Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...