾಡಿದ್ದಾರೆ.

ಇವುಗಳನ್ನು ಜಹೀದ್ ಎಫ್. ಇಬ್ರಾಹಿಂರವರು ತಮ್ಮ ಚಿಕ್ಕಮ್ಮನಿಗೆ ತೋರಿಸಿದ್ದು, ಟ್ವಿಟ್ಟರ್‌ನಲ್ಲಿ ವ್ಯಕ್ತಪಡಿಸಿದ ಅತಿಯಾದ ಪ್ರೀತಿಯಿಂದ ಅವಳು ವಿನಮ್ರಳಾಗಿದ್ದಾಳೆ ಮತ್ತು ಎಲ್ಲರಿಗೂ ಧನ್ಯವಾದಗಳು ಎಂದು ಮತ್ತೊಂದು ಪೋಸ್ಟ್‌ ಮಾಡಿದ್ದಾರೆ.

“ನಿಮ್ಮ ಫುಪ್ಪಿಗೆ ತುಂಬಾ ಪ್ರೀತಿ. ಅವರು ಸ್ಫೂರ್ತಿ ಎಂದು ದಯವಿಟ್ಟು ಅವರಿಗೆ ಹೇಳಿ ”ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ ಮತ್ತು ಇತರರು ಅದೇ ಕಲ್ಪನೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಯಸ್ಸಾದ ಮಹಿಳೆ ನಿಜಕ್ಕೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಬರೆದಿದ್ದಾರೆ.

ಅವರ ಬಗ್ಗೆ ನಿಮಗೇನು ಅನಿಸುತ್ತದೆ?


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...