Homeಅಂಕಣಗಳುಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

- Advertisement -
- Advertisement -

ಭಾರತದಲ್ಲಿ ಮಾಧ್ಯಮ ಕ್ಷೇತ್ರ ತನ್ನ ಕೆಲಸ ನಿಲ್ಲಿಸಿ ಪ್ರಜಾತಂತ್ರ ವಿರೋಧಿ ಪಯಣ ಆರಂಭಿಸಿ ಬಹಳ ಕಾಲವೇ ಆಯಿತು. ಆದರೆ ತೀರಾ ಇತ್ತೀಚೆಗೆ ತನ್ನ ಜೀವವಿರೋಧಿತನವನ್ನು ಸಾಬೀತುಪಡಿಸಿಕೊಂಡಿತು. ಜಗತ್ತಿನೆಲ್ಲೆಡೆ ಮನುಷ್ಯರನ್ನು ಅತ್ಯಂತ ಕ್ಷುದ್ರವಾಗಿಸಿಬಿಟ್ಟ ಕಣ್ಣಿಗೆ ಕಾಣದ ಕೊರೊನಾ ಆವರಿಸುತ್ತಾ ಬಂದಂತೆ, ಕೆಲವರಾದರೂ ಭಿನ್ನವಾಗಿ ಆಲೋಚಿಸಲು ಶುರು ಮಾಡಿದ್ದರು. ಬದುಕು ಇಷ್ಟೇನಾ, ಹಾಗಿದ್ದ ಮೇಲೆ ಈ ಜಗಳ, ಈ ದ್ವೇಷ, ಈ ತಾರತಮ್ಯ ಏಕೆ ಎಂಬುದು ಅದರ ತಿರುಳಾಗಿತ್ತು. ಆದರೆ ಎಲ್ಲರೂ ಗಾಬರಿಗೊಳ್ಳುವ ಹಾಗೆ ನಮ್ಮ ಬಹುತೇಕ ಮಾಧ್ಯಮಗಳು ಇನ್ನಷ್ಟು ಉಲ್ಟಾ ದಿಕ್ಕಿನಲ್ಲಿ ಹೊರಟಿದ್ದವು.

ಕೊರೊನಾ ಸೋಂಕನ್ನು ಧರ್ಮವೊಂದಕ್ಕೆ ತಳುಕುಹಾಕಲು ಹೊರಟಾಗಲೇ ಮೊದಲ ಗಂಟೆ ಮೊಳಗಿತ್ತು. ದೇಶಕ್ಕೆ ದೇಶವೇ ದಿಗ್ಭ್ರಾಂತವಾಗಿ ಹೊಸಪರಿಸ್ಥಿತಿಗೆ ಹೊಂದಿಕೊಳ್ಳಲು ಒದ್ದಾಡುತ್ತಿದ್ದರೆ, ಬಡವರು ಬೀದಿಯ ಮೇಲೆ ಬಂದರೆ ಅವರನ್ನು ಬಡಿಯಲು ಪೊಲೀಸರ ಮೇಲೆ ಒತ್ತಡ ಹಾಕುವುದರಲ್ಲಿ ಮಾಧ್ಯಮಗಳು ನಿರತವಾಗಿದ್ದವು. ಮತ್ತೀಗ ದೇಶ ಕಳೆದೊಂದು ಶತಮಾನದಲ್ಲೇ ಅತೀ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವು ಒಂದು ಮೋಸದ ಪ್ಯಾಕೇಜನ್ನು ಬಿಡುಗಡೆ ಮಾಡಿದೆ; ಅದನ್ನು ಕನಿಷ್ಠ ವಿಮರ್ಶಾತ್ಮಕವಾಗಿ ನೋಡುವ ಕೆಲಸವನ್ನೂ ಬಹುತೇಕ ಮಾಧ್ಯಮಗಳು ಮಾಡಲಿಲ್ಲ. ಈ ಮೂರು ಸಂಗತಿಗಳು ಕಡೆಯ ಮೂರು ಬೆಲ್‍ಗಳು ಬಡಿದ ಹಾಗೆ ಎಂದು ದೇಶದ ಪ್ರಜ್ಞಾವಂತ ಸಮಾಜ ಭಾವಿಸಬೇಕಿತ್ತು; ಭಾವಿಸಿಯೂ ಇದೆ.

ಹೀಗಾಗಿಯೇ ಪರ್ಯಾಯ ಮಾಧ್ಯಮದ ಚರ್ಚೆಯೂ ಈ ಅವಧಿಯಲ್ಲಿ ಆರಂಭವಾಯಿತು. ಅದೇ ಕೆಲಸದಲ್ಲಿ ನಿರತರಾಗಿದ್ದ ಗೌರಿ ಮೀಡಿಯಾ ತಂಡವೂ ಅದಕ್ಕೆ ಪ್ರತಿಕ್ರಿಯಿಸುವುದರ ಭಾಗವಾಗಿ ಹೊಸ ಮಾಧ್ಯಮದ ಕುರಿತಾದ ತನ್ನ ಪರಿಕಲ್ಪನೆಯ ಪ್ರಸ್ತಾಪವೊಂದನ್ನು ಮುಂದಿಟ್ಟಿತು. ನ್ಯಾಯಪಥ ಮತ್ತು ನಾನುಗೌರಿ.ಕಾಂನಲ್ಲಿ ಪ್ರಕಟವಾದ ಆ ಪರಿಕಲ್ಪನೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ನಮ್ಮ ಬಳಗದಲ್ಲಿನ ಉಮೇದು ನಮಗೂ ಉತ್ಸಾಹ ತಂದಿತು.

