Homeಅಂಕಣಗಳುಸ್ವಾತಂತ್ರ್ಯ ಸಂಗ್ರಾಮ ಮತ್ತು ಭಾರತದ ಮುಸ್ಲಿಂ ವೀರರು

ಸ್ವಾತಂತ್ರ್ಯ ಸಂಗ್ರಾಮ ಮತ್ತು ಭಾರತದ ಮುಸ್ಲಿಂ ವೀರರು

- Advertisement -
- Advertisement -

ಭಾರತದ ಸ್ವಾತಂತ್ರö್ಯ ಸಂಗ್ರಾಮದ ಚರಿತ್ರೆಯಲ್ಲಿ ಬ್ರಿಟಿಷರ ವಿರುದ್ಧ ತೊಡೆತಟ್ಟಿ ನಿಂತು ಬಡಿದಾಡಿದ ವೀರಕಲಿಗಳ ಬಗ್ಗೆ ನಾವೆಲ್ಲರೂ ಪಠ್ಯಪುಸ್ತಕಗಳಲ್ಲಿ ಓದಿದ್ದೆÃವೆ. ಗಾಂಧಿ, ನೆಹರೂ, ನೇತಾಜಿ ಇನ್ನಿತ್ಯಾದಿ ಜನಪ್ರಿಯ ಸ್ವಾತಂತ್ರö್ಯ ಹೋರಾಟಗಾರರ ಬಗ್ಗೆ ನಮಗೆಲ್ಲರಿಗೂ ಗೊತ್ತು. ಆದರೆ ಬ್ರಿಟಿಶರ ವಿರುದ್ಧದ ಹೋರಾಟಗಳಲ್ಲಿ ಭಾಗವಹಿಸಿಯೂ ನೇಪಥ್ಯಕ್ಕೆ ಸರಿಸಲ್ಪಟ್ಟ ಇದೇ ನೆಲದ ಮುಸ್ಲಿಂ ಹೋರಾಟಗಾರರ ಬಗ್ಗೆ ಭಾರತದ ಚರಿತ್ರಕಾರರು ಹೆಚ್ಚಾನೆಚ್ಚು ಬರೆದಿರುವುದು ದಾಖಲಿಸಿರುವುದು ತೀರಾ ಕಡಿಮೆ. ಜೊತೆಗೆ ಸಂಘ ಪರಿವಾರದ ಹಿನ್ನೆಲೆಯ ಪ್ರಕಟಣಾ ಸಂಸ್ಥೆಗಳು ಮುನ್ನೆಲೆಗೆ ಬಂದು ಪ್ರಕಟಿಸಿದ ಇತಿಹಾಸದ ಪುಸ್ತಕಗಳಲ್ಲಿ ಸ್ವಾತಂತ್ರö್ಯ ಹೋರಾಟಗಾರರೆಂದರೆ ಹಿಂದೂ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡವರೆಂದು ತಪ್ಪಾಗಿ ತಿರುಚಿದ್ದೂ ಮುಸ್ಲಿಂ ಹೋರಾಟಗಾರರು ಹಿನ್ನೆಲೆಗೆ ಸರಿಯಲು ಕಾರಣವಾಗಿದೆ. ಹೀಗೆ ಹಿನ್ನೆಲೆಗೆ ಒತ್ತಲ್ಪಟ್ಟ ಮುಸ್ಲಿಂ ಸ್ವಾತಂತ್ರö್ಯ ಹೋರಾಟಗಾರರು ಮತ್ತು ಅವರು ಸ್ವಾತಂತ್ರö್ಯ ಸಂಗ್ರಾಮಕ್ಕೆ ಕೊಟ್ಟ ಕೊಡುಗೆಗಳು ಕಡಿಮೆಯೇನಲ್ಲ.
