Homeಮುಖಪುಟಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ....!!

ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!!

- Advertisement -
- Advertisement -

ಇಂದು ಇಡೀ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ದಾಖಲಾಗುತ್ತಿರುವುದು ಮಹಾರಾಷ್ಯ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ, ಆದರೆ ಗುಜರಾತಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮಹಾರಾಷ್ಟ್ರಕ್ಕಿಂತ ಕಡಿಮೆ ಇರಲು ಕಾರಣ ಅಲ್ಲಿ ಸೋಂಕಿತರು ಕಡಿಮೆ ಇರುವುದಲ್ಲ. ಬದಲಿಗೆ ಟೆಸ್ಟ್ ಗಳನ್ನೇ ಕಡಿಮೆ ಮಾಡುತ್ತಿರುವುದು!

ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿ ಮಾಡುತ್ತಿರುವ ಟೆಸ್ಟ್ ಗಳ ಅರ್ಧದಷ್ಟು ಟೆಸ್ಟ್ ಗಳನ್ನೂ ಸಹ ಗುಜರಾತ್ ಸರ್ಕಾರ ಮಾಡುತ್ತಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ನೋಂದಾಯಿಸಿಕೊಳ್ಳುತ್ತಿಲ್ಲ. ಸತ್ತವರ ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳುತ್ತಿಲ್ಲ ಹಾಗು ಸಂಬಂಧಿಕರಿಗೂ ತಿಳಿಸುತ್ತಿಲ್ಲ.

ಅದರಲ್ಲೂ ವಿಶೇಷವಾಗಿ ಗುಜರಾತ್ ನ ರಾಜಧಾನಿ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಸಾವಿನ ಕೂಪವಾಗಿ ಬಿಟ್ಟಿದೆ. ಈವರೆಗೆ ಗುಜರಾತಿನಲ್ಲಿ ಕೋವಿಡ್ ನಿಂದ ಸತ್ತವರಲ್ಲಿ ಅರ್ಧದಷ್ಟು ಭಾಗ ಸತ್ತಿರುವುದು ಅಹಮದಾಬಾದಿನ ಈ ಆಸ್ಪತ್ರೆಯಲ್ಲೇ.. ಕಾರಣ ನಿರ್ಲಕ್ಷ್ಯ, ಸಿಬ್ಬಂದಿ ಹಾಗು ಪರಿಕರಗಳ ಕೊರತೆ, ಸರ್ಕಾರದ ಬೇಜವಾಬ್ದಾರಿ ಇತ್ಯಾದಿ…

ಹೀಗೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಮಾಡೆಲ್ ಎಂದರೆ ಸುಳ್ಳುಗಳನ್ನು ಹೇಳುತ್ತಾ ಸತ್ಯವನ್ನು ಮರೆಮಾಚುತ್ತಾ ನಡೆಸುತ್ತಿರುವ ಕಪಟವಾಗಿದೆ.

ಇತ್ತೀಚೆಗೆ, ಇವೆಲ್ಲವನ್ನೂ ಕಂಡು ಬೇಸತ್ತ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯ ಅನಾಮಧೇಯ ವೈದ್ಯರೊಬ್ಬರು ಗುಜರಾತಿನ ಹೈಕೋರ್ಟಿಗೆ ಪತ್ರವೊಂದನ್ನು ಬರೆದಿದ್ದರು. ಅದನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು ಗುಜರಾತಿನ ಹೈಕೋರ್ಟು ದಾಖಲಿಸಿಕೊಂಡಿತು ಪ್ರಾರಂಭಿಕ ವಿಚಾರಣೆಯಲ್ಲಿ ಸರ್ಕಾರ ವು ಸತ್ಯಗಳನ್ನು ಮರೆಮಾಚುತ್ತಿರುವುದನ್ನು ಕಂಡುಕೊಂಡಿದ್ದ ಹೈಕೋರ್ಟಿನ ದ್ವಿಸದಸ್ಯ ಪೀಠ ಕೂಡಲೇ ಸರಿಯಾದ ಕ್ರಮಗಳನ್ನು ಜಾರಿಗೊಳಿಸಲು ಆದೇಶಿಸಿತ್ತು.

