Homeಅಂಕಣಗಳುಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು

- Advertisement -
- Advertisement -

ಭಾರತದಲ್ಲಿ ಮಾಧ್ಯಮ ಕ್ಷೇತ್ರ ತನ್ನ ಕೆಲಸ ನಿಲ್ಲಿಸಿ ಪ್ರಜಾತಂತ್ರ ವಿರೋಧಿ ಪಯಣ ಆರಂಭಿಸಿ ಬಹಳ ಕಾಲವೇ ಆಯಿತು. ಆದರೆ ತೀರಾ ಇತ್ತೀಚೆಗೆ ತನ್ನ ಜೀವವಿರೋಧಿತನವನ್ನು ಸಾಬೀತುಪಡಿಸಿಕೊಂಡಿತು. ಜಗತ್ತಿನೆಲ್ಲೆಡೆ ಮನುಷ್ಯರನ್ನು ಅತ್ಯಂತ ಕ್ಷುದ್ರವಾಗಿಸಿಬಿಟ್ಟ ಕಣ್ಣಿಗೆ ಕಾಣದ ಕೊರೊನಾ ಆವರಿಸುತ್ತಾ ಬಂದಂತೆ, ಕೆಲವರಾದರೂ ಭಿನ್ನವಾಗಿ ಆಲೋಚಿಸಲು ಶುರು ಮಾಡಿದ್ದರು. ಬದುಕು ಇಷ್ಟೇನಾ, ಹಾಗಿದ್ದ ಮೇಲೆ ಈ ಜಗಳ, ಈ ದ್ವೇಷ, ಈ ತಾರತಮ್ಯ ಏಕೆ ಎಂಬುದು ಅದರ ತಿರುಳಾಗಿತ್ತು. ಆದರೆ ಎಲ್ಲರೂ ಗಾಬರಿಗೊಳ್ಳುವ ಹಾಗೆ ನಮ್ಮ ಬಹುತೇಕ ಮಾಧ್ಯಮಗಳು ಇನ್ನಷ್ಟು ಉಲ್ಟಾ ದಿಕ್ಕಿನಲ್ಲಿ ಹೊರಟಿದ್ದವು.

ಕೊರೊನಾ ಸೋಂಕನ್ನು ಧರ್ಮವೊಂದಕ್ಕೆ ತಳುಕುಹಾಕಲು ಹೊರಟಾಗಲೇ ಮೊದಲ ಗಂಟೆ ಮೊಳಗಿತ್ತು. ದೇಶಕ್ಕೆ ದೇಶವೇ ದಿಗ್ಭ್ರಾಂತವಾಗಿ ಹೊಸಪರಿಸ್ಥಿತಿಗೆ ಹೊಂದಿಕೊಳ್ಳಲು ಒದ್ದಾಡುತ್ತಿದ್ದರೆ, ಬಡವರು ಬೀದಿಯ ಮೇಲೆ ಬಂದರೆ ಅವರನ್ನು ಬಡಿಯಲು ಪೊಲೀಸರ ಮೇಲೆ ಒತ್ತಡ ಹಾಕುವುದರಲ್ಲಿ ಮಾಧ್ಯಮಗಳು ನಿರತವಾಗಿದ್ದವು. ಮತ್ತೀಗ ದೇಶ ಕಳೆದೊಂದು ಶತಮಾನದಲ್ಲೇ ಅತೀ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಅದಕ್ಕೆ ಕೇಂದ್ರ ಸರ್ಕಾರವು ಒಂದು ಮೋಸದ ಪ್ಯಾಕೇಜನ್ನು ಬಿಡುಗಡೆ ಮಾಡಿದೆ; ಅದನ್ನು ಕನಿಷ್ಠ ವಿಮರ್ಶಾತ್ಮಕವಾಗಿ ನೋಡುವ ಕೆಲಸವನ್ನೂ ಬಹುತೇಕ ಮಾಧ್ಯಮಗಳು ಮಾಡಲಿಲ್ಲ. ಈ ಮೂರು ಸಂಗತಿಗಳು ಕಡೆಯ ಮೂರು ಬೆಲ್‍ಗಳು ಬಡಿದ ಹಾಗೆ ಎಂದು ದೇಶದ ಪ್ರಜ್ಞಾವಂತ ಸಮಾಜ ಭಾವಿಸಬೇಕಿತ್ತು; ಭಾವಿಸಿಯೂ ಇದೆ.

ಹೀಗಾಗಿಯೇ ಪರ್ಯಾಯ ಮಾಧ್ಯಮದ ಚರ್ಚೆಯೂ ಈ ಅವಧಿಯಲ್ಲಿ ಆರಂಭವಾಯಿತು. ಅದೇ ಕೆಲಸದಲ್ಲಿ ನಿರತರಾಗಿದ್ದ ಗೌರಿ ಮೀಡಿಯಾ ತಂಡವೂ ಅದಕ್ಕೆ ಪ್ರತಿಕ್ರಿಯಿಸುವುದರ ಭಾಗವಾಗಿ ಹೊಸ ಮಾಧ್ಯಮದ ಕುರಿತಾದ ತನ್ನ ಪರಿಕಲ್ಪನೆಯ ಪ್ರಸ್ತಾಪವೊಂದನ್ನು ಮುಂದಿಟ್ಟಿತು. ನ್ಯಾಯಪಥ ಮತ್ತು ನಾನುಗೌರಿ.ಕಾಂನಲ್ಲಿ ಪ್ರಕಟವಾದ ಆ ಪರಿಕಲ್ಪನೆಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದವು. ನಮ್ಮ ಬಳಗದಲ್ಲಿನ ಉಮೇದು ನಮಗೂ ಉತ್ಸಾಹ ತಂದಿತು.

