Homeಅಂಕಣಗಳುಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

- Advertisement -
- Advertisement -

ಭಾರತದಲ್ಲಿ ಮಾಧ್ಯಮ ಕ್ಷೇತ್ರ ತನ್ನ ಕೆಲಸ ನಿಲ್ಲಿಸಿ ಪ್ರಜಾತಂತ್ರ ವಿರೋಧಿ ಪಯಣ ಆರಂಭಿಸಿ ಬಹಳ ಕಾಲವೇ ಆಯಿತು. ಆದರೆ ತೀರಾ ಇತ್ತೀಚೆಗೆ ತನ್ನ ಜೀವವಿರೋಧಿತನವನ್ನು ಸಾಬೀತುಪಡಿಸಿಕೊಂಡಿತು. ಜಗತ್ತಿನೆಲ್ಲೆಡೆ ಮನುಷ್ಯರನ್ನು ಅತ್ಯಂತ ಕ್ಷುದ್ರವಾಗಿಸಿಬಿಟ್ಟ ಕಣ್ಣಿಗೆ ಕಾಣದ ಕೊರೊನಾ ಆವರಿಸುತ್ತಾ ಬಂದಂತೆ, ಕೆಲವರಾದರೂ ಭಿನ್ನವಾಗಿ ಆಲೋಚಿಸಲು ಶುರು ಮಾಡಿದ್ದರು. ಬದುಕು ಇಷ್ಟೇನಾ, ಹಾಗಿದ್ದ ಮೇಲೆ ಈ ಜಗಳ, ಈ ದ್ವೇಷ, ಈ ತಾರತಮ್ಯ ಏಕೆ ಎಂಬುದು ಅದರ ತಿರುಳಾಗಿತ್ತು. ಆದರೆ ಎಲ್ಲರೂ ಗಾಬರಿಗೊಳ್ಳುವ ಹಾಗೆ ನಮ್ಮ ಬಹುತೇಕ ಮಾಧ್ಯಮಗಳು ಇನ್ನಷ್ಟು ಉಲ್ಟಾ ದಿಕ್ಕಿನಲ್ಲಿ ಹೊರಟಿದ್ದವು.

ಕೊರೊನಾ ಸೋಂಕನ್ನು ಧರ್ಮವೊಂದಕ್ಕೆ ತಳುಕುಹಾಕಲು ಹೊರಟಾಗಲೇ ಮೊದಲ ಗಂಟೆ ಮೊಳಗಿತ್ತು. ದೇಶಕ್ಕೆ ದೇಶವೇ ದಿಗ್ಭ್ರಾಂತವಾಗಿ ಹೊಸಪರಿಸ್ಥಿತಿಗೆ ಹೊಂದಿಕೊಳ್ಳಲು ಒದ್ದಾಡುತ್ತಿದ್ದರೆ, ಬಡವರು ಬೀದಿಯ ಮೇಲೆ ಬಂದರೆ ಅವರನ್ನು ಬಡಿಯಲು ಪೊಲೀಸರ ಮೇಲೆ ಒತ್ತಡ ಹಾಕುವುದರಲ್ಲಿ ಮಾಧ್ಯಮಗಳು ನಿರತವಾಗಿದ್ದವು. ಮತ್ತೀಗ ದೇಶ ಕಳೆದೊಂದು ಶತಮಾನದಲ್ಲೇ ಅತೀ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವು ಒಂದು ಮೋಸದ ಪ್ಯಾಕೇಜನ್ನು ಬಿಡುಗಡೆ ಮಾಡಿದೆ; ಅದನ್ನು ಕನಿಷ್ಠ ವಿಮರ್ಶಾತ್ಮಕವಾಗಿ ನೋಡುವ ಕೆಲಸವನ್ನೂ ಬಹುತೇಕ ಮಾಧ್ಯಮಗಳು ಮಾಡಲಿಲ್ಲ. ಈ ಮೂರು ಸಂಗತಿಗಳು ಕಡೆಯ ಮೂರು ಬೆಲ್‍ಗಳು ಬಡಿದ ಹಾಗೆ ಎಂದು ದೇಶದ ಪ್ರಜ್ಞಾವಂತ ಸಮಾಜ ಭಾವಿಸಬೇಕಿತ್ತು; ಭಾವಿಸಿಯೂ ಇದೆ.

ಹೀಗಾಗಿಯೇ ಪರ್ಯಾಯ ಮಾಧ್ಯಮದ ಚರ್ಚೆಯೂ ಈ ಅವಧಿಯಲ್ಲಿ ಆರಂಭವಾಯಿತು. ಅದೇ ಕೆಲಸದಲ್ಲಿ ನಿರತರಾಗಿದ್ದ ಗೌರಿ ಮೀಡಿಯಾ ತಂಡವೂ ಅದಕ್ಕೆ ಪ್ರತಿಕ್ರಿಯಿಸುವುದರ ಭಾಗವಾಗಿ ಹೊಸ ಮಾಧ್ಯಮದ ಕುರಿತಾದ ತನ್ನ ಪರಿಕಲ್ಪನೆಯ ಪ್ರಸ್ತಾಪವೊಂದನ್ನು ಮುಂದಿಟ್ಟಿತು. ನ್ಯಾಯಪಥ ಮತ್ತು ನಾನುಗೌರಿ.ಕಾಂನಲ್ಲಿ ಪ್ರಕಟವಾದ ಆ ಪರಿಕಲ್ಪನೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ನಮ್ಮ ಬಳಗದಲ್ಲಿನ ಉಮೇದು ನಮಗೂ ಉತ್ಸಾಹ ತಂದಿತು.

