Homeಕರ್ನಾಟಕಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಪತ್ರ ಬರೆದಿದ್ದಾರೆ.

- Advertisement -
- Advertisement -

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಕನ್ನಡದ 25 ಸಾಹಿತಿಗಳು ಬಹಿರಂಗ ಪತ್ರ ಬರೆದಿದಿದ್ದಾರೆ.

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಮುಖ್ಯಮಂತ್ರಿಗಳಿಗೆ ಕಳಿಸಿರುವ ಬಹಿರಂಗ ಪತ್ರವನ್ನು ಪತ್ರಿಕಾ ಹೇಳಿಕೆಯಾಗಿ ನೀಡಿದ್ದಾರೆ.

ಕರ್ನಾಟಕದ ಜನರ ಒತ್ತಾಸೆ, ಹೋರಾಟ ಮತ್ತು ಕನ್ನಡದ ಹಲವಾರು ಹಿರಿಯ ಸಾಹಿತಿಗಳೂ, ಕನ್ನಡಪರ ಹೋರಾಟಗಾರರೂ ದನಿಯೆತ್ತಿದ್ದರಿಂದ ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಪ್ರಾರಂಭಗೊಂಡು ಸುಮಾರು ಹತ್ತು ವರ್ಷಗಳಾಗಿವೆ. ಆದರೆ ತಮಿಳು ಮತ್ತು ತೆಲುಗು ಶಾಸ್ತ್ರೀಯ ಅಧ್ಯಯನ ವಿಭಾಗಗಳು ಬೆಳವಣಿಗೆ ಹೊಂದಿದ್ದಷ್ಟು ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಬೆಳೆಯದಿರುವುದಕ್ಕೆ ಕನ್ನಡದ ಸಾಹಿತಿಗಳು ವಿಷಾಧ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಳಂಬವಾಗಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸಿ.ಟಿ.ರವಿ ಅವರು ಪ್ರಯತ್ನಶೀಲರಾಗಿದ್ದರೂ ಅದಕ್ಕೆ ಭಾರತೀಯ ಭಾಷಾ ಸಂಸ್ಥಾನದ ಪ್ರಭಾರ ನಿರ್ದೇಶಕರಾದ ಪ್ರೊ.ಡಿ.ಜಿ.ರಾವ್ ಅವರು ಸ್ಪಂದಿಸುತ್ತಿಲ್ಲ ಎಂದು ಸಾಹಿತಿಗಳು ಹೇಳಿಕೆಯಲ್ಲಿ ದೂರಿದ್ದಾರೆ.

ಅಲ್ಲದೇ ನಿರ್ದೇಶಕರು ಶಾಸ್ತ್ರೀಯ ಕನ್ನಡವು ಸ್ವಾಯತ್ತತೆ ಪಡೆಯುವಷ್ಟು ಬೆಳವಣಿಗೆ ಆಗಿಲ್ಲವೆಂದು ಕೇಂದ್ರಕ್ಕೆ ತಪ್ಪು ಮಾಹಿತಿಯನ್ನು ನೀಡಿರುವುದು ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಭಾರತೀಯ ಭಾಷಾಜ್ಞಾನವುಳ್ಳ ಯಾರೂ ಕೂಡ ಹೀಗೆ ಬರೆಯಲು ಸಾಧ್ಯವಿಲ್ಲ. ಹೀಗೆ ಬರೆಯುವುದರ ಮೂಲಕ ಡಿ.ಜಿ.ರಾವ್ ಅವರು ಭಾರತೀಯ ಭಾಷಾ ಸಂಸ್ಥಾನಕ್ಕೂ, ಭಾಷಾ ವಿಜ್ಞಾನಕ್ಕೂ ಅವಮಾನ ಮಾಡಿದ್ದಾರೆ. ಮಾತ್ರವಲ್ಲದೆ, ಸ್ವಾಯತ್ತತೆಗೆ ಸಂಬಂಧಿಸಿದಂತೆ ಕೇಂದ್ರದ ಸಂಶೋಧನ ಕಾರ್ಯಗಳ ಪ್ರಗತಿಯನ್ನು ಹಿನ್ನಡೆಗೊಳಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿ ಈಚೆಗೆ ಹಾಲಿ ಸಂಶೋಧನ ಸಿಬ್ಬಂದಿಯನ್ನು ಬದಲಿಸುವ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಧ್ಯಪ್ರವೇಶಿಸಿ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ಸ್ಥಾನಮಾನ ದೊರಕಿಸಿಕೊಳ್ಳಲು ತುರ್ತಾಗಿ ಕ್ರಮಕೈಗೊಳ್ಳುವುದು. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹಿನ್ನೆಡೆಯುಂಟು ಮಾಡುವ ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಪ್ರಭಾರಿ ನಿರ್ದೇಶಕರು ಹೊರಡಿಸಿದ ಕಾನೂನುಬಾಹಿರವಾದ ಹೊಸ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆಯಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರೊ. ನಂಜರಾಜೇ ಅರಸ್, ಜಿ.ಎಸ್.ಜಯದೇವ, ಪ್ರೊ. ಕೃಷ್ಣಮೂರ್ತಿ ಹನೂರು, ಡಾ.ಬಸವರಾಜ ಕಲ್ಗುಡಿ, ಪ.ಮಲ್ಲೇಶ್, ಡಾ.ಓ.ಎಲ್.ನಾಗಭೂಷಣಸ್ವಾಮಿ, ಡಾ.ಚಂದ್ರಶೇಖರ ನಂಗಲಿ, ಪ್ರೊ.ಎನ್.ಬೋರಲಿಂಗಯ್ಯ,
ಡಾ.ರಾಜಪ್ಪ ದಳವಾಯಿ, ಡಾ.ಕಾಳೇಗೌಡ ನಾಗವಾರ, ಜಿ.ಪಿ.ಬಸವರಾಜ, ಡಾ.ಅರವಿಂದ ಮಾಲಗತ್ತಿ, ಡಾ.ನಟರಾಜ್ ಬೂದಾಳು, ನಾ.ದಿವಾಕರ, ಡಾ.ವೀರಣ್ಣ ರಾಜೂರ, ವೆಂಕಟೇಶ ಮಾಚಕನೂರು, ಡಾ.ಬಸವರಾಜ್ ಮೈಸೂರು, ಡಾ.ಬಸವರಾಜ ಸಾದರ, ಡಾ.ದೇವರ ಕೊಂಡಾರೆಡ್ಡಿ, ಡಾ.ಕೇಶವ ಶರ್ಮ, ಪ್ರೊ. ಪಂಡಿತಾರಾಧ್ಯ ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ ಇತರರಾಗಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಸಂಗೀತ, ಕನ್ನಡ ಮತ್ತು ಕನ್ನಡಿಗರು: ಹತ್ತೊಂಬತ್ತನೇ ಶತಮಾನದ ಮೈಸೂರು ಸಂಸ್ಥಾನದ ಕೆಲವು ನೋಟಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ವಿರೋಧಿ ಡಿ.ಜಿ.ರಾವ್ ಮೊದಲು ಸಿಐಐಎಲ್ ನಿಂದ ತೊಲಗಬೇಕು.

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...