Homeಮುಖಪುಟವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

- Advertisement -
- Advertisement -

ಮುಂಬೈನ ವಲಸೆ ಕಾರ್ಮಿಕರಿಗಾಗಿ 99 ವರ್ಷದ ಅಜ್ಜಿಯೊಬ್ಬರು ಆಹಾರ ಪ್ಯಾಕೆಟ್‌ಗಳನ್ನು ಸಿದ್ಧಪಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆ ಅಜ್ಜಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

“ಕೆಲವರು ಹುಟ್ಟುತ್ತಲೇ ಮುದುಕರು, ಕೆಲವು ಸಾಯುವವರೆಗೂ ಯುವಜನರು” ಎಂಬ ಮಾತನ್ನು ಈ ಅಜ್ಜಿ ನಿಜ ಮಾಡಿದ್ದಾರೆ. ಶಕ್ತಿವಂತರು, ಸಿರಿವಂತರು ತಾವಾಯಿತು, ತಮ್ಮ ಪಾಡಾಯಿತು ಎಂದಿರುವಾಗ ಹಸಿದವರಿಗಾಗಿ ಈ 99 ವರ್ಷದ ಅಜ್ಜಿಯ ಶ್ರಮವು ಮಹತ್ವವಾದುದು ಎಂಬುದನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಈ ವಿಡಿಯೋವನ್ನು ಜಹೀದ್ ಎಫ್. ಇಬ್ರಾಹಿಂ ಅವರು ಟ್ವಿಟ್ಟರ್ “ನನ್ನ 99 ವರ್ಷದ ಫುಪ್ಪಿ (ಚಿಕ್ಕಮ್ಮ) ಮುಂಬೈನ ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ಗಳನ್ನು ತಯಾರಿಸುತ್ತಿದ್ದಾಳೆ” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೃದ್ಧ ಮಹಿಳೆ ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ತನ್ನ ಪಾತ್ರವನ್ನು ಹೇಗೆ ಶ್ರದ್ಧೆಯಿಂದ ಮಾಡುತ್ತಿದ್ದಾಳೆ ಎಂದು ವೀಡಿಯೊ ವಿವರಿಸುತ್ತದೆ.

ವೀಡಿಯೊದಲ್ಲಿ ಅಜ್ಜಿಯು ಸಾವಧಾನದಿಂದ ರೊಟ್ಟಿ ಮತ್ತು ಪಲ್ಯವನ್ನು ಅಲ್ಯೂಮಿನಿಯಂ ಪೇಪರ್‌ನಲ್ಲಿ ಕಟ್ಟಿ, ನಂತರ ಅದನ್ನು ಇತರ ಪ್ಯಾಕೆಟ್‌ಗಳೊಂದಿಗೆ ಇಡುವುದನ್ನು ಕಾಣಬಹುದಾಗಿದೆ.

ಮೇ 29ರಂದು ಹಂಚಿಕೊಂಡಿರುವ ಇದುವರೆಗೂ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.  22,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ ಮತ್ತು 3,000 ರಿಟ್ವೀಟ್‌ಗಳನ್ನು ಹೊಂದಿದೆ.

“ಅವರಿಗೆ ಹ್ಯಾಟ್ಸ್ ಆಫ್. ಅವರ ಉತ್ತಮ ಆರೋಗ್ಯ ಮತ್ತು ದೀರ್ಘ ಜೀವನವನ್ನು ಬಯಸುತ್ತೇನೆ” ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ. “ನಿಮ್ಮ ಫಪ್ಪಿ ಪ್ರೀತಿ,” ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ. “ಎಂತಹ ಅದ್ಭುತ ವ್ಯಕ್ತಿ!” ಎಂದು ಮೂರನೇ ವ್ಯಕ್ತಿ ತಿಳಿಸಿದರೆ “ಅತ್ಯಂತ ಸುಂದರ. ಅವಳ ಬಗ್ಗೆ ಪ್ರೀತಿ ಮತ್ತು ಗೌರವ” ಎಂದು ನಾಲ್ಕನೆಯವರು ಟ್ವೀಟ್ ಮಾಡಿದ್ದಾರೆ. “ಕ್ರಿಯೆಯಲ್ಲಿ ಪ್ರೀತಿ. ವಿಶ್ವದ ಪ್ರತಿಯೊಬ್ಬರೂ ಪ್ರೀತಿಯನ್ನು ತೋರಿಸಬೇಕೆಂದು ಹಾರೈಸುತ್ತೇನೆ” ಎಂದು ಐದನೆಯವರು ಟ್ವೀಟ್ ಮಾಡಿದ್ದಾರೆ.

ಇವುಗಳನ್ನು ಜಹೀದ್ ಎಫ್. ಇಬ್ರಾಹಿಂರವರು ತಮ್ಮ ಚಿಕ್ಕಮ್ಮನಿಗೆ ತೋರಿಸಿದ್ದು, ಟ್ವಿಟ್ಟರ್‌ನಲ್ಲಿ ವ್ಯಕ್ತಪಡಿಸಿದ ಅತಿಯಾದ ಪ್ರೀತಿಯಿಂದ ಅವಳು ವಿನಮ್ರಳಾಗಿದ್ದಾಳೆ ಮತ್ತು ಎಲ್ಲರಿಗೂ ಧನ್ಯವಾದಗಳು ಎಂದು ಮತ್ತೊಂದು ಪೋಸ್ಟ್‌ ಮಾಡಿದ್ದಾರೆ.

“ನಿಮ್ಮ ಫುಪ್ಪಿಗೆ ತುಂಬಾ ಪ್ರೀತಿ. ಅವರು ಸ್ಫೂರ್ತಿ ಎಂದು ದಯವಿಟ್ಟು ಅವರಿಗೆ ಹೇಳಿ ”ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ ಮತ್ತು ಇತರರು ಅದೇ ಕಲ್ಪನೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಯಸ್ಸಾದ ಮಹಿಳೆ ನಿಜಕ್ಕೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಬರೆದಿದ್ದಾರೆ.

ಅವರ ಬಗ್ಗೆ ನಿಮಗೇನು ಅನಿಸುತ್ತದೆ?


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...