Homeಕರ್ನಾಟಕಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್

ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್

ಸಾಂಕ್ರಾಮಿಕ ರೋಗದ ಭೀತಿಯ ಸಂದರ್ಭದಲ್ಲಿ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಮತ್ತು ಪತ್ರಿಕಾ ವಿತರಕರ ಸೇವೆಯನ್ನು ಕಡೆಗಣಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

- Advertisement -
- Advertisement -

ಕೊರೊನ ಸಾಂಕ್ರಾಮಿಕ ರೋಗ ಹರಡಿರುವ ಅವಧಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಮಾಧ್ಯಮ ಸಂಸ್ಥೆಗಳ ಪತ್ರಕರ್ತರು, ಮತ್ತು ಪತ್ರಿಕಾ ವಿತರಕರು ಮೃತಪಟ್ಟರೆ ಅವರ ಕುಟುಂಬಗಳಿಗೆ 50 ಲಕ್ಷ ಪರಿಹಾರ ನೀಡಲು ಪರಿಗಣಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ಸೂರತ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಸಾಂಕ್ರಾಮಿಕ ರೋಗದ ಭೀತಿಯ ಸಂದರ್ಭದಲ್ಲಿ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಮತ್ತು ಪತ್ರಿಕಾ ವಿತರಕರ ಸೇವೆಯನ್ನು ಕಡೆಗಣಿಸಲಾಗದು. ಇವರೂ ಕೂಡ ವೈದ್ಯರು, ನರ್ಸ್ ಗಳು, ಸರ್ಕಾರಿ ಸಮಿತಿಗಳು ಮತ್ತು ಇತರೆ ಕೋವಿಡ್ ವಿರುದ್ದ ಹೋರಾಡುತ್ತಿರುವವರಂತೆ ಅಗತ್ಯಸೇವೆಗಳ ಅಡಿಯಲ್ಲಿ ಬರುತ್ತಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಶ್ವವ್ಯಾಪಿ ಭೀತಿಯನ್ನು ಮೂಡಿಸಿರುವ ಕೊರೊನಾ ಸಾಂಕ್ರಾಮಿಕ ರೋಗದ ಪರಣಾಮಗಳ ಕುರಿತು ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ದೇಶದ ಜನರಿಗೆ ಸಮರ್ಪಕ ಮಾಹಿತಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಕೋರ್ಟ್ ಹೇಳಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪ್ರಾಮುಖ್ಯತೆಯನ್ನು ಕಡೆಗಣಿಸಲಾಗದು. ಸಂವಿಧಾನದ ಆರ್ಟಿಕಲ್ 19 (1) (ಎ)ರಂತೆ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯದ ಜೊತೆಗೆ  ಎಲೆಕ್ಟ್ರಾನಿಕ್ ಮತ್ತು ಸಂವಹನನ ಮೂಲಕ ಮಾಹಿತಿ ಹಕ್ಕನ್ನು ತಿಳಿಯುವ ಹಕ್ಕು ಇದೆ. ಹಾಗಾಗಿ ಅಭವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಮಹತ್ವವಿದೆ ಎಂದು ಹೇಳಿದೆ.

ಕೋವಿಡ್ ಅವಧಿಯನ್ನು ಸವಾಲಾಗಿ ಸ್ವೀಕರಿಸಿದ ಪತ್ರಕರ್ತರು ಕೊರೊನ ರೋಗದ ಪರಿಣಾಮಗಳನ್ನು ಜನರಿಗೆ ತಿಳಿಸುವ ಮೂಲಕ ಕರ್ತವ್ಯ ಮೆರೆದಿದ್ದಾರೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.


ಓದಿ: ಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...