Homeಮುಖಪುಟಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....!!

ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!!

- Advertisement -
- Advertisement -

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಯ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ, ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಟೆಸ್ಟ್ ಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ.. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ ಇತ್ಯಾದಿ…

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಮಾಡೆಲ್ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ.

ಇತ್ತೀಚೆಗೆ, ಇವೆಲ್ಲವನ್ನೂ ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರ ವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು.

ಆದರೆ ತನ್ನ ನಿರ್ಲಕ್ಷ್ಯ ಹಾಗು ದುಷ್ಟತನವನ್ನು ಮರೆಮಾಚಲು ಗುಜರಾತ್ ಹಾಗು ಕೇಂದ್ರದ ಬಿಜೆಪಿ ಸರ್ಕಾರ ಹೈ ಕೋರ್ಟನ್ನು ಕೂಡಾ ಬ್ಲಾಕ್ ಮೇಲ್ ಮಾಡುತ್ತಿದೆ.

ಮೋದಿ ಮತ್ತು ಶಾ ಕ್ರೊನಾಲಜಿ

ಅದು ಹೇಗೆಂದು ಅರ್ಥವಾಗಬೇಕೆಂದರೆ ಕೆಳಗಿನ ಕ್ರೋನಾಲಜಿಯನ್ನು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

“ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ”

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29 ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ್ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು !

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

“ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಕೋರ್ಟು ಅಲಹಾಬಾದ್ ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು”

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019 ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂ ಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು…!!

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ.


ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ; ಗುಜರಾತ್‌ ಮಾಡೆಲ್ ಧ್ವಂಸ ಮಾಡಿ: ಜಿಗ್ನೇಶ್‌ ಮೇವಾನಿ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...