Homeಕವನಕವನ | ಅಂತಿಮ ವಲಸೆಯ ಮುನ್ನ

ಕವನ | ಅಂತಿಮ ವಲಸೆಯ ಮುನ್ನ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ

ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು

ಸಾಗಬೇಕು, ಚಲಿಸಬೇಕು,

ಎದ್ದೆದ್ದು ಬಿದ್ದು ಪಾರಾಗಬೇಕು

 

ರಮಣಿಸುವ ಕಾಲುಹಾದಿಗಳು

ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ

ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು

ಬರೀ ಪೊದೆಗಳು

ತೀವ್ರ ವಿಷಕರ ಮುಳ್ಳುಗಂಟೆಗಳು

ಅವಿತುಕೊಂಡ ಹಾವು, ಚೇಳು

ಮೋಹಿನಿ-ಭೂತ ಪ್ರೇತಗಳು

ರಂಜಿಸುವ ಮೋಹ-ಮಾಯೆಗೆ ಸಿಲುಕದೆ

ಸಾಗುತ್ತಿರುವೆ ಇತ್ತ ನೇರ ನಾನು.

 

ಎಲ್ಲಾದರೊಂದು ಸಿಕ್ಕೆ ಸಿಗುವುದು

ಲಕ್ಷ್ಯದ ಘಟಕಗಳು

ಇಲ್ಲಿಯೇ ನಿಂತು ಮರಳಿಬಾರದೆಂದು

ಇಲ್ಲಿಂದಲೆ ಆಜಾ಼ನ್, ಇಲ್ಲಿಯೇ ಗಂಟೆಯ ನಾದಸ್ವರ

ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ ಅರ್ತನಾದ

ಇಲ್ಲಿಯೇ ಹಗಲಿರುಳು

ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ

ಹವನದ ತಾಜಾ ತಾಜಾ

ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ

ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ

ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೆರುವ ನಿರಂತರ ಬಳ್ಳಿ

ಹಬ್ಬಿರಲಿ ನಂದನವನದಲ್ಲಿ

 

ಉಳಿದಿರುವ ಇದೇ ತಾನೆ ಏಕೈಕ ಹಾದಿ

ಇದರಿಂದ ಪಾರಾಗಲೇಬೇಕಿದೆ ನಾನು

ಒಮ್ಮೆ ನಿನ್ನ ಸನಿಹದೊಂದಿಗೆ

ಇನ್ನೊಮ್ಮೆ ಒಬ್ಬಂಟಿಯಾಗಿ

ಒಮ್ಮೆ ಜನಜಂಗುಳಿಯೊಂದಿಗೆ

ನನ್ನ ಅಸ್ಮಿತೆಯ ಪಾಪ-ಪುಣ್ಯವ

ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ

ನುಡಿಯಲೇಬೇಕು, ಪಠಿಸಲೇಬೇಕು

ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ

ಆರಾಧನೆಯ ಹೊದಿಕೆಯಿಂದ ಹೊದಿಸಿ

ನೈಜತೆಯೋ ಅಥವಾ ಭ್ರಾಂತಿಯೋ

ದಾನಶೂರನೋ-ತಿರುಕನೋ

ತುಂಬಿ ತುಳುಕುತ್ತಿರುವುದೋ

ಅಥವಾ

ಬರಿದು ಬರಡಾಗಿರುವುದೋ

ಉಳಿದಿರುವುದು ಇದೇ ಒಂದು ದಾರಿ.

 

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ

ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು

ಸರ್ವಶಕ್ತತೆಯಿಂದ ಸುರಿಯುತ್ತಿರುವ

ಮನೋ-ಸಲ್ವಾ*ದ ಮಳೆಯು

ನನ್ನ ನಿನ್ನ ಹಸ್ತದೊಂದಿಗೆ

ಅಥವಾ

ಪರಹಸ್ತದಲ್ಲಿ

ಅಥವಾ

ನನ್ನೊಡನೆಯೋ

ಇಲ್ಲಿಯೇ ತೆರೆದಿರುವುದು ನಮ್ಮ

ಅಂತರಂಗದ ಕಣ್ಣುಗಳು

ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ

ಮತ್ತೆ ನಾವೆಂದಿಗೂ.

ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು

ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ

ಯಾವ ಅಲ್ವಂದ್** ಪರ್ವತದಿಂದಲೂ

ಮರಳಿ ಬರುವುದುಂಟೆ ಕೂಗು.

 

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ

ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,

ಮರಣಿಸುವೆ, ಕಾದಾಡುವೆ

ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ

ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ

ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ

ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ

ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ

ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು

ಮರಳಿ ಎಚ್ಚರಿಸಿ ತನ್ನೊಡನೆಯೇ

ಅಂತಿಮ ಗುರಿಯೆಡೆಗೆ

ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

 

ಮೂಲ ಉರ್ದು: ಖಲೀಲ್ ಮಾಮೂನ್

ಅನುವಾದ: ಡಾ. ತಸ್ನೀಮ್ ತಾಜ್


ಅಡಿ ಟಿಪ್ಪಣಿ

*ಮನೋ-ಸಲ್ವಾʼ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿದ್ದು, ಮೂಸಾ ಅವರು ಅಲ್ಲಾಹ‌ನೊಂದಿಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೀಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಲಾಹನ ವರದಾನ ಎಂದು ಭಾವಿಸಲಾಗಿದೆ.

** ’ಅಲ್ವಂದ್’ ಇರಾನ್‌ನಲ್ಲಿರುವ ಅತಿ ಎತ್ತರವಾದ ಪರ್ವತ.


ಓದಿ: ಬುದ್ಧನಾಗುವ ಆಸೆ| ಕವನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....