Homeಬಹುಜನ ಭಾರತಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ - ಡಿ. ಉಮಾಪತಿ

ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?

- Advertisement -
- Advertisement -

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ.

ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ. ಅಮೆರಿಕೆ ಎಂಬ ದೇಶದಲ್ಲಿ ಈ ದ್ವೇಷದ ಬೆಂಕಿ ಹಚ್ಚಿ ಎಣ್ಣೆ ಎರಚುತ್ತ ಬಂದಿರುವಾತನ ನಾಮಧೇಯ ಡೊನಾಲ್ಡ್ ಟ್ರಂಪ್.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ,ಟ್ರಂಪ್ ಎಚ್ಚರಿಕೆ

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.

ಕಪ್ಪು ಜನರನ್ನು ಅವರ ತೊಗಲಿನ ಬಣ್ಣದ ಕಾರಣ ನೂರಾರು ವರ್ಷಗಳಿಂದ ಬೇಟೆಯಾಡುತ್ತ ಬಂದಿದ್ದಾರೆ ಬಿಳಿಯರು. ಸಮಾಜ 21ನೆಯ ಶತಮಾನದ ನಾಗರಿಕ ಚಹರೆ ಧರಿಸುತ್ತಿದ್ದಂತೆ ಬೇಟೆಗಾರರು ಹತ್ತು ಹಲವು ಛದ್ಮವೇಷಗಳನ್ನು ಧರಿಸಿ ಎರಗುತ್ತಿದ್ದಾರೆ. ಆಳುವವರ ಸಕ್ರಿಯ ಕುಮ್ಮಕ್ಕು ಅವರಿಗೆ ಉಂಟು.

ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕರೋನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಅಮೆರಿಕೆಯಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಮನುಷ್ಯ ಬಿಳಿಯ ಪೊಲೀಸರ ವರ್ಣವಿದ್ವೇಷಕ್ಕೆ ಬಲಿಯಾದ ಭೀಭತ್ಸ ದೃಶ್ಯಗಳು ನಾಗರಿಕ ಪ್ರಜ್ಞೆಯನ್ನು ಬೆಚ್ಚಿ ಬೀಳಿಸಿವೆ.

ಎಂಟು ನಿಮಿಷ 46 ಸೆಕೆಂಡುಗಳ ಕಾಲ ಉಸಿರಿಗಾಗಿ ಚಡಪಡಿಸಿದ ಆ ದೈತ್ಯ ಕಪ್ಪು ಮನುಷ್ಯ ದಯೆ ತೋರಿರೆಂದು ಕೋರಿದ. ನೀರಿಗಾಗಿ ಬೇಡಿದ. ಉಸಿರಾಡಲಾಗುತ್ತಿಲ್ಲ ಸ್ವಾಮೀ ಎಂದ. ಮೂಗಿನಿಂದ ರಕ್ತ ಒಸರಿತು. ದೇಹ ಪ್ರಾಣಸಂಕಟದಿಂದ ವಿಲವಿಲನೆ ಒದ್ದಾಡಿತು. ಮೂತ್ರಕೋಶದ ಮೇಲೆ ನಿಯಂತ್ರಣ ತಪ್ಪಿತು.

ಐದು ನಿಮಿಷಗಳಲ್ಲಿ ಹದಿನಾರು ಸಾರಿ ಹೇಳಿದ್ದನಾತ ಉಸಿರಾಡಲಾಗುತ್ತಿಲ್ಲಾ… ಎಂದು. ಕಡೆಗೆ ಪ್ರಜ್ಞೆ ತಪ್ಪಿತು. ವೈದ್ಯಕೀಯ ಸಿಬ್ಬಂದಿ ಬೇಡಿಕೊಂಡರು. ಆದರೂ ಬಿಳಿಯ ಪೊಲೀಸರ ಸಾವಿನ ಹಿಡಿತ ಸಡಿಲಾಗಲಿಲ್ಲ. ಆಮ್ಲಜನಕ ದೊರೆಯದೆ ಆತನ ಅಂಗಾಂಗಗಳು ಚೀರಿದ್ದವು. ಮೆದುಳು ಹೌಹಾರಿತ್ತು.

