Homeಮುಖಪುಟಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ...

ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ…

- Advertisement -
- Advertisement -

ಮೋದಿಯವರ ಕಳೆದ ಆರು ವರ್ಷಗಳ ಅವಧಿಯಲ್ಲಿ ಹಲವಾರು ವಿಷಯಗಳಲ್ಲಿ ಸತತ ವೈಫಲ್ಯ ಕಂಡಿದ್ದಾರೆ. ಈ ಒಂದು ವರ್ಷದಿಂದಂತೂ ವೈಫಲ್ಯಗಳ ಸಂಖ್ಯೆ ಏರುತ್ತಲೇ ಇದೆ. ಆದರೆ ಇದರಿಂದ ಮೋದಿಯವರ ಜನಪ್ರಿಯತೆ ಅಥವಾ ಜನಬೆಂಬಲ ಕಡಿಮೆಯಾಗಿಲ್ಲ. ಏಕೆ? ಸತತ ವೈಫಲ್ಯಗಳ ನಡುವೆಯೂ ಅವರು ಭಾರೀ ಜನ ಬೆಂಬಲ ಹೊಂದಿರುವುದು ಹೇಗೆ?

ಅದಕ್ಕೆ ಉತ್ತರ ಹುಡುಕುವ ಮೊದಲು ಮೋದಿ 2.0 ವೈಫಲ್ಯಗಳ ಪಟ್ಟಿ ನೋಡೋಣ.

1. CAA/NRC ತರುತ್ತೇವೆ ಅಂತ ಜನಗಳ ಮಧ್ಯೆ ಭಯದ ವಾತಾವರಣ ಮೂಡಿಸಿದ್ದು.

2. GDP ಕಳೆದ ಕೆಲವು ವರ್ಷದಿಂದ ಸತತ ಇಳಿಕೆ ಆಗುತ್ತಿದ್ದು JAN-MAR ತ್ರೈಮಾಸಿಕದಲ್ಲಿ 3.1% ಕುಸಿದಿದೆ. ಅಂದರೆ ಇದು ಲಾಕ್‌ಡೌನ್ ಆಗುವ ಮುಂಚಿನ ತಿಂಗಳಿನ ಪರಿಸ್ಥಿತಿಯಾದರೆ ಲಾಕ್‌ಡೌನ್‌ ನಂತರದ್ದು ಹೇಗಿರುತ್ತದೆ? ಈ ಜಿಡಿಪಿ ದರ ಕಳೆದ 11 ವರ್ಷದಲ್ಲೇ ಅತಿ ಕಡಿಮೆ. ಅಲ್ಲದೇ ಇದು ನೆರೆಹೊರೆಯ ಪಾಕಿಸ್ತಾನ,  ಬಾಂಗ್ಲಾದೇಶಕ್ಕಿಂತ ಕಡಿಮೆ ಇದೆ.

3. ಕೆಟ್ಟ ವಿದೇಶಾಂಗ ನೀತಿಗಳಿಂದ ಪುಟ್ಟ ರಾಷ್ಟ್ರಗಳಾದ ನೇಪಾಳ, ಮಾಲ್ಡೀವ್ಸ್ ಭಾರತದ ವಿರುದ್ಧವೇ ಮಾತಾನಾಡುತ್ತಿರುವುದು.

4. ಚೀನಾ ದೇಶವು ಭಾರತದ ಗಡಿ ಒಳಗೆ ಅತಿಕ್ರಮ ಪ್ರವೇಶ ಮಾಡಿದೆ. ಆದರೂ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇರುವುದು.

5. ಈ ವರ್ಷದ ಜನವರಿ 30ರಂದೇ ಮೊದಲ ಕೊರೊನ ಪ್ರಕರಣ ￰ದಾಖಲಾದರೂ, ಮಾರ್ಚ್‌ ಮಧ್ಯಭಾಗದವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು.

6. ಫೆಬ್ರವರಿ 24 ರಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಕರೆಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿ ಗುಜರಾತ್, ಮಹಾರಾಷ್ಟ್ರದಲ್ಲಿ ಕೊರೊನ ವ್ಯಾಪಕವಾಗಿ ಹಬ್ಬಲು ಕಾರಣವಾಗಿದ್ದು.