ಬಂಗಾಲದ ಮುಸ್ಲಿಂ ಅರಸ ಸಿರಾಜ್ ಉದ್ ದೌಲನ 1757ರ ಪ್ಲಾಸಿ ಕದನದಿಂದ ಶುರುವಾಗುವ ಬ್ರಿಟಿಶರ ವಿರುದ್ಧದ ಬಂಡಾಯವು ನಂತರದ ಕಾಲಘಟ್ಟದಲ್ಲಿ ಹಲವು ಕವಲುಗಳಾಗಿ ಬ್ರಿಟಿಶರೊಡನೆ ನಡೆದ ಸಂಘರ್ಷಗಳಿಗೆ ಮುನ್ನುಡಿ ಬರೆಯುತ್ತದೆ. 1857ರಿಂದ 58ರವರೆಗೆ ದೆಹಲಿ ಪ್ರಾಂತ್ಯದಲ್ಲಿ ಬ್ರಿಟಿಶರೆದುರು ಬಂಡೆದ್ದ ‘ಅಸ್ಗರಿ ಬೇಗಂ’ ಎಂಬ ಮುಸ್ಲಿಂ ಮಹಿಳೆ ಬ್ರಿಟಿಶರ ವಿರುದ್ಧ ಸಾರಿದ ವೀರೋಚಿತÀ ಯುದ್ಧದಲ್ಲಿ ಜೀವತ್ಯಾಗ ಮಾಡುತ್ತಾಳೆ. ಸೆರೆಸಿಕ್ಕ ‘ಅಸ್ಗರಿ ಬೇಗಂ’ಳನ್ನು ಬ್ರಿಟಿಶರು ಜೀವಂತವಾಗಿ ಸುಟ್ಟು ಹಾಕುತ್ತಾರೆ. ಈ ಯುದ್ಧದಲ್ಲಿ 27 ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಂಡಾಯಗಾರರನ್ನು ಬ್ರಿಟಿಶರ ಸೇನೆ ಕೊಲ್ಲುತ್ತದೆ.
1857ರಲ್ಲಿ ‘ದೆಹಲಿ ಅಖಬಾರ್’ ಪತ್ರಿಕೆಯಲ್ಲಿ ಬ್ರಿಟಿಶರ ದಬ್ಬಾಳಿಕೆಗಳ ಬಗ್ಗೆ ಬರೆಯುತ್ತ ಸ್ವಾತಂತ್ರö್ಯ ಹೋರಾಟಕ್ಕೆ ಪ್ರೊÃತ್ಸಾಹ ನೀಡುತ್ತಿದ್ದ ಆ ಪತ್ರಿಕೆಯ ಸಂಪಾದಕ ‘ಮಹಮ್ಮದ್ ಬಖಾರ್’ ಎಷ್ಟರಮಟ್ಟಿಗೆ ಬ್ರಿಟಿಶರ ನಿದ್ದೆಗೆಡಿಸಿದ್ದರೆಂದರೆ ಅವರನ್ನು ನಿವಾರಿಸಿಕೊಳ್ಳದೆ ದೆಹಲಿಯಲ್ಲಿ ಉಳಿಯುವುದೇ ಬ್ರಿಟಿಶರಿಗೆ ಅಸಾಧ್ಯವೆನ್ನುವಷ್ಟರ ಮಟ್ಟಿಗೆ. ಕೊನೆಗೆ ಮಹಮ್ಮದ್ ಬಖಾರ್‌ರನ್ನು ‘ಜನರಲ್ ಹಡ್ಸನ್’ ಎಂಬ ಬ್ರಿಟಿಶ್ ಅಧಿಕಾರಿ ಮರಾಮೋಸದಿಂದ ಬಂಧಿಸಿ ಜೈಲಿಗೆ ಹಾಕುತ್ತಾನೆ. ‘ಬಖಾರ್’ ಬಿಡುಗಡೆಗೆ ಸ್ವಾತಂತ್ರö್ಯ ಸೇನಾನಿಗಳಿಂದ ಆಗ್ರಹ ಜಾಸ್ತಿಯಾದಾಗ ‘ಹಡ್ಸನ್’ ಬಖಾರ್‌ರನ್ನು ಜೈಲಿನಲ್ಲೆÃ ಗುಂಡಿಟ್ಟು ಕೊಲ್ಲುತ್ತಾನೆ. ಬ್ರಿಟಿಶರಿಗೆ ತಮ್ಮ ಲೇಖನಿ, ಲೇಖನಗಳಿಂದಲೇ ಸಿಂಹಸ್ವಪ್ನವಾಗಿದ್ದ ಬಖಾರ್ ಹೀಗೆ ಹುತಾತ್ಮರಾಗುತ್ತಾರೆ. ಇದೇ ಸಮಯದಲ್ಲಿ ದೇಶಾದ್ಯಂತ ಮುಸ್ಲಿಮ್ ಅರಸೊತ್ತಿಗೆಗಳು ಮತ್ತು ಹೋರಾಟಗಾರರು ಬ್ರಿಟಿಶರ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಬ್ರಿಟಿಶರ ಸೈನ್ಯ, ಆಯುಧಾಗಾರ, ಅಧಿಕಾರಿಗಳ ಮೇಲೆ ಒಂದು ಕಡೆಯಿಂದ ಧಾಳಿಯಿಡಲು ಶುರುವಿಡುತ್ತಾರೆ. ಬ್ರಿಟಿಶರು ಈ ಕಾಲಘಟ್ಟದ ಬಂಡಾಯವನ್ನು ಮುಸ್ಲಿಂದಂಗೆಯೆಂದೇ ಕರೆಯುತ್ತಾರೆ.
