Homeಮುಖಪುಟಬೀದಿಬದಿ ವ್ಯಾಪಾರಿಗಳಿಗೆ 20 ಸಾವಿರ ಕೋಟಿ ತೆಗೆದಿಡಲು ಕೇಂದ್ರ ಸಚಿವ ಸಂಪುಟ ನಿರ್ಧಾರ

ಬೀದಿಬದಿ ವ್ಯಾಪಾರಿಗಳಿಗೆ 20 ಸಾವಿರ ಕೋಟಿ ತೆಗೆದಿಡಲು ಕೇಂದ್ರ ಸಚಿವ ಸಂಪುಟ ನಿರ್ಧಾರ

- Advertisement -
- Advertisement -

ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾದ ಜನರಿಗೆ ಆರ್ಥಿಕ ನೆರವು ನೀಡುವ ಸಲುವಾಗಿ ಕೇಂದ್ರ ಸರ್ಕಾರದ ಸಂಪುಟ ಸಭೆಯಲ್ಲಿ ಇಂದು ಬೀದಿಬದಿ ವ್ಯಾಪಾರಿಗಳಿಗಾಗಿ 20 ಸಾವಿರ ಕೋಟಿ ರೂ ತೆಗೆದಿಡಲು ನಿರ್ಧರಿಸಲಾಗಿದೆ. ಕ್ಷೌರಿಕ ಅಂಗಡಿಗಳನ್ನೂ ಸಹ ಬೀದಿ ಬದಿಯ ವ್ಯಾಪಾರಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇವರಿಗೆ 10,000 ಸಾಲ ನೀಡಲು ಕೇಂದ್ರ ಯೋಜನೆ ರೂಪಿಸಿದೆ. ಈ ಸಾಲ ಒಂದು ವರ್ಷದ ವರೆಗೆ ಬಡ್ಡಿ ರಹಿತವಾಗಿದ್ದು, ಸಾಲ ಪಾವತಿ ವಿಳಂಬಕ್ಕೂ ದಂಡ ವಿಧಿಸುವಂತಿಲ್ಲ ಎಂದು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ದೇಶದಾದ್ಯಂತ ಘೋಷಿಸಲಾಗುತ್ತಿರುವ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ರೂ ಪ್ಯಾಕೇಜ್ ಗೆ ಕೇಂದ್ರ ಸಚಿವ ಸಂಪುಟ ಸಭೆ ಹಂತಹಂತವಾಗಿ ಒಪ್ಪಿಗೆ ನೀಡುತ್ತಿದೆ ಎನ್ನಲಾಗಿದೆ. ಸಣ್ಣ ಮತ್ತು ಬೀದಿ ಬದಿಯ ವ್ಯಾಪಾರಿಗಳ ಜೊತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಲು ಕೇಂದ್ರ ಹೊಸ ಯೋಜನೆ ರೂಪಿಸಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಬೆಳೆ ಸಾಲ ಪಾವತಿಗೆ 2021ರ ವರೆಗೆ ಅವಧಿ ವಿಸ್ತರಣೆ, ಪಡಿತರ ಕಾರ್ಡ್ ಇಲ್ಲದವರಿಗೂ ಪಡಿತರ ನೀಡುವ ಯೋಜನೆ, APMC ಕಾಯ್ದೆ ತಿದ್ದುಪಡಿ ಹಾಗೂ ಜೋಳ, ಗೋಧಿ, ಸಜ್ಜೆ, ತೊಗರಿ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಿ ಸರ್ಕಾರವೇ ರೈತರಿಗೆ ಬೆಳೆಗಳನ್ನು ಖರೀದಿ ಮಾಡುವುದಕ್ಕೂ ಸಹ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಒಪ್ಪಿಗೆ ಪಡೆಯಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಒತ್ತು: ಗಡ್ಕರಿ

ದೇಶದ ಆರ್ಥಿಕತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾತ್ರ ನಿರ್ಣಾಯಕವಾಗಿದ್ದು, ಲಾಕ್ಡೌನ್ನಿಂದಾಗಿ ಈ ವಲಯವೂ ಸಹ ಸಾಕಷ್ಟು ನಷ್ಟ ಅನುಭವಿಸಿದೆ. ಹೀಗಾಗಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕಿದೆ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಿತೀನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ಜಿಡಿಪಿ ಗೆ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ಶೇ.29ರಷ್ಟು ಕೊಡುಗೆ ನೀಡಿವೆ. ಆದ್ದರಿಂದಲೇ ಈ ವಲಯಕ್ಕೆ ಕೇಂದ್ರದ ಕಡೆಯಿಂದ ಹೆಚ್ಚು ಕೊಡಗೆ ನೀಡಲಾಗುತ್ತಿದೆ.
ಈ ವಲಯದಿಂದ ವರ್ಷಕ್ಕೆ ಶೇ.48 ರಷ್ಟು ಉತ್ಪನ್ನಗಳು ವಿದೇಶಕ್ಕೆ ರಫ್ತಾಗುತ್ತಿದೆ. ಆದರೆ, 2006ರ MSME ಕಾಯ್ದೆಯಿಂದಾಗಿ ಉದ್ಯಮಕ್ಕೆ ಲಾಭವಾಗುತ್ತಿಲ್ಲ. ಹೀಗಾಗಿ ಈ ಕಾಯ್ದೆಯಲ್ಲಿ ಬದಲಾವಣೆ ಮಾಡಿ ನೆರವು ನೀಡಲಾಗುತ್ತಿದೆ. ಈಗ ಮಾಡಿರುವ ಬದಲಾವಣೆಯಲ್ಲಿ ,MSME ವ್ಯವಹಾರದಲ್ಲಿ ರಫ್ತನ್ನು ಪರಿಗಣಿಸುವುದಿಲ್ಲ ಪರಿಣಾಮ ಈ ಉದ್ಯಕ್ಕೆ ಹೆಚ್ಚು ಉಳಿತಾಯವಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.


ಓದಿ: ರಾಜ್ಯ 7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...