7. ಕೊರೊನಾ ವ್ಯಾಪಕವಾಗಿ ಹರುಡುತ್ತಿದೆ ಎಂದು ಗೊತ್ತಿದ್ದರೂ ಮಧ್ಯಪ್ರದೇಶಕ್ಕೆ ತಮ್ಮ ಬಿಜೆಪಿ ಸರ್ಕಾರ ರಚಿಸುವುದಕ್ಕಾಗಿ ಜನರಿಗೆ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದು.

8. ದೇಶದ ಜನರಿಗೆ ಯಾವುದೇ ಮಾಹಿತಿ ಕೊಡದೆ ರಾತ್ರೋರಾತ್ರಿ ಅವೈಜ್ಞಾನಿಕವಾಗಿ ಲಾಕ್‌ಡೌನ್‌ ಘೋಷಿಸಿದ್ದು.

9. ವಲಸೆ ಕಾರ್ಮಿಕರಿಗೆ ಯಾವುದೇ ಸೌಲಭ್ಯ ಒದಗಿಸದೆ, ನಿರ್ಲಕ್ಷ್ಯ ಮಾಡಿದ್ದರಿಂದ ನೂರಾರು ಜನ ರಸ್ತೆಗಳಲ್ಲಿಯೇ ಪ್ರಾಣ ಬಿಟ್ಟಿದ್ದು,

10. ಮೊದಲೇ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು ಮುಚ್ಚುವ ಸ್ಥಿತಿಯಲ್ಲಿದ್ದವು. ಅವುಗಳ  ಪುನಶ್ಚೇತನಕ್ಕೆ ಸಾಕಷ್ಟು ಹಣಕಾಸಿನ ನೆರವು ಕೊಡದೆ 20ಲಕ್ಷ ಕೋಟಿ ಅನ್ನೋ ಸಾಲದ package ಘೋಷಿಸಿ ಮಾಡಿ ಲಕ್ಷಾಂತರ ವ್ಯಾಪಾರಸ್ಥರು ಬೀದಿಗೆ ಬಿಳೋ ಹಾಗೆ ಮಾಡಿದ್ದು.

ಇವೆಲ್ಲವೂ ಮೇಲ್ನೋಟಕ್ಕೆ ಕಾಣುವ ವೈಫಲ್ಯಗಳು. ಇನ್ನು ಬಹಳಷ್ಟು ವೈಫಲ್ಯಗಳು ಕಾಣವುದಿಲ್ಲ. ಆದರೆ  ಅದರ ಪರಿಣಾಮ ಮುಂದಿನ ದಿನಗಳಲ್ಲಿ ಕಾಣುತ್ತೇವೆ.

ಈಗ ಮೋದಿ ಜನ ಬೆಂಬಲದ ಹಿಂದೆ ಇವರು ಸತ್ಯವನ್ನು ತಿಳಿಯುವ. ಅಂದರೆ ಒಂದು ವ್ಯವಸ್ಥೆ ಹೇಗೆ ಮೋದಿಯನ್ನ ಅನಪೇಕ್ಷಿತ ನಾಯಕನ್ನನ್ನಾಗಿ ಮಾಡಿದ್ರು ಅನ್ನೋದನ್ನ ತಿಳ್ಕೊಳೋ ಸಣ್ಣ ಪ್ರಯತ್ನ ಮಾಡೋಣ.

