Homeಮುಖಪುಟತಿಹಾರ್‌ ಜೈಲಿನಿಂದ ಬಿಡುಗಡೆಗೊಂಡ ಜೆಸ್ಸಿಕಾ ಲಾಲ್ ಕೊಲೆಗಾರ ’ಮನು ಶರ್ಮ’

ತಿಹಾರ್‌ ಜೈಲಿನಿಂದ ಬಿಡುಗಡೆಗೊಂಡ ಜೆಸ್ಸಿಕಾ ಲಾಲ್ ಕೊಲೆಗಾರ ’ಮನು ಶರ್ಮ’

ದೆಹಲಿ ದಂಡನಾ ಪರಿಶೀಲನಾ ಮಂಡಳಿಯ ಶಿಫಾರಸಿನ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಈ ನಿರ್ಧಾರಕ್ಕೆ ಸಹಿ ಹಾಕಿದ್ದಾರೆ.

- Advertisement -
- Advertisement -

ದೇಶದಾದ್ಯಂತ ಗಮನ ಸೆಳೆಯಲ್ಪಟ್ಟ ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮನು ಶರ್ಮ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ದೆಹಲಿಯ ತಿಹಾರ್ ಜೈಲಿನಿಂದ ಇತರ 18 ಕೈದಿಗಳೊಂದಿಗೆ ಸೋಮವಾರ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿದೆ.

ದೆಹಲಿ ದಂಡನಾ ಪರಿಶೀಲನಾ ಮಂಡಳಿಯ ಶಿಫಾರಸಿನ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಈ ನಿರ್ಧಾರಕ್ಕೆ ಸಹಿ ಹಾಕಿದ್ದರು. ಕಳೆದ ತಿಂಗಳು ದೆಹಲಿ ಗೃಹ ಸಚಿವ ಸತ್ಯೇಂದರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಡಳಿ ಈ ಶಿಫಾರಸು ಮಾಡಿತ್ತು.

ಕೊರೊನಾ ವೈರಸ್ ಬಿಕ್ಕಟ್ಟಿನಲ್ಲಿ ಜನದಟ್ಟಣೆ ತಡೆಗಟ್ಟಲು ಕಾರಾಗೃಹಗಳು ಕೈಗೊಂಡ ಕ್ರಮಗಳ ಭಾಗವಾಗಿ 17 ವರ್ಷಕ್ಕಿಂತಲೂ ಕಡಿಮೆ ಜೈಲುವಾಸ ಅನುಭವಿಸಿದ ಮನು ಶರ್ಮಾ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದಾರೆ.

ಮಾಜಿ ಕೇಂದ್ರ ಸಚಿವ ವಿನೋದ್ ಶರ್ಮ ಅವರ ಪುತ್ರ ಮನು ಶರ್ಮ, 2006 ರ ಏಪ್ರಿಲ್ 30 ರಂದು ದೆಹಲಿಯ ಟಾಮ್‌ರಿಂಡ್ ರೆಸ್ಟೋರೆಂಟ್‌ನಲ್ಲಿ ನಡೆದ ಸಮಾಜವಾದಿ ಪಕ್ಷದ ಬಿನಾ ರಮಣಿಯವರ ಪಾರ್ಟಿಯಲ್ಲಿ ರೂಪದರ್ಶಿ ಜೆಸ್ಸಿಕಾ ಲಾಲ್ ಅವರನ್ನು ಶೂಟ್ ಮಾಡಿ ಕೊಲೆ ಮಾಡಿದ್ದಕ್ಕಾಗಿ ಶಿಕ್ಷೆಗೊಳಗಾಗಿದ್ದರು.

ವಿಚಾರಣಾ ನ್ಯಾಯಾಲಯ ಅವರನ್ನು ಕೊಲೆ ಪ್ರಕರಣದಿಂದ ಖುಲಾಸೆಗೊಳಿಸಿತ್ತಾದರೂ, ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗಳು ನಡೆದ ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ವಿಧಿಸಿತು. 2010 ರಲ್ಲಿ ಈ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಕೂಡಾ ದೃಡಪಡಿಸಿತ್ತು.

ಕಳೆದ ಎರಡು ವರ್ಷಗಳಲ್ಲಿ, ಮನು ಶರ್ಮಾ ಅವರು “ಉತ್ತಮ ನಡವಳಿಕೆ” ಯ ಕಾರಣದಿಂದಾಗಿ ತೆರೆದ ಜೈಲಿನಲ್ಲಿದ್ದರು; ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕಾಗಿ ಜೈಲಿನಿಂದ ಹೊರಟು ಸಂಜೆ 6 ಗಂಟೆಗೆ ಮರಳಲು ಅವರಿಗೆ ಅವಕಾಶ ನೀಡಲಾಗಿತ್ತು. ಮನು ಶರ್ಮಾ ಕೈದಿಗಳ ಪುನರ್ವಸತಿಗಾಗಿ ಲಾಭರಹಿತವಾಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.

2018 ರಲ್ಲಿ, ಜೆಸ್ಸಿಕಾ ಲಾಲ್ ಅವರ ತಂಗಿ ಸಬ್ರಿನಾ ಲಾಲ್ ಮನು ಶರ್ಮಾ ಅವರನ್ನು ಕ್ಷಮಿಸಿದ್ದೇವೆ ಹಾಗೂ ಅವರು ಬಿಡುಗಡೆಗೊಂಡರೆ ಆಕ್ಷೇಪಿಸುವುದಿಲ್ಲ ಎಂದು ಹೇಳಿದ್ದರು.

ಈ ಅಪರಾಧದ ಆಧಾರವಾಗಿಟ್ಟುಕೊಂಡು ಚಲನಚಿತ್ರ ಬಂದಿದ್ದು, ಹಣ ಮತ್ತು ಪ್ರಭಾವವನ್ನು ಹೊಂದಿರುವವರಿಗೆ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಹಾಗೂ ಕೊಲೆಯಿಂದ ಪಾರಾಗಲು ಅನುವು ಮಾಡಿಕೊಡುವ ಕಾನೂನಿನಲ್ಲಿನ ಆಳವಾದ ನ್ಯೂನತೆಗಳನ್ನು ಇದು ಇದು ಎತ್ತಿ ತೋರಿಸಿತ್ತು.


ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...