Homeಮುಖಪುಟಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

- Advertisement -
- Advertisement -

ನಿಂತಿರುವವನಿಗೆ ಗೊತ್ತಾಗದ ಹಾಗೆ ಅವನ ಚಡ್ಡಿ ಕಳಚಿದರೆ ಅವನೇ ಸಾಹುಕಾರ (ಯಜಮಾನ)’ ಎಂಬುದು ಪಲಾಸ ಸಿನೆಮಾದಲ್ಲಿ ಬರುವ ದೊಡ್ಡ ಯಜಮಾನನ ಡೈಲಾಗ್. ಮೇಲ್ಜಾತಿ ಭೂಮಾಲೀಕರ ಯಜಮಾನಿಕೆಯ ದರ್ಪ ದಬ್ಬಾಳಿಕೆಗೆ ನಲುಗಿದ ಕೆಳಜಾತಿಯ ಸಮುದಾಯ. ದೌರ್ಜನ್ಯವನ್ನು ಸಹಿಸದೆ, ಎಚ್ಚೆತ್ತ ಕೆಳಜಾತಿಯ ಯುವಕರು ಹಾಗೂ ಭೂಮಾಲೀಕನ ನಡುವೆ ನಡೆಯುವ ಸಂಘರ್ಷದ ಕತೆಯೇ “ಪಲಾಸ 1978” ಸಿನೆಮಾ.

ಟಾಲಿವುಡ್ ಎಂದಾಕ್ಷಣ ಬಾರಿ ಬಡ್ಜೆಟ್‍ನ ಹಾಗೂ ಅಬ್ಬರಿಸಿ ಬೊಬ್ಬಿರಿಯುವ ಹಿರೋಗಳ ಸಿನೆಮಾಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಆಗಾಗ ತೆಲುಗು ಸಿನೆಮಾ ರಂಗದಲ್ಲಿಯೂ ಸಾಮಾಜಿಕ ಕಳಕಳಿಯುಳ್ಳ ಸಿನೆಮಾಗಳು ಮಿಣುಕು ಹುಳುಗಳಂತೆ ಬಂದು ಹೋಗುತ್ತಲೇ ಇವೆ. ಪಲಾಸ 1978 ಸಿನೆಮಾ ಇತ್ತೀಚೆಗೆ ತೆರೆಕಂಡ ಅಂತಹದ್ದೇ ಒಂದು ಗಮನಾರ್ಹ ಸಿನೆಮಾ.

ಈ ಸಿನೆಮಾ ಗ್ರಾಮೀಣ ಭಾರತದ ಜಾತಿ ವ್ಯವಸ್ಥೆಯ ವಾಸ್ತವಗಳನ್ನು ಚರ್ಚೆ ಮಾಡುವ ದಿಕ್ಕಿನಲ್ಲಿ ಯಶಸ್ವಿಯಾಗಿದೆ. ಮೋಹನ್ ರಾವ್, ರಂಗರಾವ್ ಎಂಬ ಕೆಳಜಾತಿಯ ಯುವಕರು ಮತ್ತು ಆಸ್ತಿ ಅಂತಸ್ತು ಇರುವ ಮೇಲ್ಜಾತಿಯ ಇಬ್ಬರು ಸಹೋದರರ ನಡುವೆ ನಡೆಯುವ ಕಥೆಯಾಗಿದ್ದರೂ ಸಹ, ಜಾತಿ ವ್ಯವಸ್ಥೆ ಎಂಬ ಜೇಡರಬಲೆಯಲ್ಲಿ ಸಿಕ್ಕಿಕೊಳ್ಳುವ ದಲಿತರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಇದು ತೋರಿಸಿದೆ.

ಸಿನೆಮಾದಲ್ಲಿ ಬರುವ ಸಬಾಸ್ಟಿಯನ್ ಎಂಬ ಪೊಲೀಸ್ ಪಾತ್ರ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ ಹಾಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು, ಆಗಲೇ ನಮ್ಮ ಉದ್ದಾರ ಎಂಬ ಚರ್ಚೆಯನ್ನು ಎತ್ತುತ್ತದೆ. ಆದರೆ, ಜಾತಿ ವ್ಯವಸ್ಥೆ ತಾನು ಚಾಚಿರುವ ಕಬಂಧಬಾಹುಗಳನ್ನು ಕಾರ್ಯಂಗ, ಶಾಸಕಾಂಗವಲ್ಲದೇ ನ್ಯಾಯಾಂಗದವರೆಗೂ ಎಷ್ಟರ ಮಟ್ಟಿಗೆ ವಿಸ್ತರಿಸಿದೆ ಎಂಬುದು ಸಬಾಸ್ಟಿಯನ್‍ಗೆ ಅರ್ಥವಾಗುವುದು, ಆತ ನಡೆಸುತ್ತಿದ್ದ ಕೇಸ್ ಸೋಲುಂಡ ಸಂದರ್ಭದಲ್ಲಿ. ಪೊಲೀಸ್ ಆಗಿದ್ದ ಸಬಾಸ್ಟಿಯನ್ ಕೊನೆಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅನಿವಾರ್ಯತೆಗಳನ್ನು ಎದುರಿಸಲೇಬೇಕೆಂದು ಮೋಹಾನ್‍ರಾವ್‍ಗೆ ಚಿಕ್ಕ ಸಾಹುಕಾರನನ್ನು ಕೊಲ್ಲಲು ಹೇಳುತ್ತಾನೆ.

