Homeಮುಖಪುಟನಿಸರ್ಗ ಚಂಡಮಾರುತ: 2 ದಿನಗಳ ಕಾಲ ಮನೆಯೊಳಗೆ ಇರಿ ಎಂದು ಮಹಾ ಸಿಎಂ ಉದ್ಧವ್‌ ಮನವಿ

ನಿಸರ್ಗ ಚಂಡಮಾರುತ: 2 ದಿನಗಳ ಕಾಲ ಮನೆಯೊಳಗೆ ಇರಿ ಎಂದು ಮಹಾ ಸಿಎಂ ಉದ್ಧವ್‌ ಮನವಿ

- Advertisement -
- Advertisement -

ಇಂದಿನಿಂದ ನಿಸರ್ಗ ಚಂಡಮಾರುತವು ಮಹಾರಾಷ್ಟ್ರ ಮತ್ತು ಗುಜರಾತ್‌ನ ಕರಾವಳಿ ಭಾಗಗಳಿಗೆ ಅಪ್ಪಳಿಸುವುದಿರಂದ ಮುನ್ನೆಚ್ಚರಿಕೆಯ ಕ್ರಮವಾಗಿ ದಯವಿಟ್ಟು 2 ದಿನಗಳ ಕಾಲ ಮನೆಯೊಳಗೆ ಇರಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ‌ ಮನವಿ ಮಾಡಿದ್ದಾರೆ.

ಭಾರತದಲ್ಲಿ ಅತಿ ಹೆಚ್ಚು ಕರೋನವೈರಸ್ ಪ್ರಕರಣಗಳನ್ನು (70000 ಕ್ಕೂ ಹೆಚ್ಚು) ಹೊಂದಿರುವ ರಾಜ್ಯವಾದ ಮಹಾರಾಷ್ಟ್ರದ ಮೇಲೆ ಮತ್ತೆ ನಿಸರ್ಗ ಚಂಡಮಾರುತದ ಕಾರಣಕ್ಕೆ ಅತಿಯಾದ ಹೊರೆ ಬಿದ್ದಿದೆ. ಅಲ್ಲಿನ ಆರೋಗ್ಯ ಮೂಲಸೌಕರ್ಯವನ್ನು ಒದಗಿಸಲು ಹೆಣಗಾಡುತ್ತಿರುವ ಸಮಯದಲ್ಲಿಯೇ ಈ ಚಂಡಮಾರುತ ಬರುತ್ತಿದ್ದು ಆಂತಕಕ್ಕೆ ಕಾರಣವಾಗಿದೆ. ಇದು ಮಹಾರಾಷ್ಟ್ರದಲ್ಲಿನ COVID-19 ವಿರುದ್ಧದ ಹೋರಾಟವನ್ನು ಸಂಕೀರ್ಣಗೊಳಿಸುತ್ತದೆ.

ನಗರದಲ್ಲಿ ಬಲವಾದ ಗಾಳಿ ಬೀಸುತ್ತಿರುವ ಕಾರಣ ಮುಂಬೈ ನಿವಾಸಿಗಳಿಗೆ ಸಂಭವನೀಯ ವಿದ್ಯುತ್ ಕಡಿತವನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಮೊಬೈಲ್‌ ಸೇರಿದಂತೆ ಇತರ ಎಲೆಕ್ಟ್ರಿಕ್‌ ಸಾಧನಗಳನ್ನು ಚಾರ್ಜ್ ಮಾಡಿಕೊಳ್ಳಿ ಮತ್ತು ಸಾಧ್ಯವಾದರೆ ತುರ್ತು ದೀಪಗಳನ್ನು ಹೊಂದಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

“ಈ ಚಂಡಮಾರುತವು ರಾಜ್ಯವು ಇಲ್ಲಿಯವರೆಗೆ ಎದುರಿಸಿದ್ದಕ್ಕಿಂತಲೂ ತೀವ್ರವಾಗಿರಬಹುದು … ನಾಳೆ ಮತ್ತು ನಾಳಿದ್ದು ಕರಾವಳಿ ಪ್ರದೇಶಗಳಲ್ಲಿ ನಿರ್ಣಾಯಕವಾಗಿದೆ … ಲಾಕ್‌ಡೌನ್ ಸಡಿಲಗೊಳಿಸುವ ಭಾಗವಾಗಿ ಪುನರಾರಂಭಗೊಂಡ ಚಟುವಟಿಕೆಗಳು ಅಲ್ಲಿ ಮುಚ್ಚಲ್ಪಡುತ್ತವೆ. ಮುಂದಿನ ಎರಡು ದಿನಗಳಲ್ಲಿ ಜನರು ಜಾಗರೂಕರಾಗಿರಬೇಕು “ಎಂದು ಠಾಕ್ರೆ ಹೇಳಿದ್ದಾರೆ.

ಮೀರಾ ಭೈಂದಾರ್‌ನ ಉತ್ತರ ಗ್ರಾಮದಲ್ಲಿನ ಜನರನ್ನು ಮುಂಜಾಗ್ರತೆ ಕ್ರಮವಾಗಿ ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ತಂಡಗಳು ಸ್ಥಳಾಂತರಿಸಿವೆ.

ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 100 ಕಿ.ಮೀ ಗಿಂತ ಹೆಚ್ಚಿನ ವೇಗದಲ್ಲಿ ನಿಸರ್ಗ “ತೀವ್ರ ಚಂಡಮಾರುತ” ವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಇಂದು ಗೋವಾ,ಮಹಾರಾಷ್ಟ್ರಕ್ಕೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...