ನಮ್ಮ ದೇಶದಲ್ಲಿ ಪುರಾಣ, ಪುಣ್ಯ ಕಥೆಗಳಿಗೆ ಕಮ್ಮಿ ಇಲ್ಲ. ಅದರಿಂದ ಬಹುಪಾಲು ಜನಕ್ಕೆ ದೇವರ ಮೇಲೆ ಅತೀವ ಭಯ ಮತ್ತೆ ಭಕ್ತಿ. ನಮಗೆ ದೇವರ ಮೇಲೆ ಇಷ್ಟು ಭಯ ಭಕ್ತಿ ಬರಕ್ಕೆ ಕಾರಣ ದೇವರುಗಳ ಮೇಲೆ ಇರೋ ಕಥೆಗಳು. ಈಗ ಯಾವುದೇ ದೇವರ ಕಥೆಗಳನ್ನು ನೋಡಿದ್ರೆ ನಮಗೆ ಅಲ್ಲಿ ದೇವರ ಹುಟ್ಟು, ಬಾಲ್ಯ, ಯೌವನ ಮತ್ತೆ ದೇವರಿಂದ ರಾಕ್ಷಸರ ಸಂಹಾರ ಆಗೋವರೆಗೂ ಅತಿರಂಜಿತವಾಗಿ ಇರುತ್ತೆ. ಈಗ ಮೋದಿಯವರ ಹುಟ್ಟು ತಗೋಳಿ. ಅದು ಬಡತನದಲ್ಲಿ ಆಗಿದ್ದು ಮನೆಯಲ್ಲಿ ಬಹಳ ಕಷ್ಟ ಇದ್ರೂ ಮೋದಿ ಸಾಮಾನ್ಯ ಬಾಲಕರಿಗಿಂತ ಸ್ವಾಭಿಮಾನಿ, ಚುರುಕು. ಮತ್ತು ಮೋದಿ ದೇಶ ಪ್ರೇಮ ಎಂತದ್ದು ಅಂದ್ರೆ ಟೀಗಳನ್ನ ಸೈನಿಕರಿಗೆ ಉಚಿತವಾಗಿ ಕೊಡ್ತಾ ಇದ್ರೂ. ಮೋದಿ ಧೈರ್ಯ ಎಂತದ್ದು ಅಂದ್ರೆ ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಹಿಡ್ಕೊಂಡು ಮನೆಗೆ ಬಂದಿದ್ರು. ಇದೊಂತರ ಶ್ರೀಕೃಷ್ಣ ಬಾಲ್ಯದಲ್ಲಿ ಕಾಳಿಂಗಮರ್ದನ ಮಾಡಿದ ರೀತಿ ಇಂತ ಕಟ್ಟು ಕಥೆಗಳನ್ನ ಜನಗಳ ತಲೇಲಿ ತುರುಕಿದ್ದು.

ಆಮೇಲೆ ಮದುವೆ ಆಗಿ ವಾರದಲ್ಲೇ ಹೆಂಡತಿ ಬಿಟ್ಟಿದ್ದನ್ನು ಎಲ್ಲ ಬಿಟ್ಟು ಸನ್ಯಾಸಿ ಆದ ಬುದ್ಧನಿಗೆ ಹೋಲಿಕೆ ಮಾಡೋದು. ಬುದ್ಧನ ತರ ಎಲ್ಲ ಬಿಟ್ಟು ಹಿಮಾಲಯಕ್ಕೆ ಹೋಗಿ ತಪಸ್ಸು ಮಾಡಿದ್ರು ಅಂತ, ಮೋದಿ ಸಾಮಾನ್ಯ ಜನರ ತರ ಊಟ, ನಿದ್ರೆ ಮಾಡಲ್ಲ ದಿನಕ್ಕೆ 18 ಘಂಟೆ ದುಡೀತಾರೆ. ಇದೆಲ್ಲ ಅವರ ಸ್ವಂತಕ್ಕೆ ಮಾಡಿಲ್ಲ. ಎಲ್ಲ ದೇಶಸೇವೆಗೇ ಅಂತ ನಂಬಿಸೋದು. ಒಂದು ರೀತಿ ಮೋದಿನ ದೇವರ ಸಮ ಇಲ್ಲ ಅದಕ್ಕಿಂತ ಜಾಸ್ತಿ ಅನ್ನೋ ತರ ಮಾಡಿದ್ದಾರೆ.