ಈ ಮುಸ್ಲಿಂದಾಳಿಗಳಿಂದ ತಪ್ಪಿಸಿಕೊಳ್ಳಲು ಮುಸ್ಲಿಮರನ್ನು ಭಾರತದ ಹಿಂದೂಗಳಿಂದ ಪ್ರತ್ಯೆÃಕಗೊಳಿಸುವುದೇ ಅತ್ಯುತ್ತಮ ಉಪಾಯವೆಂದೆಣಿಸಿದ ಬ್ರಿಟಿಶರು ಮುಸ್ಲಿಮರನ್ನು ಹಿಂದೂಗಳ ವಿರುದ್ಧ ಎತ್ತಿಕಟ್ಟುವ ಮೊದಲ ಪ್ರಯತ್ನಕ್ಕೆ ಕೈಯಿಡುತ್ತಾರೆ. ಬ್ರಿಟಿಶ್ ಅಧಿಕಾರಿ ‘ವಿಲಿಯಂ ಹಂಟ್’ ಈ ನಿಟ್ಟಿನಲ್ಲಿ ಮುಸ್ಲಿಮರು ಮತ್ತವರ ದೊರೆಗಳನ್ನು ಕೆಟ್ಟದಾಗಿ ಚಿತ್ರಿಸಿ ಅವರ ಆಳ್ವಿಕೆಯಲ್ಲಿ ಭಾರತ ನರಳುತ್ತಿತ್ತು, ಅವರಿಂದ ಮುಕ್ತಿ ಕೊಡಿಸಲು ಬ್ರಿಟನ್ನಿನಿಂದ ಬಂದ ದೈವಸಂಭೂತರಾಗಿ ಬ್ರಿಟಿಶರನ್ನು ಚಿತ್ರಿಸಿ ‘ಇಂಡಿಯನ್ ಮುಸ್ಲಿಮ್ಸ್’ ಎಂಬ ಪುಸ್ತಕವೊಂದನ್ನು ಬರೆದು ವಿಲಿಯಂ ಹಂಟ್ ಪ್ರಚಾರಕ್ಕೆ ಬಿಡುತ್ತಾನೆ. ಭಾರತದ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದೊಡ್ಡಮಟ್ಟದಲ್ಲಿ ಬಿತ್ತಿದ ಚಾರಿತ್ರಿಕ ಅಪನಂಬಿಕೆಯ ಬೀಜವಿದು. ಇದೇ ವಾದ ಮತ್ತು ವಾದಸರಣಿಯನ್ನು ಬ್ರಿಟಿಶರ ಆಸ್ಥಾನ ಗುಲಾಮರಾಗಿ ಕಂಗೊಳಿಸುತ್ತಿದ್ದ ಸಂಘಿಗಳು ದೊಡ್ಡಮಟ್ಟದಲ್ಲಿ ಜನರ ನಡುವೆ ಹರಿಯಬಿಟ್ಟರು. ಬ್ರಿಟಿಶರ ವಿರುದ್ಧ ಹೋರಾಡಿ ನಿಮ್ಮ ಶಕ್ತಿ ವೇಸ್ಟ್ ಮಾಡಿಕೊಳ್ಳಬೇಡಿ ಅದನ್ನು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು-ಕಮ್ಯುನಿಸ್ಟರ ವಿರುದ್ಧ ಹೋರಾಡಲು ಬಳಸಿ ಎಂದು ಬ್ರಿಟಿಶರ ಆಸ್ಥಾನ ಗುಲಾಮರಾಗಿದ್ದ ಸಂಘಿಗಳು ಕರೆಕೊಟ್ಟರು. ಸ್ವಾತಂತ್ರö್ಯ ಹೋರಾಟದೊಳಗೂ ಧರ್ಮದ ಆಧಾರದಲ್ಲಿ ಎರಡು ಗುಂಪಾಗಿ ಒಡೆಯುವಲ್ಲಿ ಬ್ರಿಟಿಶ್ ಮತ್ತವರ ಗುಲಾಮರ ಪಡೆ ಯಶಸ್ವಿಯಾಯಿತು.
