HomeಮುಖಪುಟJNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.

- Advertisement -
- Advertisement -

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಬಂಧಿಸಿರುವ ಪಿಂಜ್ರಾ ತೋಡ್ ಕಾರ್ಯಕರ್ತೆಯಾದ ದೇವಂಗನಾ ಕಾಳಿತಾ ಅವರಿಗೆ ಮಂಗಳವಾರ ದರಿಯಗಂಜ್ ಹಿಂಸಾಚಾರ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.

ವಿವಾದಾತ್ಮಕ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯೊಂದರಲ್ಲಿ ದರಿಯಗಂಜ್‌ನಲ್ಲಿ  2019ರ ಡಿಸೆಂಬರ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಅವರ ಪಾತ್ರವನ್ನು ಬೆಂಬಲಿಸಲು ಪೊಲೀಸರು ಯಾವುದೇ ದೃಢವಾದ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ಹೇಳಿದ್ದಾರೆ.

ಆದರೆ, ಕಾಳಿತಾಗೆ ಜಾಮೀನು ಸಿಕ್ಕಿದ್ದರೂ ಕೂಡ ಮತ್ತೊಂದು ಪ್ರಕರಣದಲ್ಲಿ ಇನ್ನೂ ವಿಚಾರಣೆ ನಡೆಸುತ್ತಿರುವುದರಿಂದ ಅವರಿನ್ನೂ ಬಂಧನದಲ್ಲಿ ಉಳಿಯಬೇಕಾಗುತ್ತದೆ ಎಂದು ಆಕೆಯ ಸಲಹೆಗಾರ ತುಷಾರಿಕಾ ಮಾತೂ ತಿಳಿಸಿದ್ದಾರೆ.


ಇದನ್ನೂ ಓದಿ: 10 ದಿನದಲ್ಲಿ 3 ಬಾರಿ ಸಿಎಎ ವಿರೋಧಿ ಹೋರಾಟಗಾರ್ತಿಯರ ಬಂಧನ: ಕಪಿಲ್‌ ಮಿಶ್ರಾ ಮೇಲೆ ಕ್ರಮ ಏಕಿಲ್ಲ? 


ಸಿಎಎ ವಿರೋಧಿ ಮಹಿಳೆಯರ ಧರಣಿ ವೇಳೆ ಜಾಫ್ರಾಬಾದ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಅವರನ್ನು ಮೇ 23 ರಂದು ಬಂಧಿಸಲಾಯಿತು.

ಮ್ಯಾಜಿಸ್ಟ್ರೇಟ್ ಪಾಂಡೆ ಕಾಳಿತಾಗೆ ಜಾಮೀನು ನೀಡುವಾಗ, “ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳ ಆಧಾರದ ಮೇಲೆ ಎನ್‌ಆರ್‌ಸಿ ಮಸೂದೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು, ಆದರೆ ಇಲ್ಲಿಯವರೆಗೆ ತನಿಖೆಯಲ್ಲಿ ಐಪಿಸಿಯ 325/352 ಸೆಕ್ಷನ್‌ಗಳನ್ನು ಅವರ ಮೇಲೆ ಹೂಡಿರುವುದಕ್ಕೆ ಆರೋಪಿಗಳ ಮೇಲೆ ಯಾವುದೇ ನೇರ ಸಾಕ್ಷ್ಯಗಳು ಕಂಡುಬಂದಿಲ್ಲ ಎಂದಿದ್ದಾರೆ”

ಹಿಂಸಾಚಾರದ ಸ್ಥಳದಲ್ಲಿ ಕಾಳಿತಾ ಇದ್ದರು ಎಂದು ಎಂಎಲ್‌ಸಿ ಆಧಾರದ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ. ಆದರೆ “ಸಿಸಿಟಿವಿ ದೃಶ್ಯಾವಳಿಗಳು ಆರೋಪಿಗಳು ಭಾಗಿಯಾಗಿರುವುದನ್ನು ಅಥವಾ ನಿರ್ದಿಷ್ಟವಾಗಿ ಯಾವುದೇ ಹಿಂಸಾತ್ಮಕ ಚಟುವಟಿಕೆ ನಡೆಸಿರುವುದನ್ನು ತೋರಿಸುತ್ತಿಲ್ಲ” ಎಂದಿದ್ದಾರೆ.

