Homeಕರ್ನಾಟಕಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಪತ್ರ ಬರೆದಿದ್ದಾರೆ.

- Advertisement -
- Advertisement -

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಕನ್ನಡದ 25 ಸಾಹಿತಿಗಳು ಬಹಿರಂಗ ಪತ್ರ ಬರೆದಿದಿದ್ದಾರೆ.

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಮುಖ್ಯಮಂತ್ರಿಗಳಿಗೆ ಕಳಿಸಿರುವ ಬಹಿರಂಗ ಪತ್ರವನ್ನು ಪತ್ರಿಕಾ ಹೇಳಿಕೆಯಾಗಿ ನೀಡಿದ್ದಾರೆ.

ಕರ್ನಾಟಕದ ಜನರ ಒತ್ತಾಸೆ, ಹೋರಾಟ ಮತ್ತು ಕನ್ನಡದ ಹಲವಾರು ಹಿರಿಯ ಸಾಹಿತಿಗಳೂ, ಕನ್ನಡಪರ ಹೋರಾಟಗಾರರೂ ದನಿಯೆತ್ತಿದ್ದರಿಂದ ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಪ್ರಾರಂಭಗೊಂಡು ಸುಮಾರು ಹತ್ತು ವರ್ಷಗಳಾಗಿವೆ. ಆದರೆ ತಮಿಳು ಮತ್ತು ತೆಲುಗು ಶಾಸ್ತ್ರೀಯ ಅಧ್ಯಯನ ವಿಭಾಗಗಳು ಬೆಳವಣಿಗೆ ಹೊಂದಿದ್ದಷ್ಟು ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಬೆಳೆಯದಿರುವುದಕ್ಕೆ ಕನ್ನಡದ ಸಾಹಿತಿಗಳು ವಿಷಾಧ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಳಂಬವಾಗಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸಿ.ಟಿ.ರವಿ ಅವರು ಪ್ರಯತ್ನಶೀಲರಾಗಿದ್ದರೂ ಅದಕ್ಕೆ ಭಾರತೀಯ ಭಾಷಾ ಸಂಸ್ಥಾನದ ಪ್ರಭಾರ ನಿರ್ದೇಶಕರಾದ ಪ್ರೊ.ಡಿ.ಜಿ.ರಾವ್ ಅವರು ಸ್ಪಂದಿಸುತ್ತಿಲ್ಲ ಎಂದು ಸಾಹಿತಿಗಳು ಹೇಳಿಕೆಯಲ್ಲಿ ದೂರಿದ್ದಾರೆ.

ಅಲ್ಲದೇ ನಿರ್ದೇಶಕರು ಶಾಸ್ತ್ರೀಯ ಕನ್ನಡವು ಸ್ವಾಯತ್ತತೆ ಪಡೆಯುವಷ್ಟು ಬೆಳವಣಿಗೆ ಆಗಿಲ್ಲವೆಂದು ಕೇಂದ್ರಕ್ಕೆ ತಪ್ಪು ಮಾಹಿತಿಯನ್ನು ನೀಡಿರುವುದು ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಭಾರತೀಯ ಭಾಷಾಜ್ಞಾನವುಳ್ಳ ಯಾರೂ ಕೂಡ ಹೀಗೆ ಬರೆಯಲು ಸಾಧ್ಯವಿಲ್ಲ. ಹೀಗೆ ಬರೆಯುವುದರ ಮೂಲಕ ಡಿ.ಜಿ.ರಾವ್ ಅವರು ಭಾರತೀಯ ಭಾಷಾ ಸಂಸ್ಥಾನಕ್ಕೂ, ಭಾಷಾ ವಿಜ್ಞಾನಕ್ಕೂ ಅವಮಾನ ಮಾಡಿದ್ದಾರೆ. ಮಾತ್ರವಲ್ಲದೆ, ಸ್ವಾಯತ್ತತೆಗೆ ಸಂಬಂಧಿಸಿದಂತೆ ಕೇಂದ್ರದ ಸಂಶೋಧನ ಕಾರ್ಯಗಳ ಪ್ರಗತಿಯನ್ನು ಹಿನ್ನಡೆಗೊಳಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿ ಈಚೆಗೆ ಹಾಲಿ ಸಂಶೋಧನ ಸಿಬ್ಬಂದಿಯನ್ನು ಬದಲಿಸುವ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಧ್ಯಪ್ರವೇಶಿಸಿ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ಸ್ಥಾನಮಾನ ದೊರಕಿಸಿಕೊಳ್ಳಲು ತುರ್ತಾಗಿ ಕ್ರಮಕೈಗೊಳ್ಳುವುದು. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹಿನ್ನೆಡೆಯುಂಟು ಮಾಡುವ ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಪ್ರಭಾರಿ ನಿರ್ದೇಶಕರು ಹೊರಡಿಸಿದ ಕಾನೂನುಬಾಹಿರವಾದ ಹೊಸ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆಯಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರೊ. ನಂಜರಾಜೇ ಅರಸ್, ಜಿ.ಎಸ್.ಜಯದೇವ, ಪ್ರೊ. ಕೃಷ್ಣಮೂರ್ತಿ ಹನೂರು, ಡಾ.ಬಸವರಾಜ ಕಲ್ಗುಡಿ, ಪ.ಮಲ್ಲೇಶ್, ಡಾ.ಓ.ಎಲ್.ನಾಗಭೂಷಣಸ್ವಾಮಿ, ಡಾ.ಚಂದ್ರಶೇಖರ ನಂಗಲಿ, ಪ್ರೊ.ಎನ್.ಬೋರಲಿಂಗಯ್ಯ,
ಡಾ.ರಾಜಪ್ಪ ದಳವಾಯಿ, ಡಾ.ಕಾಳೇಗೌಡ ನಾಗವಾರ, ಜಿ.ಪಿ.ಬಸವರಾಜ, ಡಾ.ಅರವಿಂದ ಮಾಲಗತ್ತಿ, ಡಾ.ನಟರಾಜ್ ಬೂದಾಳು, ನಾ.ದಿವಾಕರ, ಡಾ.ವೀರಣ್ಣ ರಾಜೂರ, ವೆಂಕಟೇಶ ಮಾಚಕನೂರು, ಡಾ.ಬಸವರಾಜ್ ಮೈಸೂರು, ಡಾ.ಬಸವರಾಜ ಸಾದರ, ಡಾ.ದೇವರ ಕೊಂಡಾರೆಡ್ಡಿ, ಡಾ.ಕೇಶವ ಶರ್ಮ, ಪ್ರೊ. ಪಂಡಿತಾರಾಧ್ಯ ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ ಇತರರಾಗಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಸಂಗೀತ, ಕನ್ನಡ ಮತ್ತು ಕನ್ನಡಿಗರು: ಹತ್ತೊಂಬತ್ತನೇ ಶತಮಾನದ ಮೈಸೂರು ಸಂಸ್ಥಾನದ ಕೆಲವು ನೋಟಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ವಿರೋಧಿ ಡಿ.ಜಿ.ರಾವ್ ಮೊದಲು ಸಿಐಐಎಲ್ ನಿಂದ ತೊಲಗಬೇಕು.

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...