Homeಕವನಕವನ | ಅಂತಿಮ ವಲಸೆಯ ಮುನ್ನ

ಕವನ | ಅಂತಿಮ ವಲಸೆಯ ಮುನ್ನ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ

ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು

ಸಾಗಬೇಕು, ಚಲಿಸಬೇಕು,

ಎದ್ದೆದ್ದು ಬಿದ್ದು ಪಾರಾಗಬೇಕು

 

ರಮಣಿಸುವ ಕಾಲುಹಾದಿಗಳು

ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ

ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು

ಬರೀ ಪೊದೆಗಳು

ತೀವ್ರ ವಿಷಕರ ಮುಳ್ಳುಗಂಟೆಗಳು

ಅವಿತುಕೊಂಡ ಹಾವು, ಚೇಳು

ಮೋಹಿನಿ-ಭೂತ ಪ್ರೇತಗಳು

ರಂಜಿಸುವ ಮೋಹ-ಮಾಯೆಗೆ ಸಿಲುಕದೆ

ಸಾಗುತ್ತಿರುವೆ ಇತ್ತ ನೇರ ನಾನು.

 

ಎಲ್ಲಾದರೊಂದು ಸಿಕ್ಕೆ ಸಿಗುವುದು

ಲಕ್ಷ್ಯದ ಘಟಕಗಳು

ಇಲ್ಲಿಯೇ ನಿಂತು ಮರಳಿಬಾರದೆಂದು

ಇಲ್ಲಿಂದಲೆ ಆಜಾ಼ನ್, ಇಲ್ಲಿಯೇ ಗಂಟೆಯ ನಾದಸ್ವರ

ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ ಅರ್ತನಾದ

ಇಲ್ಲಿಯೇ ಹಗಲಿರುಳು

ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ

ಹವನದ ತಾಜಾ ತಾಜಾ

ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ

ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ

ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೆರುವ ನಿರಂತರ ಬಳ್ಳಿ

ಹಬ್ಬಿರಲಿ ನಂದನವನದಲ್ಲಿ

 

ಉಳಿದಿರುವ ಇದೇ ತಾನೆ ಏಕೈಕ ಹಾದಿ

ಇದರಿಂದ ಪಾರಾಗಲೇಬೇಕಿದೆ ನಾನು

ಒಮ್ಮೆ ನಿನ್ನ ಸನಿಹದೊಂದಿಗೆ

ಇನ್ನೊಮ್ಮೆ ಒಬ್ಬಂಟಿಯಾಗಿ

ಒಮ್ಮೆ ಜನಜಂಗುಳಿಯೊಂದಿಗೆ

ನನ್ನ ಅಸ್ಮಿತೆಯ ಪಾಪ-ಪುಣ್ಯವ

ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ

ನುಡಿಯಲೇಬೇಕು, ಪಠಿಸಲೇಬೇಕು

ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ

ಆರಾಧನೆಯ ಹೊದಿಕೆಯಿಂದ ಹೊದಿಸಿ

ನೈಜತೆಯೋ ಅಥವಾ ಭ್ರಾಂತಿಯೋ

ದಾನಶೂರನೋ-ತಿರುಕನೋ

ತುಂಬಿ ತುಳುಕುತ್ತಿರುವುದೋ

ಅಥವಾ

ಬರಿದು ಬರಡಾಗಿರುವುದೋ

ಉಳಿದಿರುವುದು ಇದೇ ಒಂದು ದಾರಿ.

 

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ

ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು

ಸರ್ವಶಕ್ತತೆಯಿಂದ ಸುರಿಯುತ್ತಿರುವ

ಮನೋ-ಸಲ್ವಾ*ದ ಮಳೆಯು

ನನ್ನ ನಿನ್ನ ಹಸ್ತದೊಂದಿಗೆ

ಅಥವಾ

ಪರಹಸ್ತದಲ್ಲಿ

ಅಥವಾ

ನನ್ನೊಡನೆಯೋ

ಇಲ್ಲಿಯೇ ತೆರೆದಿರುವುದು ನಮ್ಮ

ಅಂತರಂಗದ ಕಣ್ಣುಗಳು

ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ

ಮತ್ತೆ ನಾವೆಂದಿಗೂ.

ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು

ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ

ಯಾವ ಅಲ್ವಂದ್** ಪರ್ವತದಿಂದಲೂ

ಮರಳಿ ಬರುವುದುಂಟೆ ಕೂಗು.

 

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ

ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,

ಮರಣಿಸುವೆ, ಕಾದಾಡುವೆ

ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ

ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ

ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ

ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ

ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ

ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು

ಮರಳಿ ಎಚ್ಚರಿಸಿ ತನ್ನೊಡನೆಯೇ

ಅಂತಿಮ ಗುರಿಯೆಡೆಗೆ

ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

 

ಮೂಲ ಉರ್ದು: ಖಲೀಲ್ ಮಾಮೂನ್

ಅನುವಾದ: ಡಾ. ತಸ್ನೀಮ್ ತಾಜ್


ಅಡಿ ಟಿಪ್ಪಣಿ

*ಮನೋ-ಸಲ್ವಾʼ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿದ್ದು, ಮೂಸಾ ಅವರು ಅಲ್ಲಾಹ‌ನೊಂದಿಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೀಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಲಾಹನ ವರದಾನ ಎಂದು ಭಾವಿಸಲಾಗಿದೆ.

** ’ಅಲ್ವಂದ್’ ಇರಾನ್‌ನಲ್ಲಿರುವ ಅತಿ ಎತ್ತರವಾದ ಪರ್ವತ.


ಓದಿ: ಬುದ್ಧನಾಗುವ ಆಸೆ| ಕವನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...