ಆದರೆ ತನ್ನ ನಿರ್ಲಕ್ಷ್ಯ ಹಾಗು ದುಷ್ಟತನವನ್ನು ಮರೆಮಾಚಲು ಗುಜರಾತ್ ಹಾಗು ಕೇಂದ್ರದ ಬಿಜೆಪಿ ಸರ್ಕಾರ ಹೈ ಕೋರ್ಟನ್ನು ಕೂಡಾ ಬ್ಲಾಕ್ ಮೇಲ್ ಮಾಡುತ್ತಿದೆ.

ಮೋದಿ ಮತ್ತು ಶಾ ಕ್ರೊನಾಲಜಿ

ಅದು ಹೇಗೆಂದು ಅರ್ಥವಾಗಬೇಕೆಂದರೆ ಕೆಳಗಿನ ಕ್ರೋನಾಲಜಿಯನ್ನು ಗಮನಿಸಬೇಕು..

ಮೇ 22-

ಅಹಮದಾಬಾದಿನ ಹೈಕೋರ್ಟಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠ:

“ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಗುಜರಾತ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅದರಲ್ಲೂ ಅಹಮದಾಬಾದಿನ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಯ ಆಗರವಾಗಿದೆ. ಸಾವಿನ ಸೆರೆಮನೆಯಾಗಿದೆ. ಗುಜರಾತ್ ಸರ್ಕಾರ ಮೇ 29ರ ಒಳಗೆ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿಯನ್ನು ನೀಡದಿದ್ದರೆ ಕೋರ್ಟು ಕಠಿಣವಾದ ಆದೇಶಗಳನ್ನು ನೀಡಬೇಕಾಗುತ್ತದೆ”

ಮೇ 25-

ಹೈಕೋರ್ಟು ಈ ಕ್ರಮಗಳಿಗೆ ಮುಂದಾಗಬಾರದೆಂದು ಸರ್ಕಾರಿ ವಕೀಲರ ಮನವಿ. ಈ ಮನವಿಯಿಂದ ಕೆಂಡಾಮಂಡಲವಾಗುವ ಕೋರ್ಟು ಮೇ 29 ರೊಳಗೆ ಸರಿಯಾದ ತಿದ್ದುಪಡಿ ಕ್ರಮಗಳನ್ನು ತೆಗೆದುಕೊಂಡು ವರದಿ ಮಾಡಲು ಸೂಚನೆ ಹಾಗು ಆಸ್ಪತೆಯ ಖುದ್ದು ಭೇಟಿ ಕಾರ್ಯಕ್ರಮದ ಘೋಷಣೆ.

ಮೇ 29-

ಅಹಮದಾಬಾದಿನ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ವಿಕ್ರಂ ನಾಥರಿಂದ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆ ನಡೆಸುತ್ತಿದ್ದ ಪಾರ್ದಿವಾಲ್ -ವೋರಾ ಪೀಠದ ಪುನರ್ರಚನೆ.

ಈ ಹಿಂದಿನ ಜಸ್ಟಿಸ್ ಪಾರ್ದಿವಾಲ ಮತ್ತು ಜಸ್ಟಿಸ್ ವೋರಾ ಪೀಠದಲ್ಲಿ ಆದೇಶಗಳನ್ನು ಬರೆದ ಜಸ್ಟಿಸ್ ಪಾರ್ದಿವಾಲ ಆ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದರು.

ಪುನರ್ರಚಿತವಾದ ಪೀಠದ ಜವಾಬ್ದಾರಿಯನ್ನು ಈಗ ಸಾಕ್ಷಾತ್ ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥರೇ ವಹಿಸಿಕೊಂಡಿದ್ದರಿಂದ ಹಳೆಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದ ಪಾರ್ದಿವಾಲಾರವರು ಈ ಹೊಸ ದ್ವಿಸದಸ್ಯ ಪೀಠದಲ್ಲಿ ಕಿರಿಯ ಸಹಚರರಾದರು !