ಕೇವಲ ಎಂಎಲ್‌ಸಿ ಆಧಾರದಲ್ಲಿ ಆರೋಪಿಗಳಿಗೆ ಜಾಮೀನು ನಿರಾಕರಿಸಲು ಸಾಧ್ಯವಾಗುವುದಿಲ್ಲ. ಕಾಳಿತಾ ಅವರ ಲ್ಯಾಪ್‌ಟಾಪ್ ಮತ್ತು ಫೋನ್‌ನಲ್ಲಿ ಯಾವುದೇ ದೋಷಾರೋಪಣೆ ವಸ್ತುಗಳು ಕಂಡುಬಂದಿಲ್ಲ ಎಂದು ಪಾಂಡೆ ಹೇಳಿದರು.

ಪರಿಸ್ಥಿತಿ ಈಗಿರುವಾಗ ಕಾಳಿತಾ ಯಾವುದೇ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಅಥವಾ ಪ್ರಚೋದಿಸಿದ್ದಾರೆ ಎಂದು ಹೇಳುವುದು ಕಷ್ಟ. ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಉದ್ದೇಶವನ್ನು ಅವರು ಹೊಂದಿರಬಹುದು. ನಂತರ ಅದು ಹಿಂಸಾತ್ಮಕವಾಗಿರಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ತನಿಖೆಯಲ್ಲಿ ಸಹಕರಿಸಲು ಕಾಳಿತಾ ಅವರು ಒಪ್ಪಿದರೆ ಆಕೆಗೆ ಷರತ್ತುಗಳೊಂದಿಗೆ ಜಾಮೀನು ನೀಡಬಹುದು ಎಂದು ಮ್ಯಾಜಿಸ್ಟ್ರೇಟ್ ತಿಳಿಸಿದರು. 30,000 ರೂ. ಜಾಮೀನು ಮತ್ತು ಅವಳ ಪಾಸ್‌ಪೋರ್ಟ್‌ ಜಮಾ ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಷರತ್ತುಗಳನ್ನು ವಿಧಿಸಿದ್ದಾರೆ.

ನರ್ವಾಲ್ ಮತ್ತು ಕಾಳಿತಾ ಅವರೊಂದಿಗೆ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಾದ ಸಫೂರಾ ಜರ್ಗರ್, ಮೀರನ್ ಹೈದರ್, ಶಿಫಾ-ಉರ್-ರೆಹಮಾನ್, ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ದೆಹಲಿ ಹಿಂಸಾಚಾರದಲ್ಲಿ ತಮ್ಮ ಪಾತ್ರದ ಆರೋಪಕ್ಕೆ ಸಂಬಂಧಿಸಿದಂತೆ ಕಠಿಣ ಯುಎಪಿಎ ಆರೋಪಗಳೊಂದಿಗೆ ಬಂಧಿಸಲಾಗಿದೆ.

ಇದನ್ನು ನಾಗರೀಕ ಸಮಾಜವು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವೆಂದು ಕರೆದು, ಕೇಂದ್ರ ಸರ್ಕಾರದ ಮೇಲೆ ತೀವ್ರ ಟೀಕಾಪ್ರಹಾರ ನಡೆಸಿದೆ. ವಿದ್ಯಾರ್ಥಿಗಳ ಬಂಧನಗಳು ಮೋದಿ ಸರ್ಕಾರವು ತನ್ನ ವೈಫಲ್ಯಗಳನ್ನು ಮರೆಮಾಚಲು ವೈವಿಧ್ಯಮಯ ತಂತ್ರಗಳಾಗಿವೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...