Homeಮುಖಪುಟಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

- Advertisement -
- Advertisement -

ಪುಣೆ ಮೂಲದ ಆಟೋರಿಕ್ಷಾ ಚಾಲಕರೊಬ್ಬರು ತನ್ನ ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಆಹಾರಕ್ಕಾಗಿ ಬಳಸುತ್ತಾ ಆದರ್ಶವನ್ನು ಮೆರೆದಿದ್ದಾರೆ. ಇದರಿಂದ ಪ್ರಭಾವಿತರಾದ ಹಲವಾರು ಜನರು ಅವರಿಗೆ ಹಣದ ಸಹಾಯವನ್ನು ಮಾಡುತ್ತಿದ್ದಾರೆ.

ಅಕ್ಷಯ್ ಕೊಥಾವಾಲೆ (30) ಮಹಾರಾಷ್ಟ್ರದ ಪುಣೆಯಲ್ಲಿ ಅಗತ್ಯವಿರುವ ಹಾಗೂ ಬಡ ಜನರಿಗೆ ಆಹಾರ ಮತ್ತು ಪಡಿತರ ಕಿಟ್‌ಗಳನ್ನು ಒದಗಿಸಲು ತನ್ನ ಹಣ ಮತ್ತು ತನಗೆ ದೊರೆತ ಸಹಾಯದ ಹಣವನ್ನೂ ಮತ್ತೆ ಬಳಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೊತವಾಲೆ, ತನಗೆ ದೊರೆತ ಅಪಾರ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ ಮತ್ತು ಪುಣೆಯಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡಲು ನನ್ನನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ಷಯ್ ಕೊಥಾವಾಲೆ ತನ್ನ ಮದುವೆಗೆಂದು 2 ಲಕ್ಷ ರೂ.ಗಳನ್ನು ಉಳಿಸಿದ್ದರು. ಮದುವೆಯನ್ನು ಮೇ 25 ರಂದು ನಿಗದಿಪಡಿಸಲಾಗಿತ್ತು ಆದರೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಕಾರಣ ಮದುವೆಯನ್ನು ಮುಂದೂಡಲಾಗಿತ್ತು.

ಬಡ ಜನರು ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು, ಯಾವುದೇ ಕೆಲಸ ಮತ್ತು ಆದಾಯವಿಲ್ಲದ ಕಾರಣ ಸಂಕಷ್ಟಗಳನ್ನು ಎದುರಿಸುತ್ತಿರುವುದನ್ನು ನೋಡಿದ ಅವರು, ತಮ್ಮಲ್ಲಿರುವ ಹಣದಿಂದ ಕೆಲವು ಸ್ನೇಹಿತರೊಂದಿಗೆ ಸೇರಿ ಆಹಾರವನ್ನು ಸಿದ್ಧಪಡಿಸುವ ಅಡುಗೆಮನೆ ಸ್ಥಾಪಿಸಿ, ಆಹಾರವನ್ನು ಪುಣೆಯ ಹಲವಾರು ಸ್ಥಳಗಳಲ್ಲಿ ವಿತರಿಸಿದರು.

ಅವರ ತಂದೆ ಕಳೆದ ತಿಂಗಳು ನಿಧನರಾಗಿದ್ದು, ಇದರ ಮಧ್ಯೆಯೂ ಅಕ್ಷಯ್ ತಮ್ಮ ಸೇವೆಯನ್ನು ಮುಂದುವರೆಸಿದ್ದರು. ತಮಗೆ ಒದಗಿ ಬಂದ ದುರಂತದ ನಡುವೆಯೂ ಆಹಾರ ವಿತರಣೆಯನ್ನು ಮುಂದುವರೆಸುವ ಅವರ ಸಂಕಲ್ಪದ ಬಗ್ಗೆ ಓದಿದ ದೇಶದಾದ್ಯಂತ ಹಲವಾರು ಜನರು ಆರ್ಥಿಕ ಸಹಾಯವನ್ನು ನೀಡಿದ್ದಾರೆ.

“ನಾನು ದೇಶಾದ್ಯಂತದ ಜನರಿಂದ ಸುಮಾರು 6 ಲಕ್ಷ ರೂ. ಪಡೆದಿದ್ದೇನೆ. ನಮ್ಮ ಕಾರ್ಯಕ್ರಮದ ಬಗ್ಗೆ ಓದಿದ ಹಲವಾರು ಜನರು ಮುಂದೆ ಬಂದು ಸಹಾಯ ಹಸ್ತ ನೀಡಿದ್ದಾರೆ. ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳುತ್ತಾರೆ.

ತಾನು ಸ್ವೀಕರಿಸಿದ ಹಣದಿಂದ ಹಲವಾರು ಪ್ರದೇಶಗಳಲ್ಲಿ ಆಹಾರ ವಿತರಣೆಯನ್ನು ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

“ಕೈಯಲ್ಲಿರುವ ಹಣದೊಂದಿಗೆ, ನಾವು ಸಗಟು ಮಾರುಕಟ್ಟೆಯಿಂದ ಅಗತ್ಯವಾದ ದಿನಸಿ ವಸ್ತುಗಳನ್ನು ಖರೀದಿಸಿದ್ದೇವೆ, ನಂತರ ಅದನ್ನು ಬೇಯಿಸಿದ ಆಹಾರದ ಜೊತೆಗೆ, ಅಗತ್ಯವಿರುವ ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ವಿತರಿಸಲು ನಾವು ಯೋಜಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಆಹಾರ ವಿತರಣೆಯ ಜೊತೆಗೆ, ಅಕ್ಷಯ್ ಕೊಥವಾಲೆ ತಮ್ಮ ಸ್ವಂತ ರಿಕ್ಷಾದಲ್ಲಿ ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಉಚಿತ ಸವಾರಿಯನ್ನೂ ನೀಡುತ್ತಾರೆ.

ಅವರು ತಮ್ಮ ಆಟೋರಿಕ್ಷಾದಲ್ಲಿ ಧ್ವನಿವರ್ಧಕವನ್ನು ಹಾಕಿದ್ದು, ಅದರ ಮೂಲಕ ಅವರು ಮತ್ತು ಅವರ ಸ್ನೇಹಿತರು ಕೊರೊನಾ ಸಾಂಕ್ರಮಿಕದ ವಿರುದ್ಧ ಹೇಗೆ ಸುರಕ್ಷಿತವಾಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.


ಓದಿ: ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟಿರುವ ನಟರಾದ ಸೋನು ಸೂದ್‌ ಹಾಗೂ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...