Homeರಾಜಕೀಯ“ನೀವು ಜೈಲಲ್ಲಿರೋದು, ನಾನು ಪಾರಿಜಾತದಲ್ಲಿರೋದು ಸರೀನಾ”

“ನೀವು ಜೈಲಲ್ಲಿರೋದು, ನಾನು ಪಾರಿಜಾತದಲ್ಲಿರೋದು ಸರೀನಾ”

- Advertisement -
- Advertisement -

ಕೊಡುಗೈ ದಾನಿಯಾದ ಆದುನಿಕ ಕರ್ಣ ನಮ್ಮ ಬಳ್ಳಾರಿ ಗಾಲಿಯನ್ನು ಹಿಡಿದು ಜೈಲಿಗೆ ಹಾಕಿದ ಕ್ಷಣ ನೆನಸಿಕೊಂಡರೆ ಮನಸ್ಸಿಗೆ ವೈರಾಗ್ಯ ಆವರಿಸಿಕೊಂಡು ಮನಸ್ಸು ಆರ್ದ್ರಗೊಳುತ್ತದಲ್ಲಾ. ಇದಕ್ಕೆ ಕಾರಣವನ್ನು ರೆಡ್ಡಿಯನ್ನೆÃ ಕೇಳಿ ತಿಳಿದುಕೊಂಡರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್‌ಟೋನ್: ‘ಏನಿದೀ ಗ್ರಹಚಾರವೋ ಏನಿದೀ ವನವಾಸವೊ ಏನ ಮಾಡಿದನೆಂದು ಈ ಪರಿ ಎನಗೆ ತಂದೆಯೋ ಪಶುಪತೀ…. ಏನಿದೀ…..’ “ಹಲೋ ಯಾರು”
“ಸಾರ್ ನಾನು ಪತ್ರಕರ್ತ ಯಾಹು ಅಂತ”
“ಯಾಹು ಅಂತ್ಲ ಏನ್ಹೆÃಳಿ”
“ತಾವ್ಯಾರು ಸಾರ್”
“ನಾನು ಜೈಲ್ ಸೂಪರ್‌ಡೆಂಟ್ ಏನಾಗಬೇಕು ಕೇಳಿ”
“ಜನಾರ್ದನ ರೆಡ್ಡಿಯವರು ಪತ್ರಕರ್ತರಿಗೆ ಪರಮ ಮಿತ್ರರು ಸಾರ್. ನಮಗೆಲ್ಲ ತುಂಬ ಸಹಾಯ ಮಾಡಿದಾರೆ. ಅವುರ ಜೊತೆ ಒಂದೆರಡು ಮಾತಾಡಬೇಕು. ಅವುಕಾಶ ಮಾಡಿಕೊಡಿ ಸಾರ್”
“ಆಯ್ತು ಮಾತಾಡಿ”
“ಹಲೋ”
“ನಾನು ಸಾರ್ ಯಾಹು”
“ಯಾಹು ಅವರೆ ನೀವು ಫೋನ್ ಮಾಡಿದ್ದಕ್ಕೆ ತುಂಬ ಸಂತೋಷ ಆಯ್ತು. ನನ್ನ ಕೈಯಿಂದ ಲಕ್ಷಲಕ್ಷ ಹಣ ಪಡುಕೊಂಡ ಯಾವ ಪತ್ರಕರ್ತರು ಇದುವರೆಗೂ ನನಗೆ ಫೋನ್ ಮಾಡಿಲ್ಲ. ನೀವು ಮಾಡಿದ್ದಕ್ಕೆ ನನಗೆ ಸಂತೋಷ ಆಗಿದೆ, ನಮ್ಮ ಪಾರಿಜಾತದಲ್ಲಿ ಕುಳಿತಿರಿ ಬಂದುಬಿಡ್ತಿÃನಿ”
