Homeಅಂಕಣಗಳುಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

- Advertisement -
- Advertisement -

ಭಾರತದಲ್ಲಿ ಮಾಧ್ಯಮ ಕ್ಷೇತ್ರ ತನ್ನ ಕೆಲಸ ನಿಲ್ಲಿಸಿ ಪ್ರಜಾತಂತ್ರ ವಿರೋಧಿ ಪಯಣ ಆರಂಭಿಸಿ ಬಹಳ ಕಾಲವೇ ಆಯಿತು. ಆದರೆ ತೀರಾ ಇತ್ತೀಚೆಗೆ ತನ್ನ ಜೀವವಿರೋಧಿತನವನ್ನು ಸಾಬೀತುಪಡಿಸಿಕೊಂಡಿತು. ಜಗತ್ತಿನೆಲ್ಲೆಡೆ ಮನುಷ್ಯರನ್ನು ಅತ್ಯಂತ ಕ್ಷುದ್ರವಾಗಿಸಿಬಿಟ್ಟ ಕಣ್ಣಿಗೆ ಕಾಣದ ಕೊರೊನಾ ಆವರಿಸುತ್ತಾ ಬಂದಂತೆ, ಕೆಲವರಾದರೂ ಭಿನ್ನವಾಗಿ ಆಲೋಚಿಸಲು ಶುರು ಮಾಡಿದ್ದರು. ಬದುಕು ಇಷ್ಟೇನಾ, ಹಾಗಿದ್ದ ಮೇಲೆ ಈ ಜಗಳ, ಈ ದ್ವೇಷ, ಈ ತಾರತಮ್ಯ ಏಕೆ ಎಂಬುದು ಅದರ ತಿರುಳಾಗಿತ್ತು. ಆದರೆ ಎಲ್ಲರೂ ಗಾಬರಿಗೊಳ್ಳುವ ಹಾಗೆ ನಮ್ಮ ಬಹುತೇಕ ಮಾಧ್ಯಮಗಳು ಇನ್ನಷ್ಟು ಉಲ್ಟಾ ದಿಕ್ಕಿನಲ್ಲಿ ಹೊರಟಿದ್ದವು.

ಕೊರೊನಾ ಸೋಂಕನ್ನು ಧರ್ಮವೊಂದಕ್ಕೆ ತಳುಕುಹಾಕಲು ಹೊರಟಾಗಲೇ ಮೊದಲ ಗಂಟೆ ಮೊಳಗಿತ್ತು. ದೇಶಕ್ಕೆ ದೇಶವೇ ದಿಗ್ಭ್ರಾಂತವಾಗಿ ಹೊಸಪರಿಸ್ಥಿತಿಗೆ ಹೊಂದಿಕೊಳ್ಳಲು ಒದ್ದಾಡುತ್ತಿದ್ದರೆ, ಬಡವರು ಬೀದಿಯ ಮೇಲೆ ಬಂದರೆ ಅವರನ್ನು ಬಡಿಯಲು ಪೊಲೀಸರ ಮೇಲೆ ಒತ್ತಡ ಹಾಕುವುದರಲ್ಲಿ ಮಾಧ್ಯಮಗಳು ನಿರತವಾಗಿದ್ದವು. ಮತ್ತೀಗ ದೇಶ ಕಳೆದೊಂದು ಶತಮಾನದಲ್ಲೇ ಅತೀ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವು ಒಂದು ಮೋಸದ ಪ್ಯಾಕೇಜನ್ನು ಬಿಡುಗಡೆ ಮಾಡಿದೆ; ಅದನ್ನು ಕನಿಷ್ಠ ವಿಮರ್ಶಾತ್ಮಕವಾಗಿ ನೋಡುವ ಕೆಲಸವನ್ನೂ ಬಹುತೇಕ ಮಾಧ್ಯಮಗಳು ಮಾಡಲಿಲ್ಲ. ಈ ಮೂರು ಸಂಗತಿಗಳು ಕಡೆಯ ಮೂರು ಬೆಲ್‍ಗಳು ಬಡಿದ ಹಾಗೆ ಎಂದು ದೇಶದ ಪ್ರಜ್ಞಾವಂತ ಸಮಾಜ ಭಾವಿಸಬೇಕಿತ್ತು; ಭಾವಿಸಿಯೂ ಇದೆ.

ಹೀಗಾಗಿಯೇ ಪರ್ಯಾಯ ಮಾಧ್ಯಮದ ಚರ್ಚೆಯೂ ಈ ಅವಧಿಯಲ್ಲಿ ಆರಂಭವಾಯಿತು. ಅದೇ ಕೆಲಸದಲ್ಲಿ ನಿರತರಾಗಿದ್ದ ಗೌರಿ ಮೀಡಿಯಾ ತಂಡವೂ ಅದಕ್ಕೆ ಪ್ರತಿಕ್ರಿಯಿಸುವುದರ ಭಾಗವಾಗಿ ಹೊಸ ಮಾಧ್ಯಮದ ಕುರಿತಾದ ತನ್ನ ಪರಿಕಲ್ಪನೆಯ ಪ್ರಸ್ತಾಪವೊಂದನ್ನು ಮುಂದಿಟ್ಟಿತು. ನ್ಯಾಯಪಥ ಮತ್ತು ನಾನುಗೌರಿ.ಕಾಂನಲ್ಲಿ ಪ್ರಕಟವಾದ ಆ ಪರಿಕಲ್ಪನೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ನಮ್ಮ ಬಳಗದಲ್ಲಿನ ಉಮೇದು ನಮಗೂ ಉತ್ಸಾಹ ತಂದಿತು.