ಇವತ್ತು ಇದೇ ಸಂಘಿ ಗುಲಾಮರ ಪಡೆಯು ಹೆಮ್ಮೆಯಿಂದ ಜಪಿಸುವ ರಾಷ್ಟಿçÃಯತೆಯ ದ್ಯೊÃತಕಗಳಾದ ಘೋಷಣೆಗಳನ್ನೂ ಸಹ ಹುಟ್ಟು ಹಾಕಿದ್ದು ಮತ್ತು ಸ್ವಾತಂತ್ರö್ಯ ಹೋರಾಟಗಾರರ ನಡುವೆ ಅದನ್ನು ಜನಪ್ರಿಯಗೊಳಿಸಿದ್ದು ಮುಸ್ಲಿಮರು ಎಂಬುದಕ್ಕೆ ಇತಿಹಾಸದಲ್ಲೆà ಹಲವಾರು ಸಾಕ್ಷಿಗಳಿವೆ. ‘ಜೈ ಹಿಂದ್’ ಈ ಘೋಷಣೆಯಿಲ್ಲದೆ ಅಕ್ಷರಶಃ ಯಾವ ಭಾಷಣವೂ ಮುಕ್ತಾಯವಾಗುವುದಿಲ್ಲ. ಈ ಜೈಹಿಂದ್ ಘೋಷಣೆಯನ್ನು ದೇಶಕ್ಕೆ ಕೊಟ್ಟಿದ್ದು ನೇತಾಜಿ ಸುಭಾಶ್ ಚಂದ್ರ ಬೋಸ್ ಎಂದೇ ಮುಕ್ಕಾಲುಪಾಲು ಭಾರತೀಯರು ನಂಬಿದ್ದಾರೆ. ಆದರೆ ಸತ್ಯ ವಿಷಯ ಬೇರೆಯದೇ ಇದೆ. ಜೈ ಹಿಂದ್ ಘೋಷಣೆಯನ್ನು ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕೆ ಕೊಡುಗೆಯಾಗಿ ಕೊಟ್ಟಿದ್ದು ನೇತಾಜಿಯ ‘ಆಜಾದ್ ಹಿಂದ್ ಫೌಜ್’ ಸೇನೆಯಲ್ಲಿದ್ದ ಓರ್ವ ಮುಸ್ಲಿಂ ವ್ಯಕ್ತಿ. ಇವರ ಹೆಸರು ‘ಅಬೀದ್ ಹಸನ್ ಸಫ್ರಾನಿ’. ಜರ್ಮನಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿದ್ದ ‘ಸಫ್ರಾನಿ’ ಭಾರತದ ಸ್ವಾತಂತ್ರö್ಯ ಹೋರಾಟಕ್ಕೆ ಜರ್ಮನ್ನರ ನೆರವು ಬಯಸಿ ಜರ್ಮನಿಯಲ್ಲಿದ್ದ ನೇತಾಜಿಯವರ ವಿಚಾರಧಾರೆಯನ್ನು ಒಪ್ಪಿ ಓದುತ್ತಿದ್ದ ಎಂಜಿನಿಯರಿಂಗ್ ಪದವಿಯನ್ನು ತ್ಯಜಿಸಿ ನೇತಾಜಿಯವರ ಸೆಕ್ರೆಟರಿ ಮತ್ತು ಭಾಷಾಂತರಕಾರರಾಗಿ ಭಾರತಕ್ಕೆ ಬರುತ್ತಾರೆ. ನಂತರ ನೇತಾಜಿಯವರ ಆಪ್ತವಲಯಕ್ಕೆ ಸೇರುವ ಸಫ್ರಾನಿ ನೇತಾಜಿಯವರ ಸೈನ್ಯದಲ್ಲಿ ಮೇಜರ್ ಆಗಿ ಸೇವೆ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಪರಸ್ಪರರನ್ನು