Homeಬಹುಜನ ಭಾರತಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ - ಡಿ. ಉಮಾಪತಿ

ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?

- Advertisement -
- Advertisement -

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ.

ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ. ಅಮೆರಿಕೆ ಎಂಬ ದೇಶದಲ್ಲಿ ಈ ದ್ವೇಷದ ಬೆಂಕಿ ಹಚ್ಚಿ ಎಣ್ಣೆ ಎರಚುತ್ತ ಬಂದಿರುವಾತನ ನಾಮಧೇಯ ಡೊನಾಲ್ಡ್ ಟ್ರಂಪ್.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ,ಟ್ರಂಪ್ ಎಚ್ಚರಿಕೆ

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.

ಕಪ್ಪು ಜನರನ್ನು ಅವರ ತೊಗಲಿನ ಬಣ್ಣದ ಕಾರಣ ನೂರಾರು ವರ್ಷಗಳಿಂದ ಬೇಟೆಯಾಡುತ್ತ ಬಂದಿದ್ದಾರೆ ಬಿಳಿಯರು. ಸಮಾಜ 21ನೆಯ ಶತಮಾನದ ನಾಗರಿಕ ಚಹರೆ ಧರಿಸುತ್ತಿದ್ದಂತೆ ಬೇಟೆಗಾರರು ಹತ್ತು ಹಲವು ಛದ್ಮವೇಷಗಳನ್ನು ಧರಿಸಿ ಎರಗುತ್ತಿದ್ದಾರೆ. ಆಳುವವರ ಸಕ್ರಿಯ ಕುಮ್ಮಕ್ಕು ಅವರಿಗೆ ಉಂಟು.

ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕರೋನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಅಮೆರಿಕೆಯಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಮನುಷ್ಯ ಬಿಳಿಯ ಪೊಲೀಸರ ವರ್ಣವಿದ್ವೇಷಕ್ಕೆ ಬಲಿಯಾದ ಭೀಭತ್ಸ ದೃಶ್ಯಗಳು ನಾಗರಿಕ ಪ್ರಜ್ಞೆಯನ್ನು ಬೆಚ್ಚಿ ಬೀಳಿಸಿವೆ.

ಎಂಟು ನಿಮಿಷ 46 ಸೆಕೆಂಡುಗಳ ಕಾಲ ಉಸಿರಿಗಾಗಿ ಚಡಪಡಿಸಿದ ಆ ದೈತ್ಯ ಕಪ್ಪು ಮನುಷ್ಯ ದಯೆ ತೋರಿರೆಂದು ಕೋರಿದ. ನೀರಿಗಾಗಿ ಬೇಡಿದ. ಉಸಿರಾಡಲಾಗುತ್ತಿಲ್ಲ ಸ್ವಾಮೀ ಎಂದ. ಮೂಗಿನಿಂದ ರಕ್ತ ಒಸರಿತು. ದೇಹ ಪ್ರಾಣಸಂಕಟದಿಂದ ವಿಲವಿಲನೆ ಒದ್ದಾಡಿತು. ಮೂತ್ರಕೋಶದ ಮೇಲೆ ನಿಯಂತ್ರಣ ತಪ್ಪಿತು.

ಐದು ನಿಮಿಷಗಳಲ್ಲಿ ಹದಿನಾರು ಸಾರಿ ಹೇಳಿದ್ದನಾತ ಉಸಿರಾಡಲಾಗುತ್ತಿಲ್ಲಾ… ಎಂದು. ಕಡೆಗೆ ಪ್ರಜ್ಞೆ ತಪ್ಪಿತು. ವೈದ್ಯಕೀಯ ಸಿಬ್ಬಂದಿ ಬೇಡಿಕೊಂಡರು. ಆದರೂ ಬಿಳಿಯ ಪೊಲೀಸರ ಸಾವಿನ ಹಿಡಿತ ಸಡಿಲಾಗಲಿಲ್ಲ. ಆಮ್ಲಜನಕ ದೊರೆಯದೆ ಆತನ ಅಂಗಾಂಗಗಳು ಚೀರಿದ್ದವು. ಮೆದುಳು ಹೌಹಾರಿತ್ತು.