ಮೋದಿಗೇ ದುರ್ಬಲ ವಿರೋಧಿಗಳನ್ನು ಎದುರು ನಿಲ್ಲಿಸಲು ಮಾಧ್ಯಮದ ಪಾತ್ರ ಬಹಳಷ್ಟಿದೆ. ಪಾಕಿಸ್ತಾನ ಇರಬಹುದು ಇಲ್ಲ ರಾಹುಲ್ ಇರಬಹುದು. ಯಾವ ಕಡೆಯಿಂದ ಪಾಕಿಸ್ತಾನ ಇಂಡಿಯಾಗೇ ಸಮ ಇಲ್ಲ ಅನ್ನೋದು ಸಣ್ಣ ಮಕ್ಕಳಿಗೂ ಗೊತ್ತು. ಇದೆ ಮಾಧ್ಯಮ ಮೋದಿ ಬಂದ್ರೆ ಪಾಕಿಸ್ತಾನದ ಭಯ ಇರಲ್ಲ, ಪಾಕಿಸ್ತಾನನ ನಿರ್ನಾಮ ಮಾಡ್ತಾರೆ ಅಂತ ನಂಬಿಸಿದ್ದಾರೆ.

ಯಾವ ಮೋದಿ ಬಂದ್ರೆ ಹಿಂದೂ ಧರ್ಮದ ಪುನರುತ್ತಾನ ಆಗುತ್ತೆ ಅಂತ ಮಾಧ್ಯಮಗಳು ಹೇಳಿದ್ರೋ ಅದೇ ಮಾಧ್ಯಮ ಮತ್ತೆ ಹಿಂದೂ ಧರ್ಮ ಅಪಾಯದಲ್ಲಿದೆ ಅಂತ ಭ್ರಮೆ ಹುಟ್ಟಿಸಿದ್ದಾರೆ. ಹಾಗಾದ್ರೆ ಮೋದಿ ಬಂದು ಇಷ್ಟು ವರ್ಷ ಆದ್ರೂ ಅಪಾಯ ಹೋಗಿಲ್ಲ ಅಂದ್ರೆ ಇನ್ನು ಇವರನ್ನ ಯಾಕೆ ಗೆಲ್ಲಿಸಬೇಕು ಅಂತ ಯಾರು ಯಾಕೆ ಯೋಚನೆ ಮಾಡ್ತಿಲ್ಲ ? ಇದೆ ತರಹ ಜರ್ಮನ್ ನಾಝಿಗಳಲ್ಲೂ ಭಯ ಹುಟ್ಟಿಸಿ ಗೆಲ್ಲುತ್ತಿದ್ದರು. ಅದನ್ನೆ ಇಲ್ಲಿಯೂ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ.

ಮೋದಿ ಹೇಳೋ ಪ್ರತಿ ಸುಳ್ಳಿಗೂ ಒಂದು ಕಥೆ ಕಟ್ಟಿ ಅದನ್ನ ಜನಗಳಿಗೆ ತಲುಪಿಸೋದು SOCIAL MEDIA ಐಟಿ ಸೆಲ್‌ಗಳ ಕೆಲಸ. ಅವರ ಐಟಿ ಸೆಲ್‌ ಎಷ್ಟು ಪ್ರಭಾವಶಾಲಿ ಎಂದರೆ ಕನಿಷ್ಠ 2000 ದಷ್ಟು FAKE WEBSITE ಗಳು ಮೋದಿ ಪರವಾಗಿ ಸತತ 24 ಘಂಟೆ ಕೆಲಸ ￰ಮಾಡುತ್ತಿದ್ದಾರೆ. ಭಾರತದ ನಿಜ ಇಂಡಿಯನ್‌ ಆರ್ಮಿ ಫೇಸ್‌ಬುಕ್‌ ಪುಟಕ್ಕಿಂತಲು ಬಿಜೆಪಿಯ INDIAN ARMY FAN PAGE ಪುಟಕ್ಕೆ ಹೆಚ್ಚಿನ ಹಿಂಬಾಲಕರಿದ್ದಾರೆ. ಹತ್ತಾರು ಫೇಕ್‌ ವೆಬ್‌ಸೈಟ್‌ಗಳಿವೆ. ಇವುಗಳ ಕೆಲಸ ದಿನ ಬೆಳಗಾದ್ರೆ ಮೋದಿ ಪರವಾಗಿ ಹೊಗೊಳೊದು ಮತ್ತು ಮೋದಿ ವಿರೋಧಿಗಳ ವೈಯಕ್ತಿಕ ತೇಜೋವಧೆ ಮಾಡುವುದು.