ಆ ಬರಹದಲ್ಲಿ ಮುಖ್ಯವಾಹಿನಿ ಮಾಧ್ಯಮ ಎಂದು ಬಳಸಿದ್ದು ಕೆಲವರಲ್ಲಿ ಗೊಂದಲ ಮೂಡಿಸಿತ್ತು. ಇನ್ನೊಂದು ಚಾನೆಲ್ ಆರಂಭಿಸುವುದು ಅಥವಾ ದೊಡ್ಡ ರಾಜ್ಯ ಮಟ್ಟದ ಪತ್ರಿಕೆಯನ್ನು ತರುವುದು ಸಾಧ್ಯವೇ ಎಂಬುದು ಆ ಗೊಂದಲಕ್ಕೆ ಕಾರಣವಾಗಿತ್ತು. ಚಾನೆಲ್ ಅಥವಾ ದೊಡ್ಡ ಪತ್ರಿಕೆ ಯಾರಾದರೂ ಮಾಡಿದರೆ ಅದಕ್ಕೆ ನಮ್ಮ ತಕರಾರೇನೂ ಇಲ್ಲ; ಆದರೆ ನಮ್ಮ ಪರಿಕಲ್ಪನೆಯ ಮುಖ್ಯವಾಹಿನಿ ಮಾಧ್ಯಮ ಅದಲ್ಲ ಎಂದು ಸ್ಪಷ್ಟಪಡಿಸಬೇಕಾಗಿ ಬಂದಿತು. ಮುಖ್ಯವಾಹಿನಿ ಎಂದಾಗ ಕಣ್ಣಮುಂದೆ ಬರುವ ಕಲ್ಪನೆಯು ಹಾಗೇ ಇರುತ್ತದಾದ್ದರಿಂದ, ಅದು ನನ್ನ ಬರಹದಲ್ಲೇ ಇದ್ದ ಸಮಸ್ಯೆಯಾಗಿತ್ತು ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳಬಯಸುತ್ತೇನೆ.

ಹೊಸ ಮುಖ್ಯವಾಹಿನಿ ಎಂದರೆ ಜನಸಾಮಾನ್ಯರೆಲ್ಲರೂ ತಮ್ಮದೆಂದು ಭಾವಿಸಿ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮಾಧ್ಯಮದ ಹೊಸರೂಪವಾಗಿರುತ್ತದೆ. ನೂರಾರು ಸಣ್ಣ ಪ್ರಯತ್ನಗಳು ಸ್ವಾಯತ್ತವಾಗಿ ಉಳಿದುಕೊಂಡೂ ಸಮಷ್ಟಿಯಾಗಿ ಸಮಷ್ಟಿ ಹಿತಕ್ಕಾಗಿ ಕೆಲಸ ಮಾಡುವ ಸಂಘಟನಾ ರೂಪ ಹಾಗೂ ಉದ್ದೇಶ ಹೊಂದಿರುತ್ತವೆ.

ಈ ಕುರಿತು ನಮ್ಮ ಪತ್ರಿಕಾ ಬಳಗದಲ್ಲೂ ಚರ್ಚೆ ಶುರುವಾಗಿದ್ದು, ಇನ್ನೊಂದೆರಡು ವಾರಗಳಲ್ಲಿ ಅಂತಿಮಗೊಳ್ಳಲಿದೆ. ಅದನ್ನು ನಿಮ್ಮೆಲ್ಲರ ಮುಂದಿಡಲಾಗುತ್ತದೆ. ಎಲ್ಲರೂ ಮುಕ್ತವಾದ ಚರ್ಚೆ ನಡೆಸೋಣ. ಅಲ್ಲಿಂದಾಚೆಗೆ ನಾವೆಲ್ಲರೂ ಜೊತೆಗೂಡಿ ಈ ಕಾಲದ ಬಹುಮುಖ್ಯ ಅಗತ್ಯವಾದ ಹೊಸ ಮಾಧ್ಯಮವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿದ್ದೇವೆ ಎಂಬ ವಿಶ್ವಾಸ ನಮಗಂತೂ ಇದೆ. ಕಡೆಯ ಮೂರು ಗಂಟೆ ಹೊಡೆದ ಮೇಲೂ ನಮ್ಮ ಕೆಲಸಕ್ಕೆ ಚಾಲನೆ ಕೊಡದಿದ್ದರೆ ಹೇಗೆ, ಅಲ್ಲವೇ?


ಇದನ್ನು ಓದಿ: ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...