“ಏನು ಸಾರ್ ಪಾರಿಜಾತ ಅನ್ನೊÃ ಬಂಗ್ಲೆÃಲಿ ಬಡವನಾದ ನನ್ನಂಥ ಪತ್ರಕರ್ತ ಇರೋದು. ನೀವು ಪರಪ್ಪನ ಅಗ್ರಹಾರದ ಜೈಲಿನ ಕೋಣೆಲಿರೋದು ನನಿಗ್ಯಾಕೊ ದುಖಃ ಆಗ್ತಾಯಿದೆ ಸಾರ್”
“ನೋಡಿ ಕಷ್ಟಗಳು ಮನುಷ್ಯನಿಗಷ್ಟೆÃ ಬರೋದು ಗುಡ್ಡಗಳಿಗಲ್ಲ ಸಹಿಸಿಕೊಳ್ಳಬೇಕು”
“ಗುಡ್ಡಗಳಿಗೂ ಕಷ್ಟ ಬರುತ್ತೆ ಸಾರ್. ಭೂದೇವಿಯ ಸ್ತನಗಳಂಗೆ ಕಾಣುತಿದ್ದ ಸುಂದರವಾದ ಬಳ್ಳಾರಿ ಜೋಡಿ ಗುಡ್ಡಗಳು ನಿರ್ನಾಮ ಆಗಿ ನಮ್ಮ ವೈರಿ ರಾಷ್ಟç ಚೀಣಾದಲ್ಲಿವೆಯಂತೆ. ಆದ್ದರಿಂದ ಕಷ್ಟ ಮನುಷ್ಯರಿಗಷ್ಟೆÃ ಅಲ್ಲ ನಿಸರ್ಗಕ್ಕೂ ಬಂದಿದೆ ಸಾರ್. ನಿಸರ್ಗಪ್ರಿಯನಾದ ತಮಗೆ ಕಷ್ಟ ಬಂದಿದ್ದನ್ನು ನಾನು ಸಹಿಸಿಗಳಕ್ಕಾಗ್ತಯಿಲ್ಲ”
“ನೋಡಿ, ನಾಲ್ಕು ವರ್ಷ ಜೈಲಲ್ಲಿ ಇದ್ದ ನನಗೆ ನಾಲ್ಕು ದಿನ ಇರೋದು ಕಷ್ಟ ಅಲ್ಲ. ನನ್ನ ಹಳೆ ಕೊಠಡಿಯನ್ನ ನಮ್ಮ ಜೈಲರ್ ಮಿತ್ರರು ನನ್ನ ಸ್ವಂತ ಕೊಠಡಿ ತರ ಮಾಡಿದಾರೆ ಗೊತ್ತ”
“ಅದನ್ನ ಪರ್‌ಚೇಸ್ ಮಾಡಿದ್ರೆ ಹೇಗೆ ಸಾರ್”
“ಯಾಕೆ ಹಾಗೇಳ್ತಿರಿ”
“ವಿನಾಕಾರಣ ಒಬ್ಬ ಅಮಾಯಕನ್ನ ಇ.ಡಿ ಡೀಲ್‌ನಲ್ಲಿ ಸಿಕ್ಕಿಸಿ ಜೈಲಿಗಾಕಿದ ನೆನಪಿಗೆ ಮತ್ತು ಸರಕಾರ ಅದೇಳಿದಂಗೆ ಕೇಳೊ ಈ ಪೊಲೀಸರಿಗೆ ಧಿಕ್ಕಾರದ ರೂಪವಾಗಿ ಅದೊಂದು ಸ್ಮಾರಕವಾಗಲಿ, ಅಂತ ಹೇಳಿದೆ ಸಾರ್”
“ನಿಮ್ಮ ಅಲೋಚನೆ ಸರಿ, ಅದ್ರೆ ಜೈಲಿರೋವರಿಗೆ ಅದನ್ನ ಗಾಲಿ ಜನಾರ್ದನ ರೆಡ್ಡಿ ಕೊಠಡಿ ಅಂತ ನಾಮಕರಣ ಮಾಡಿಬಿಡ್ತಾರೆ. ಆದ್ದರಿಂದ ಅದನ್ನ ಕೊಳ್ಳೊÃದು ಬೇಕಾ? ನಾನು ಬೇಗ ಬರ್ತೀನಿ. ನಮ್ಮ ಮನೇಲಿ ಕುಳಿತಿರಿ”