ಗ್ರಿÃಟ್ ಮಾಡಲು ನೇತಾಜಿಯವÀರ ಸೈನ್ಯಕ್ಕೆ ‘ಜೈಹಿಂದ್’ ಘೋಷವನ್ನು ಪರಿಚಯಿಸುತ್ತಾರೆ. ಇದು ನಂತರ ಸ್ವಾತಂತ್ರö್ಯ ಹೋರಾಟಗಾರರ ನೆಚ್ಚಿನ ಘೋಷಪದವಾಗಿ ಜನಪ್ರಿಯಗೊಳ್ಳುತ್ತದೆ. ಇವತ್ತಿಗೂ ಜನಪ್ರಿಯವಾಗಿರುವ ಈ ‘ಜೈಹಿಂದ್’ ಘೋಷಪದದ ಮೂಲಕರ್ತೃ ‘ಅಬಿದ್ ಹಸನ್ ಸಫ್ರಾನಿ.’
‘ಸಾರೇ ಜಹಾಂಸೆ ಅಚ್ಛಾ’ ಯಾರಿಗೆ ತಾನೇ ಗೊತ್ತಿಲ್ಲ. ಧರ್ಮ, ಗಡಿ, ಪ್ರಾಂತ್ಯಗಳಾಚೆಗೂ ಪ್ರತಿಯೊಬ್ಬರೂ ಹಾಡುವ ಗುನುಗುವ ದೇಶಭಕ್ತಿ ಗೀತೆಯಿದು. ಈ ಗೀತೆಯನ್ನು ಬರೆದವರು ‘ಮಹಮ್ಮದ್ ಇಕ್ಬಾಲ್’ ಎಂಬ ಮುಸ್ಲಿಂ ಉರ್ದು ಕವಿ. ಅಲ್ಲಾಮ ಇಕ್ಬಾಲ್ ಎಂದೂ ಹೆಸರಾಗಿರುವ ಈ ಕವಿ ಪರ್ಶಿಯನ್ ಮತ್ತು ಉರ್ದು ಭಾಷೆಯಲ್ಲಿ ಕವಿತೆಗಳನ್ನು ಬರೆಯುತ್ತಿದ್ದವರು. ದೇಶ ವಿಭಜನೆಯಾದ ನಂತರ ಪಾಕಿಸ್ತಾನ ಸರ್ಕಾರವು ಇವರನ್ನು ರಾಷ್ಟಿçÃಯಕವಿ ಎಂದು ಕರೆಯಿತು. 1906ನೇ ಇಸವಿಯಲ್ಲಿ ಯೂನಿವರ್ಸಿಟಿ ಆಫ್ ಕೇಂಬ್ರಿಡ್ಜ್ನಲ್ಲಿ ಆರ್ಟ್ಸ್ ವ್ಯಾಸಂಗ ಮುಗಿಸಿದ್ದ ಇಕ್ಬಾಲರು ನಂತರ ಲುಡ್ವಿಗ್‌ನ ಮ್ಯಾಕ್ಸ್ ಮಿಲನ್ ವಿವಿಯಲ್ಲಿ ಡಾಕ್ಟರ್ ಆಫ್ ಫಿಲಾಸಫಿ ವ್ಯಾಸಂಗ ಮಾಡಿದವರು. ವ್ಯಾಸಂಗ ಮುಗಿದ ನಂತರ ಭಾರತಕ್ಕೆ ಬಂದ ಇಕ್ಬಾಲ್ ಸಾಗರೋಪಾದಿಯಲ್ಲಿ ನಡೆಯುತ್ತಿದ್ದ ಸ್ವಾತಂತ್ರö್ಯ ಹೋರಾಟವನ್ನು ಉತ್ತೆÃಜಿಸುವ ಹಲವಾರು ಗೀತೆಗಳನ್ನು ಬರೆದು ಜನರ ನಡುವೆ ಜನಪ್ರಿಯಗೊಳಿಸಿದರು. ಅವುಗಳಲ್ಲಿ ಮುಖ್ಯವಾದ ಕವಿತೆಯೇ ‘ಸಾರೇ ಜಹಾಂಸೆ ಅಚ್ಛ, ಹಿಂದೂಸ್ಥಾನ್ ಹಮಾರ’ ಕವಿತೆ.