ಇದಿಷ್ಟು ಒಂದು ಕಡೆಯಾದ್ರೆ ಮತ್ತೊಂದು ಕಡೆ ಭಾರತದ ಬಹುತೇಕ ಮಾಧ್ಯಮಗಳು ಅದು ಹೇಗೆ ಕೆಲಸ ಮಾಡ್ತಾ ಇವೆ ಅಂತ ಹೇಳೋದೇ ಬೇಡ. 1947 ರಿಂದ ಪತ್ರಿಕಾ ಮಾಧ್ಯಮ ಸಂಸ್ಥೆಗಳು ಸರ್ಕಾರದ ತಪ್ಪುಗಳು ಮತ್ತೆ ಅದರ ವಿರುದ್ಧ ಕೆಲಸ ಮಾಡುತ್ತಿದ್ದವು. ಆದರೆ ಈಗ ಮುಖ್ಯವಾಹಿನಿಯ ಬಹುತೇಕ ಮಾಧ್ಯಮಗಳು ಮೋದಿ ತಪ್ಪುಗಳ ವಿರುದ್ಧ ಮಾತಾಡಲು ಭಯಪಡುತ್ತವೆ. ಬೆರಳೆಣಿಕೆಯ ಕೆಲವೇ ಮಾಧ್ಯಮಗಳು ಮಾತ್ರ ಸತ್ಯ ತಿಳಿಸಲು ಒದ್ದಾಡುತ್ತಿವೆ.

ಕೊನೆ ಮಾತು : ಇಷ್ಟೆಲ್ಲಾ ಜನಬೆಂಬಲ ಬಹುಶಃ ಯಾವ ಪ್ರಧಾನಿಗೂ ಸಿಕ್ಕಿಲ್ಲ. ಮೋದಿ ಒಂದು ರೀತಿಯಲ್ಲಿ ಅವರೊಬ್ಬ ಅದೃಷ್ಟವಂತ. ಆದರೆ ಅವರಿಗೆ ಸಿಕ್ಕಿರುವ ಸುವರ್ಣಾವಕಾಶವನ್ನು ಅವರು ಹಾಳು ಮಾಡುತ್ತಿದ್ದಾರೆ. ಅವರ ಏಕಪಕ್ಷಿಯ ನಿರ್ಧಾರಗಳಿಂದ ದೇಶದ ಆರ್ಥಿಕತೆ, ಸಾಮಾಜಿಕ ಪರಿಸ್ಥಿತಿ ಎಲ್ಲವೂ ಪಾತಾಳ ತಲುಪುತ್ತಿದೆ.

ಇದು ಜನರಿಗೆ ಆದಷ್ಟು ಬೇಗ ಅರ್ಥವಾದರೆ ಒಳ್ಳೆಯದು. ಇಲ್ಲದಿದ್ದಲ್ಲಿ ಇದು ಸರಿಪಡಿಸಲಾರದಷ್ಟು ದೂರ ಹೋಗುವುದರಲ್ಲಿ ಸಂದೇಹವಿಲ್ಲ.

(ಲೇಖಕರು ಸಾಮಾಜಿಕ ಕಾರ್ಯಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಬ್ಬ ವ್ಯಕ್ತಿ ಎಶ್ಟೇ ದಕ್ಶನಿದ್ದರೂ, ದೇಶದ ಅದಿಕಾರ ಒಬ್ಬ ವ್ಯಕ್ತಿಯ ಕೈಯಲ್ಲಿ ಕೇಂದ್ರೀಕೃತವಾದರೆ ದುರಂತ ಕಟ್ಟಿಟ್ಟ ಬುತ್ತಿ. ‌ನಮ್ಮ ದೇಶದಲ್ಲಿ ಏನಾಗಬಾರದಿತ್ತೋ ಅದು ಈಗ ಆಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...