“ಕಷ್ಟ ಆಗುತ್ತೆ ಸಾರ್. ಸಾವಿರಾರು ಕೋಟಿ ಒಡೆಯ ಕೊಡುಗೈ ದಾನಿ ವಿನಾಕಾರಣ ಜೈಲಿನಲ್ಲಿರುವಾಗ ಅಂತವನ ಮನೇಲಿದ್ರೆ ದುಃಖ ತಡಿಯಕ್ಕಾಗಲ್ಲ. ಯಾಕಂದ್ರೆ ಸಾವಿರಾರು ಕೋಟಿಯನ್ನ ಕೈಯಲ್ಲೂ ಮುಟ್ಟದೆ ವ್ಯವಹಾರ ಮಾಡಿದಂತಹ ನೀವು ಇಪ್ಪತ್ತು ಕೋಟಿಗೆ ಕೈಚಾಚಿದ್ರಿ ಅನ್ನದನ್ನ ಇಡೀ ಕರ್ನಾಟಕ ನಂಬುತಾಯಿಲ್ಲ ಸಾರ್. ಅದೊಂದೇ ಸಮಾಧಾನದ ವಿಷಯ ಸಾರ್”
“ದೇವರೂ ಕೂಡ ನಂಬುತಾಯಿಲ್ಲ. ಯಾಕೆ ಅಂದ್ರೆ ಭಗವಂತನೇ ನನಗೆ ಅಷ್ಟೊಂದು ಐಶ್ವರ್ಯ ಕೊಟ್ಟಿದ್ದಾನೆ. ನಾನು ಆತನಿಗೇ ಒಂದು ಕಿರೀಟವನ್ನ ಕೊಟ್ಟೆ ಗೊತ್ತ”
“ಕಿರೀಟ ಈಸಗೊಂಡ ತಿಮ್ಮಪ್ಪ ನಿಮ್ಮನ್ನ ಕಾಪಾಡಬೇಕಿತ್ತು ಸಾರ್”
“ಕಾಪಾಡ್ತನೆ ಸ್ವಲ್ಪ ತಡ ಆಗಬಹುದು. ಒಬ್ಬ ಪೋಲಿಸ್ ಮಗನನ್ನ ಕುಬೇರನನ್ನಾಗಿ ಮಾಡಿದ ಭಗವಂತ ನನ್ನನ್ನ ಯಾವತ್ತೂ ಕೈ ಬಿಟ್ಟಿಲ್ಲ. ನನ್ನನ್ನ ಅಪರಾಧಿ ಅಂತ ಪರಿಗಣಿಸೋದಕ್ಕೆ ಹೋರಾಡ್ತಯಿರೊ ನನ್ನ ವೈರಿಗಳಿಗೆ ಸರಿಯಾದ ಉತ್ತರ ಕೊಡೋದಕ್ಕೆ ನನ್ನ ಮಗಳ ಮದುವೆಯನ್ನು ಸಾವಿರಾರು ಕೋಟಿ ಖರ್ಚು ಮಾಡಿ ಮಾಡಿದೆ. ಅದೂ ನೋಟು ಬ್ಯಾನಾಗಿದ್ದ ಸಂದರ್ಭ. ಆಗೆಲ್ಲ ಭಗವಂತ ನಮಗೆ ಸಹಾಯ ಮಾಡಿದಾನೆ”
“ನೀವು ಬಿ.ಜೆ.ಪಿ.ಗೂ ಭಾರಿ ಸಹಾಯ ಮಾಡಿದ್ರಲ್ಲ ಸಾರ್”
“ಮೊದಲ ಸಮ್ಮಿಶ್ರ ಸರಕಾರ ರಚನೆಯಾದದ್ದೆÃ ನನ್ನಿಂದ. ನಾನು ಕುಮಾರಸ್ವಾಮಿಗೆ ನೂರೈವತ್ತು ಕೋಟಿ ರೂಪಾಯಿ ಕೊಟ್ಟಾಗ ಆತ ಎಲ್ಲ ಶಾಸಕರನ್ನು ರೆಸಾರ್ಟಿಗೆ ತಕ್ಕೊಂಡು ಹೋಗಿ ನೇರ ವಿಧಾನಸೌಧದ ಮುಂದಕ್ಕೆ ತಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ತಗೊಂಡ್ರು”