ಇವರಷ್ಟೆÃ ಅಲ್ಲದೆ ತಾವು ಬದುಕಿದ್ದ 95 ವರ್ಷಗಳಲ್ಲಿ 45 ವರ್ಷ ಬ್ರಿಟಿಶರ ಜೈಲುಗಳಲ್ಲೆÃ ಸೆರೆಯಾಳಾಗಿ ಕಳೆದ ಖಾನ್ ಅಬ್ದುಲ್ ಗಫಾರ್ ಖಾನ್, ಸ್ವಾತಂತ್ರö್ಯ ಹೋರಾಟದ ಹಣಕಾಸಿನ ನೆರವಿಗೆಂದು ಗಾಂಧಿಗೆ ತಮಗೆ ಎಷ್ಟು ಹಣದ ಅವಶ್ಯಕತೆಯಿದೆಯೋ ಅಷ್ಟು ಹಣವನ್ನು ಬರೆದುಕೊಳ್ಳಿ ಎಂದು ಬ್ಲಾಂಕ್ ಚೆಕ್ ಕೊಟ್ಟಿದ್ದ ಅಂದಿನ ಬಾಂಬೆಯ ಉದ್ಯಮಿ ಮತ್ತು ಕೋಟ್ಯಧಿಪತಿ ಉಮರ್ ಸುಭಾನಿ, ಹಲವಾರು ಸ್ವಾತಂತ್ರö್ಯ ಹೋರಾಟದ ಗೀತೆಗಳನ್ನು ಬರೆದ ಮೌಲಾನ ಹಸರತ್ ಮೊಹಾನಿ, ಮಜ್ನು ಷಾ ಫಕೀರ್ ನೇತೃತ್ವದಲ್ಲಿ ‘ಫಕೀರ್-ಸನ್ಯಾಸಿ ದಂಗೆ’ಯ ಮೂಲಕ ಬ್ರಿಟಿಶರ ವಿರುದ್ದ ಹೋರಾಡಿದ ಬೆಂಗಾಲಿ ಫಕೀರರು, 1921ರಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೊಟ್ಟ ‘ಹಸ್ರತ್ ಮೊಹಾನಿ’, ಬ್ರಿಟಿಶರೇ ಭಾರತ ಬಿಟ್ಟು ತೊಲಗಿ ಘೋಷಣೆ ಪರಿಚಯಿಸಿದ ‘ಯೂಸುಫ್ ಮೆಹರ್ ಅಲಿ’, ಹೀಗೆ ನೂರಾರು-ಸಾವಿರಾರು ಹೆಸರುಗಳನ್ನು ಭಾರತ ಸ್ವಾತಂತ್ರö್ಯ ಸಂಗ್ರಾಮದಲ್ಲಿ ನಿಂತು ಬಡಿದಾಡಿದವರ ಹೆಸರುಗಳನ್ನು ಉಲ್ಲೆÃಖಿಸಬಹುದು. ಈ ಎಲ್ಲ ಮುಸ್ಲಿಂ ಹೋರಾಟಗಾರರ ವೀರೋಚಿತ ಹೋರಾಟ ಮತ್ತು ಅವರು ನೀಡಿದ ಸಾಹಿತ್ಯಿಕ ಕೊಡುಗೆಗಾಗಿ ನಾವು ಇವರೆಲ್ಲರನ್ನೂ ನೆನೆಯಲೇಬೇಕು.

– ಪರಿಮಳಾ ವಾರಿಯರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...