Homeನಿಜವೋ ಸುಳ್ಳೋFact Check: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?

Fact Check: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?

- Advertisement -
- Advertisement -

ಕೊರೊನಾ ಕಾರಣಕ್ಕೆ ಆಸ್ಪತ್ರೆಯಲ್ಲಿ ದಾಖಲಾದ ಹುಡುಗ ಮತ್ತು ಅಲ್ಲಿ ಕೆಲಸ ಮಾಡುವು ಡಾಕ್ಟರ್‌ ನಡುವೆ ಪ್ರೇಮಾಂಕುರವಾಗಿದೆ. ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್! ಎಂಬ ಶೀರ್ಷಿಕೆಯಡಿ ಹಲವು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈಜಿಪ್ಟ್‌ನಲ್ಲಿ ಈ ಘಟನೆ ಜರುಗಿದೆ, ಅಲ್ಲದೇ ಎರಡು ತಿಂಗಳ ನಂತರ ಆ ಡಾಕ್ಟರ್‌ಗೆ ಆತ ಆಸ್ಪತ್ರೆಯಲ್ಲಿಯೇ ರಿಂಗ್ ತೊಡಿಸಿ ನಿಶ್ಚಿತಾರ್ಥವಾಗಿದ್ದಾರೆ. ಇದು ನಿಜವಾದ ಪ್ರೇಮ ಎಂದರೆ ಎಂಬುದಾಗಿ ಎಲ್ಲೆಡೆ ಸುದ್ದಿ ಹರಿಬಿಡಲಾಗಿದೆ.

ಅಫಕ್‌ ಖಾನ್‌ ಎಂಬುವವರು ಫೇಸ್‌ಬುಕ್‌ನಲ್ಲಿ ಇದನ್ನು ಹಾಕಿದರೆ ಪಂಜಾಬ್‌ ಕೇಸರಿ ಎಂಬ ಪತ್ರಿಕೆಯೂ ಇದೇ ಫೋಟೊಗಳನ್ನು ಬಳಸಿ ಲೇಖನ ಸಿದ್ದಪಡಿಸಿದೆ.

ವೈರಲ್‌ ಆದ ಹಲವು ಫೋಟೊಗಳಲ್ಲಿ ಒಂದರಲ್ಲಿ ರೋಗಿಯ ಬಟ್ಟೆ ಧರಿಸಿರುವ ವ್ಯಕ್ತಿಯು ಡಾಕ್ಟರ್‌ಗೆ ಉಂಗುರ ತೊಡಿಸಿತ್ತಿರುವುದು ಕಂಡರೆ, ಮತ್ತೊಂದರಲ್ಲಿ ಒಬ್ಬರನ್ನೊಬ್ಬರು ತದೇಕಚಿತ್ತದಿಂದ ನೋಡುವ ಫೋಟೊ ಕಾಣಸಿಗುತ್ತವೆ.

ಫ್ಯಾಕ್ಟ್‌ಚೆಕ್‌

ಈ ಚಿತ್ರಗಳ ಮೂಲ ಹಿಡಿದು ಹೊರಟಾಗ ಸಿಕ್ಕಿದ್ದು ಅರೇಬಿಕ್‌ ಭಾಷೆಯ ಫೇಸ್‌ಬುಕ್‌ ಪೋಸ್ಟ್‌ಗಳು. ಮೇ 25 ರಂದು ಮೊಹಮ್ಮದ್ ಸೇಲಿಮ್ ಎಂಬುವವರು ತೆಗೆದ ಫೋಟೊಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ಮೊಹಮ್ಮದ್‌ ಫಾಯ್ಮಿ ಮತ್ತು ಆಯಾ ಬೋಸ್ಬಾ ಎಂಬುವವರಿಗೆ ಟ್ಯಾಗ್‌ ಮಾಡಿದ್ದು ಅವರೇ ಆ ಚಿತ್ರದಲ್ಲಿರುವವರಾಗಿದ್ದಾರೆ. ಅವರಿಬ್ಬರೂ ಸಹ ವೈದ್ಯರಾಗಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ದೃಢಪಟ್ಟಿದೆ.

#Discount 10 % & 20 %#Mohamed_Fahmy & #Aya_À_Mosbah#Photographer & #Editor :…

Posted by Mohamed Selim Photography on Sunday, May 24, 2020

ಆ ಇಬ್ಬರೂ ಜೋಡಿಗಳು 2018 ರಿಂದಲೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಈ ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅವರು ಮದುವೆಯಾಗಿದ್ದು ಅದರ ಅದು ಪ್ರಿ ವೆಡ್ಡಿಂಗ್ ಫೋಟೊ ಶೂಟ್‌ನ ಫೋಟೊಗಳು ಇವಾಗಿವೆ. ಅವರು ಆಸ್ಪತ್ರೆಯಲ್ಲಿಯೂ ಸಹ ಫೋಟೊಶೂಟ್‌ ಮಾಡಿಸಿಕೊಂಡಿದ್ದು ಅದೇ ಫೋಟೊಗಳು ಕೊರೊನಾ ರೋಗಿಯ ಜೊತೆಗೆ ವೈದ್ಯರ ನಿಶ್ಚಿತಾರ್ಥ ಎಂಬ ತಪ್ಪು ಹೆಸರಿನಲ್ಲಿ ವೈರಲ್‌ ಆಗಿವೆ ಅಷ್ಟೇ.

ಇದನ್ನು ಫೋಟೊಗ್ರಾಫರ್‌ ಮೊಹಮ್ಮದ್ ಸೇಲಿಮ್ ಸ್ಪಷ್ಟಪಡಿಸಿದ್ದು, ಆ ಇಬ್ಬರೂ ಜೋಡಿಗಳು ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಸೋಂಕು ಇಲ್ಲ ಎಂದು ದೃಢಪಡಿಸಿದ್ದಾರೆ.


ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...