ಫ್ಲಾಯ್ಡ್ ಅಣು ಅಣುವಾಗಿ ಸಾಯುವುದನ್ನು ಬಿಳಿಯ ದ್ವೇಷ ವಿಚಿತ್ರ ವಿಲಕ್ಷಣ ತೃಪ್ತಿಯಿಂದ ನೋಡಿತು. ಕ್ಷಣದಿಂದ ಕ್ಷಣಕ್ಕೆ ಉಸಿರು ತ್ಯಜಿಸಿ ಹೋಗಿ ತಣ್ಣಗಾಗುತ್ತಿದ್ದ ಒಡಲಿನ ಒದ್ದಾಟವನ್ನು, ಚಡಪಡಿಕೆಯ ಸ್ಪರ್ಶಸುಖವನ್ನು ಸವಿಯಿತು.

ಸತ್ತ ತನ್ನ ತಾಯಿಯನ್ನು ಸೇರಿಕೊಳ್ಳುವ ಸಂಕಟದಲ್ಲಿ ಅಮ್ಮಾ ಎಂದು ಕೂಗಿ ಕರೆದ. ಆ ಕಪ್ಪು ಮನುಷ್ಯ ಸಾಧು ಸ್ವಭಾವದ ದೈತ್ಯ. ತೊಗಲಿನ ಬಣ್ಣ ಕಪ್ಪೆಂಬ ಕಾರಣಕ್ಕಾಗಿ ಕ್ರೂರ ಹತ್ಯೆಗೆ ಬಲಿಯಾದ.

ಉಸಿರಾಡಲಾಗುತ್ತಿಲ್ಲ ಎಂದು ಫ್ಲಾಯ್ಡ್ ಐದು ನಿಮಿಷಗಳಲ್ಲಿ ಹದಿನಾರು ಸಲ ಹೇಳುತ್ತಾನೆ. ಪ್ರಾಣ ಹೋಗುವ ಸಂಕಟದಲ್ಲಿ ಹೆತ್ತಮ್ಮನನ್ನು ನೆನೆದು ಕರೆಯುತ್ತಾನೆ. ‘ಆಫೀಸರ್ ಪ್ಲೀಸ್’ ಎಂದು ಬೇಡಿಕೊಳ್ಳುತ್ತಾನೆ. ಬಾಯಿಂದ ರಕ್ತ ಒಸರುತ್ತದೆ.

ಆ ಬಿಳಿಯ ಪೊಲೀಸ್ ಎಂಟು ನಿಮಿಷ 46 ಸೆಕೆಂಡುಗಳ ಕಾಲ ತನ್ನ ಮೃತ್ಯಸದೃಶ ಮೊಣಕಾಲನ್ನು ಫ್ಲಾಯ್ಡ್ ಕುತ್ತಿಗೆಯ ಮೇಲೆ ಅದುಮಿ ಹಿಡಿದಿರುತ್ತಾನೆ. ಕಡೆಯುಸಿರೆಳೆದ ಮೇಲೂ ಆ ಮೊಣಕಾಲು ಕದಲುವುದಿಲ್ಲ. ಆಂಬುಲೆನ್ಸ್ ಬಂದು ಸ್ಟ್ರೆಚರ್ ತಂದ ವೈದ್ಯಕೀಯ ಸಿಬ್ಬಂದಿ ಹೇಳಿದಾಗ ಒಲ್ಲದ ಮನಸಿನಿಂದ ಕದಲುತ್ತದೆ. ಆದರೆ ಆ ಹೊತ್ತಿಗೆ ತೀರಾ ತಡವಾಗಿರುತ್ತದೆ.