ಆ ಬರಹದಲ್ಲಿ ಮುಖ್ಯವಾಹಿನಿ ಮಾಧ್ಯಮ ಎಂದು ಬಳಸಿದ್ದು ಕೆಲವರಲ್ಲಿ ಗೊಂದಲ ಮೂಡಿಸಿತ್ತು. ಇನ್ನೊಂದು ಚಾನೆಲ್ ಆರಂಭಿಸುವುದು ಅಥವಾ ದೊಡ್ಡ ರಾಜ್ಯ ಮಟ್ಟದ ಪತ್ರಿಕೆಯನ್ನು ತರುವುದು ಸಾಧ್ಯವೇ ಎಂಬುದು ಆ ಗೊಂದಲಕ್ಕೆ ಕಾರಣವಾಗಿತ್ತು. ಚಾನೆಲ್ ಅಥವಾ ದೊಡ್ಡ ಪತ್ರಿಕೆ ಯಾರಾದರೂ ಮಾಡಿದರೆ ಅದಕ್ಕೆ ನಮ್ಮ ತಕರಾರೇನೂ ಇಲ್ಲ; ಆದರೆ ನಮ್ಮ ಪರಿಕಲ್ಪನೆಯ ಮುಖ್ಯವಾಹಿನಿ ಮಾಧ್ಯಮ ಅದಲ್ಲ ಎಂದು ಸ್ಪಷ್ಟಪಡಿಸಬೇಕಾಗಿ ಬಂದಿತು. ಮುಖ್ಯವಾಹಿನಿ ಎಂದಾಗ ಕಣ್ಣಮುಂದೆ ಬರುವ ಕಲ್ಪನೆಯು ಹಾಗೇ ಇರುತ್ತದಾದ್ದರಿಂದ, ಅದು ನನ್ನ ಬರಹದಲ್ಲೇ ಇದ್ದ ಸಮಸ್ಯೆಯಾಗಿತ್ತು ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳಬಯಸುತ್ತೇನೆ.

ಹೊಸ ಮುಖ್ಯವಾಹಿನಿ ಎಂದರೆ ಜನಸಾಮಾನ್ಯರೆಲ್ಲರೂ ತಮ್ಮದೆಂದು ಭಾವಿಸಿ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮಾಧ್ಯಮದ ಹೊಸರೂಪವಾಗಿರುತ್ತದೆ. ನೂರಾರು ಸಣ್ಣ ಪ್ರಯತ್ನಗಳು ಸ್ವಾಯತ್ತವಾಗಿ ಉಳಿದುಕೊಂಡೂ ಸಮಷ್ಟಿಯಾಗಿ ಸಮಷ್ಟಿ ಹಿತಕ್ಕಾಗಿ ಕೆಲಸ ಮಾಡುವ ಸಂಘಟನಾ ರೂಪ ಹಾಗೂ ಉದ್ದೇಶ ಹೊಂದಿರುತ್ತವೆ.

ಈ ಕುರಿತು ನಮ್ಮ ಪತ್ರಿಕಾ ಬಳಗದಲ್ಲೂ ಚರ್ಚೆ ಶುರುವಾಗಿದ್ದು, ಇನ್ನೊಂದೆರಡು ವಾರಗಳಲ್ಲಿ ಅಂತಿಮಗೊಳ್ಳಲಿದೆ. ಅದನ್ನು ನಿಮ್ಮೆಲ್ಲರ ಮುಂದಿಡಲಾಗುತ್ತದೆ. ಎಲ್ಲರೂ ಮುಕ್ತವಾದ ಚರ್ಚೆ ನಡೆಸೋಣ. ಅಲ್ಲಿಂದಾಚೆಗೆ ನಾವೆಲ್ಲರೂ ಜೊತೆಗೂಡಿ ಈ ಕಾಲದ ಬಹುಮುಖ್ಯ ಅಗತ್ಯವಾದ ಹೊಸ ಮಾಧ್ಯಮವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿದ್ದೇವೆ ಎಂಬ ವಿಶ್ವಾಸ ನಮಗಂತೂ ಇದೆ. ಕಡೆಯ ಮೂರು ಗಂಟೆ ಹೊಡೆದ ಮೇಲೂ ನಮ್ಮ ಕೆಲಸಕ್ಕೆ ಚಾಲನೆ ಕೊಡದಿದ್ದರೆ ಹೇಗೆ, ಅಲ್ಲವೇ?


ಇದನ್ನು ಓದಿ: ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...