ಫ್ಲಾಯ್ಡ್ ಅಣು ಅಣುವಾಗಿ ಸಾಯುವುದನ್ನು ಬಿಳಿಯ ದ್ವೇಷ ವಿಚಿತ್ರ ವಿಲಕ್ಷಣ ತೃಪ್ತಿಯಿಂದ ನೋಡಿತು. ಕ್ಷಣದಿಂದ ಕ್ಷಣಕ್ಕೆ ಉಸಿರು ತ್ಯಜಿಸಿ ಹೋಗಿ ತಣ್ಣಗಾಗುತ್ತಿದ್ದ ಒಡಲಿನ ಒದ್ದಾಟವನ್ನು, ಚಡಪಡಿಕೆಯ ಸ್ಪರ್ಶಸುಖವನ್ನು ಸವಿಯಿತು.

ಸತ್ತ ತನ್ನ ತಾಯಿಯನ್ನು ಸೇರಿಕೊಳ್ಳುವ ಸಂಕಟದಲ್ಲಿ ಅಮ್ಮಾ ಎಂದು ಕೂಗಿ ಕರೆದ. ಆ ಕಪ್ಪು ಮನುಷ್ಯ ಸಾಧು ಸ್ವಭಾವದ ದೈತ್ಯ. ತೊಗಲಿನ ಬಣ್ಣ ಕಪ್ಪೆಂಬ ಕಾರಣಕ್ಕಾಗಿ ಕ್ರೂರ ಹತ್ಯೆಗೆ ಬಲಿಯಾದ.

ಉಸಿರಾಡಲಾಗುತ್ತಿಲ್ಲ ಎಂದು ಫ್ಲಾಯ್ಡ್ ಐದು ನಿಮಿಷಗಳಲ್ಲಿ ಹದಿನಾರು ಸಲ ಹೇಳುತ್ತಾನೆ. ಪ್ರಾಣ ಹೋಗುವ ಸಂಕಟದಲ್ಲಿ ಹೆತ್ತಮ್ಮನನ್ನು ನೆನೆದು ಕರೆಯುತ್ತಾನೆ. ‘ಆಫೀಸರ್ ಪ್ಲೀಸ್’ ಎಂದು ಬೇಡಿಕೊಳ್ಳುತ್ತಾನೆ. ಬಾಯಿಂದ ರಕ್ತ ಒಸರುತ್ತದೆ.

ಆ ಬಿಳಿಯ ಪೊಲೀಸ್ ಎಂಟು ನಿಮಿಷ 46 ಸೆಕೆಂಡುಗಳ ಕಾಲ ತನ್ನ ಮೃತ್ಯಸದೃಶ ಮೊಣಕಾಲನ್ನು ಫ್ಲಾಯ್ಡ್ ಕುತ್ತಿಗೆಯ ಮೇಲೆ ಅದುಮಿ ಹಿಡಿದಿರುತ್ತಾನೆ. ಕಡೆಯುಸಿರೆಳೆದ ಮೇಲೂ ಆ ಮೊಣಕಾಲು ಕದಲುವುದಿಲ್ಲ. ಆಂಬುಲೆನ್ಸ್ ಬಂದು ಸ್ಟ್ರೆಚರ್ ತಂದ ವೈದ್ಯಕೀಯ ಸಿಬ್ಬಂದಿ ಹೇಳಿದಾಗ ಒಲ್ಲದ ಮನಸಿನಿಂದ ಕದಲುತ್ತದೆ. ಆದರೆ ಆ ಹೊತ್ತಿಗೆ ತೀರಾ ತಡವಾಗಿರುತ್ತದೆ.