ಮೇ 31-

ಮುಖ್ಯ ನ್ಯಾಯಮೂರ್ತಿ ವಿಕ್ರಂ ನಾಥ ಹಾಗೂ ಜಸ್ಟಿಸ್ ಪಾರ್ದಿವಾಲರ ಪೀಠ :

“ಗುಜರಾತ್ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರವು ಈಗ ತೆಗೆದುಕೊಂಡಿರುವ ಕ್ರಮಗಳನ್ನು ತೆಗೆದುಕೊಳ್ಳದಿರುತ್ತಿದ್ದರೆ ನಾವೆಲ್ಲರೂ ಸತ್ತೇ ಹೋಗಿರುತ್ತಿದ್ದೆವು. ಅಹಮದಾಬಾದಿನ ಆಸ್ಪತ್ರೆಯೂ ಸಹ ಅತ್ಯುತ್ತಮವಾಗಿದೆ. ಈ ಸಾರ್ವಜನಿಕ ಮೊಕದ್ದಮೆಯನ್ನು ಕೋರ್ಟು ಅಲಹಾಬಾದ್ ಕೈಗೆತ್ತಿಕೊಂಡಿರುವುದು ಸರ್ಕಾರದ ಮೇಲೆ ಆಕ್ಷೇಪಣೆ ಮಾಡುವುದಕ್ಕಲ್ಲ. ವಿರೋಧ ಪಕ್ಷಗಳೂ ಸಹ ಇಂದಿನ ಸಂದರ್ಭದಲ್ಲಿ ಸರ್ಕಾರಕ್ಕೆ ರಚನಾತ್ಮಕ ಸಹಕಾರ ಕೊಡಬೇಕು”

ಅಡಿ ಟಿಪ್ಪಣಿ :

ಅಹಮದಾಬಾದಿನ ಹಾಲಿ ಮುಖ್ಯನ್ಯಾಯಮೂರ್ತಿ ವಿಕ್ರಂ ನಾಥರು 2014 ರಲ್ಲಿ ಉತ್ತರಪ್ರದೇಶದ ಅಲಹಾಬಾದಿನ ಹೈಕೋರ್ಟಿನ ನ್ಯಾಯಾಧೀಶರಾಗಿದ್ದಾಗ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನರೇಂದ್ರ ಮೋದಿಯವರ ಗೆಲುವನ್ನು ಪ್ರಶ್ನಿಸಿದ್ದ ತಕರಾರು ಅರ್ಜಿಯನ್ನು ಹೆಚ್ಚಿನ ವಿಚಾರಣೆಯಿಲ್ಲದೆ ವಜಾ ಮಾಡಿದ್ದರು.

ಆದರೂ 2019 ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟಿನ ಕೊಲಿಜಿಯಂ ಆಗ ಅಲಹಾಬಾದ್ ಹೈಕೋರ್ಟಿನ ಹಿರಿಯ ನ್ಯಾಯಾಧೀಶರಾಗಿದ್ದ ವಿಕ್ರಂ ನಾಥರನ್ನು ಆಂಧ್ರಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿಸಲು ಮಾಡಿದ್ದ ಶಿಪಾರಸ್ಸುಗಳನ್ನು ಮೋದಿ ಸರ್ಕಾರ ವಾಪಸ್ ಕಳಿಸಿತ್ತು .

ಆದರೆ 2019 ರ ಆಗಸ್ಟ್ ನಲ್ಲಿ ಮೋದಿ ಸರ್ಕಾರವೇ ಕೊಲಿಜಿಯಂ ಗೆ ವಿಶೇಷ ಮನವಿ ಮಾಡಿ ಜಸ್ಟಿಸ್ ವಿಕ್ರಂ ನಾಥರನ್ನು ಗುಜರಾತಿನ ಮುಖ್ಯ ನ್ಯಾಯಾಧೀಶರನ್ನಾಗಿಸಿಕೊಂಡಿತು…!!

ಒಂದು ಗಿಳಿಪಾಠ : ಭಾರತದ ನ್ಯಾಯಾಂಗವು ಒಂದು ಸ್ವತಂತ್ರ ಸಂಸ್ಥೆಯಾಗಿದೆ.


ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ; ಗುಜರಾತ್‌ ಮಾಡೆಲ್ ಧ್ವಂಸ ಮಾಡಿ: ಜಿಗ್ನೇಶ್‌ ಮೇವಾನಿ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...