ಸಬಾಸ್ಟಿಯನ್ ಈ ಮೂಲಕ ಮೇಲ್ಜಾತಿಯ ದೌರ್ಜನ್ಯದ ಮನಸ್ಥಿತಿಯನ್ನು ಕೊಲ್ಲಲು ಇರುವ ದುಬಾರಿ ಸಾಧ್ಯತೆಗಳಿಗೆ ಪ್ರತೀಕವಾಗಿ ನಿಲ್ಲುತ್ತಾನೆ. ಸಬಾಸ್ಟಿಯನ್ ಮತ್ತು ಮೋಹನ್ ರಾವ್ ಚರ್ಚೆಗಳು ದಲಿತ ಯುವಜನರ ಹೊಸಪೀಳಿಗೆಯ ಪ್ರಶ್ನೆಗಳಂತೆ ಕಾಣಿಸುತ್ತವೆ. ಇನ್ನೂ ದೊಡ್ಡ ಯಜಮಾನನ ಮನೆಯಲ್ಲಿ ನಡೆಯುವ ಚರ್ಚೆಗಳು ಮೇಲ್ಜಾತಿಯ ಯಜಮಾನರ ಕುತಂತ್ರಗಳನ್ನು ಬಯಲುಗೊಳಿಸುತ್ತವೆ.
ಪಲಾಸ ಸಿನೆಮಾ ಗ್ರಾಮೀಣ ಭಾಗದಲ್ಲಿನ ಕೆಳಜಾತಿಯ ಜನರು ಜಾತಿಯ ಕೀಳರಿಮೆಯ ಕಾರಣಕ್ಕೆ ಪ್ರತಿಕ್ಷಣ ಹೇಗೆ ನಿಂದನೆ, ಅಪಮಾನಗಳ ಜೊತೆಗೆ ಗುದ್ದಾಡಬೇಕು ಎಂಬುದನ್ನು ತೋರಿಸಿದೆ.

1978ರಲ್ಲಿ ಪಲಾಸ ಎಂಬ ಹಳ್ಳಿಯಲ್ಲಿ ನಡೆದ ನೈಜ ಘಟನೆಗಳ ಆಧಾರವಾಗಿ ಬಂದ ಈ ಸಿನೆಮಾ 2020ರಲ್ಲೂ ನಡೆಯತ್ತಿರುವ ಜಾತಿದೌರ್ಜನ್ಯಗಳು, ಜಾತಿ ಕಾರಣಕ್ಕಾಗಿ ನಡೆಯುವ ಕೊಲೆಗಳು, ಅತ್ಯಾಚಾರಗಳನ್ನು ಹೇಗೆ ನೋಡಬೇಕೆಂಬುದನ್ನು ತೋರಿಸುತ್ತದೆ. ಈಗಲೂ ಹಳ್ಳಿಗಳಲ್ಲಿ ಮೇಲ್ಜಾತಿ ಕೆಳಜಾತಿಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಸಾಮಾನ್ಯವಾಗಿವೆ ಇನ್ನೂ ಸಹ ಜಾತಿ ಮನಸ್ಥಿತಿಯೆಂಬುದು ಬದಲಾಗದೇ ಉಳಿದುಬಿಟ್ಟಿರುವುದಕ್ಕೆ ಈ ಸಿನೆಮಾ ಸಾಕ್ಷಿಯನ್ನೊದಗಿಸಿದೆ.

ಪಲಾಸ ಗ್ರಾಮೀಣ ಭಾರತದ ದೈನಂದಿನ ವಾಸ್ತವಕ್ಕೆ ಸಾಕ್ಷಿಯಾಗಿ ನಿಂತಿದೆ. ಚಿಕ್ಕ ಯಜಮಾನನ ಪಾತ್ರ ಮಾಡಿರುವ ರಘುಕುಂಚೆ ಈ ಸಿನೆಮಾಕ್ಕೆ ವಿಶೇಷವಾದ ಸಂಗೀತವನ್ನು ನೀಡಿದ್ದಾರೆ. ಹಾಡು ಕುಣಿತವನ್ನು ರಕ್ತಗತವಾಗಿಸಿಕೊಂಡಿರುವ ಕೆಳಜಾತಿಯ ಜನಕ್ಕೆ ತಮ್ಮ ಕಲೆಯೂ ಸಹ ದೊಡ್ಡವರ ಕಣ್ಣುಕುಕ್ಕುವ ರೀತಿ ಮೋಹನ್ ರಾವ್‍ಗೆ ಬಾಲ್ಯದಲ್ಲಿಯೇ ಅನುಭವವಾಗುತ್ತದೆ. ಇದು ಕಲೆಯಲ್ಲಿನ ಜಾತಿ ರಾಜಕಾರಣವನ್ನು ಎತ್ತಿತೋರಿಸುತ್ತದೆ. ಪಲಾಸ ಸಿನೆಮಾ ಖಂಡಿತ ಟಾಲಿವುಡ್‍ನಲ್ಲಿ ದಲಿತರ ಸಮಸ್ಯೆಗಳನ್ನು ಪ್ರಶ್ನಿಸುವ ಮತ್ತು ಮತ್ತು ಜಾತಿ ನಿರ್ಮೂಲನೆಯ ಬಗ್ಗೆ ಚರ್ಚಿಸುವ ಸಿನೆಮಾಗಳಿಗೆ ಮೈಲಿಗಲ್ಲಾಗಲೆಂದು ಆಶಿಸೋಣ. ಇನ್ನು ನಿರ್ದೇಶಕ ಕರಣಕುಮಾರ ಮೊದಲ ಸಿನೆಮಾದಲ್ಲೇ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...