ಆ ಬರಹದಲ್ಲಿ ಮುಖ್ಯವಾಹಿನಿ ಮಾಧ್ಯಮ ಎಂದು ಬಳಸಿದ್ದು ಕೆಲವರಲ್ಲಿ ಗೊಂದಲ ಮೂಡಿಸಿತ್ತು. ಇನ್ನೊಂದು ಚಾನೆಲ್ ಆರಂಭಿಸುವುದು ಅಥವಾ ದೊಡ್ಡ ರಾಜ್ಯ ಮಟ್ಟದ ಪತ್ರಿಕೆಯನ್ನು ತರುವುದು ಸಾಧ್ಯವೇ ಎಂಬುದು ಆ ಗೊಂದಲಕ್ಕೆ ಕಾರಣವಾಗಿತ್ತು. ಚಾನೆಲ್ ಅಥವಾ ದೊಡ್ಡ ಪತ್ರಿಕೆ ಯಾರಾದರೂ ಮಾಡಿದರೆ ಅದಕ್ಕೆ ನಮ್ಮ ತಕರಾರೇನೂ ಇಲ್ಲ; ಆದರೆ ನಮ್ಮ ಪರಿಕಲ್ಪನೆಯ ಮುಖ್ಯವಾಹಿನಿ ಮಾಧ್ಯಮ ಅದಲ್ಲ ಎಂದು ಸ್ಪಷ್ಟಪಡಿಸಬೇಕಾಗಿ ಬಂದಿತು. ಮುಖ್ಯವಾಹಿನಿ ಎಂದಾಗ ಕಣ್ಣಮುಂದೆ ಬರುವ ಕಲ್ಪನೆಯು ಹಾಗೇ ಇರುತ್ತದಾದ್ದರಿಂದ, ಅದು ನನ್ನ ಬರಹದಲ್ಲೇ ಇದ್ದ ಸಮಸ್ಯೆಯಾಗಿತ್ತು ಎಂಬುದನ್ನು ವಿನಮ್ರವಾಗಿ ಒಪ್ಪಿಕೊಳ್ಳಬಯಸುತ್ತೇನೆ.

ಹೊಸ ಮುಖ್ಯವಾಹಿನಿ ಎಂದರೆ ಜನಸಾಮಾನ್ಯರೆಲ್ಲರೂ ತಮ್ಮದೆಂದು ಭಾವಿಸಿ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮಾಧ್ಯಮದ ಹೊಸರೂಪವಾಗಿರುತ್ತದೆ. ನೂರಾರು ಸಣ್ಣ ಪ್ರಯತ್ನಗಳು ಸ್ವಾಯತ್ತವಾಗಿ ಉಳಿದುಕೊಂಡೂ ಸಮಷ್ಟಿಯಾಗಿ ಸಮಷ್ಟಿ ಹಿತಕ್ಕಾಗಿ ಕೆಲಸ ಮಾಡುವ ಸಂಘಟನಾ ರೂಪ ಹಾಗೂ ಉದ್ದೇಶ ಹೊಂದಿರುತ್ತವೆ.

ಈ ಕುರಿತು ನಮ್ಮ ಪತ್ರಿಕಾ ಬಳಗದಲ್ಲೂ ಚರ್ಚೆ ಶುರುವಾಗಿದ್ದು, ಇನ್ನೊಂದೆರಡು ವಾರಗಳಲ್ಲಿ ಅಂತಿಮಗೊಳ್ಳಲಿದೆ. ಅದನ್ನು ನಿಮ್ಮೆಲ್ಲರ ಮುಂದಿಡಲಾಗುತ್ತದೆ. ಎಲ್ಲರೂ ಮುಕ್ತವಾದ ಚರ್ಚೆ ನಡೆಸೋಣ. ಅಲ್ಲಿಂದಾಚೆಗೆ ನಾವೆಲ್ಲರೂ ಜೊತೆಗೂಡಿ ಈ ಕಾಲದ ಬಹುಮುಖ್ಯ ಅಗತ್ಯವಾದ ಹೊಸ ಮಾಧ್ಯಮವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿದ್ದೇವೆ ಎಂಬ ವಿಶ್ವಾಸ ನಮಗಂತೂ ಇದೆ. ಕಡೆಯ ಮೂರು ಗಂಟೆ ಹೊಡೆದ ಮೇಲೂ ನಮ್ಮ ಕೆಲಸಕ್ಕೆ ಚಾಲನೆ ಕೊಡದಿದ್ದರೆ ಹೇಗೆ, ಅಲ್ಲವೇ?


ಇದನ್ನು ಓದಿ: ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...