Homeಮುಖಪುಟವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

- Advertisement -
- Advertisement -

ಮುಂಬೈನ ವಲಸೆ ಕಾರ್ಮಿಕರಿಗಾಗಿ 99 ವರ್ಷದ ಅಜ್ಜಿಯೊಬ್ಬರು ಆಹಾರ ಪ್ಯಾಕೆಟ್‌ಗಳನ್ನು ಸಿದ್ಧಪಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆ ಅಜ್ಜಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

“ಕೆಲವರು ಹುಟ್ಟುತ್ತಲೇ ಮುದುಕರು, ಕೆಲವು ಸಾಯುವವರೆಗೂ ಯುವಜನರು” ಎಂಬ ಮಾತನ್ನು ಈ ಅಜ್ಜಿ ನಿಜ ಮಾಡಿದ್ದಾರೆ. ಶಕ್ತಿವಂತರು, ಸಿರಿವಂತರು ತಾವಾಯಿತು, ತಮ್ಮ ಪಾಡಾಯಿತು ಎಂದಿರುವಾಗ ಹಸಿದವರಿಗಾಗಿ ಈ 99 ವರ್ಷದ ಅಜ್ಜಿಯ ಶ್ರಮವು ಮಹತ್ವವಾದುದು ಎಂಬುದನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಈ ವಿಡಿಯೋವನ್ನು ಜಹೀದ್ ಎಫ್. ಇಬ್ರಾಹಿಂ ಅವರು ಟ್ವಿಟ್ಟರ್ “ನನ್ನ 99 ವರ್ಷದ ಫುಪ್ಪಿ (ಚಿಕ್ಕಮ್ಮ) ಮುಂಬೈನ ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ಗಳನ್ನು ತಯಾರಿಸುತ್ತಿದ್ದಾಳೆ” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೃದ್ಧ ಮಹಿಳೆ ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ತನ್ನ ಪಾತ್ರವನ್ನು ಹೇಗೆ ಶ್ರದ್ಧೆಯಿಂದ ಮಾಡುತ್ತಿದ್ದಾಳೆ ಎಂದು ವೀಡಿಯೊ ವಿವರಿಸುತ್ತದೆ.

ವೀಡಿಯೊದಲ್ಲಿ ಅಜ್ಜಿಯು ಸಾವಧಾನದಿಂದ ರೊಟ್ಟಿ ಮತ್ತು ಪಲ್ಯವನ್ನು ಅಲ್ಯೂಮಿನಿಯಂ ಪೇಪರ್‌ನಲ್ಲಿ ಕಟ್ಟಿ, ನಂತರ ಅದನ್ನು ಇತರ ಪ್ಯಾಕೆಟ್‌ಗಳೊಂದಿಗೆ ಇಡುವುದನ್ನು ಕಾಣಬಹುದಾಗಿದೆ.

ಮೇ 29ರಂದು ಹಂಚಿಕೊಂಡಿರುವ ಇದುವರೆಗೂ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.  22,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ ಮತ್ತು 3,000 ರಿಟ್ವೀಟ್‌ಗಳನ್ನು ಹೊಂದಿದೆ.

“ಅವರಿಗೆ ಹ್ಯಾಟ್ಸ್ ಆಫ್. ಅವರ ಉತ್ತಮ ಆರೋಗ್ಯ ಮತ್ತು ದೀರ್ಘ ಜೀವನವನ್ನು ಬಯಸುತ್ತೇನೆ” ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ. “ನಿಮ್ಮ ಫಪ್ಪಿ ಪ್ರೀತಿ,” ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ. “ಎಂತಹ ಅದ್ಭುತ ವ್ಯಕ್ತಿ!” ಎಂದು ಮೂರನೇ ವ್ಯಕ್ತಿ ತಿಳಿಸಿದರೆ “ಅತ್ಯಂತ ಸುಂದರ. ಅವಳ ಬಗ್ಗೆ ಪ್ರೀತಿ ಮತ್ತು ಗೌರವ” ಎಂದು ನಾಲ್ಕನೆಯವರು ಟ್ವೀಟ್ ಮಾಡಿದ್ದಾರೆ. “ಕ್ರಿಯೆಯಲ್ಲಿ ಪ್ರೀತಿ. ವಿಶ್ವದ ಪ್ರತಿಯೊಬ್ಬರೂ ಪ್ರೀತಿಯನ್ನು ತೋರಿಸಬೇಕೆಂದು ಹಾರೈಸುತ್ತೇನೆ” ಎಂದು ಐದನೆಯವರು ಟ್ವೀಟ್ ಮಾಡಿದ್ದಾರೆ.

ಇವುಗಳನ್ನು ಜಹೀದ್ ಎಫ್. ಇಬ್ರಾಹಿಂರವರು ತಮ್ಮ ಚಿಕ್ಕಮ್ಮನಿಗೆ ತೋರಿಸಿದ್ದು, ಟ್ವಿಟ್ಟರ್‌ನಲ್ಲಿ ವ್ಯಕ್ತಪಡಿಸಿದ ಅತಿಯಾದ ಪ್ರೀತಿಯಿಂದ ಅವಳು ವಿನಮ್ರಳಾಗಿದ್ದಾಳೆ ಮತ್ತು ಎಲ್ಲರಿಗೂ ಧನ್ಯವಾದಗಳು ಎಂದು ಮತ್ತೊಂದು ಪೋಸ್ಟ್‌ ಮಾಡಿದ್ದಾರೆ.

“ನಿಮ್ಮ ಫುಪ್ಪಿಗೆ ತುಂಬಾ ಪ್ರೀತಿ. ಅವರು ಸ್ಫೂರ್ತಿ ಎಂದು ದಯವಿಟ್ಟು ಅವರಿಗೆ ಹೇಳಿ ”ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ ಮತ್ತು ಇತರರು ಅದೇ ಕಲ್ಪನೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಯಸ್ಸಾದ ಮಹಿಳೆ ನಿಜಕ್ಕೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಬರೆದಿದ್ದಾರೆ.

ಅವರ ಬಗ್ಗೆ ನಿಮಗೇನು ಅನಿಸುತ್ತದೆ?


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...