“ಹೌದ ಸಾರ್”
“ಇದು ನೂರಕ್ಕೆ ಇನ್ನೂರು ಪರಸೆಂಟು ನಿಜ. ಆದ್ರೆ ಅದನ್ನ ಅಲ್ಲಗಳದ್ರು. ಅದಕ್ಕೆ ಅವರಿಗೆ ಬೈಪಾಸ್ ಸರ್ಜರಿ ಆಯ್ತು”
“ಇಸಗೊಂಡ ದುಡ್ಡನ್ನ ಇಲ್ಲ ಅಂದ್ರೆ ಬೈಪಾಸಾಗುತ್ತ ಸಾರ್”
“ಅದು ಭಗವಂತನಿಗೆ ಬಿಟ್ಟ ವಿಚಾರ. ಬೈಪಾಸಾಗಬಹುದು ಅಥವಾ ಮಕ್ಕಳೆ ತೀರೋಗಬಹುದು. ಏನಾದ್ರು ಆಗಬಹುದು”
“ನಿಮ್ಮ ತರ್ಕ ನಿಜ ಸಾರ್ ನೀವೀಗಾಗ್ಲೆ ಹೇಳಿರೊ ತರ ವಿನಾಕಾರಣ ನಿಮ್ಮನ್ನ ಜೈಲಿಗಾಕಿದ ಸಿದ್ದರಾಮಯ್ಯನವರ ಮಗ ತೀರೋದ. ನಿಮ್ಮತ್ರ ಹಣ ತಗೊಂಡು ಇಲ್ಲವೇ ಇಲ್ಲ ಅಂದ ಕುಮಾರಣ್ಣನವರಿಗೆ ಬೈಪಾಸಾಯ್ತು. ಇದೇ ಈಗ ಅ್ಯಂಬಿಡೆಂಟ್ ಕಂಪನಿ ಮಾಲಿಕ ಸಯ್ಯದ್ ಅಹಮದ್ ಹತ್ರ ಇಪ್ಪತ್ತು ಕೋಟಿ ತಗೊಂಡು ಆತನಿಗೂ ನನಗೂ ಯಾವ ವ್ಯವಹಾರವೂ ನಡೆದಿಲ್ಲ, ನನ್ನ ಜೊತೆ ಇರೋ ಆತನ ಫೋಟೊ ಯಾವಾಗಲೊ ಆತನೇ ಬಂದು ನನಗೆ ಗೊತ್ತಿಲ್ಲದಂಗೆ ತಗಿಸಿಕೊಂಡಿದ್ದು ಅಂತ ನೀವು ಏನೇ ಸಬೂಬು ಹೇಳಿದ್ರೂ ಕೂಡ ಜೈಲುಪಾಲಾದ್ರಿ. ಇದನ್ನೆಲ್ಲಾ ನೋಡಿದ್ರೆ ನಿಮ್ಮ ಭಗವಂತನ ಕ್ರಮಗಳು ಒಂಥರಾ ಸರಿಯಾಗಿವೆ ಸಾರ್”
“ನೀವು ಹೇಳಿದ ಮಾತುಗಳು ಅರ್ಥ ಆಗ್ತಾಯಿಲ್ಲ”
“ಹೊರಗಡೆ ಬಂದ್ ಮೇಲೆ ನಿಮ್ಮ ವಕೀಲರ ಪೀಜು ಕೊಡಿ ಸಾರ್”
“ನಮ್ಮದು ಕೊಡುಗೈ ಕುಟುಂಬ”
“ಥೂ..ಥೂ…ಥೂತ್ತೆÃರಿ!!”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...