ಮೇ.25 ಸೋಮವಾರ ಸಂಜೆ. 20 ಡಾಲರಿನ ಖೋಟಾ ನೋಟನ್ನು ಸಿಗರೇಟು ಖರೀದಿಗೆ ಬಳಸಿದನೆಂಬುದು ಫ್ಲಾಯ್ಡ್ ಮೇಲಿನ ಆರೋಪ. 46 ವರ್ಷದ ಈ ವ್ಯಕ್ತಿ ಹ್ಯೂಸ್ಟನ್‍ನ ರೆಸ್ಟುರಾದಲ್ಲಿ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಕರೋನಾ ಮಹಾಮಾರಿಯ ಕಾರಣ ಕೆಲಸ ಕಳೆದುಕೊಂಡ ಕೋಟ್ಯಂತರ ಜನರ ಪೈಕಿ ಫ್ಲಾಯ್ಡ್ ಕೂಡ ಒಬ್ಬನಾಗಿದ್ದ.

ಆರಡಿಗೂ ಅಧಿಕ ಎತ್ತರದ ಫ್ಲಾಯ್ಡನನ್ನು ರಸ್ತೆಯ ಪಕ್ಕ ನೆಲಕ್ಕೆ ಕೆಡವಿ ಕಾಲು ಎದೆ ಪಕ್ಕೆ ಕುತ್ತಿಗೆಯನ್ನು ನಾಲ್ವರು ಪೊಲೀಸರು ಒಟ್ಟೊಟ್ಟಿಗೆ ಅದುಮಿ ಹಿಡಿದಿರುತ್ತಾರೆ.

ಫ್ಲಾಯ್ಡ್ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಎಂಬುದು ಪೊಲೀಸರ ಹಸೀ ಸುಳ್ಳು. ಕಾರಿನೊಳಕ್ಕೆ ಅವನನ್ನು ತಳ್ಳಲು, ಎದ್ದು ಪೊಲೀಸ್ ಕಾರಿನೊಳಗೆ ಕುಳಿತುಕೋ ಎನ್ನುತ್ತಾರೆ. ಆದರೆ ತಮ್ಮ ಮೃತ್ಯುಪಾಶವನ್ನು ಸಡಿಲಿಸುವುದಿಲ್ಲ. ದಾರಿ ಹೋಕರು ಕುತ್ತಿಗೆಯ ಮೇಲಿಂದ ಎದ್ದೇಳಲು ಪೊಲೀಸರಿಗೆ ಒತ್ತಾಯಿಸುತ್ತಾರೆ. ಅವನು ಕದಲುತ್ತಿಲ್ಲ, ನಾಡಿ ಪರೀಕ್ಷಿಸಿ ಎಂದು ಆಗ್ರಹಿಸುತ್ತಾರೆ.

ಅಮೆರಿಕೆ ಭುಗಿಲೆದ್ದಿದೆ. ಕಾನೂನು ಜಾರಿಯ ವೈಖರಿಯಲ್ಲಿ ಬದಲಾವಣೆಗೆ ಆಗ್ರಹ ಸ್ಫೋಟಿಸಿದೆ. ಮಾನವಂತ ಬಿಳಿಯರೂ ಈ ಪ್ರತಿಭಟನೆಯಲ್ಲಿ ಸೇರಿದ್ದಾರೆ. ಈ ನಡುವೆ ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?
ಜಾರ್ಜ್ ಫ್ಲಾಯ್ಡ್ ಆತ್ಮ ಈಗ ನಿರಾಳವಾಗಿ ಉಸಿರಾಡುತ್ತಿರಬಹುದು… ವರ್ಣದ್ವೇಷದ ಕಿಚ್ಚಿನಿಂದ ದೂರ ಬಹುದೂರದಲ್ಲಿ.


ಇದನ್ನು ಓದಿ: ಚೀನಾದ ಆಕ್ರಮಣ ಒಪ್ಪಿಕೊಂಡ ರಾಜನಾಥ್‌ ಸಿಂಗ್: ಜೂನ್‌ 06 ರಂದು ಮಾತುಕತೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...