Homeಕರ್ನಾಟಕಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಪತ್ರ ಬರೆದಿದ್ದಾರೆ.

- Advertisement -
- Advertisement -

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಕನ್ನಡದ 25 ಸಾಹಿತಿಗಳು ಬಹಿರಂಗ ಪತ್ರ ಬರೆದಿದಿದ್ದಾರೆ.

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಮುಖ್ಯಮಂತ್ರಿಗಳಿಗೆ ಕಳಿಸಿರುವ ಬಹಿರಂಗ ಪತ್ರವನ್ನು ಪತ್ರಿಕಾ ಹೇಳಿಕೆಯಾಗಿ ನೀಡಿದ್ದಾರೆ.

ಕರ್ನಾಟಕದ ಜನರ ಒತ್ತಾಸೆ, ಹೋರಾಟ ಮತ್ತು ಕನ್ನಡದ ಹಲವಾರು ಹಿರಿಯ ಸಾಹಿತಿಗಳೂ, ಕನ್ನಡಪರ ಹೋರಾಟಗಾರರೂ ದನಿಯೆತ್ತಿದ್ದರಿಂದ ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಪ್ರಾರಂಭಗೊಂಡು ಸುಮಾರು ಹತ್ತು ವರ್ಷಗಳಾಗಿವೆ. ಆದರೆ ತಮಿಳು ಮತ್ತು ತೆಲುಗು ಶಾಸ್ತ್ರೀಯ ಅಧ್ಯಯನ ವಿಭಾಗಗಳು ಬೆಳವಣಿಗೆ ಹೊಂದಿದ್ದಷ್ಟು ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಬೆಳೆಯದಿರುವುದಕ್ಕೆ ಕನ್ನಡದ ಸಾಹಿತಿಗಳು ವಿಷಾಧ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಳಂಬವಾಗಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸಿ.ಟಿ.ರವಿ ಅವರು ಪ್ರಯತ್ನಶೀಲರಾಗಿದ್ದರೂ ಅದಕ್ಕೆ ಭಾರತೀಯ ಭಾಷಾ ಸಂಸ್ಥಾನದ ಪ್ರಭಾರ ನಿರ್ದೇಶಕರಾದ ಪ್ರೊ.ಡಿ.ಜಿ.ರಾವ್ ಅವರು ಸ್ಪಂದಿಸುತ್ತಿಲ್ಲ ಎಂದು ಸಾಹಿತಿಗಳು ಹೇಳಿಕೆಯಲ್ಲಿ ದೂರಿದ್ದಾರೆ.

ಅಲ್ಲದೇ ನಿರ್ದೇಶಕರು ಶಾಸ್ತ್ರೀಯ ಕನ್ನಡವು ಸ್ವಾಯತ್ತತೆ ಪಡೆಯುವಷ್ಟು ಬೆಳವಣಿಗೆ ಆಗಿಲ್ಲವೆಂದು ಕೇಂದ್ರಕ್ಕೆ ತಪ್ಪು ಮಾಹಿತಿಯನ್ನು ನೀಡಿರುವುದು ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಭಾರತೀಯ ಭಾಷಾಜ್ಞಾನವುಳ್ಳ ಯಾರೂ ಕೂಡ ಹೀಗೆ ಬರೆಯಲು ಸಾಧ್ಯವಿಲ್ಲ. ಹೀಗೆ ಬರೆಯುವುದರ ಮೂಲಕ ಡಿ.ಜಿ.ರಾವ್ ಅವರು ಭಾರತೀಯ ಭಾಷಾ ಸಂಸ್ಥಾನಕ್ಕೂ, ಭಾಷಾ ವಿಜ್ಞಾನಕ್ಕೂ ಅವಮಾನ ಮಾಡಿದ್ದಾರೆ. ಮಾತ್ರವಲ್ಲದೆ, ಸ್ವಾಯತ್ತತೆಗೆ ಸಂಬಂಧಿಸಿದಂತೆ ಕೇಂದ್ರದ ಸಂಶೋಧನ ಕಾರ್ಯಗಳ ಪ್ರಗತಿಯನ್ನು ಹಿನ್ನಡೆಗೊಳಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿ ಈಚೆಗೆ ಹಾಲಿ ಸಂಶೋಧನ ಸಿಬ್ಬಂದಿಯನ್ನು ಬದಲಿಸುವ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಧ್ಯಪ್ರವೇಶಿಸಿ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ಸ್ಥಾನಮಾನ ದೊರಕಿಸಿಕೊಳ್ಳಲು ತುರ್ತಾಗಿ ಕ್ರಮಕೈಗೊಳ್ಳುವುದು. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹಿನ್ನೆಡೆಯುಂಟು ಮಾಡುವ ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಪ್ರಭಾರಿ ನಿರ್ದೇಶಕರು ಹೊರಡಿಸಿದ ಕಾನೂನುಬಾಹಿರವಾದ ಹೊಸ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆಯಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರೊ. ನಂಜರಾಜೇ ಅರಸ್, ಜಿ.ಎಸ್.ಜಯದೇವ, ಪ್ರೊ. ಕೃಷ್ಣಮೂರ್ತಿ ಹನೂರು, ಡಾ.ಬಸವರಾಜ ಕಲ್ಗುಡಿ, ಪ.ಮಲ್ಲೇಶ್, ಡಾ.ಓ.ಎಲ್.ನಾಗಭೂಷಣಸ್ವಾಮಿ, ಡಾ.ಚಂದ್ರಶೇಖರ ನಂಗಲಿ, ಪ್ರೊ.ಎನ್.ಬೋರಲಿಂಗಯ್ಯ,
ಡಾ.ರಾಜಪ್ಪ ದಳವಾಯಿ, ಡಾ.ಕಾಳೇಗೌಡ ನಾಗವಾರ, ಜಿ.ಪಿ.ಬಸವರಾಜ, ಡಾ.ಅರವಿಂದ ಮಾಲಗತ್ತಿ, ಡಾ.ನಟರಾಜ್ ಬೂದಾಳು, ನಾ.ದಿವಾಕರ, ಡಾ.ವೀರಣ್ಣ ರಾಜೂರ, ವೆಂಕಟೇಶ ಮಾಚಕನೂರು, ಡಾ.ಬಸವರಾಜ್ ಮೈಸೂರು, ಡಾ.ಬಸವರಾಜ ಸಾದರ, ಡಾ.ದೇವರ ಕೊಂಡಾರೆಡ್ಡಿ, ಡಾ.ಕೇಶವ ಶರ್ಮ, ಪ್ರೊ. ಪಂಡಿತಾರಾಧ್ಯ ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ ಇತರರಾಗಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಸಂಗೀತ, ಕನ್ನಡ ಮತ್ತು ಕನ್ನಡಿಗರು: ಹತ್ತೊಂಬತ್ತನೇ ಶತಮಾನದ ಮೈಸೂರು ಸಂಸ್ಥಾನದ ಕೆಲವು ನೋಟಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ವಿರೋಧಿ ಡಿ.ಜಿ.ರಾವ್ ಮೊದಲು ಸಿಐಐಎಲ್ ನಿಂದ ತೊಲಗಬೇಕು.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...