ಆ ಬರಹದಲ್ಲಿ ಮುಖ್ಯವಾಹಿನಿ ಮಾಧ್ಯಮ ಎಂದು ಬಳಸಿದ್ದು ಕೆಲವರಲ್ಲಿ ಗೊಂದಲ ಮೂಡಿಸಿತ್ತು. ಇನ್ನೊಂದು ಚಾನೆಲ್ ಆರಂಭಿಸುವುದು ಅಥವಾ ದೊಡ್ಡ ರಾಜ್ಯ ಮಟ್ಟದ ಪತ್ರಿಕೆಯನ್ನು ತರುವುದು ಸಾಧ್ಯವೇ ಎಂಬುದು ಆ ಗೊಂದಲಕ್ಕೆ ಕಾರಣವಾಗಿತ್ತು. ಚಾನೆಲ್ ಅಥವಾ ದೊಡ್ಡ ಪತ್ರಿಕೆ ಯಾರಾದರೂ ಮಾಡಿದರೆ ಅದಕ್ಕೆ ನಮ್ಮ ತಕರಾರೇನೂ ಇಲ್ಲ; ಆದರೆ ನಮ್ಮ ಪರಿಕಲ್ಪನೆಯ ಮುಖ್ಯವಾಹಿನಿ ಮಾಧ್ಯಮ ಅದಲ್ಲ ಎಂದು ಸ್ಪಷ್ಟಪಡಿಸಬೇಕಾಗಿ ಬಂದಿತು. ಮುಖ್ಯವಾಹಿನಿ ಎಂದಾಗ ಕಣ್ಣಮುಂದೆ ಬರುವ ಕಲ್ಪನೆಯು ಹಾಗೇ ಇರುತ್ತದಾದ್ದರಿಂದ, ಅದು ನನ್ನ ಬರಹದಲ್ಲೇ ಇದ್ದ ಸಮಸ್ಯೆಯಾಗಿತ್ತು ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳಬಯಸುತ್ತೇನೆ.

ಹೊಸ ಮುಖ್ಯವಾಹಿನಿ ಎಂದರೆ ಜನಸಾಮಾನ್ಯರೆಲ್ಲರೂ ತಮ್ಮದೆಂದು ಭಾವಿಸಿ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮಾಧ್ಯಮದ ಹೊಸರೂಪವಾಗಿರುತ್ತದೆ. ನೂರಾರು ಸಣ್ಣ ಪ್ರಯತ್ನಗಳು ಸ್ವಾಯತ್ತವಾಗಿ ಉಳಿದುಕೊಂಡೂ ಸಮಷ್ಟಿಯಾಗಿ ಸಮಷ್ಟಿ ಹಿತಕ್ಕಾಗಿ ಕೆಲಸ ಮಾಡುವ ಸಂಘಟನಾ ರೂಪ ಹಾಗೂ ಉದ್ದೇಶ ಹೊಂದಿರುತ್ತವೆ.

ಈ ಕುರಿತು ನಮ್ಮ ಪತ್ರಿಕಾ ಬಳಗದಲ್ಲೂ ಚರ್ಚೆ ಶುರುವಾಗಿದ್ದು, ಇನ್ನೊಂದೆರಡು ವಾರಗಳಲ್ಲಿ ಅಂತಿಮಗೊಳ್ಳಲಿದೆ. ಅದನ್ನು ನಿಮ್ಮೆಲ್ಲರ ಮುಂದಿಡಲಾಗುತ್ತದೆ. ಎಲ್ಲರೂ ಮುಕ್ತವಾದ ಚರ್ಚೆ ನಡೆಸೋಣ. ಅಲ್ಲಿಂದಾಚೆಗೆ ನಾವೆಲ್ಲರೂ ಜೊತೆಗೂಡಿ ಈ ಕಾಲದ ಬಹುಮುಖ್ಯ ಅಗತ್ಯವಾದ ಹೊಸ ಮಾಧ್ಯಮವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿದ್ದೇವೆ ಎಂಬ ವಿಶ್ವಾಸ ನಮಗಂತೂ ಇದೆ. ಕಡೆಯ ಮೂರು ಗಂಟೆ ಹೊಡೆದ ಮೇಲೂ ನಮ್ಮ ಕೆಲಸಕ್ಕೆ ಚಾಲನೆ ಕೊಡದಿದ್ದರೆ ಹೇಗೆ, ಅಲ್ಲವೇ?


ಇದನ್ನು ಓದಿ: ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...