HomeಮುಖಪುಟJNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.

- Advertisement -
- Advertisement -

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಬಂಧಿಸಿರುವ ಪಿಂಜ್ರಾ ತೋಡ್ ಕಾರ್ಯಕರ್ತೆಯಾದ ದೇವಂಗನಾ ಕಾಳಿತಾ ಅವರಿಗೆ ಮಂಗಳವಾರ ದರಿಯಗಂಜ್ ಹಿಂಸಾಚಾರ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.

ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯೊಂದರಲ್ಲಿ ದರಿಯಗಂಜ್‌ನಲ್ಲಿ  2019ರ ಡಿಸೆಂಬರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಬೆಂಬಲಿಸಲು ಪೊಲೀಸರು ಯಾವುದೇ ದೃಢವಾದ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ಹೇಳಿದ್ದಾರೆ.

ಆದರೆ, ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 


ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಮ್ಯಾಜಿಸ್ಟ್ರೇಟ್ ಪಾಂಡೆ ಕಾಳಿತಾಗೆ ಜಾಮೀನು ನೀಡುವಾಗ, “ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳ ಆಧಾರದ ಮೇಲೆ ಎನ್‌ಆರ್‌ಸಿ ಮಸೂದೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು, ಆದರೆ ಇಲ್ಲಿಯವರೆಗೆ ತನಿಖೆಯಲ್ಲಿ ಐಪಿಸಿಯ 325/352 ಸೆಕ್ಷನ್‌ಗಳನ್ನು ಅವರ ಮೇಲೆ ಹೂಡಿರುವುದಕ್ಕೆ ಆರೋಪಿಗಳ ಮೇಲೆ ಯಾವುದೇ ನೇರ ಸಾಕ್ಷ್ಯಗಳು ಕಂಡುಬಂದಿಲ್ಲ ಎಂದಿದ್ದಾರೆ”

ಹಿಂಸಾಚಾರದ ಸ್ಥಳದಲ್ಲಿ ಕಾಳಿತಾ ಇದ್ದರು ಎಂದು ಎಂಎಲ್‌ಸಿ ಆಧಾರದ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ. ಆದರೆ “ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳು ಭಾಗಿಯಾಗಿರುವುದನ್ನು ಅಥವಾ ನಿರ್ದಿಷ್ಟವಾಗಿ ಯಾವುದೇ ಹಿಂಸಾತ್ಮಕ ಚಟುವಟಿಕೆ ನಡೆಸಿರುವುದನ್ನು ತೋರಿಸುತ್ತಿಲ್ಲ” ಎಂದಿದ್ದಾರೆ.

ಕೇವಲ ಎಂಎಲ್‌ಸಿ ಆಧಾರದಲ್ಲಿ ಆರೋಪಿಗಳಿಗೆ ಜಾಮೀನು ನಿರಾಕರಿಸಲು ಸಾಧ್ಯವಾಗುವುದಿಲ್ಲ. ಕಾಳಿತಾ ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನಲ್ಲಿ ಯಾವುದೇ ದೋಷಾರೋಪಣೆ ವಸ್ತುಗಳು ಕಂಡುಬಂದಿಲ್ಲ ಎಂದು ಪಾಂಡೆ ಹೇಳಿದರು.

ಪರಿಸ್ಥಿತಿ ಈಗಿರುವಾಗ ಕಾಳಿತಾ ಯಾವುದೇ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಅಥವಾ ಪ್ರಚೋದಿಸಿದ್ದಾರೆ ಎಂದು ಹೇಳುವುದು ಕಷ್ಟ. ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಉದ್ದೇಶವನ್ನು ಅವರು ಹೊಂದಿರಬಹುದು. ನಂತರ ಅದು ಹಿಂಸಾತ್ಮಕವಾಗಿರಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ತನಿಖೆಯಲ್ಲಿ ಸಹಕರಿಸಲು ಕಾಳಿತಾ ಅವರು ಒಪ್ಪಿದರೆ ಆಕೆಗೆ ಷರತ್ತುಗಳೊಂದಿಗೆ ಜಾಮೀನು ನೀಡಬಹುದು ಎಂದು ಮ್ಯಾಜಿಸ್ಟ್ರೇಟ್ ತಿಳಿಸಿದರು. 30,000 ರೂ. ಜಾಮೀನು ಮತ್ತು ಅವಳ ಪಾಸ್‌ಪೋರ್ಟ್‌ ಜಮಾ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಷರತ್ತುಗಳನ್ನು ವಿಧಿಸಿದ್ದಾರೆ.

ನರ್ವಾಲ್ ಮತ್ತು ಕಾಳಿತಾ ಅವರೊಂದಿಗೆ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಾದ ಸಫೂರಾ ಜರ್ಗರ್, ಮೀರನ್ ಹೈದರ್, ಶಿಫಾ-ಉರ್-ರೆಹಮಾನ್, ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ಹಿಂಸಾಚಾರದಲ್ಲಿ ತಮ್ಮ ಪಾತ್ರದ ಆರೋಪಕ್ಕೆ ಸಂಬಂಧಿಸಿದಂತೆ ಕಠಿಣ ಯುಎಪಿಎ ಆರೋಪಗಳೊಂದಿಗೆ ಬಂಧಿಸಲಾಗಿದೆ.

ಇದನ್ನು ನಾಗರೀಕ ಸಮಾಜವು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವೆಂದು ಕರೆದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿದೆ. ವಿದ್ಯಾರ್ಥಿಗಳ ಬಂಧನಗಳು ಮೋದಿ ಸರ್ಕಾರವು ತನ್ನ ವೈಫಲ್ಯಗಳನ್ನು ಮರೆಮಾಚಲು ವೈವಿಧ್ಯಮಯ ತಂತ್ರಗಳಾಗಿವೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...