ಮೇ.25 ಸೋಮವಾರ ಸಂಜೆ. 20 ಡಾಲರಿನ ಖೋಟಾ ನೋಟನ್ನು ಸಿಗರೇಟು ಖರೀದಿಗೆ ಬಳಸಿದನೆಂಬುದು ಫ್ಲಾಯ್ಡ್ ಮೇಲಿನ ಆರೋಪ. 46 ವರ್ಷದ ಈ ವ್ಯಕ್ತಿ ಹ್ಯೂಸ್ಟನ್‍ನ ರೆಸ್ಟುರಾದಲ್ಲಿ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಕರೋನಾ ಮಹಾಮಾರಿಯ ಕಾರಣ ಕೆಲಸ ಕಳೆದುಕೊಂಡ ಕೋಟ್ಯಂತರ ಜನರ ಪೈಕಿ ಫ್ಲಾಯ್ಡ್ ಕೂಡ ಒಬ್ಬನಾಗಿದ್ದ.

ಆರಡಿಗೂ ಅಧಿಕ ಎತ್ತರದ ಫ್ಲಾಯ್ಡನನ್ನು ರಸ್ತೆಯ ಪಕ್ಕ ನೆಲಕ್ಕೆ ಕೆಡವಿ ಕಾಲು ಎದೆ ಪಕ್ಕೆ ಕುತ್ತಿಗೆಯನ್ನು ನಾಲ್ವರು ಪೊಲೀಸರು ಒಟ್ಟೊಟ್ಟಿಗೆ ಅದುಮಿ ಹಿಡಿದಿರುತ್ತಾರೆ.

ಫ್ಲಾಯ್ಡ್ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಎಂಬುದು ಪೊಲೀಸರ ಹಸೀ ಸುಳ್ಳು. ಕಾರಿನೊಳಕ್ಕೆ ಅವನನ್ನು ತಳ್ಳಲು, ಎದ್ದು ಪೊಲೀಸ್ ಕಾರಿನೊಳಗೆ ಕುಳಿತುಕೋ ಎನ್ನುತ್ತಾರೆ. ಆದರೆ ತಮ್ಮ ಮೃತ್ಯುಪಾಶವನ್ನು ಸಡಿಲಿಸುವುದಿಲ್ಲ. ದಾರಿ ಹೋಕರು ಕುತ್ತಿಗೆಯ ಮೇಲಿಂದ ಎದ್ದೇಳಲು ಪೊಲೀಸರಿಗೆ ಒತ್ತಾಯಿಸುತ್ತಾರೆ. ಅವನು ಕದಲುತ್ತಿಲ್ಲ, ನಾಡಿ ಪರೀಕ್ಷಿಸಿ ಎಂದು ಆಗ್ರಹಿಸುತ್ತಾರೆ.

ಅಮೆರಿಕೆ ಭುಗಿಲೆದ್ದಿದೆ. ಕಾನೂನು ಜಾರಿಯ ವೈಖರಿಯಲ್ಲಿ ಬದಲಾವಣೆಗೆ ಆಗ್ರಹ ಸ್ಫೋಟಿಸಿದೆ. ಮಾನವಂತ ಬಿಳಿಯರೂ ಈ ಪ್ರತಿಭಟನೆಯಲ್ಲಿ ಸೇರಿದ್ದಾರೆ. ಈ ನಡುವೆ ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?
ಜಾರ್ಜ್ ಫ್ಲಾಯ್ಡ್ ಆತ್ಮ ಈಗ ನಿರಾಳವಾಗಿ ಉಸಿರಾಡುತ್ತಿರಬಹುದು… ವರ್ಣದ್ವೇಷದ ಕಿಚ್ಚಿನಿಂದ ದೂರ ಬಹುದೂರದಲ್ಲಿ.


ಇದನ್ನು ಓದಿ: ಚೀನಾದ ಆಕ್ರಮಣ ಒಪ್ಪಿಕೊಂಡ ರಾಜನಾಥ್‌ ಸಿಂಗ್: ಜೂನ್‌ 06 ರಂದು ಮಾತುಕತೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...