Homeಮುಖಪುಟಬೀದಿಬದಿ ವ್ಯಾಪಾರಿಗಳಿಗೆ 20 ಸಾವಿರ ಕೋಟಿ ತೆಗೆದಿಡಲು ಕೇಂದ್ರ ಸಚಿವ ಸಂಪುಟ ನಿರ್ಧಾರ

ಬೀದಿಬದಿ ವ್ಯಾಪಾರಿಗಳಿಗೆ 20 ಸಾವಿರ ಕೋಟಿ ತೆಗೆದಿಡಲು ಕೇಂದ್ರ ಸಚಿವ ಸಂಪುಟ ನಿರ್ಧಾರ

- Advertisement -
- Advertisement -

ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾದ ಜನರಿಗೆ ಆರ್ಥಿಕ ನೆರವು ನೀಡುವ ಸಲುವಾಗಿ ಕೇಂದ್ರ ಸರ್ಕಾರದ ಸಂಪುಟ ಸಭೆಯಲ್ಲಿ ಇಂದು ಬೀದಿಬದಿ ವ್ಯಾಪಾರಿಗಳಿಗಾಗಿ 20 ಸಾವಿರ ಕೋಟಿ ರೂ ತೆಗೆದಿಡಲು ನಿರ್ಧರಿಸಲಾಗಿದೆ. ಕ್ಷೌರಿಕ ಅಂಗಡಿಗಳನ್ನೂ ಸಹ ಬೀದಿ ಬದಿಯ ವ್ಯಾಪಾರಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇವರಿಗೆ 10,000 ಸಾಲ ನೀಡಲು ಕೇಂದ್ರ ಯೋಜನೆ ರೂಪಿಸಿದೆ. ಈ ಸಾಲ ಒಂದು ವರ್ಷದ ವರೆಗೆ ಬಡ್ಡಿ ರಹಿತವಾಗಿದ್ದು, ಸಾಲ ಪಾವತಿ ವಿಳಂಬಕ್ಕೂ ದಂಡ ವಿಧಿಸುವಂತಿಲ್ಲ ಎಂದು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ದೇಶದಾದ್ಯಂತ ಘೋಷಿಸಲಾಗುತ್ತಿರುವ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ರೂ ಪ್ಯಾಕೇಜ್ ಗೆ ಕೇಂದ್ರ ಸಚಿವ ಸಂಪುಟ ಸಭೆ ಹಂತಹಂತವಾಗಿ ಒಪ್ಪಿಗೆ ನೀಡುತ್ತಿದೆ ಎನ್ನಲಾಗಿದೆ. ಸಣ್ಣ ಮತ್ತು ಬೀದಿ ಬದಿಯ ವ್ಯಾಪಾರಿಗಳ ಜೊತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಲು ಕೇಂದ್ರ ಹೊಸ ಯೋಜನೆ ರೂಪಿಸಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಬೆಳೆ ಸಾಲ ಪಾವತಿಗೆ 2021ರ ವರೆಗೆ ಅವಧಿ ವಿಸ್ತರಣೆ, ಪಡಿತರ ಕಾರ್ಡ್ ಇಲ್ಲದವರಿಗೂ ಪಡಿತರ ನೀಡುವ ಯೋಜನೆ, APMC ಕಾಯ್ದೆ ತಿದ್ದುಪಡಿ ಹಾಗೂ ಜೋಳ, ಗೋಧಿ, ಸಜ್ಜೆ, ತೊಗರಿ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಿ ಸರ್ಕಾರವೇ ರೈತರಿಗೆ ಬೆಳೆಗಳನ್ನು ಖರೀದಿ ಮಾಡುವುದಕ್ಕೂ ಸಹ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಒಪ್ಪಿಗೆ ಪಡೆಯಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಒತ್ತು: ಗಡ್ಕರಿ

ದೇಶದ ಆರ್ಥಿಕತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾತ್ರ ನಿರ್ಣಾಯಕವಾಗಿದ್ದು, ಲಾಕ್ಡೌನ್ನಿಂದಾಗಿ ಈ ವಲಯವೂ ಸಹ ಸಾಕಷ್ಟು ನಷ್ಟ ಅನುಭವಿಸಿದೆ. ಹೀಗಾಗಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕಿದೆ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಿತೀನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ಜಿಡಿಪಿ ಗೆ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ಶೇ.29ರಷ್ಟು ಕೊಡುಗೆ ನೀಡಿವೆ. ಆದ್ದರಿಂದಲೇ ಈ ವಲಯಕ್ಕೆ ಕೇಂದ್ರದ ಕಡೆಯಿಂದ ಹೆಚ್ಚು ಕೊಡಗೆ ನೀಡಲಾಗುತ್ತಿದೆ.
ಈ ವಲಯದಿಂದ ವರ್ಷಕ್ಕೆ ಶೇ.48 ರಷ್ಟು ಉತ್ಪನ್ನಗಳು ವಿದೇಶಕ್ಕೆ ರಫ್ತಾಗುತ್ತಿದೆ. ಆದರೆ, 2006ರ MSME ಕಾಯ್ದೆಯಿಂದಾಗಿ ಉದ್ಯಮಕ್ಕೆ ಲಾಭವಾಗುತ್ತಿಲ್ಲ. ಹೀಗಾಗಿ ಈ ಕಾಯ್ದೆಯಲ್ಲಿ ಬದಲಾವಣೆ ಮಾಡಿ ನೆರವು ನೀಡಲಾಗುತ್ತಿದೆ. ಈಗ ಮಾಡಿರುವ ಬದಲಾವಣೆಯಲ್ಲಿ ,MSME ವ್ಯವಹಾರದಲ್ಲಿ ರಫ್ತನ್ನು ಪರಿಗಣಿಸುವುದಿಲ್ಲ ಪರಿಣಾಮ ಈ ಉದ್ಯಕ್ಕೆ ಹೆಚ್ಚು ಉಳಿತಾಯವಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.


ಓದಿ: ರಾಜ್ಯ 7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...